ಕೋವಿಡ್-19 ವಿರುದ್ಧದ ಹೋರಾಟ ಇನ್ನೂ ಇದೆ ಸವಾಲು


Team Udayavani, Apr 25, 2020, 5:45 AM IST

ಕೋವಿಡ್-19 ವಿರುದ್ಧದ ಹೋರಾಟ ಇನ್ನೂ ಇದೆ ಸವಾಲು

ಸಾಂದರ್ಭಿಕ ಚಿತ್ರ.

ಕೋವಿಡ್-19 ಸಾಂಕ್ರಾಮಿಕವು ಚೀನಾದ ಗಡಿ ದಾಟಿ, ಯುರೋಪ್‌ ಹಾಗೂ ಅಮೆರಿಕದಲ್ಲಿ ಹಾವಳಿ ಎಬ್ಬಿಸಲು ಆರಂಭಿಸಿದಾಗ ಇಡೀ ಜಗತ್ತೇ ಬೆಚ್ಚಿಬಿದ್ದಿತು. ಕಡಿಮೆ ಜನಸಂಖ್ಯೆ, ಬಲಿಷ್ಠ ಆರ್ಥಿಕತೆ, ಅತ್ಯಾಧುನಿಕ ಆರೋಗ್ಯ ವ್ಯವಸ್ಥೆ ಹೊಂದಿರುವ ರಾಷ್ಟ್ರಗಳೇ ಹೀಗೆ ತತ್ತರಿಸಿ ಹೋದಾಗ, ಭಾರತದಂಥ ಬೃಹತ್‌ ಜನಸಂಖ್ಯೆಯ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ ಹೇಗೆ ಈ ಬಿಕ್ಕಟ್ಟನ್ನು ನಿರ್ವಹಿಸೀತು ಎಂಬ ದೊಡ್ಡ ಪ್ರಶ್ನೆ ಎದುರಾಗಿತ್ತು. ಅದರಲ್ಲೂ ವರ್ಷಗಳಿಂದ ದೇಶದ ಆರೋಗ್ಯ ವ್ಯವಸ್ಥೆಯ ದುಸ್ಥಿತಿಯನ್ನು ಕಂಡಿದ್ದ ಭಾರತೀಯರಿಗೂ ಈ ಆತಂಕ ಕಾಡಿದ್ದು ಸಹಜವೇ.

ಆದರೆ, ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತ ತೋರಿಸುತ್ತಿರುವ ಸಮಯಪ್ರಜ್ಞೆ,ಒಗ್ಗಟ್ಟು,ದೃಢ ಹೆಜ್ಜೆಗಳು,ಕೇಂದ್ರ-ರಾಜ್ಯ ಸರ್ಕಾರಗಳ ನಡುವಿನ ಸಮನ್ವಯ ರೋಗ ಹರಡುವಿಕೆಯನ್ನು ಗಮನಾರ್ಹವಾಗಿ ತಡೆದಿರುವುದು ವೇದ್ಯವಾಗುತ್ತಿದೆ. ಆದಾಗ್ಯೂ ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನೇ ದಿನೇ ಬೆಳೆಯುತ್ತಲೇ ಇದೆ ಎನ್ನುವುದು ನಿಜವಾದರೂ, 130 ಕೋಟಿ ಜನಸಂಖ್ಯೆಯಿರುವ ನಮ್ಮ ದೇಶ ಅಮೆರಿಕ, ಇಟಲಿ, ಸ್ಪೇನ್‌, ಫ್ರಾನ್ಸ್‌, ಬ್ರಿಟನ್ನಂತೆ ಆರಂಭಿಕ ತಪ್ಪುಗಳನ್ನು ಮಾಡದೇ ತ್ವರಿತವಾಗಿ ಲಾಕ್‌ಡೌನ್‌ಗೆ ಮುಂದಾಗಿದ್ದರಿಂದ ಬಹುದೊಡ್ಡ ಪ್ರಮಾದವನ್ನಂತೂ ತಡೆದಂತಾಗಿದೆ.

ಅಮೆರಿಕದಂಥ ರಾಷ್ಟ್ರವು, ದೇಶಾದ್ಯಂತ ಕಟ್ಟು ನಿಟ್ಟಿನ ಲಾಕ್‌ಡೌನ್‌ ತರಲು ಆರಂಭದಲ್ಲಿ ಹಿಂದೇಟು ಹಾಕಿದ್ದರಿಂದಾಗಿ ಆ ದೇಶದಲ್ಲಿಂದು 50 ಸಾವಿರಕ್ಕೂ ಅಧಿಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಹಾಗೆಂದು, ಭಾರತ ಅಪಾಯದ ತೂಗುಕತ್ತಿಯಿಂದ ತಪ್ಪಿಸಿಕೊಂಡಿದೆ ಎಂದೇನೂ ಅಲ್ಲ.ಈಗಾಗಲೇ 23 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದಾರೆ, ಏಳುನೂರಕ್ಕೂ ಅಧಿಕ ಜನ ಪ್ರಾಣ ತೆತ್ತಿದ್ದಾರೆ. ಈ ಅಂಕಿ-ಸಂಖ್ಯೆಯು ಮತ್ತಷ್ಟು ಬೆಳೆಯಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ಗಮನಾರ್ಹ ಪ್ರಮಾಣದಲ್ಲಿ ಪರೀಕ್ಷೆಗಳನ್ನು ನಡೆಸುವ ಅಗತ್ಯವಿದೆ.  ಕಿಟ್‌ಗಳ, ಸುರಕ್ಷಾ ಪರಿಕರಗಳ ಅಭಾವ ಎದುರಾಗದಂತೆ, ಆರ್ಥಿಕತೆಯು ನೆಲ ಕಚ್ಚದಂತೆ ನೊಡಿಕೊಳ್ಳುವ ಬೃಹತ್‌ ಸವಾಲು ದೇಶದೆದುರು ಇದೆ. ಮೇ ತಿಂಗಳೊಳಗೆ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬರಬಹುದು ಎಂದು ವೈಜ್ಞಾನಿಕ ವಲಯ ಎಚ್ಚರಿಸುತ್ತಿದೆ. ಹೀಗಾಗಿ, ಈ ಸವಾಲನ್ನು ನಾವೆಲ್ಲ ಧೈರ್ಯದಿಂದ ಎದುರಿಸಲೇಬೇಕಿದೆ. ಬೇಸರದ ಸಂಗತಿಯೆಂದರೆ,ಕೋವಿಡ್-19 ವಿರುದ್ಧದ ಹೋರಾಟದಲ್ಲಿ ನಿರತವಾಗಿರುವ ಕೋವಿಡ್-19 ಯೋಧರಿಗೆ(ಆರೋಗ್ಯ ಸಿಬ್ಬಂದಿ, ವೈದ್ಯರು, ಪೊಲೀಸರು ಇತ್ಯಾದಿ) ರಾಜ್ಯ ಸೇರಿದಂತೆ, ದೇಶಾದ್ಯಂತ ಕೆಲವೆಡೆ ಅನಗತ್ಯ ಪ್ರತಿರೋಧ ಎದುರಾಗುತ್ತಿರುವುದು, ಅವರ ಮೇಲೆ ಹಲ್ಲೆಗಳು ನಡೆಯುತ್ತಿರುವುದು ಬೇಸರದ ವಿಷಯ. ಈ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಆಡಳಿತಯಂತ್ರ, ಆರೋಗ್ಯ ವಲಯ ಹಾಗೂ ಸಾರ್ವಜನಿಕರ ಸಹಭಾಗಿತ್ವದಿಂದ ಮಾತ್ರ ಯಶಸ್ಸು ಸಿಗಲು ಸಾಧ್ಯ. ಸದ್ಯಕ್ಕೆ ಲಾಕ್‌ಡೌನ್‌ನ ಕಟ್ಟು ನಿಟ್ಟಾದ ಪಾಲನೆಯು ಕೋವಿಡ್-19 ವಿರುದ್ಧದ ಯಶಸ್ಸಿಗೆ ಪ್ರಬಲ ಅಸ್ತ್ರ ಎನ್ನುವುದನ್ನು ಮರೆಯದಿರೋಣ. ಭಾರತವು ಈ ಸಾಂಕ್ರಾಮಿಕದಿಂದ ಆದಷ್ಟು ಬೇಗನೇ ಪಾರಾಗಲಿ, ಆರ್ಥಿಕತೆಯು ಚೇತರಿಸಿಕೊಂಡು ಜನಜೀವನ ಸಹಜ ಸ್ಥಿತಿಗೆ ಬರಲಿ ಎಂದು ಆಶಿಸೋಣ. ಆದರೆ ಇದು ಸಾಧ್ಯವಾಗಬೇಕಾದರೆ ಎಲ್ಲರ ಸಹಕಾರ ಅತ್ಯಗತ್ಯ ಎನ್ನುವುದೂ ನೆನಪಿರಲಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.