ಕೋವಿಡ್‌ ವಿರುದ್ಧದ ಹೋರಾಟ ಸಹಕಾರ ಅತ್ಯಗತ್ಯ


Team Udayavani, Jul 18, 2020, 7:38 AM IST

ಕೋವಿಡ್‌ ವಿರುದ್ಧದ ಹೋರಾಟ ಸಹಕಾರ ಅತ್ಯಗತ್ಯ

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ ವೇಗವಾಗಿ ಏರುತ್ತಾ ಈಗ 10 ಲಕ್ಷ ದಾಟಿದೆ. 25 ಸಾವಿರಕ್ಕೂ ಅಧಿಕ ಜನ ಈ ವೈರಸ್‌ ಬಾಧೆಯಿಂದಾಗಿ ಮೃತಪಟ್ಟಿದ್ದಾರೆ. ರೋಗದೊಂದಿಗೆ ಹೋರಾಡುತ್ತಲೇ ಅದರ ಪ್ರಸರಣವನ್ನು ತಡೆಯುವ ಪ್ರಯತ್ನವೂ ನಿರಂತರ ಸಾಗಿದೆ. ಆದರೆ, ಈ ವೇಳೆಯಲ್ಲೇ ಒಟ್ಟಾರೆ ದೇಶದಲ್ಲಿ ಚೇತರಿಕೆ ಪ್ರಮಾಣ ಸುಧಾರಿಸಿದೆ ಎನ್ನುವ ಅಂಶವನ್ನೂ ಗಮನಿಸಬೇಕು.

ಪ್ರಕರಣಗಳ ಸಂಖ್ಯೆ 10 ಲಕ್ಷ ದಾಟಿರಬಹುದು. ಆದರೆ ಇದರಲ್ಲಿ 6.37 ಲಕ್ಷ ಜನ ಗುಣಮುಖರಾಗಿದ್ದಾರೆ. ಒಟ್ಟಲ್ಲಿ ಶುಕ್ರವಾರದ ವೇಳೆಗೆ ಚೇತರಿಸಿಕೊಂಡವರ ಪ್ರಮಾಣ 63 ಪ್ರತಿಶತ ತಲುಪಿದೆ. ಆದರೂ ಈಗಲೂ 3 ಲಕ್ಷಕ್ಕಿಂತ ಅಧಿಕ ಸಕ್ರಿಯ ಪ್ರಕರಣಗಳಿರುವುದು ಕಳವಳದ ವಿಷಯವೇ ಸರಿ.

ನೆನಪಿಡಬೇಕಾದ ಸಂಗತಿಯೆಂದರೆ ಈಗ ಭಾರತ ಜಾಗತಿಕ ಹಾಟ್‌ಸ್ಪಾಟ್‌ಗಳಲ್ಲಿ ಮೂರನೇ ಸ್ಥಾನದಲ್ಲಿದೆ, ಅಲ್ಲದೇ, ನಿತ್ಯ ಸೋಂಕಿತರ ಪ್ರಮಾಣವೂ 30 ಸಾವಿರದ ಗಡಿ ದಾಟಿದ್ದು, ಇನ್ನೂ ಪತ್ತೆಯಾಗದ ಎಷ್ಟು ಸೋಂಕಿತರು ಇದ್ದಾರೋ ಎನ್ನುವ ಪ್ರಶ್ನೆ ಮೂಡುತ್ತಿದೆ. ಇಷ್ಟಾದರೂ ಇನ್ನೂ ದೇಶದಲ್ಲಿ ಕೋವಿಡ್‌-19 ಪೀಕ್‌ (ಉತ್ತುಂಗ) ತಲುಪಿಲ್ಲ ಎಂದೇ ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ, ವೈರಾಣು ತಜ್ಞರು, ಸಾಂಕ್ರಾಮಿಕ ರೋಗ ಅಧ್ಯಯನ ಸಂಸ್ಥೆಗಳು ಹೇಳುತ್ತಿವೆ.

ಈ ಕಾರಣಕ್ಕಾಗಿಯೇ ಹಿಂದೆಂದಿಗಿಂತಲೂ ಈಗ ಕೋವಿಡ್ ವಿರುದ್ಧದ ನಮ್ಮ ಹೋರಾಟ ಬಲವಾಗಬೇಕಿದೆ. ಈ ಸಾಂಕ್ರಾಮಿಕ ಸದ್ಯಕ್ಕೆ ದೂರವಾಗುವ ಲಕ್ಷಣಗಳಿಲ್ಲ. ಹೀಗಾಗಿ, ಜನರು ಸಾಮಾಜಿಕ ಅಂತರ ಪಾಲನೆಯನ್ನು , ಸುರಕ್ಷತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

ಅದರಲ್ಲೂ ರಾಜ್ಯದಲ್ಲೀಗ ಕೋವಿಡ್‌ ಪ್ರಕರಣಗಳ ಸಂಖ್ಯೆ ಶುಕ್ರವಾರದ ವೇಳೆಗೆ 51 ಸಾವಿರ ದಾಟಿದ್ದು, ಇದರಲ್ಲಿ 30 ಸಾವಿರ ಸಕ್ರಿಯ ಪ್ರಕರಣಗಳಿವೆ. ರಾಜಧಾನಿ ಬೆಂಗಳೂರಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ 18 ಸಾವಿರದಷ್ಟಿವೆ. ಈ ಹಿನ್ನೆಲೆಯಲ್ಲಿಯೆ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಲಾಕ್‌ಡೌನ್‌ ಜಾರಿಗೆ ತರಲಾಗಿದೆ. ಈ ಅವಧಿಯಲ್ಲಿ ವೈದ್ಯಕೀಯ ವಲಯ, ಸರಕಾರಕ್ಕೆ ಮತ್ತಷ್ಟು ಅಗತ್ಯ ಕ್ರಮಗಳ ಜಾರಿಗೆ ಸಮಯ ಸಿಕ್ಕಂತಾಗಲಿದೆ ಅನುಕೂಲವಾಗಲಿದೆ. ರೋಗ ತಡೆಗೆ ಮುಖ್ಯವಾಗಿ ಟೆಸ್ಟಿಂಗ್‌ ಅತ್ಯಗತ್ಯ ಎನ್ನುವುದು ಈಗ ಸಾಬೀತಾಗಿದ್ದು, ರಾಜ್ಯ ಸರಕಾರ ಟೆಸ್ಟಿಂಗ್‌ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲೇಬೇಕಿದೆ.

ಒಟ್ಟಿನಲ್ಲಿ ಕೋವಿಡ್‌ ವಿರುದ್ಧದ ಹೋರಾಟ ಸಫ‌ಲವಾಗಬೇಕೆಂದರೆ, ಆಗಲೇ ಹೇಳಿದಂತೆ ಜನರ ಸಹಕಾರ ಅತ್ಯಗತ್ಯ. ಲಾಕ್‌ಡೌನ್‌ ಅವಧಿಯಲ್ಲೂ ಹಲವಾರು ಕಡೆಗಳಲ್ಲಿ ಜನರು ನಿಯಮ ಉಲ್ಲಂಘನೆ ಮಾಡುತ್ತಿರುವುದು ವರದಿಯಾಗುತ್ತಿದೆ. ನೆನಪಿಡಿ, ಕೊರೊನಾ ವಿರುದ್ಧದ ಹೋರಾಟ ಕೇವಲ ಆಡಳಿತ ಅಥವಾ ವೈದ್ಯಕೀಯ ವಲಯದಿಂದ ಮಾತ್ರ ಸಾಧ್ಯವಿಲ್ಲ. ಜನ ಸಹಭಾಗಿತ್ವ ಇದಕ್ಕೆ ಅತ್ಯಗತ್ಯ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.