ಭಯೋತ್ಪಾದನೆ ವಿರುದ್ಧ ಹೋರಾಟ ನಿಲ್ಲಬಾರದು


Team Udayavani, May 3, 2019, 6:00 AM IST

masood

ಪಾಕಿಸ್ತಾನದ ಕಡು ಪಾತಕಿ ಉಗ್ರ ಮೌಲಾನ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವಲ್ಲಿ ಭಾರತ ಕೊನೆಗೂ ಸಫ‌ಲವಾಗಿದ್ದು, ಇದು ಕೇಂದ್ರ ಸರ್ಕಾರದ ಚತುರ ರಾಜತಾಂತ್ರಿಕ ನಡೆಗೆ ಸಿಕ್ಕಿದ ಬಹುದೊಡ್ಡ ಯಶಸ್ಸು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಮೂರು ದಶಕಗಳಿಂದ ಮಗ್ಗುಲ ಮುಳ್ಳಾಗಿ ಕಾಡುತ್ತಿದ್ದ ಅಜರ್‌ನನ್ನು ಕಟ್ಟಿ ಹಾಕುವುದು ಪಾಲಿಗೆ ಅನಿವಾರ್ಯವಾಗಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ನಿತ್ಯ ರಕ್ತದೋಕುಳಿ ಹರಿಯಲು ಕಾರಣನಾಗಿದ್ದ ಅಜರ್‌ ಹಾಗೂ ಅವನ ಉಗ್ರ ಸಂಘಟನೆ ಜೈಶ್‌-ಎ-ಮುಹಮ್ಮದ್‌ ಎಂದೋ ಜಾಗತಿಕ ಉಗ್ರರ ಪಟ್ಟಿಗೆ ಸೇರ್ಪಡೆಯಾಗಬೇಕಿತ್ತು. ಆದರೆ ಇದಕ್ಕೆ ತಡೆಯಾಗಿದ್ದದ್ದು ಪಾಕಿಸ್ತಾನದ ಪರಮಾಪ್ತ ಮಿತ್ರ ಚೀನ. ಭಾರತದ ನಾಲ್ಕು ಪ್ರಯತ್ನಗಳನ್ನು ಚೀನ “ತಾಂತ್ರಿಕ ಕಾರಣ’ದ ನೆಪವೊಡ್ಡಿ ತಡೆ ಹಿಡಿದಿತ್ತು. ಆದರೆ ಐದನೇ ಪ್ರಯತ್ನದಲ್ಲಿ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ಪ್ರಸ್ತಾವವನ್ನು ಚೀನ ವಿರೋಧಿಸದಂಥ ಪರಿಸ್ಥಿತಿಯನ್ನು ಭಾರತ ಸೃಷ್ಟಿಸಿತ್ತು. ಭಾರತದ ಈ ಪ್ರಯತ್ನದಲ್ಲಿ ಬೆಂಗಾವಲಾಗಿ ನಿಂತದ್ದು ಫ್ರಾನ್ಸ್‌, ಅಮೆರಿಕ ಮತ್ತು ಬ್ರಿಟನ್‌. ಅಂತೆಯೇ ಚೀನ ಹೊರತುಪಡಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಉಳಿದ ಖಾಯಂ ಸದಸ್ಯ ರಾಷ್ಟ್ರಗಳು ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ನಿರ್ಣಯದ ಪರವಾಗಿ ಇದ್ದವು.

ಈ ಸಲವೂ ಚೀನ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ನಿರ್ಣಯವನ್ನು ವಿರೋಧಿಸಿದರೆ ಅಮೆರಿಕ, ಬ್ರಿಟನ್‌ ಮತ್ತು ಫ್ರಾನ್ಸ್‌ ಈ ನಿರ್ಣಯವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಬಹಿರಂಗ ಚರ್ಚೆಗೆ ಹಾಕುವ ತೀರ್ಮಾನ ಮಾಡಿದ್ದವು. ಬಹಿರಂಗ ಚರ್ಚೆಯಲ್ಲಿ ಇಡೀ ಜಗತ್ತಿನೆದುರು ತಾನು ಒಂಟಿಯಾಗಬೇಕಾಗುತ್ತದೆ ಎಂಬ ಭೀತಿಯಿಂದ ಚೀನ ತಾಂತ್ರಿಕ ಕಾರಣದ ನೆಪವನ್ನು ಹಿಂತೆಗೆದುಕೊಂಡಿತು. ಜೊತೆಗೆ ವಿವಿಧ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಭಾರತ ಹಾಕಿದ ಒತ್ತಡ, ಬಾಲಕೋಟ್‌ ವಾಯುದಾಳಿ ನಡೆದ ಸಂದರ್ಭದಲ್ಲಿ ಅಂತರಾಷ್ಟ್ರೀಯ ಸಮುದಾಯ ಭಯೋತ್ಪಾದನೆಯತ್ತ ಶೂನ್ಯ ಸಹನೆ ಧೋರಣೆಯನ್ನು ವ್ಯಕ್ತಪಡಿಸಿದ್ದನ್ನು ಗಮನಿಸಿದ ಬಳಿಕ ಚೀನ ಈ ಸಲ ವಿರೋಧ ವ್ಯಕ್ತಪಡಿಸುವ ಸ್ಥಿತಿಯಲ್ಲಿ ಇರಲಿಲ್ಲ. ಒಂದು ವೇಳೆ ವಿರೋಧಿಸಿದ್ದರೆ ಜಾಗತಿಕವಾಗಿ ಅದು ಒಂಟಿಯಾಗುತ್ತಿತ್ತು.ಹೀಗೆ ಮನಸ್ಸಿಲ್ಲದ ಮನಸ್ಸಿನಿಂದ ಚೀನ ಅಜರ್‌ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿದೆ.

ಇತ್ತ ಆರ್ಥಿಕವಾಗಿ ಕಂಗಾಲಾಗಿರುವ ಪಾಕಿಸ್ತಾನಕ್ಕೂ ಅಜರ್‌ನನ್ನು ಜಾಗತಿಕ ಉಗ್ರನೆಂದು ಒಪ್ಪಿಕೊಳ್ಳುವ ಅನಿವಾರ್ಯತೆ ಇತ್ತು. ಒಪ್ಪಿಕೊಳ್ಳದಿದ್ದರೆ ಹಣಕಾಸು ಕಾರ್ಯಪಡೆ (ಫೈನಾನ್ಶಿಯಲ್‌ ಆ್ಯಕ್ಷನ್‌ ಟಾಸ್ಕ್ ಫೋರ್ಸ್‌) ಪಾಕ್‌ನ್ನು ಕಪ್ಪುಪಟ್ಟಿಗೆ ಸೇರಿಸಲು ಮುಂದಾಗಿತ್ತು. ಕಪ್ಪುಪಟ್ಟಿಗೆ ಸೇರಿದ ಬಳಿಕ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಕೊಡಲುದ್ದೇಶಿಸಿರುವ ಸಾಲದ ಸಹಿತ ಯಾವುದೇ ಅಂತರಾಷ್ಟ್ರೀಯ ನೆರವು ಸಿಗುವುದಿಲ್ಲ. ಹೀಗಾದರೆ ಈಗಾಗಲೇ ದಿವಾಳಿ ಹಂತದಲ್ಲಿರುವ ದೇಶದ ಪರಿಸ್ಥಿತಿ ಸಂಪೂರ್ಣ ಹದಗೆಡುವ ಸಾಧ್ಯತೆಯಿತ್ತು. ಇದನ್ನು ಮನಗಂಡೇ ಈ ಸಲ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ನಿರ್ಣಯವನ್ನು ವಿರೋಧಿಸುವುದು ಬೇಡ ಎಂದು ಪಾಕಿಸ್ತಾನ ಚೀನವನ್ನು ಕೇಳಿಕೊಂಡಿತ್ತು.

ಹಾಗೆಂದು ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸಿದ ಮಾತ್ರಕ್ಕೆ ಭಯೋತ್ಪಾದನೆಯ ಸಮಸ್ಯೆ ಬಗೆಹರಿಯಿತು ಅಥವಾ ಕನಿಷ್ಠ ಅವನ ಅವನ ಉಪಟಳ ಕೊನೆಗೊಂಡಿತು ಎಂದು ಭಾವಿಸಬೇಕಿಲ್ಲ.ಎಲ್ಲಿಯ ತನಕ ಪಾಕಿಸ್ಥಾನ ತನ್ನ ನೆಲದಲ್ಲಿ ಉಗ್ರವಾದ ಹರಡಲು ಅವಕಾಶ ಕೊಡುವುದಿಲ್ಲವೋ ಅಷ್ಟರ ತನಕ ಜಗತ್ತಿಗೆ ಉಗ್ರರ ಕಾಟ ತಪ್ಪಿದ್ದಲ್ಲ. ಲಷ್ಕರ್‌-ಎ-ತೊಯ್ಯಬಾ ಉಗ್ರ ಸಂಘಟನೆಯ ಸ್ಥಾಪಕ ಹಫಿಜ್‌ ಸಯೀದ್‌ನನ್ನು ವಿಶ್ವಸಂಸ್ಥೆ ಕೆಲವರ್ಷಗಳ ಹಿಂದೆಯೇ ಜಾಗತಿಕ ಉಗ್ರನೆಂದು ಘೋಷಿಸಿದೆ. ಆದರೆ ಇದರಿಂದ ಅವನ ಚಟುವಟಿಕೆಗೆ ಯಾವುದೇ ರೀತಿಯ ಅಡ್ಡಿಯಾಗಿಲ್ಲ. ಈಗಲೂ ಅವನು ಪಾಕಿಸ್ತಾನ‌ದಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದಾನೆ, ರ್ಯಾಲಿಗಳಲ್ಲಿ ಭಾಷಣ ಮಾಡುತ್ತಾ ಭಾರತದ ವಿರುದ್ಧ ವಿಷ ಕಾರುತ್ತಿದ್ದಾನೆ ಹಾಗೂ ತನ್ನ ಉಗ್ರ ಚಟುವಟಿಕೆಗಳಿಗೆ ನಿಧಿ ಸಂಗ್ರಹಿಸುತ್ತಿದ್ದಾನೆ. ಅದೇ ರೀತಿ ಅಮೆರಿಕ ಮತ್ತು ಭಾರತ ಜಾಗತಿಕ ಉಗ್ರನೆಂದು ಘೋಷಿಸಿರುವ ಭೂಗತ ಜಗತ್ತಿನ ಪಾತಕಿ ದಾವೂದ್‌ ಇಬ್ರಾಹಿಂನನ್ನು ಕೂಡಾ ಪಾಕಿಸ್ಥಾನ ಸರಕಾರ ಬಿಗು ಭದ್ರತೆ ನೀಡಿ ಕಾಪಾಡಿಕೊಂಡಿದೆ. ಯಾವ ಅಂತರಾಷ್ಟ್ರೀಯ ಒತ್ತಡದಿಂದಲೂ ಈ ಉಗ್ರರನ್ನು ಕಟ್ಟಿಹಾಕಲು ಸಾಧ್ಯವಾಗಿಲ್ಲ. ಹೀಗಿರುವಾಗ ಅಜರ್‌ನ ಚಟುವಟಿಕೆಗಳಿಗೆ ಪಾಕ್‌ ಸರಕಾರ ಕಡಿವಾಣ ಹಾಕಬಹುದು ಎಂದು ನಿರೀಕ್ಷಿಸು ವುದು ದುಬಾರಿಯಾದೀತು. ತನ್ನ ನೆಲದಿಂದ ಉಗ್ರವಾದ ಮೂಲೋತ್ಪಾಟನೆಯಾಗ ಬೇಕೆಂಬ ಪ್ರಾಮಾಣಿಕ ಇಚ್ಛೆ ಪಾಕಿಸ್ತಾನಕ್ಕೆ ಇದ್ದರಷ್ಟೇ ಇಂಥ ನಿಷೇಧಗಳಿಂದ ಏನಾ ದರೂ ಪ್ರಯೋಜನವಾಗಬಹುದಷ್ಟೆ. ಹೀಗಾಗಿ ಸದ್ಯಕ್ಕೆ ನಾವು ರಾಜತಾಂತ್ರಿಕ ನಡೆಯಲ್ಲಿ ಮಾತ್ರ ಗೆದ್ದಿದ್ದೇವೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಬಹಳಷ್ಟು ಸಾಧಿಸಬೇಕಾದದ್ದು ಇನ್ನೂ ಬಹಳಷ್ಟಿದೆ.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಪತಾಕೆ ಉತ್ತುಂಗಕ್ಕೇರಲಿ

Editorial: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಪತಾಕೆ ಉತ್ತುಂಗಕ್ಕೇರಲಿ

fetosd

Karnataka: ರಾಜ್ಯದಲ್ಲಿ ಮತ್ತಷ್ಟು ಭ್ರೂಣಹತ್ಯೆ ಪ್ರಕರಣ ಆತಂಕಕಾರಿ

ದೂರಗಾಮಿ ಸತ್ಪರಿಣಾಮಗಳ ನಿರ್ಮಲಾ “ಸಪ್ತಮ’ ಬಜೆಟ್‌

Union Budget; ದೂರಗಾಮಿ ಸತ್ಪರಿಣಾಮಗಳ ನಿರ್ಮಲಾ “ಸಪ್ತಮ’ ಬಜೆಟ್‌

NIPAH

Kerala ನಿಫಾ ಸೋಂಕು: ರಾಜ್ಯದಲ್ಲೂ ನಿಗಾ ಅಗತ್ಯ

Kerala-Vijayaan

Kerala: ವಿದೇಶಾಂಗ ಕಾರ್ಯದರ್ಶಿ ನೇಮಕ: ಒಕ್ಕೂಟ ವ್ಯವಸ್ಥೆಗೆ ಧಕ್ಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.