ಆದಾಯ ತೆರಿಗೆ ಇಲಾಖೆ ಸ್ವಾಯತ್ತೆಗೆೆ ಧಕ್ಕೆ ಆಗದಿರಲಿ


Team Udayavani, Apr 27, 2019, 11:55 AM IST

IT

ಲೋಕಸಭೆ ಚುನಾವಣೆ ಶುರುವಾಗುತ್ತಿದ್ದಂತೆಯೇ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಮಧ್ಯಪ್ರದೇಶಗಳ ಹಲವೆಡೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ರಾಜಕೀಯ ಪಕ್ಷಗಳ ಜತೆಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದವರು ಎಂದು ಹೇಳಲಾಗಿರುವವರ ನಿವಾಸಗಳಿಗೆ ದಾಳಿ ನಡೆಸಿ ಅಕ್ರಮವಾಗಿ ಇತ್ತು ಎಂದು ನಂಬಲಾಗಿರುವ ದಾಖಲೆಗಳಿಲ್ಲದ ನಗದು ವಶಪಡಿಸಿಕೊಳ್ಳಲಾಗಿತ್ತು. ಪ್ರತಿಪಕ್ಷಗಳನ್ನು ಗುರಿಯಾಗಿರಿಸಿಕೊಂಡು ಇಂಥ ಕ್ರಮ ನಡೆಸಲಾಗುತ್ತಿದೆ ಎಂದು ಆರೋಪಗಳೂ ವ್ಯಕ್ತವಾದವು. ಇನ್ನು ತಮಿಳುನಾಡಿನ ವೆಲ್ಲೂರಿನಲ್ಲಿ ದಾಳಿಯಾಗಿ ದಾಖಲೆಗಳು ಇಲ್ಲಿಂದ ಕೋಟ್ಯಂತರ ರೂಪಾಯಿಗಳು, ಮದ್ಯ ಪತ್ತೆಯಾದ ಬಳಿಕ ಅಲ್ಲಿನ ಲೋಕಸಭೆ ಚುನಾವಣೆಯನ್ನೇ ರದ್ದು ಮಾಡಲಾಗಿತ್ತು.

ಮಧ್ಯಪ್ರದೇಶದ ಸಿಧಿಯಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ “ನರೇಂದ್ರ ಮೋದಿ ತಪ್ಪು ಮಾಡಿದ್ದು ಹೌದಾದರೆ, ಆದಾಯ ತೆರಿಗೆ ಇಲಾಖೆ ಅವರ ಮನೆಯ ಮೇಲೂ ದಾಳಿ ನಡೆಸಲಿ’ ಎಂದು ಹೇಳಿದ್ದಾರೆ. ಇತ್ತೀಚೆ ಗಷ್ಟೇ ಮಧ್ಯಪ್ರದೇಶದಲ್ಲಿ ನಡೆದಿದ್ದ ದಾಳಿ ಪ್ರಕರಣವನ್ನು ಉಲ್ಲೇಖೀಸಿ ಪ್ರಧಾನಿ ಈ ಮಾತು ಹೇಳಿದ್ದಾರಾದರೂ, ಭಾರಿ ಮಹತ್ವ ಪಡೆದಿದೆ.

ರಾಜ್ಯ, ಕೇಂದ್ರ ಸರ್ಕಾರಗಳ ಇಲಾಖೆಗಳು ಕಾನೂನಿನ ಅನ್ವಯವೇ ಕೆಲಸ ಮಾಡು ತ್ತವೆ. ಇತ್ತೀಚಿನ ಆದಾಯ ತೆರಿಗೆ ಇಲಾಖೆ ಕೈಗೊಂಡ ಕ್ರಮದಲ್ಲಿ ಯಾರೊಬ್ಬ ರಾಜಕೀಯ ಪಕ್ಷದ ಪ್ರಮುಖ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಲಾಗಿಲ್ಲ. ತಪ್ಪು ಎಸಗಿದವರ ಮೇಲೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುವುದಕ್ಕೆ ಆಕ್ಷೇಪ ಮಾಡಲಾಗುತ್ತದೆ ಎಂದಾದರೆ, ವಿವಿಧ ತನಿಖಾ ಸಂಸ್ಥೆಗಳು ಕಾರ್ಯನಿರ್ವಹಿಸುವುದಾದರೂ ಹೇಗೆ?

ಕೆಲವೊಂದು ಪ್ರಕರಣಗಳಲ್ಲಿ ಯಾವುದೇ ಇಲಾಖೆ, ತನಿಖಾ ಸಂಸ್ಥೆಗಳು ಎಡವಿರಬಹುದು. ಹಾಗೆಂದು ಉದ್ದೇಶಪೂರ್ವಕವಾಗಿ ದಾಳಿ ಮಾಡುತ್ತಿವೆ ಎಂದು ಆರೋಪಿಸಿದರೆ ಹೇಗಾಗುತ್ತದೆ? ಶುಕ್ರವಾರ ಮಾತನಾಡಿದ ಅಂಶವನ್ನೇ ಪ್ರಧಾನಿ ನರೇಂದ್ರ ಮೋದಿಯವರು ಕೆಲ ದಿನಗಳ ಹಿಂದೆ ಸಂದರ್ಶನದಲ್ಲಿ ಉಲ್ಲೇಖೀಸಿದ್ದರು. ದಾಳಿಗಳು ಯಾವುದೇ ರಾಜಕೀಯ ಪ್ರತೀಕಾರಕ್ಕಾಗಿ ನಡೆಯುತ್ತಿಲ್ಲ. ನಿಯಮಗಳ ಅನ್ವಯವೇ ಆದಾಯ ತೆರಿಗೆ ಇಲಾಖೆ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದ್ದರು. ಹೀಗಾಗಿ, ದಾಳಿ ವಿಚಾರದಲ್ಲಿ ವ್ಯಕ್ತವಾಗುತ್ತಿರುವ ಆಕ್ಷೇಪಗಳ ಬಗ್ಗೆ ವಿಷಾದ ವ್ಯಕ್ತಪಡಿಸಬೇಕಾಗುತ್ತದೆ.
ಗುರುವಾರ ಕೂಡ ಮಹಾರಾಷ್ಟ್ರದಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ 1.5 ಕೋಟಿ ರೂ. ನಗದು ವಶಪಡಿಸಿಕೊಂಡಿತ್ತು. ಏ.29ರಂದು ನಾಲ್ಕನೇ ಹಂತದ ಚುನಾವಣೆಗೆ ಪೂರಕವಾಗಿಯೇ ಈ ದಾಳಿ ನಡೆದಿದೆ.

ಹಿಂದಿನ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ಆದಾಯ ತೆರಿಗೆ ಮತ್ತು ಇತರ ತನಿಖಾ ಸಂಸ್ಥೆಗಳು ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ನಗದು, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಹಾಗಿದ್ದರೆ ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಕೈಗೊಂಡಿದ್ದ ಕ್ರಮ ಸರಿಯೇ? ಈಗಿನದ್ದು ತಪ್ಪಾಗಿದೆಯೇ ಎಂಬ ಸಂದೇಹ ಮೂಡುತ್ತದೆ.

ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಕೂಡ ರಾಜಕೀಯ ನೇತಾರರನ್ನು ಗುರಿಯಾಗಿಸಿ ಕ್ರಮ ಕೈಗೊಳ್ಳಲಾಗುತ್ತಿಲ್ಲವೆಂದು ಪದೇ ಪದೆ ಸ್ಪಷ್ಟನೆಯನ್ನೂ ಕೊಟ್ಟಿತ್ತು. ನಿಗದಿತ ಸಂಸ್ಥೆಗಳಿಗೆ ಕೈಗೊಳ್ಳಬೇಕಾದ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಅವುಗಳು ಕೆಲಸ ನಿರ್ವಹಿಸುವುದಾದರೂ ಹೇಗೆ? ಹೀಗಾಗಿ, ಆಯಾ ಸಂಸ್ಥೆಗಳಿಗೆ ನಿಯಮಗಳ ಅನ್ವಯ ಕೆಲಸ ಮಾಡಲು ಅವಕಾಶಕೊಟ್ಟು, ನಿಜವಾಗಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದಲ್ಲಿ ಹೇಳಿದ ಮಾತುಗಳು ಸ್ತುತ್ಯರ್ಹವಾಗಿವೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.