ಸಮನ್ವಯತೆಯ ಕೊರತೆ ಸುತ್ತೋಲೆ ವಿವಾದ 


Team Udayavani, Feb 9, 2018, 12:04 PM IST

siddaramiah-900.jpg

ಮಠಗಳು, ಮಠಗಳಿಗೆ ಸೇರಿದ ದೇವಸ್ಥಾನಗಳು, ಮಠಗಳ ನಿಯಂತ್ರಣದಲ್ಲಿರುವ ಧಾರ್ಮಿಕ ಸಂಸ್ಥೆಗಳು ಅಂತೆಯೇ ಜೈನ, ಬೌದ್ಧ ಮತ್ತು ಸಿಖ್‌ ಧರ್ಮೀಯರ ಧಾರ್ಮಿಕ ಸಂಸ್ಥೆಗಳನ್ನು ಸರಕಾರಿ ನಿಯಂತ್ರಣಕ್ಕೊಳಪಡಿಸುವ ಸಲುವಾಗಿ ಧಾರ್ಮಿಕ ದತ್ತಿ ಕಾಯಿದೆಗೆ ತಿದ್ದುಪಡಿ ಮಾಡುವುದಕ್ಕೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸುವ ಮೂಲಕ ಸರಕಾರ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಕೆಲ ದಿನಗಳ ಹಿಂದೆಯಷ್ಟೇ ಅಲ್ಪಸಂಖ್ಯಾಕರ ವಿರುದ್ಧ ದಾಖಲಾಗಿರುವ ಕೇಸುಗಳನ್ನು ಹಿಂಪಡೆಯಲು ಇದೇ ಮಾದರಿಯ ಸುತ್ತೋಲೆಯನ್ನು ಹೊರಡಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಅದರ ಬೆನ್ನಿಗೆ ಧಾರ್ಮಿಕವಾಗಿ ಅತ್ಯಂತ ಸೂಕ್ಷ್ಮವಾಗಿರುವ ವಿವಾದವನ್ನು ಚುನಾವಣೆ ಕಾಲದಲ್ಲಿ ಕೆದಕಲು ಮುಂದಾಗಿರುವ ಸಾಧ್ಯತೆಯಿಲ್ಲ. ಹಾಗೆಂದು ಸುತ್ತೋಲೆ ಹೊರಬಿದ್ದಿರುವುದೂ ಸುಳ್ಳಲ್ಲ. ಇಲ್ಲಿ ಕಾಣುವ ಸತ್ಯ ಏನೆಂದರೆ ಸರಕಾರದ, ನಿರ್ದಿಷ್ಟವಾಗಿ ಹೇಳುವುದಾದರೆ ಮುಜರಾಯಿ ಸಚಿವ ರುದ್ರಪ್ಪ ಲಮಾಣಿಯ ಗಮನಕ್ಕೆ ಬಾರದೆಯೇ ಸುತ್ತೋಲೆ ಹೊರಡಿಸಲಾಗಿದೆ. ಇದರರ್ಥ-ಒಂದೋ ಸಚಿವರಿಗೆ ತನ್ನ ಇಲಾಖೆಯ ಮೇಲೆಯೇ ಹಿಡಿತವಿಲ್ಲ, ಇಲ್ಲವೇ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸಮಯ ಕಾದು ನೋಡಿ ಸುತ್ತೋಲೆ ಹೊರಡಿಸಿದ್ದಾರೆ. ಸದ್ಯಕ್ಕೆ ಈ ಎರಡೂ ಅನುಮಾನಗಳನ್ನು ನಂಬಲು ಸಾಕಷ್ಟು ಕಾರಣಗಳಿವೆ.  ಅಲ್ಪಸಂಖ್ಯಾಕರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಸುತ್ತೋಲೆ ವಿಚಾರವೂ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರ ಗಮನಕ್ಕೆ ಬಂದಿರಲಿಲ್ಲ ಎನ್ನಲಾಗುತ್ತಿದೆ. ಸರಕಾರಕ್ಕೆ ಸಾಕಷ್ಟು ಮುಜುಗರ ತಂದಿತ್ತ ಮತ್ತು ಹಿಂದು ವಿರೋಧಿ ಎಂಬ ಆರೋಪವನ್ನು ಇನ್ನಷ್ಟು ಗಟ್ಟಿಗೊಳಿಸಿದ ಈ ವಿವಾದದಿಂದ ಪಾರಾಗಲು ಸರಕಾರ ಕಡೆಗೆ ಸುತ್ತೋಲೆಗೆ ತಿದ್ದುಪಡಿ ಮಾಡಬೇಕಾಯಿತು. ಇಲ್ಲೂ ಸರಕಾರ ಅಧಿಕಾರಿಗಳ ಮೇಲೆ ಹರಿಹಾಯ್ದಿದೆ. 

  ಬುಧವಾರ ಧಾರ್ಮಿಕ ದತ್ತಿ ಇಲಾಖೆಯ ಸುತ್ತೋಲೆ ಹೊರ ಬಿದ್ದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಲಮಾಣಿ ಮತ್ತು ಇಲಾಖೆಯ ಉನ್ನತ ಅಧಿಕಾರಿಗಳನ್ನು ಕರೆಸಿ “ಕ್ಲಾಸ್‌’ ತೆಗೆದುಕೊಂಡಿದ್ದಾರೆ ಎನ್ನುವ ವರದಿಯಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕಾರ್ಯಾಂಗ ಸರಕಾರದ ವಿರುದ್ಧವೇ ತಿರುಗಿ ಬೀಳುತ್ತಿದೆಯೇ ಎಂಬ ಅನುಮಾನ ಈ ಎರಡು ಬೆಳವಣಿಗೆಗಳಿಂದ ಉಂಟಾಗುತ್ತಿದೆ.  ಸಿದ್ದರಾಮಯ್ಯ ನೇತೃತ್ವದ ಸರಕಾರ ಆರಂಭದಿಂದಲೇ ಕಾರ್ಯಾಂಗದ ಜತೆಗೆ ಉತ್ತಮ ಸಂಬಂಧ ಇಟ್ಟುಕೊಂಡಿರಲಿಲ್ಲ. ಬಹುತೇಕ ಎಲ್ಲ ಇಲಾಖೆಗಳಲ್ಲಿ ಸಚಿವರ ಮತ್ತು ಅವರ ಆಪ್ತ ವಲಯದವರ ಹಸ್ತಕ್ಷೇಪ ನಡೆಯುತ್ತಿತ್ತು ಎನ್ನುವುದಕ್ಕೆ ಪದೇ ಪದೆ ಅಧಿಕಾರಿಗಳು ಮತ್ತು ಸರಕಾರದ ನಡುವೆ ನಡೆಯುತ್ತಿದ್ದ ಸಂಘರ್ಷವೇ ಸಾಕ್ಷಿ. ಐಎಎಸ್‌ ಅಧಿಕಾರಿಯ ಆತ್ಮಹತ್ಯೆಯಂತಹ ಘಟನೆಯನ್ನು ರಾಜ್ಯದ ಜನತೆ ನೋಡಿದೆ. ಪ್ರಾಮಾಣಿಕ ಅಧಿಕಾರಿಗಳನ್ನು ಯದ್ವಾತದ್ವಾ ವರ್ಗಾವಣೆ ಮಾಡಿದ ಪರಿಣಾಮವಾಗಿ ಹಲವು ಅಧಿಕಾರಿಗಳು ರಾಜ್ಯದ ಉಸಾಬರಿಯೇ ಬೇಡ ಎಂದು ಕೇಂದ್ರದ ಡೆಪ್ಯುಟೇಶನ್‌ ಮೇಲೆ ಹೋಗಿದ್ದಾರೆ. ಇತ್ತೀಚೆಗೆ ಹಾಸನದ ಜಿಲ್ಲಾಧಿಕಾರಿಯನ್ನು ವರ್ಗಾಯಿಸಲು ನಡೆಸಿದ ಪ್ರಯತ್ನ ಅಧಿಕಾರಿಗಳಿಗೆ ಸರಕಾರ ಯಾವ ಪರಿ ಕಿರುಕುಳ ನೀಡುತ್ತಿದೆ ಎನ್ನುವುದಕ್ಕೊಂದು ಉದಾಹರಣೆ. ಪೊಲೀಸ್‌ ಇಲಾಖೆಯಂತೂ ಬಾಹ್ಯ ಹಸ್ತಕ್ಷೇಪದಿಂದ ಅತಿ ಹೆಚ್ಚು ಹಾನಿಗೊಳಗಾಗಿದೆ. ಪೊಲೀಸ್‌ ಅಧಿಕಾರಿಯ ಸಂಶಯಾಸ್ಪದ ಸಾವಿನ ಪ್ರಕರಣದಿಂದ ಇಡೀ ವ್ಯವಸ್ಥೆಯನ್ನೇ ಜನರು ಜುಗುಪ್ಸೆಯಿಂದ ನೋಡುವಂತಾದರೂ ಸರಕಾರ ಬುದ್ಧಿ ಕಲಿತುಕೊಂಡಿಲ್ಲ. ಪೊಲೀಸರೇ ಮುಷ್ಕರ ಹೂಡಿದ ಅಪರೂಪದ ವಿದ್ಯಮಾನವೂ ಹಾಲಿ ಸರಕಾರದ ಅವಧಿಯಲ್ಲಿ ಸಂಭವಿಸಿದೆ. ಹೀಗಾಗಿ ಅಧಿಕಾರಿಗಳು ತಮ್ಮ ಅಸಮಾಧಾನವನ್ನು ಈ ರೀತಿ ಹೊರ ಹಾಕುತ್ತಿರಬಹುದು ಎನ್ನುವುದು ಒಂದು ಸಂದೇಹ.  

 ಇನ್ನು ಸಚಿವರಿಗೆ ಇಲಾಖೆಗಳ ಮೇಲೆ ಲಗಾಮಿಲ್ಲ ಎನ್ನುವುದನ್ನು ನಂಬುವುದಕ್ಕೂ ಹಲವು ಕಾರಣಗಳಿವೆ. ಕೆಲವು ಇಲಾಖೆಗಳು ಅಕ್ಷರಶಃ ಅಧಿಕಾರಿಗಳ ಮರ್ಜಿಯಂತೆ ನಡೆಯುತ್ತಿವೆಯೇ ಹೊರತು ಸರಕಾರದ ನೀತಿಗಳ ಪ್ರಕಾರ ಅಲ್ಲ. ಬಹುತೇಕ ಸಚಿವರು ವಾರಕ್ಕೊಮ್ಮೆಯೂ ಕಚೇರಿಗೆ ಭೇಟಿ ಕೊಡುವುದಿಲ್ಲ. ಅದರಲ್ಲೂ ಚುನಾವಣೆಯ ಕಾವು ಏರಿದ ಬಳಿಕ ಸಚಿವರನ್ನು ಕಾಣುವುದೇ ಅಪರೂಪವಾಗಿದೆ ಎಂಬ ದೂರು ಇದೆ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಮರೆಯುವುದು ಸಹಜ. ಶಾಸಕಾಂಗ ಮತ್ತು ಕಾರ್ಯಾಂಗ ಪರಸ್ಪರ ಪೂರಕವಾಗಿದ್ದರೆ ಮಾತ್ರ ಆಡಳಿತಯಂತ್ರ ಸುಗಮವಾಗಿ ನಡೆಯಲು ಸಾಧ್ಯ.ಆದರೆ ರಾಜ್ಯದಲ್ಲಿ ಇವೆರಡು ತದ್ವಿರುದ್ಧ ದಿಕ್ಕಿನಲ್ಲಿ ಹೋಗುತ್ತಿರುವಂತೆ ಕಾಣಿಸುತ್ತಿದೆ.
 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.