ಚೀನ- ಅಮೆರಿಕ ಬಿಕ್ಕಟ್ಟು ದೀರ್ಘ‌ಕಾಲಿಕ ಪರಿಣಾಮ


Team Udayavani, Jul 27, 2020, 8:38 AM IST

editorial

ಅಮೆರಿಕ ಮತ್ತು ಚೀನದ ನಡುವಿನ ಬಿಕ್ಕಟ್ಟು ಈಗ ಗಂಭೀರ ರೂಪ ತಾಳುತ್ತಿದೆ. ಈ ಎರಡೂ ದೇಶಗಳ ನಡುವಿನ ಅಶಾಂತಿ ವಿಶ್ವವನ್ನು ಮತ್ಯಾವ ಸಂಕಟಕ್ಕೆ ದೂಡಲಿದೆಯೋ ಎಂದು ಕೆಲವು ದೇಶಗಳು ಚಿಂತಿತವಾಗಿವೆ. ಕೊರೊನಾ ವೈರಸ್‌ ಜಗತ್ತಿನಾದ್ಯಂತ ಹಾವಳಿ ಎಬ್ಬಿಸಿರುವುದಕ್ಕೆ ಚೀನವೇ ಕಾರಣ ಎಂದು ಟ್ರಂಪ್‌ ಸರಕಾರ ಆರಂಭದಿಂದಲೂ ಆರೋಪಿಸುತ್ತಲೇ ಬಂದಿದೆ. ಈ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯೂ ಚೀನದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ಅವರು ನೇರವಾಗಿಯೇ ಆರೋಪಿಸಿದಾಗಿಂದ ಈ ರಾಷ್ಟ್ರಗಳ ನಡುವಿನ ಆರೋಪ-ಪ್ರತ್ಯಾರೋಪಗಳು ತೀವ್ರವಾಗಿದ್ದವು.

ಈಗ ಅಮೆರಿಕವು ಹ್ಯೂಸ್ಟನ್‌ನಲ್ಲಿರುವ ಚೀನದ ವಾಣಿಜ್ಯ ದೂತಾವಾಸವನ್ನು ಮುಚ್ಚಿರುವುದಷ್ಟೇ ಅಲ್ಲದೇ, ಇಂಥ ಹೆಜ್ಜೆಯನ್ನು ತಾನು ಮುಂದೆಯೂ ಇಡುವುದಾಗಿ ಎಚ್ಚರಿಸಿದೆ. ಅಮೆರಿಕದಲ್ಲಿ ಚೀನದ ಇಂಥ 5 ವಾಣಿಜ್ಯ ದೂತಾವಾಸ ಕಚೇರಿಗಳಿವೆ. ಇದಕ್ಕೆ ಪ್ರತ್ಯುತ್ತರವಾಗಿ ಚೀನ ಚೆಂಗುxವಿನಲ್ಲಿರುವ ಅಮೆರಿಕದ ಮಹಾವಾಣಿಜ್ಯ ದೂತಾವಾಸ ಕಚೇರಿಯನ್ನು ಬಂದ್‌ ಮಾಡಲು ಆದೇಶ ನೀಡಿದೆ.

ಯಾವಾಗ ಎರಡೂ ರಾಷ್ಟ್ರಗಳ ನಡುವಿನ ತಿಕ್ಕಾಟ ಆರೋಪ-ಪ್ರತ್ಯಾರೋಪದ ಸ್ತರವನ್ನು ದಾಟಿ ರಾಜತಾಂತ್ರಿಕ ಸ್ತರದಲ್ಲಿ ನಡೆಯಲಾರಂಭಿಸುತ್ತದೋ, ಆಗ ಪರಿಸ್ಥಿತಿ ವಿಷಮಿಸುತ್ತಿದೆ ಎಂದರ್ಥ. ಎರಡು ದೊಡ್ಡ ರಾಷ್ಟ್ರಗಳ ನಡುವೆ ರಾಜಕೀಯ ಸ್ತರದಲ್ಲಿ ಇಂಥ ಕಠಿನ ನಿರ್ಣಯಗಳು ಹೊರಬೀಳಲಾರಂಭಿಸಿದರೆ, ಇದರ ದೂರಗಾಮಿ ಪರಿಣಾಮಗಳೂ ಹೆಚ್ಚುತ್ತಾ ಹೋಗುತ್ತವೆ. ಸತ್ಯವೇನೆಂದರೆ, ಇದೇ ಮೊದಲ ಬಾರಿಗೆ ಅಮೆರಿಕ ಚೀನದ ವಿರುದ್ಧ ಇಂಥ ದೊಡ್ಡ ಹೆಜ್ಜೆಯನ್ನಿಟ್ಟಿದೆ. ಚೀನ ಕೂಡ ಇದೇ ಧಾಟಿಯಲ್ಲಿ ಪ್ರತ್ಯುತ್ತರ ನೀಡಿದ್ದು, ಒಟ್ಟಿನಲ್ಲಿ ಇವೆರಡರ ನಡುವಿನ ಬಿಕ್ಕಟ್ಟು ದೀರ್ಘ‌ಕಾಲ ಮುಂದುವರಿಯಲಿದೆ ಎಂಬ ಸೂಚನೆ ಸಿಕ್ಕಿದೆ.

ಅಮೆರಿಕ ಹಾಗೂ ಚೀನ ನಡುವಿನ ಜಗಳ ಕಳೆದ ಮೂರು ವರ್ಷಗಳಿಂದ ಜೋರಾಗಿಯೇ ನಡೆದಿದೆ. ವ್ಯಾಪಾರ ಸಮರವಂತೂ ನಿಲ್ಲುವ ಸೂಚನೆಯೇ ಸಿಗುತ್ತಿಲ್ಲ. ಒಟ್ಟಿನಲ್ಲಿ ಚೀನ ಹಾಗೂ ಅಮೆರಿಕ ನಡುವಿನ ಈ ಸಮರ “ವರ್ಚಸ್ಸಿ’ಗಾಗಿ ನಡೆದಿರುವಂಥದ್ದು. ಜಗತ್ತಿನ ದೊಡ್ಡಣ್ಣನ ಪಟ್ಟವನ್ನು ತನ್ನದಾಗಿಸಿಕೊಳ್ಳಬೇಕೆಂಬ ಗುರಿ ಚೀನಕ್ಕಿದೆ. ಈ ಸ್ಥಾನವನ್ನು ಕಳೆದುಕೊಳ್ಳದಿರಲು ಅಮೆರಿಕ ಸಕಲ ರೀತಿಯಿಂದಲೂ ಪ್ರಯತ್ನಿಸುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಅಮೆರಿಕದಲ್ಲಿ ಈ ವರ್ಷ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಎರಡನೇ ಬಾರಿ ಅಧ್ಯಕ್ಷರಾಗಲು ಟ್ರಂಪ್‌ ಏನಕೇನ ಪ್ರಯತ್ನಿಸುತ್ತಲೇ ಇದ್ದಾರೆ.

ಚೀನಿ ಅಧ್ಯಕ್ಷ ಜಿನ್‌ಪಿಂಗ್‌ ಅವರ ಸಮಕ್ಷಮದಲ್ಲಿ ಚೀನದ ಕಮ್ಯೂನಿಸ್ಟ್‌ ಪಾರ್ಟಿಯು ಚೀನದ ಮೇಲಿನ ತನ್ನ ಹಿಡಿತವನ್ನು ಹೆಚ್ಚಿಸಿಕೊಂಡಿದೆ. ಯಾವುದೇ ಕಾರಣಕ್ಕೂ ತಮ್ಮ ಆಡಳಿತ ದುರ್ಬಲವಾಗಿಲ್ಲ ಎನ್ನುವುದನ್ನು ಚೀನೀಯರಿಗೆ ತೋರಿಸಲೇಬೇಕಾದ ಅನಿವಾರ್ಯ ಅವರಿಗಿದೆ. ಈ ಕಾರಣಕ್ಕಾಗಿಯೇ,ಅಮೆರಿಕ ಹಾಗೂ ಚೀನ ನಡುವಿನ ಸಮರ ಮುಂದುವರಿಯಲಿದೆ. ಇದರ ಪರಿಣಾಮವು ವಿಶ್ವದ ವಿವಿಧ ರಾಷ್ಟ್ರಗಳ ಮೇಲೆ ಹೇಗೆ ಆಗಲಿದೆಯೋ ನೋಡಬೇಕಿದೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.