ಪಾಕ್‌ ಉಪಟಳ ಕಟ್ಟೆಚ್ಚರ ಅಗತ್ಯ


Team Udayavani, Sep 18, 2019, 5:00 AM IST

e-53

ಜಮ್ಮು-ಕಾಶ್ಮೀರದಲ್ಲಿ ಭಾರತ-ಪಾಕಿಸ್ತಾನಿ ಸೇನೆಯ ನಡುವೆ ಸೃಷ್ಟಿಯಾಗುತ್ತಿರುವ ಬಿಕ್ಕಟ್ಟು ಚಿಂತೆಯ ವಿಷಯವಾಗಿದೆ. ಅದರಲ್ಲೂ ಕಲಂ 370 ದಯಪಾಲಿಸಿದ್ದ ವಿಶೇಷಾಧಿಕಾರವನ್ನು ಈ ಭಾಗದಿಂದ ಹಿಂಪಡೆದ ನಂತರದಿಂದ ಪಾಕಿಸ್ತಾನವಂತೂ ನಿತ್ಯ ಗಡಿಭಾಗದಲ್ಲಿ ಭಾರತೀಯ ಸೈನಿಕರತ್ತ ಗುಂಡಿನದಾಳಿ ನಡೆಸುತ್ತಿದೆ. ಪರಿಣಾಮವಾಗಿ ಗಡಿ ಗ್ರಾಮಗಳಲ್ಲಿ ಆತಂಕ ಸೃಷ್ಟಿಯಾಗಿ, ಜನ ಭಯಭೀತರಾಗಿದ್ದಾರೆ. ವಿದೇಶಾಂಗ ಸಚಿವಾಲಯದ ಪ್ರಕಾರ ಪಾಕಿಸ್ತಾನಿ ಸೇನೆಯು ಈ ವರ್ಷ ಎರಡು ಸಾವಿರದ ಐದುನೂರು ಬಾರಿ ಕದನವಿರಾಮದ ಉಲ್ಲಂಘನೆ ಮಾಡಿದೆ! ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ನಂತರದಿಂದ ಪಾಕ್‌ ಚಿಂತಾಕ್ರಾಂತವಾಗಿರುವುದಂತೂ ಸತ್ಯ. ಅತ್ತ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌, ಆ ದೇಶದ ಸೇನಾ ಮುಖ್ಯಸ್ಥ ಮತ್ತು ಸಚಿವರು ಮಾನಸಿಕ ಸಮತೋಲನ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ. ಇದೆಲ್ಲರ ಪರಿಣಾಮ ಗಡಿಭಾಗದಲ್ಲಿ ಕಾಣಿಸುತ್ತಿದೆ.

ಅನೇಕ ಬಾರಿ ಗಡಿ ಭಾಗದ ಪ್ರದೇಶಗಳ ಪರಿಸ್ಥಿತಿ ಎಷ್ಟು ಗಂಭೀರವಾಗುತ್ತದೆಂದರೆ, ಪ್ರಾಣ ಉಳಿಸಿಕೊಳ್ಳಲು ಜನ ಊರು ಬಿಡಬೇಕಾಗುತ್ತದೆ. ಹಿಂದಿರುಗಿ ಬಂದಾಗ ಅವರ ಮನೆಗಳು ಶೆಲ್ ಮತ್ತು ಮೋರ್ಟರ್‌ಗಳಿಂದಾಗಿ ತೀವ್ರ ಜಖಂಗೊಂಡಿರುತ್ತವೆ. ಮತ್ತೆ ಬದುಕನ್ನು ಸಹಜ ಸ್ಥಿತಿಗೆ ಒಯ್ಯಲು ಅವರಿಗೆ ವರ್ಷಗಳೇ ಹಿಡಿಯುತ್ತವೆ. ಈ ವರ್ಷದಲ್ಲಿ ಭಾರತೀಯ ಗಡಿಪ್ರದೇಶದಲ್ಲಿನ 21 ನಾಗರಿಕರು ಪಾಕಿಸ್ತಾನಿ ಸೈನಿಕರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಕಾಶ್ಮೀರದಲ್ಲಿ ಅಸ್ಥಿರತೆ ಸೃಷ್ಟಿಸುವ ಹುಚ್ಚಲ್ಲಿ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಬಲ್ಲದು ಎನ್ನುವುದನ್ನು ಈ ಘಟನೆಗಳು ಸಾರುತ್ತಿವೆ. ಭಾರತೀಯ ಸೈನಿಕರ ಗಮನವನ್ನು ಬೇರೆಡೆ ಸೆಳೆದು ಕಾಶ್ಮೀರದಲ್ಲಿ ಉಗ್ರರನ್ನು ನುಗ್ಗಿಸುವ ಉದ್ದೇಶದಿಂದಲೇ ಪಾಕ್‌ ಸೇನೆ ಈ ರೀತಿ ಮಾಡುತ್ತದೆ.

ಕೆಲವೇ ದಿನಗಳ ಹಿಂದಷ್ಟೇ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಆ ದೇಶ ಎರಡು ಸಾವಿರಕ್ಕೂ ಹೆಚ್ಚು ಸೈನಿಕರನ್ನು, 500ಕ್ಕೂ ಹೆಚ್ಚು ಪರಿಣತ ಕಮಾಂಡೋಗಳನ್ನು ನಿಲ್ಲಿಸಿದೆ. ಈ ಗುಂಪು ಠಿಕಾಣಿ ಹೂಡಿರುವುದು ಗಡಿನಿಯಂತ್ರಣ ರೇಖೆಯಿಂದ 30 ಕಿಲೋಮೀಟರ್‌ ದೂರದಲ್ಲಿ ಎನ್ನುತ್ತಿವೆ ಗುಪ್ತಚರ ವರದಿಗಳು.

ಭಾರತೀಯ ಸೇನೆ, ಭದ್ರತಾಪಡೆ ಮತ್ತು ಜಮ್ಮು-ಕಾಶ್ಮೀರದ ಪೊಲೀಸರಿಗೆ ಈ ವೇಳೆಯಲ್ಲಿ ಅತಿಹೆಚ್ಚು ಚಿಂತೆಯ ವಿಷಯವಾಗಿರುವುದು ಇದೊಂದೇ ಅಲ್ಲ, ಕಾಶ್ಮೀರ ಕಣಿವೆಯಲ್ಲಿ ಸ್ಲೀಪರ್‌ಸೆಲ್ಗಳಾಗಿರುವ ಆತಂಕವಾದಿಗಳನ್ನು ಹತ್ತಿಕ್ಕುವ ಬೃಹತ್‌ ಸವಾಲೂ ಅವುಗಳ ಮುಂದಿದೆ. ಪ್ರಸಕ್ತ 250ಕ್ಕೂ ಹೆಚ್ಚು ಉಗ್ರರು ಕಾಶ್ಮೀರದಲ್ಲಿ ಇದ್ದಾರೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಶ್ರೀನಗರವೊಂದರಲ್ಲೇ 24ಕ್ಕೂ ಹೆಚ್ಚು ಉಗ್ರರಿರುವುದಾಗಿ, ಇವರೆಲ್ಲ ದೊಡ್ಡ ದಾಳಿಯೊಂದಕ್ಕೆ ಸಂಚು ರೂಪಿಸುತ್ತಿರುವುದಾಗಿ ಖುದ್ದು ಸೇನೆಯೇ ಹೇಳಿದೆ. ಶ್ರೀನಗರದಂಥ ಬೃಹತ್‌ ನಗರದಲ್ಲೇ ಈ ಪರಿಸ್ಥಿತಿ ಇದೆ. ಇನ್ನು ಗ್ರಾಮೀಣ ಭಾಗದಲ್ಲಂತೂ ಪರಿಸ್ಥಿತಿ ಮತ್ತಷ್ಟು ವಿಷಮವಾಗಿದೆ ಎನ್ನಲಾಗುತ್ತದೆ. ಪ್ರಸಕ್ತ ಕಾಶ್ಮೀರದಾದ್ಯಂತ ಪೊಲೀಸರು ಮತ್ತು ಸೇನೆ ತೀವ್ರ ಕಟ್ಟೆಚ್ಚರ ವಹಿಸಿರುವುದರಿಂದ, ಹಲವು ನಿರ್ಬಂಧಗಳನ್ನು ಹೇರಿರುವುದರಿಂದ ಪರಿಸ್ಥಿತಿ ಹಿಡಿತದಲ್ಲಿದೆ. ಆದರೂ ಹೊರಗಿನಿಂದ ಮತ್ತು ಒಳಗಿನಿಂದ ಶತ್ರುಗಳು ಪಿತೂರಿ ನಡೆಸುತ್ತಿರುವಾಗ ಬಹಳ ಜಾಗರೂಕರಾಗಿ ಹೆಜ್ಜೆಯಿಡುವುದು ಅಗತ್ಯವಾಗಿದೆ. ಎಲ್ಲಕ್ಕೂ ಮುಖ್ಯವಾಗಿ ಜಾಗತಿಕ ವೇದಿಕೆಗಳಲ್ಲಿ ಶಾಂತಿ, ಮಾನವೀಯತೆಯ ಮಾತನಾಡುತ್ತಾ, ಹಿಂಬಾಗಿಲಿನಿಂದ ಭಾರತಕ್ಕೆ ಅತೀವ ತೊಂದರೆ ಕೊಡುತ್ತಿರುವ ಪಾಕಿಸ್ತಾನವನ್ನು ಎಲ್ಲಾ ರೀತಿಯಿಂದಲೂ ಕಟ್ಟಿಹಾಕುವ ಅಗತ್ಯ ಹಿಂದೆಂದಿಗಿಂತಲೂ ಅಧಿಕವಾಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.