ಉಗ್ರ ದಮನದ ಹಾದಿಯಲ್ಲಿ ಭಾರತೀಯ ಸೇನೆಯ ಪಾರಮ್ಯ


Team Udayavani, Nov 26, 2020, 5:45 AM IST

ಉಗ್ರ ದಮನದ ಹಾದಿಯಲ್ಲಿ ಭಾರತೀಯ ಸೇನೆಯ ಪಾರಮ್ಯ

ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ನಮ್ಮ ಭದ್ರತಾಪಡೆಗಳ ತ್ವರಿತ ಹಾಗೂ ಸಕ್ಷಮ ಕಾರ್ಯಾಚರಣೆಗಳಿಂದಾಗಿ ಪಾಕಿಸ್ಥಾನದ ದುಷ್ಟ ಯೋಜನೆಗಳೆಲ್ಲ ವಿಫ‌ಲವಾಗುತ್ತಾ ಸಾಗಿವೆ. ಇತ್ತೀಚೆಗಷ್ಟೇ ಗಡಿ ಭದ್ರತಾ ಪಡೆಗಳ ಕಾರ್ಯಾಚರಣೆಗೆ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ನಾಲ್ವರು ಉಗ್ರರು ಧರೆಗುರುಳಿದ್ದರು. ಇದರ ಬೆನ್ನಲ್ಲೇ ಉಗ್ರರು ಭಾರತದೊಳಕ್ಕೆ ನುಸುಳುವುದಕ್ಕಾಗಿ ಕೊರೆದಿದ್ದ ರಹಸ್ಯ ಸುರಂಗ ಮಾರ್ಗವನ್ನೂ ಬಿಎಸ್‌ಎಫ್ ಪತ್ತೆ ಹಚ್ಚಿತ್ತು.

ಇಂಥ ಸುರಂಗಗಳನ್ನು ಕೊರೆಯುವುದಕ್ಕೆ ಉಗ್ರ ಸಂಘಟನೆಗಳಿಗೆ ಪಾಕಿಸ್ಥಾನಿ ಸೇನೆ ಸಹಕರಿಸುತ್ತಿದೆ. ಈ ಘಟನೆಯ ನಂತರ ನಮ್ಮ ಸೇನೆಯು ಜಮ್ಮುವಿನಿಂದ ಗುಜರಾತ್‌ವರೆಗಿನ 3,300 ಕಿ.ಮೀ. ಗಡಿ ರೇಖೆಯುದ್ದಕ್ಕೂ ಇಂಥ ರಹಸ್ಯ ಸುರಂಗಗಳನ್ನು ಪತ್ತೆಹಚ್ಚುವ ಆ್ಯಂಟಿ ಟನಲ್‌ ಡ್ರೈವ್‌ ಕಾರ್ಯಾಚರಣೆ
ಆರಂಭಿಸಿದೆ.

ಗಮನಾರ್ಹ ಸಂಗತಿಯೆಂದರೆ, ಜಮ್ಮು-ಕಾಶ್ಮೀರದಲ್ಲಿ ನಗ್ರೋಟಾ ವಲಯದಲ್ಲಿ ನಾಲ್ಕು ಪಾಕಿಸ್ಥಾನಿ ಉಗ್ರರು ಹತರಾದ ಅನಂತರ, ಜೈಶ್‌ ಉಗ್ರಸಂಘಟನೆಯ ನಾಯಕ ಮುಫ್ತಿ ರೌಫ್ ಅಸYರ್‌, ಉಗ್ರ ದಾಳಿಗಳಿಗೆ ಅಗತ್ಯವಾದ ಪರಿಕರಗಳನ್ನು ತಲುಪಿಸಲು ಕಷ್ಟವಾಗುತ್ತಿದೆ ಎಂದು ಕಾಶ್ಮೀರದಲ್ಲಿನ ಉಗ್ರರಿಗೆ ಸಂದೇಶ ಕಳುಹಿಸಿದ್ದಾನೆಂದು ವರದಿಯಾಗಿದೆ. ಜೈಶ್‌-ಎ ಮೊಹಮ್ಮದ್‌ನ ಮುಖ್ಯಸ್ಥ ಮಸೂದ್‌ ಅಜರ್‌ನ ಕಿರಿಯ ಸಹೋದರ ಈ ಮುಫ್ತಿ ಅಸರ್‌. ಭಾರತದ ವಿರುದ್ಧದ ಹಲವು ದುಷ್ಕೃತ್ಯಗಳಲ್ಲಿ ಈತನನ್ನು ಮಾಸ್ಟರ್‌ಮೈಂಡ್‌ ಎನ್ನಲಾಗುತ್ತದೆ. ಒಟ್ಟಿನಲ್ಲಿ ಕಣಿವೆ ಭಾಗದಲ್ಲಿ ಭಾರತೀಯ ಸೇನೆಯ ಉಗ್ರ ನಿಗ್ರಹ ಕಾರ್ಯತಂತ್ರಗಳು ಎಷ್ಟು ಸಫ‌ಲವಾಗುತ್ತಿವೆ ಎನ್ನುವುದಕ್ಕೆ ಆತನ ಈ
ಹೇಳಿಕೆಯೂ ಸಾಕ್ಷಿ.

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನದ ರದ್ದತಿ ಮತ್ತು ಆ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿಸಿದ ಅನಂತರದಿಂದ, ಜಮ್ಮು-ಕಾಶ್ಮೀರ ಭಾಗದಲ್ಲಿ ಉಗ್ರರ ಹಾವಳಿ ಗಣನೀಯವಾಗಿ ತಗ್ಗುತ್ತಿದೆ. ಪಾಕ್‌ ಪರ ಕುತಂತ್ರ ನಡೆಸುವವರ ಸದ್ದಡಗಿಸಲಾಗುತ್ತಿದೆ. ಆದರೂ ಭಾರತ ದ್ವೇಷವನ್ನೇ ಕಣಕಣದಲ್ಲಿ ತುಂಬಿಕೊಂಡಿರುವ ಜೈಶ್‌ನಂಥ ಉಗ್ರ ಸಂಘಟನೆಗಳು ತಮ್ಮ ದುಷ್ಕೃತ್ಯವನ್ನು ನಿಲ್ಲಿಸುತ್ತವೆ ಅಥವಾ ಅವಕ್ಕೆ ಎಲ್ಲÉ ರೀತಿಯಿಂದಲೂ ಸಹಕರಿಸುತ್ತಿರುವ ಪಾಕ್‌ ಸೇನೆ ಸುಮ್ಮನಾಗುತ್ತದೆ ಎಂದು ಭಾವಿಸುವುದಕ್ಕೂ ಸಾಧ್ಯವಿಲ್ಲ.

ಗುಪ್ತಚರ ಮಾಹಿತಿಯ ಪ್ರಕಾರ ಗಡಿ ನಿಯಂತ್ರಣ ರೇಖೆಯ ಸನಿಹ ಲಷ್ಕರ್‌ ಹಾಗೂ ಜೈಶ್‌, ಖೈಬರ್‌ ಪಖು¤ನ್ವಾ ಪ್ರಾಂತ್ಯದಲ್ಲಿ ಹಿಜ್ಬುಲ್‌ ಉಗ್ರ ಸಂಘಟನೆ ತಮ್ಮ ಜೆಹಾದಿಗಳಿಗೆ ತರಬೇತಿ ನೀಡುತ್ತಿವೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ಸೇನೆಯೂ ಉಗ್ರರ ಸದ್ದಡಗಿಸಲು ಸರ್ವಸನ್ನದ್ಧವಾಗಿ ನಿಂತಿದೆ. ಇನ್ನೊಂದೆಡೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಇಮ್ರಾನ್‌ ಸರಕಾರ ತನ್ನ ದೇಶವಾಸಿಗಳ ಗಮನವನ್ನು ಮತ್ತೆ ಕಾಶ್ಮೀರದ ವಿಚಾರದತ್ತ ಸೆಳೆಯಲು ಹರಸಾಹಸ ಪಡುತ್ತಿರುವುದೂ ಸ್ಪಷ್ಟವಾಗುತ್ತಿದೆ. ಹೀಗಾಗಿ, ಇಮ್ರಾನ್‌ ಸರಕಾರದ ದುರುಳ ಉದ್ದೇಶಗಳನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಖಂಡಿಸುವ, ಈ ವಿಚಾರದಲ್ಲಿ ವಿಶ್ವ ಸಮುದಾಯದ ಗಮನ ಸೆಳೆಯುವ ಪ್ರಯತ್ನಕ್ಕೂ ಭಾರತ ಸರಕಾರ ವೇಗ ನೀಡಬೇಕಿದೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.