ನಿಜಕ್ಕೂ ತಲೆತಗ್ಗಿಸುವ ವಿಚಾರ, ಆರೋಗ್ಯ ಸೇವೆಯ ಘೋರ ವೈಫ‌ಲ್ಯ


Team Udayavani, Aug 14, 2017, 1:10 PM IST

14-ANA-3.jpg

ಅಗತ್ಯ ಔಷಧಗಳನ್ನು ಒದಗಿಸಲು ಸ್ವಾತಂತ್ರ್ಯ ಲಭಿಸಿದ 70 ವರ್ಷಗಳ ಬಳಿಕವೂ ಪರದಾಡುತ್ತಿದ್ದೇವೆ ಎಂದರೆ ನಾವು ಸಾಧಿಸಿದ ಅಭಿವೃದ್ಧಿ ಯಾವುದು? 

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ತವರು ಕ್ಷೇತ್ರವೂ ಆಗಿರುವ ಗೋರಖ್‌ಪುರದ ಬಾಬಾ ರಾಘವ ದಾಸ್‌ ಮೆಡಿಕಲ್‌ ಕಾಲೇಜಿನ ಆಸ್ಪತ್ರೆಯಲ್ಲಿ ಕಳೆದ ಆರು ದಿನಗಳಲ್ಲಿ ಸುಮಾರು 70 ಮಕ್ಕಳು ಮೃತಪಟ್ಟಿರುವ ಘಟನೆ ಇಡೀ ದೇಶದ ಅಂತಃಕರಣವನ್ನು ಕಲಕಿದೆ. ಆಮ್ಲಜನಕದ ಜಾಡಿಗಳನ್ನು ಪೂರೈಸುವ ಖಾಸಗಿ ಸಂಸ್ಥೆ ಸುಮಾರು 70 ಲಕ್ಷ ಹಣ ಬಾಕಿಯಿದ್ದ ಕಾರಣ ಜಾಡಿಗಳ ಪೂರೈಕೆ ಸ್ಥಗಿತಗೊಳಿಸಿದೆ. ಹೀಗಾಗಿ ಸಮರ್ಪಕವಾಗಿ ಆಮ್ಲಜನಕ ಪೂರೈಕೆಯಾಗದೆ ಮಕ್ಕಳು ಉಸಿರುಕಟ್ಟಿ ಅಸುನೀಗಿವೆ ಎನ್ನುವುದು ಪ್ರಾಥಮಿಕವಾಗಿ ಕಂಡುಕೊಂಡಿರುವ ಕಾರಣ. ಸರಕಾರ ಇದನ್ನು ಅಲ್ಲಗಳೆದಿದ್ದು ಸಾವಿನ ನೈಜ ಕಾರಣವನ್ನು ಪತ್ತೆ ಹಚ್ಚಲು ತನಿಖೆಗೆ ಆದೇಶ ನೀಡಿದೆ. ಆಮ್ಲಜನಕ ಕೊರತೆಯಿಂದಲೇ ಮಕ್ಕಳು ಪ್ರಾಣ ಕಳೆದುಕೊಂಡಿವೆ ಎನ್ನುವುದೇ ನಿಜವಾಗಿದ್ದರೂ ಇದು ಒಂದು ಕಾರಣ ಮಾತ್ರ. ಗೋರಖ್‌ಪುರದ ಪರಿಸರ, ಆರ್ಥಿಕ ಸ್ಥಿತಿ, ನೈರ್ಮಲ್ಯ ಇತ್ಯಾದಿ ವಿಚಾರಗಳ ಹಿನ್ನೆಲೆಯಲ್ಲಿ ಹೇಳುವುದಾದರೆ ಮಕ್ಕಳ ಸಾವಿಗೆ ಹಲವು ಕಾರಣಗಳಿವೆ. ಇಷ್ಟಕ್ಕೂ ಈ ಪ್ರಮಾಣದಲ್ಲಿ ಮಕ್ಕಳು ಈ ಆಸ್ಪತ್ರೆಗೆ ದಾಖಲಾಗಿರುವುದೇಕೆ ಎನ್ನುವುದು ಕೇಳಬೇಕಾದ ಪ್ರಮುಖ ಪ್ರಶ್ನೆ. 

ಗೋರಖ್‌ಪುರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮಕ್ಕಳ ಪಾಲಿಗೆ ಯಮನಾಗಿರುವುದು ಜಪಾನೀಸ್‌ ಎನ್ಸೆಫ‌ಲಿಟಿಸ್‌ ಅಥವಾ ಮೆದುಳಿನ ಉರಿಯೂತ ಎನ್ನುವ ಸೊಳ್ಳೆಗಳಿಂದ ಹರಡುವ ಭೀಕರ ಕಾಯಿಲೆ. ಮೆದುಳನ್ನೇ ಬಾಧಿಸುವ ಈ ಕಾಯಿಲೆ ಕಳೆದ ನಾಲ್ಕು ದಶಕಗಳಲ್ಲಿ ಗೋರಖ್‌ಪುರದಲ್ಲಿ 25,000ಕ್ಕೂ ಹೆಚ್ಚು ಮಕ್ಕಳನ್ನು ಬಲಿತೆಗೆದುಕೊಂಡಿದೆ ಎಂದು ಸರಕಾರಿ ದಾಖಲೆಗಳು ಹೇಳುತ್ತಿವೆ. ಆದರೆ ಖಾಸಗಿ ಸಂಸ್ಥೆಯೊಂದರ ಪ್ರಕಾರ 50,000ಕ್ಕೂ ಹೆಚ್ಚು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಈ ವರ್ಷವೊಂದರಲ್ಲಿ ಇಷ್ಟರತನಕ 120 ಮಕ್ಕಳು ಸತ್ತಿದ್ದಾರೆ. 2005ರಲ್ಲಿ ಸುಮಾರು 1500 ಮಕ್ಕಳು ರೋಗಕ್ಕೆ ಬಲಿಯಾದಾಗ ಮೆದುಳಿನ ಉರಿಯೂತದ ಕುರಿತು ರಾಷ್ಟ್ರಮಟ್ಟದಲ್ಲಿ ವ್ಯಾಪಕ ಕಳವಳ ವ್ಯಕ್ತವಾಗಿತ್ತು. 

 ಬಡತನ, ಕಳಪೆ ಆರೋಗ್ಯ ಸೇವೆ, ಕೊಳಕು ಪರಿಸರ,ಭ್ರಷ್ಟಾಚಾರ ಇವೆಲ್ಲ ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿರುವ ಗೋರಖಪುರದಲ್ಲಿ ಪ್ರಧಾನ ಲಕ್ಷಣಗಳು. ಗೋರಖಪುರದ ಸುತ್ತಮುತ್ತಲಿನ 300 ಕಿ. ಮೀ. ವ್ಯಾಪ್ತಿಗೆ ತಕ್ಕಮಟ್ಟಗೆ ಎಲ್ಲ ಸೌಲಭ್ಯಗಳಿರುವ ಸರಕಾರಿ ಆಸ್ಪತ್ರೆ ಎಂದಿರುವುದು ಇದೇ ಬಾಬಾ ರಾಘವ್‌ದಾಸ್‌ ಮೆಡಿಕಲ್‌ ಕಾಲೇಜ್‌ ಮಾತ್ರ. ಗೊಂಡ, ಬಸ್ತಿ, ಬಿಹಾರದ ಪೂರ್ವ ಜಿಲ್ಲೆಗಳು ಮತ್ತು ನೇಪಾಳದ ತೇರೈಯಿಂದೆಲ್ಲ ಜನರು ಈ ಆಸ್ಪತ್ರೆಗೆ ಬರುತ್ತಾರೆ. ಹೀಗಾಗಿ ಆಸ್ಪತ್ರೆಯಲ್ಲಿ ನಿತ್ಯ ರೋಗಿಗಳು ತುಂಬಿ ತುಳುಕುತ್ತಿದ್ದಾರೆ. ಸರಕಾರಿ ಆಸ್ಪತ್ರೆಯೊಂದರ ಮೇಲೆ ಈ ಪರಿಯ ಒತ್ತಡ ಬಿದ್ದರೆ ಏನಾಗುತ್ತದೋ ಅದೆಲ್ಲ ಈ ಆಸ್ಪತ್ರೆಯಲ್ಲಿ ಆಗುತ್ತಿದೆ. ಹೀಗಾಗಿ ಆಮ್ಲಜನಕ ಜಾಡಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದೇ ಮಕ್ಕಳು ಸಾಯಲು ಕಾರಣ ಎನ್ನುವುದು ಮೇಲ್ನೋಟಕ್ಕೆ ಮಾತ್ರ ಸರಿಯಾಗುತ್ತದೆ. ಘಟನೆಯ ಆಳಕ್ಕಿಳಿದಾಗ ಕಾಣಿಸುವುದು ವ್ಯವಸ್ಥೆಯ ದಿವ್ಯ ನಿರ್ಲಕ್ಷ್ಯ. ದೇಶದಲ್ಲಿ ಎಲ್ಲ ಸರಕಾರಿ ವ್ಯವಸ್ಥೆಗಳೂ ರೋಗಗಗ್ರಸ್ತವಾಗಿವೆ. ಅದರಲ್ಲೂ ಆರೋಗ್ಯ ಸೇವೆ ಘೋರ ವೈಫ‌ಲ್ಯವನ್ನು ಕಂಡಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಚಂದ್ರನ ಬಳಿಗೆ, ಮಂಗಳನಲ್ಲಿಗೆ ಹೋಗುವ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡಿರುವ ನಮಗೆ ಕಂದಮ್ಮಗಳು ಜೀವ ತಿನ್ನುವ ಒಂದು ಸಾಂಕ್ರಾಮಿಕ ರೋಗವನ್ನು ಹತೋಟಿಯಲ್ಲಿಡ್ಡಲು ಸಾಧ್ಯವಾಗಿಲ್ಲ ಎನ್ನುವುದು ನಿಜಕ್ಕೂ ತಲೆತಗ್ಗಿಸುವ ವಿಚಾರ. ಜನರಲ್ಲಿ ಸ್ವತ್ಛತೆಯ ಕುರಿತು ಅರಿವು ಮೂಡಿಸಿ , ರೋಗ ಲಕ್ಷಣ ಕಾಣಿಸಿಕೊಂಡಾಗಲೇ ಚಿಕಿತ್ಸೆ ದೊರೆಯುಂತೆ ಮಾಡಲು ಸಾಕಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳನ್ನು ಪ್ರಾರಂಭಿಸಿ ಅಗತ್ಯ ಔಷಧಗಳನ್ನು ಒದಗಿಸಲು ಸ್ವಾತಂತ್ರ್ಯ ಲಭಿಸಿದ 70 ವರ್ಷಗಳ ಬಳಿಕವೂ ಪರದಾಡುತ್ತಿದ್ದೇವೆ ಎಂದರೆ ನಾವು ಸಾಧಿಸಿದ ಅಭಿವೃದ್ಧಿ ಯಾವುದು? 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.