ಭಯೋತ್ಪಾದನೆಯಲ್ಲಿ ರಾಜಕೀಯದ ಬೇಳೆ ಬೇಯಿಸುವುದು ಬೇಡ

ದೇವಿಂದರ್‌ ಸಿಂಗ್‌ ಪ್ರಕರಣ

ಸಂಪಾದಕೀಯ, Jan 16, 2020, 5:58 AM IST

Devinder-Singh-case

ದೇವಿಂದರ್‌ ಸಿಂಗ್‌ ಪ್ರಕರಣಕ್ಕೂ ಇದೀಗ ಕಾಂಗ್ರೆಸ್‌, ಧರ್ಮದ ಬಣ್ಣ ಬಳಿಯುವ ಮೂಲಕ ರಾಜಕೀಯ ಪಕ್ಷಗಳ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಜಮ್ಮು – ಕಾಶ್ಮೀರದ ಪೊಲೀಸ್‌ ಅಧಿಕಾರಿ ದೇವಿಂದರ್‌ ಸಿಂಗ್‌ ಉಗ್ರರಿಗೆ ಆಶ್ರಯ ನೀಡಿ ಬಂಧಿಲ್ಪಟ್ಟ ಪ್ರಕರಣಕ್ಕೂ ಇದೀಗ ಕಾಂಗ್ರೆಸ್‌ ಜಾತಿ, ಧರ್ಮದ ಬಣ್ಣ ಬಳಿಯುವ ಮೂಲಕ ರಾಜಕೀಯ ಪಕ್ಷಗಳ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ. ಭಯೋತ್ಪಾದನೆ, ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಪಕ್ಷಗಳು ಇಂತಹ ವರಸೆಯನ್ನು ಮುಂದುವರಿಸಿಕೊಂಡು ಬಂದಿವೆ. ಅದು ಇತ್ತೀಚೆಗೆ ನಡೆದ ಪುಲ್ವಾಮಾ ದಾಳಿಯಾಗಲಿ, ಉರಿ, ಪಠಾಣ್‌ಕೋಟ್‌ ಸೆಕ್ಟರ್‌ ಮೇಲೆ ದಾಳಿ ವಿಚಾರದಲ್ಲಿ ಪರ, ವಿರೋಧ ವ್ಯಕ್ತವಾಗಿದ್ದವು. ಆದರೆ ದೇಶದ ಭದ್ರತೆ, ಗುಪ್ತಚರ ಇಲಾಖೆ, ಸೇನೆ ವಿಚಾರದಲ್ಲಿ ರಾಜಕೀಯ ಪಕ್ಷಗಳು ಜವಾಬ್ದಾರಿಯುತ ವಾಗಿ ನಡೆದುಕೊಳ್ಳಬೇಕಾದ ಅಗತ್ಯವಿದೆ.

ದೇವಿಂದರ್‌ ಸಿಂಗ್‌ ಬಂಧನದ ವಿಚಾರದಲ್ಲಿ ಪುಲ್ವಾಮಾ ದಾಳಿ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಕಾಂಗ್ರೆಸ್‌ ಹೇಳಿದೆ. ಆದರೆ ಸಿಂಗ್‌ನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸುವ ಮೂಲಕ ಸಂಭಾವ್ಯ ಅನಾಹುತ ವನ್ನು ತಪ್ಪಿಸಿದ್ದಾರೆ. ಇದು ಮಾತ್ರವಲ್ಲ ಉದ್ಯಾನನಗರಿ ಬೆಂಗಳೂರಿನಲ್ಲಿ ನಾಲ್ಕು ಉಗ್ರಗಾಮಿ ಸಂಘಟನೆಗಳು ಆತ್ಮಾಹುತಿ ದಾಳಿಗೆ ನಡೆಸಿರುವ ಸಂಚನ್ನು ಚೆನ್ನೈಯ ಕ್ಯು ಬ್ರಾಂಚ್‌, ದಿಲ್ಲಿ ಪೊಲೀಸರು ಹಾಗೂ ಬೆಂಗಳೂರಿನ ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆ ಮೂಲಕ ವಿಫ‌ಲಗೊಳಿಸಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿಯೂ ಕಾರ್ಯಾಚರಣೆ ನಡೆಸುವ ಮೂಲಕ ಶಂಕಿತ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಇಂತಹ ವಿಚಾರದಲ್ಲಿ ಧರ್ಮವನ್ನು ತೂರಿಸುವ ಮುಖೇನ ಸಾರ್ವಜನಿಕವಾಗಿ ದಿಕ್ಕುತಪ್ಪಿಸುವ ಹೇಳಿಕೆ ಅಕ್ಷಮ್ಯವಾದದ್ದು. ಅಷ್ಟೇ ಅಲ್ಲ ದೇಶದ ಪ್ರತಿಷ್ಠಿತ ಗುಪ್ತಚರ ಪಡೆರಾ ಸೇರಿದಂತೆ ರಾಜ್ಯದ ಗುಪ್ತಚರ ಇಲಾಖೆ ತಮ್ಮದೇ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ. ಭದ್ರತಾ ವೈಫ‌ಲ್ಯ, ಉಗ್ರರಿಗೆ ನೆರವು, ಆಶ್ರಯ ನೀಡುವುದು ಅಕ್ಷಮ್ಯ ಅಪರಾಧ. ಇವೆಲ್ಲದರ ನಡುವೆ ಪ್ರತಿಯೊಂದು ವಿಚಾರದಲ್ಲಿಯೂ ತಗಾದೆ ತೆಗೆಯುವುದು ಎಷ್ಟು ಸಮಂಜಸ ಎಂಬ ಬಗ್ಗೆ ವಿಪಕ್ಷಗಳು ವಿಮರ್ಶೆ ಮಾಡಿಕೊಳ್ಳಬೇಕಾಗಿದೆ.

2018ರಲ್ಲಿ 748 ಭಯೋತ್ಪಾದಕ ಸಂಬಂಧಿ ಘಟನೆಗಳು ನಡೆದಿದ್ದು, 350 ಭಾರತೀಯರು ಪ್ರಾಣ ತೆತ್ತಿದ್ದಾರೆ, 540 ಜನರು ಗಾಯಗೊಂಡಿದ್ದಾರೆ. ಜಾಗತಿಕ ಚಿಂತಕರ ಚಾವಡಿಯ ಪ್ರಕಾರ ಭಾರತ ಭಯೋತ್ಪಾದನೆ ಆತಂಕ ಎದುರಿಸುವ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದಿದೆ. ಉಗ್ರರ ವಿಧ್ವಂಸಕ ಸಂಚಿನ ದಾಳಿಯಿಂದ 2001ರಿಂದ ಈವರೆಗೆ 8 ಸಾವಿರಕ್ಕೂ ಅಧಿಕ ಭಾರತೀಯರು ಸಾವನ್ನಪ್ಪಿದ್ದಾರೆ.
ದೇಶದ ಮುಕುಟ ಮಣಿಯಂತಿರುವ ಜಮ್ಮು-ಕಾಶ್ಮೀರ ಸತತವಾಗಿ ಭಯೋತ್ಪಾದನೆಯ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಹಿಜ್ಬುಲ್‌ ಮುಜಾಹಿದೀನ್‌, ಜೈಶ್‌ – ಎ – ಮೊಹಮ್ಮದ್‌ ಹಾಗೂ ಲಷ್ಕರ್‌ – ಎ – ತೊಯ್ಬಾದಂತಹ ಉಗ್ರಗಾಮಿ ಸಂಘಟನೆಗಳು 2018ರಲ್ಲಿ ನಡೆಸಿದ 321 ದಾಳಿಗೆ 123 ಜನರು ಬಲಿಯಾಗಿದ್ದಾರೆ. 2014ರಲ್ಲಿ ಭಯೋತ್ಪಾದಕ ದಾಳಿ ಮಿತಿ ಮೀರಿತ್ತು. 2019ರ ಜಾಗತಿಕ ಭಯೋತ್ಪಾದಕ ಸೂಚಿ ಪ್ರಕಾರ ವಿಶ್ವಾದ್ಯಂತ ನಡೆದ ಉಗ್ರರ ದಾಳಿಗೆ 33,555 ಮಂದಿ ಸಾವನ್ನಪ್ಪಿದ್ದರು.

ಇಂತಹ ವಿಧ್ವಂಸಕ, ಉಗ್ರರ ಕೃತ್ಯಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ದೇಶದ ಗುಪ್ತಚರ ಇಲಾಖೆ ಮಾಹಿತಿ ಕಲೆ ಹಾಕಿ ಶಂಕಿತರನ್ನು ಬಂಧಿಸುವ ಕಾರ್ಯಾಚರಣೆಗೆ ಮುಂದಾಗಿ ರುವುದರಿಂದಲೇ ಸಾಕಷ್ಟು ದಾಳಿ, ಸಾವು-ನೋವು ತಪ್ಪಿದೆ. ಅದರ ಪರಿಣಾಮ ಎಂಬಂತೆ 2019ರಲ್ಲಿ ಉಗ್ರರ ದಾಳಿ ಪ್ರಕರಣ ಇಳಿಕೆ ಕಂಡಿದ್ದಲ್ಲದೇ ಸಾವಿನ ಪ್ರಮಾಣ 15,952ಕ್ಕೆ ಕುಸಿತವಾಗಿದೆ. ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಅಟ್ಟಹಾಸದ ಪರಿಣಾಮ 2018ರಲ್ಲಿ 123 ಅಮಾಯಕರು ಸಾವನ್ನಪ್ಪಿದ್ದಾರೆ. ಒಂದೆಡೆ ಉಗ್ರರ ದಾಳಿ, ಮತ್ತೂಂದೆಡೆ ನಕ್ಸಲೀಯರ ದಾಳಿಯನ್ನು ತಡೆಗಟ್ಟಬೇಕಾಗಿರುವುದು ತೀರಾ ಅಗತ್ಯ. ಇದರ ಜತೆಗೆ ಉಗ್ರಗಾಮಿ ಸಂಘಟನೆ, ಮಾವೋ ವಾದಿ ಸಂಘಟನೆಯತ್ತ ಯುವ ಸಮೂಹ ಆಕರ್ಷಿತರಾಗ ದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿಯೂ ಇದೆ.

ಮಾವೋವಾದಿ, ಉಗ್ರಗಾಮಿ ಸಂಘಟನೆಯಂತಹ ವಿಧ್ವಂಸಕ ಕೃತ್ಯಗಳಲ್ಲಿ ತೊಡಗುವವರನ್ನು ಬಹಿರಂಗವಾಗಿ, ಪರೋಕ್ಷವಾಗಿ ಸಮರ್ಥಿಸಿಕೊಳ್ಳುತ್ತಿರುವುದು ದುರಂತವಾ ಗಿದೆ. ಇಂತಹ ಸಮಾಜಘಾತುಕ, ದೇಶದ್ರೋಹಿ ಕೃತ್ಯದಲ್ಲಿ ತೊಡಗಿದ್ದವರ ಬಂಧನದ ವಿಚಾರದಲ್ಲಿ ರಾಜಕೀಯ ಕೆಸರೆರಚಾಟ ನಡೆಸುವ ಮುನ್ನ ಉಗ್ರರನ್ನು ಹೆಡೆಮುರಿ ಕಟ್ಟುವಲ್ಲಿ ಶ್ರಮಿಸುತ್ತಿರುವ ಪೊಲೀಸ್‌ ಮತ್ತು ಗುಪ್ತಚರ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಲು ಮುಂದಾಗಬೇಕಾಗಿದೆ ಎಂಬುದನ್ನು ಮನಗಾಣಲಿ.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.