ಈ ಮಾದರಿಯ ಎದಿರೇಟು ಅಗತ್ಯ


Team Udayavani, Oct 22, 2019, 5:58 AM IST

e-22

ಗಡಿಯಾಚೆಗಿನಿಂದ ಸತತವಾಗಿ ಕದನ ವಿರಾಮ ಉಲ್ಲಂ ಸುತ್ತಾ ನಾಗರಿಕರನ್ನು ಮತ್ತು ಯೋಧರನ್ನು ಗುರಿ ಮಾಡಿಕೊಂಡು ಶೆಲ್‌ ಮತ್ತು ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ಥಾನಕ್ಕೆ ಭಾರತದ ಸೇನೆ ತಕ್ಕ ಪಾಠ ಕಲಿಸಿದೆ. ಕಾಶ್ಮೀರದ ವಿಶೇಷ ವಿಧಿ ರದ್ದುಗೊಂಡ ಬಳಿಕ ಭಾರತದೊಳಕ್ಕೆ ಉಗ್ರರನ್ನು ನುಗ್ಗಿಸಲು ಪಾಕ್‌ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿದೆ. ಇದರಂಗವಾಗಿ ಗಡಿ ಭಾಗದಲ್ಲಿ ಅನೇಕ ಉಗ್ರ ಶಿಬಿರಗಳನ್ನು ಸಕ್ರಿಯಗೊಳಿಸಿತ್ತು.

ಲಷ್ಕರ್‌-ಎ-ತಯ್ಯಬ, ಹಿಜ್ಬುಲ್‌ ಮುಜಾಹಿದಿನ್‌ ಮತ್ತಿತರ ಸಂಘಟನೆಗಳಿಗೆ ಸೇರಿದ ಉಗ್ರರು ಈ ಶಿಬಿರಗಳಲ್ಲಿ ಜಮೆಯಾಗಿರುವ ಕುರಿತು ಗುಪ್ತಚರ ಪಡೆ ಖಚಿತ ಮಾಹಿತಿ ನೀಡಿತ್ತು. ಈ ಮಾಹಿತಿಯ ಆಧಾರದಲ್ಲಿ ಸೇನೆ ಕಾರ್ಯಾಚರಣೆ ನಡೆಸಿ ಸುಮಾರು 10 ಪಾಕ್‌ ಸೈನಿಕರನ್ನು ಕೆಲವು ಉಗ್ರರನ್ನು ಸಾಯಿಸಿರುವುದಲ್ಲದೆ ಮೂರು ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದೆ.

ಆದರೆ ಈ ಕಾರ್ಯಾಚರಣೆಯಿಂದ‌ ಪಾಕ್‌ ಪಾಠ ಕಲಿತುಕೊಳ್ಳುತ್ತದೆ ಎನ್ನುವುದಕ್ಕೆ ಯಾವ ಖಾತರಿಯೂ ಇಲ್ಲ. 2016ರಲ್ಲಿ ಉರಿ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ಮಾಡಿದ ಬಳಿಕ ನಮ್ಮ ಸೇನೆ ಪಾಕ್‌ನೊಳಗೆ ನುಗ್ಗಿ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಅನೇಕ ಉಗ್ರರು ಸತ್ತಿದ್ದರು. ಅನಂತರ ಈ ವರ್ಷದ ಆದಿಯಲ್ಲಿ ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ವಾಯುಪಡೆ ಪಾಕ್‌ನ ಬಾಲಾಕೋಟ್‌ನಲ್ಲಿರುವ ಉಗ್ರ ನೆಲೆಯನ್ನು ಬಾಂಬ್‌ ಹಾಕಿ ಉಡಾಯಿಸಿದೆ. ಈ ಎರಡು ಮಾರಕ ಹೊಡೆತಗಳ ಬಳಿಕವೂ ಪಾಕ್‌ ಉಗ್ರರನ್ನು ಸಾಕುವುದನ್ನು ನಿಲ್ಲಿಸಿಲ್ಲ. ಹೀಗಾಗಿ ನಿನ್ನೆ ನಡೆಸಿದ ದಾಳಿಯಿಂದ ದೊಡ್ಡ ಮಟ್ಟದ ಪ್ರಯೋಜನವಾದೀತು ಎಂದು ನಿರೀಕ್ಷಿಸುವಂತಿಲ್ಲ. ಆದರೆ ಪದೇ ಪದೇ ಕದನ ವಿರಾಮ ಉಲ್ಲಂ ಸಿ ನಮ್ಮ ನಾಗರಿಕರನ್ನೂ, ಯೋಧರನ್ನೂ ಸಾಯಿಸಿದರೆ ಸಹಿಸಿಕೊಂಡು ಸುಮ್ಮನಿರುವುದಿಲ್ಲ. ನಾವು ನೀಡುವ ಎದಿರೇಟು ಬಹಳ ಬಲವಾಗಿರುತ್ತದೆ ಎಂಬ ಸಂದೇಶವನ್ನು ಈ ದಾಳಿ ನೀಡಿದೆ.ಅಷ್ಟರ ಮಟ್ಟಿಗೆ ಈ ದಾಳಿ ಸಫ‌ಲ.

ಕದನ ವಿರಾಮ ಉಲ್ಲಂಘನೆ ಎನ್ನುವುದು ಪಾಕ್‌ ಸೇನೆಗೆ ನಿತ್ಯದ ಕಾರ್ಯಾಚರಣೆ ಎಂಬಂತಾಗಿದೆ. ವಿಶೇಷ ವಿಧಿ ನಿಷ್ಕ್ರಿಯಗೊಂಡ ಬಳಿಕ ಬರೀ ಒಂದೂವರೆ ತಿಂಗಳಲ್ಲಿ 7000ಕ್ಕೂ ಹೆಚ್ಚು ಬಾರಿ ಪಾಕ್‌ ಕಡೆಯಿಂದ ಕದನ ವಿರಾಮ ಉಲ್ಲಂಘನೆಯಾಗಿದೆ. ಉಗ್ರರನ್ನು ಗಡಿ ದಾಟಿಸಲು ಪಾಕ್‌ ಸೇನೆ ಕದನ ವಿರಾಮ ಉಲ್ಲಂಘನೆಯನ್ನು ರಕ್ಷಣಾ ಕವಚವನ್ನಾಗಿ ಬಳಸಿಕೊಳ್ಳುತ್ತಿದೆ. ಗಡಿ ಕಾಯುವ ಯೋಧರು ಪ್ರತಿದಾಳಿ ನಡೆಸುತ್ತಿದ್ದಾಗ ಇನ್ನೊಂದೆಡೆಯಿಂದ ಉಗ್ರರು ನುಸುಳಿ ಬರುತ್ತಾರೆ. ಆದರೆ ಬಹುಕಾಲ ಈ ತಂತ್ರ ಸಾಗುವುದಿಲ್ಲ ಎನ್ನುವುದನ್ನು ಪಾಕಿಗೆ ಕಲಿಸಿಕೊಡುವ ಅಗತ್ಯವಿದೆ. ಲೇಸರ್‌ ಬೇಲಿ ನಿರ್ಮಾಣ ಸೇರಿದಂತೆ ಗಡಿ ಭಾಗವನ್ನು ಇನ್ನಷ್ಟು ಭದ್ರಗೊಳಿಸುವ ಕೆಲಸವನ್ನು ತ್ವರಿತವಾಗಿ ಮಾಡಿ ಮುಗಿಸಬೇಕಾಗಿದೆ.

ಕದನ ವಿರಾಮ ಉಲ್ಲಂಘನೆ ಎಂಬ ಯುದ್ಧವಲ್ಲದ ಯುದ್ಧದಲ್ಲಿ ನಿತ್ಯ ನಮ್ಮ ಯೋಧರು ಎಷ್ಟೆಂದು ಹುತಾತ್ಮರಾಗುತ್ತಾ ಅಥವಾ ಗಾಯಗೊಳ್ಳುತ್ತಾ ಇರಬೇಕು? ಗಡಿ ಕಾವಲು ವ್ಯವಸ್ಥೆಗೆ ಗರಿಷ್ಠ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಅಲ್ಲಿ ಪ್ರಾಣ ಹಾನಿಯಾಗುವ ಪ್ರಮಾಣವನ್ನು ತಪ್ಪಿಸಬೇಕು. ಗಡಿಯಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಒಪ್ಪಂದಗಳು ಮತ್ತು ನಿಯಮಾವಳಿಗಳು ಇದ್ದರೂ ಪಾಕ್‌ ಅದಕ್ಕೆ ಕವಡೆ ಕಿಮ್ಮತ್ತು ನೀಡುತ್ತಿಲ್ಲ. ಹೀಗಾಗಿ ಅದಕ್ಕೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡುವುದು ಅನಿವಾರ್ಯ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.