ಈ ವರ್ಷವಾದರೂ ಸುಸೂತ್ರವಾಗಿ ನಡೆಯಲಿ ಶಾಲೆಗಳು


Team Udayavani, May 16, 2022, 6:00 AM IST

ಈ ವರ್ಷವಾದರೂ ಸುಸೂತ್ರವಾಗಿ ನಡೆಯಲಿ ಶಾಲೆಗಳು

ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ಜಗತ್ತಿನ ಎಲ್ಲೆಡೆ ಯಾವುದೇ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆದಿಲ್ಲ. ಇದಕ್ಕೆ ಶಾಲಾ-ಕಾಲೇಜುಗಳೂ ಹೊರತಲ್ಲ. ಆರಂಭದಿಂದಲೂ ಎಲ್ಲಿ ಮಕ್ಕಳ ಮೇಲೆ ಕೊರೊನಾ ದಾಳಿ ಮಾಡಿಬಿಡುತ್ತದೆಯೋ ಎಂಬ ಕಾರಣಕ್ಕಾಗಿ ಶಾಲೆಗಳನ್ನು ಮುಚ್ಚಿ ಮಕ್ಕಳಿಗೆ ಆನ್‌ಲೈನ್‌ ಪಾಠವನ್ನೇ ಮಾಡಲಾಗುತ್ತಿತ್ತು. ಇದರ ನಡುವೆ ಕೊರೊನಾ ಕಡಿಮೆಯಾದ ವೇಳೆಯಲ್ಲಿ ಸ್ವಲ್ಪ ದಿನಗಳ ಮಟ್ಟಿಗೆ ಶಾಲೆಗಳನ್ನು ಆರಂಭಿಸಿ ಪಾಠ ಮಾಡಿದ್ದೂ ಇದೆ. ಆದರೆ ಈ ವರ್ಷ ಮಾತ್ರ ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೇ ಶಾಲೆಗಳು ಆರಂಭವಾಗುತ್ತಿವೆ.

ಒಂದು ಲೆಕ್ಕಾಚಾರದಲ್ಲಿ ನೋಡಿದರೆ, ಮಕ್ಕಳಿಗೆ ಶೈಕ್ಷಣಿಕ ವರ್ಷಾರಂಭಕ್ಕೇ ಶಾಲೆ ಆರಂಭವಾಗುತ್ತಿರುವುದು ಖುಷಿಯ ವಿಚಾರವೇ. ಈ ಹಿಂದಿನ ಎರಡು ವರ್ಷ ಮಕ್ಕಳು ಕಲಿತದ್ದೇನು ಎಂಬುದನ್ನು ಹಿಂದಿರುಗಿ ನೋಡಿದರೆ ಕಾಣಿಸುವುದು ಸೊನ್ನೆಯೇ. ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದಿದ್ದಾರೆಯೇ ಎಂಬುದನ್ನೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆನ್‌ಲೈನ್‌ ಜಗತ್ತಿನಲ್ಲಿ ಶಿಕ್ಷಕರು ಪಠ್ಯಕ್ರಮ ಮುಗಿಸಿದ್ದೇ ಬಂತು. ಆದರೆ ಮಕ್ಕಳು ಎಷ್ಟು ಕಲಿತವು ಎಂಬುದು ಮಾತ್ರ ಇನ್ನೂ ಪ್ರಶ್ನಾರ್ಥಕವಾಗಿಯೇ ಉಳಿದಿದೆ.

ಹೀಗಾಗಿಯೇ ರಾಜ್ಯ ಸರಕಾರ ಸೋಮವಾರ ಶಾಲೆ ಆರಂಭಿಸಿದರೂ ಮೊದಲಿಗೆ ಕಲಿಕಾ ಚೇತರಿಕೆ ಹೆಸರಿನಲ್ಲಿ ಅವರನ್ನು ಶಾಲೆಯ ವಾತಾವರಣಕ್ಕೆ ಹೊಂದಿಸುವ ಕೆಲಸ ಮಾಡುತ್ತಿದೆ. ಇಂದಿನ ಕಾಲಘಟ್ಟದಲ್ಲಿ ಇದು ಅಗತ್ಯವೂ ಹೌದು. ಶಾಲೆಗೆ ಹೋದ ಮಕ್ಕಳಿಗೆ ನೇರವಾಗಿ ಪಾಠ ಮಾಡಲು ಹೊರಟರೆ, ಅವು ಗ್ರಹಿಸಲು ಸಾಧ್ಯವಿಲ್ಲದೇ ಹೋಗಬಹುದು. ಇದಕ್ಕೆ ಕಾರಣ, ಕಲಿಕೆಯಲ್ಲಿನ ಅಂತರ. ಏಕೆಂದರೆ ಸ್ಮಾರ್ಟ್‌ಫೋನ್‌ ಮತ್ತು ಉತ್ತಮ ಇಂಟರ್ನೆಟ್‌ ಸಿಕ್ಕ ಕಡೆಗಳ ಮಕ್ಕಳು ಒಂದಷ್ಟು ಚೆನ್ನಾಗಿ ಕಲಿತಿರಬಹುದು. ಆದರೆ ಈ ಸೌಲಭ್ಯಗಳಿಲ್ಲದ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ತಲೆಗೆ ಪಾಠ ಹೋಗಿರಲಿಕ್ಕೂ ಇಲ್ಲ. ಹೀಗಾಗಿ ಈ ಅಂತರ ತುಂಬಲು ಈಗ ನಡೆಸಲು ಉದ್ದೇಶಿಸಿರುವ ಕಲಿಕಾ ಚೇತರಿಕೆ ಉತ್ತಮ ಮಾರ್ಗ. ಈ ನಡುವೆಯೇ ಕೊರೊನಾ ಪೂರ್ವದ ದಿನದಂತೆ ಮಕ್ಕಳು ಶಾಲೆಗೆ ಬರುತ್ತಿದ್ದು, ಅವರಿಗೆ ಶಿಕ್ಷಕರು ಒಂದು ಆತ್ಮೀಯ ಸ್ವಾಗತವನ್ನೂ ನೀಡಬೇಕಿದೆ. ಇದು ಒಂದು ರೀತಿಯ ಹಬ್ಬದಂತೆ ನಡೆದರೆ ತಪ್ಪೇನಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಈಗಾಗಲೇ ಸಿದ್ಧತೆಯನ್ನೂ ನಡೆಸಿದೆ. ಏಕೆಂದರೆ ಕೊರೊನಾದಿಂದಾಗಿ ಮನೆಗೇ ಹೊಂದಿಕೊಂಡಿರುವ ಮಕ್ಕಳನ್ನು ಶಾಲೆಯ ವಾತಾವರಣಕ್ಕೆ ಹೊಂದಿಕೊಳ್ಳುವಂತೆ ಮಾಡುವುದು ಕಷ್ಟಕರ. ಆದರೆ ಶಾಲೆಯೂ ಮನೆಯ ವಾತಾವರಣದಂತೆಯೇ ಇದ್ದರೆ ಆ ಮಕ್ಕಳು ಬೇಗನೆ ಹೊಂದಿಕೊಳ್ಳಬಹುದು.

ಸಂಕಟ, ನೋವಿನ ಮಧ್ಯೆಯೇ ಕೊರೊನಾದ ಎರಡು ವರ್ಷಗಳು ಕಳೆದು ಹೋಗಿವೆ. ಮಕ್ಕಳಲ್ಲಿ ಪಾಠ ಕೇಳುವ ಸಾಮರ್ಥ್ಯವೂ ಕಡಿಮೆ ಯಾಗಿದೆ. ಎಲ್ಲೋ ಒಂದು ಕಡೆಯಲ್ಲಿ ಮನೆಯಲ್ಲಿ ಕುಳಿತದ್ದರಿಂದ ಮಕ್ಕಳಲ್ಲಿನ ಏಕಾಗ್ರತೆ ಕಡಿಮೆಯಾಗಿರಬಹುದು. ಈ ಎಲ್ಲ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಶಿಕ್ಷಕರ ಜವಾಬ್ದಾರಿ. ಅಷ್ಟೇ ಅಲ್ಲ, ತರಗತಿಗಳನ್ನೂ ಮಕ್ಕಳ ಮಗದೊಂದು ಮನೆಯಂತೆಯೇ ಮಾಡಿ, ಅವರನ್ನು ಹೊಂದಿಕೊಳ್ಳುವಂತೆ ಮಾಡಬೇಕಾದದ್ದು ಅವರ ಕರ್ತವ್ಯವೇ ಆಗಿದೆ. ಇದರ ನಡುವೆಯೇ ಮತ್ತೆ ಕೊರೊನಾ ವಕ್ಕರಿಸಿ, ಮಕ್ಕಳ ಶಾಲೆಗೆ ಅಡ್ಡಿಯಾಗದಿರಲೆಂದು ಆಶಿಸೋಣ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.