ಪ್ರವಾಸೋದ್ಯಮ: ಸರಕಾರಗಳ ನಡುವೆ ಸಮನ್ವಯ ಇರಲಿ


Team Udayavani, Oct 29, 2021, 6:00 AM IST

ಪ್ರವಾಸೋದ್ಯಮ: ಸರಕಾರಗಳ ನಡುವೆ ಸಮನ್ವಯ ಇರಲಿ

ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಗುರುವಾರ ಕೇಂದ್ರ ಸರಕಾರ ಮತ್ತು ದಕ್ಷಿಣ ಭಾರತ ರಾಜ್ಯಗಳ ನಡುವೆ ಎರಡು ದಿನಗಳ ಸಭೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಕೆಲವು ವಿಚಾರಗಳ ಸಂಬಂಧ ತಿಕ್ಕಾಟವೂ ನಡೆದಿದೆ.

ಕಳೆದ ಎರಡು ವರ್ಷಗಳಿಂದ ಕಾಡಿದ ಕೊರೊನಾದಿಂದಾಗಿ, ಪ್ರವಾಸೋದ್ಯಮ ಮತ್ತು ಇದಕ್ಕೆ ಹೊಂದಿ ಕೊಂಡಂತಿರುವ ಬಹುತೇಕ ಕ್ಷೇತ್ರಗಳು ತೀರಾ ನಷ್ಟ ಅನುಭವಿಸಿವೆ. ಅಂದರೆ ಹೊಟೇಲ್‌, ಆತಿಥ್ಯ ವಲಯ, ಸಾರಿಗೆ ಕ್ಷೇತ್ರಗಳೂ ಸಾಕಷ್ಟು ಸೊರಗಿವೆ. ಇಂಥ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಸಭೆ ನಡೆಯುತ್ತಿರುವುದು ಸ್ವಾಗತಾರ್ಹವೇ. ಈಗ ಜರೂರತ್ತಾಗಿ ಆಗಬೇಕಾಗಿರುವುದು ಪ್ರವಾಸಿ ತಾಣಗಳಿಗೆ ಜನರನ್ನು ಕರೆತರುವುದು. ಒಂದಿಲ್ಲೊಂದು ಕಾರಣಗಳು ಅಥವಾ ಅವಕಾಶಗಳಿಂದಾಗಿ ಇತರ ವಲಯಗಳು ಚೇತರಿಕೆ ಹಾದಿಯಲ್ಲಿದ್ದರೂ, ಪ್ರವಾಸೋದ್ಯಮ ವಲಯ ಮಾತ್ರ ಇನ್ನೂ ಚೇತರಿಕೆಯಾಗುವ  ಹಂತ ತಲುಪಿಲ್ಲ ಎಂಬುದನ್ನು ಮರೆಯದೇ ನೆನಪಿಟ್ಟುಕೊಳ್ಳಬೇಕಾದ ಸಂಗತಿ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಪ್ರಮುಖವಾಗಿ ಪ್ರಸಾದ ಮತ್ತು ಸ್ವದೇಶ ದರ್ಶನ ಯೋಜನೆ ಕುರಿತಂತೆ ಚರ್ಚೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಅನುದಾನ ಬಿಡುಗಡೆ ಮಾಡುವ ಲೆಕ್ಕಾಚಾರದಲ್ಲಿ ಕೇಂದ್ರ ಸರಕಾರ ನೇರವಾಗಿ ರಾಜ್ಯ ಸರಕಾರಗಳತ್ತ ಬೆಟ್ಟು ಮಾಡಿದೆ. ಅಂದರೆ ಯೋಜನೆಗಳಿಗೆ ಇನ್ನೂ ಏಕೆ ಅನುದಾನ ಬಿಡುಗಡೆ ಮಾಡಿಲ್ಲ ಎಂಬ ಪ್ರಶ್ನೆಗೆ ಕೇಂದ್ರ ಸರಕಾರ, ನೀವೇ ಸರಿಯಾಗಿ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಹೇಳಿದೆ.

ವಿಚಿತ್ರವೆಂದರೆ ಯಾರೊಬ್ಬರೂ ಪರಸ್ಪರ ದೂರಿಕೊಳ್ಳುವ ಸ್ಥಿತಿಯಂತೂ ಸದ್ಯ ಇಲ್ಲ. ಈಗ ಇರುವುದು ಕೇವಲ ಹೊಂದಾಣಿಕೆಯಷ್ಟೇ. ಪರಸ್ಪರ ದೂರುವುದನ್ನು ಬಿಟ್ಟು, ಒಟ್ಟಾಗಿ ಕೆಲಸ ಮಾಡಬೇಕು. ಹಾಗೆಯೇ ಕೇಂದ್ರ ಸರಕಾರ, ರಾಜ್ಯದ ಯೋಜನೆಗಳ ಬಗ್ಗೆ ದೂರುವುದನ್ನು ಬಿಟ್ಟು, ಸಕಾರಾತ್ಮಕವಾಗಿ ಸ್ಪಂದಿಸಬೇಕು.

ಇದರ ಜತೆಗೆ ಗುರುವಾರದ ಸಭೆಯಲ್ಲಿ ಭಾರತೀಯ ಪುರಾತತ್ವ ಇಲಾಖೆಯ ಅಡಿಯಲ್ಲಿ ಬರುವ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತಂತೆ ಪ್ರಮುಖವಾಗಿ ಚರ್ಚಿಸಿದೆ. ಕರ್ನಾಟಕದ ಹಂಪಿ ಸೇರಿದಂತೆ ಕೆಲವು ಪ್ರವಾಸಿ ತಾಣಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ರಾಜ್ಯ ಸರಕಾರಗಳಿಗೆ ಯಾವುದೇ ಅಧಿಕಾರವಿಲ್ಲ. ಪುರಾತತ್ವ ಇಲಾಖೆಗೆ ಹೇಳಿದರೆ ಸರಿಯಾದ ಸಮಯಕ್ಕೆ ಮಾಡುತ್ತಲೂ ಇಲ್ಲ. ಈ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಸ್ವಲ್ಪ ಮಟ್ಟಿನ ಹಗ್ಗ ಜಗ್ಗಾಟ ನಡೆದಿದೆ. ಒಂದು ಕೇಂದ್ರ ಸರಕಾರವೇ ತನ್ನ ಅಡಿಯಲ್ಲಿ ಇರುವ ಭಾರತೀಯ ಪುರಾತತ್ವ ಇಲಾಖೆಗೆ ಹೇಳಿ, ಅಗತ್ಯವಿರುವ ಅಭಿವೃದ್ಧಿ ಕೆಲಸ ಮಾಡಬೇಕು. ಇಲ್ಲವೇ ರಾಜ್ಯಗಳಿಗೇ ಅಭಿವೃದ್ಧಿ ಕಾರ್ಯ ನಡೆಸಲು ಅವಕಾಶ ಕೊಡಬೇಕು.

ಇನ್ನು ಮೈಸೂರಿನ ಚಾಮುಂಡಿಬೆಟ್ಟ ಸೇರಿದಂತೆ ಪ್ರಸಾದ್‌ ಯೋಜನೆ ಅಡಿಯಲ್ಲಿ ಮಾಡಬೇಕಾಗಿರುವ ಕೆಲಸಗಳಿಗೂ ಅಗತ್ಯ ಅನುದಾನವನ್ನು ಕೇಂದ್ರ ಸರಕಾರ ಈ ಕೂಡಲೇ ಬಿಡುಗಡೆ ಮಾಡಬೇಕು. ಯಾವುದೇ ಕಾರಣಕ್ಕೂ ಬೇರೆ ನೆಪಗಳನ್ನು ಹೇಳಿಕೊಂಡು ಅನುದಾನಕ್ಕೆ ಕೊಕ್ಕೆ ಹಾಕಬಾರದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.