ಶಿಕ್ಷಕರ ವರ್ಗಾವಣೆ ವಿಘ್ನ ನಿವಾರಣೆಯಾಗಲಿ


Team Udayavani, Sep 21, 2021, 6:00 AM IST

Untitled-1

ಪ್ರತೀ ವರ್ಷ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗು ತ್ತಿದ್ದಂತೆ ಒಂದಿಲ್ಲೊಂದು ವಿಘ್ನ ಎದುರಾಗುತ್ತಲೇ ಇರುತ್ತದೆ. ವರ್ಗಾವಣೆ ಪ್ರಕ್ರಿಯೆ ಸಲೀಸಾಗಿ ನಡೆದಿರುವುದಕ್ಕಿಂತ ಅರ್ಧಕ್ಕೆ ಮೊಟಕುಗೊಂಡಿ ರುವುದೇ ಹೆಚ್ಚು.  ವರ್ಗಾವಣೆಯನ್ನು ಸರಾಗವಾಗಿ ನಡೆಸಲು ಕಾಯ್ದೆಗೆ ತಿದ್ದುಪಡಿ, ಹೊಸ ಕಾಯ್ದೆ, ನಿಯಮಗಳಲ್ಲಿದ್ದನ್ನು ಕಾಯ್ದೆಗೆ ಸೇರಿಸಲು ಅಧ್ಯಾದೇಶ ಮೂಲಕ ತಿದ್ದುಪಡಿ ಹೀಗೆ ಹಲವು ರೀತಿಯ ಪ್ರಯತ್ನಗಳು ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಿದೆ. ಆದರೆ, ಚುನಾವಣ ನೀತಿ ಸಂಹಿತೆ, ಕಡ್ಡಾಯ ವರ್ಗಾವಣೆ, ಹೆಚ್ಚುವರಿ ವರ್ಗಾವಣೆ, ಕಾನೂನಿನ ತೊಡಕು ಸೇರಿದಂತೆ ಹಲವು ಕಾರಣಗಳಿಗಾಗಿ ವರ್ಗಾವಣೆ ಪ್ರಕ್ರಿಯೆ 2017ರಿಂದ ಈಚೆಗೆ ಸರಿಯಾಗಿ ನಡೆದೇ ಇಲ್ಲ.

2020-21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಸಲೀಸಾಗಿ ನಡೆಸಲು ಸರಕಾರ ಶಿಕ್ಷಕ ಮಿತ್ರ ತಂತ್ರಾಂಶ ರೂಪಿಸಿ, ಆಮೂಲಕ ಅರ್ಜಿ ಆಹ್ವಾ ನಿಸಿತ್ತು. ಸುಮಾರು 72 ಸಾವಿರ ಅರ್ಜಿ ಸಲ್ಲಿಕೆಯಾಗಿತ್ತು. ಮುಂದಿನ ಪ್ರಕ್ರಿಯೆ ಆರಂಭವಾಗುವ ವೇಳೆಗೆ ಕೆಲವು ಶಿಕ್ಷಕರು ಕೋರ್ಟ್‌ ಮೆಟ್ಟಿ ಲೇರಿದ್ದು, ಇದಕ್ಕೆ ಕೋರ್ಟ್‌ ತಡೆ ನೀಡಿ ತು.ಹೀಗಾಗಿ ಸರಕಾರ ನಿಯಮ ದಲ್ಲಿರುವ ಅಂಶವನ್ನು ಕಾಯ್ದೆಗೆ ಸೇರಿಸಲು (ಕಡ್ಡಾಯ ವರ್ಗಾವಣೆ ಯಿಂದ ಅನ್ಯಾಯವಾಗಿರುವವರಿಗೆ ಆದ್ಯತೆ ನೀಡುವ ವಿಚಾರ) ಅಧ್ಯಾದೇಶ ಮೂಲಕ ಕಾಯ್ದೆಗೆ ತಿದ್ದುಪಡಿ ತರಲಾಯಿತು. ತಿದ್ದುಪಡಿ ಕಾಯ್ದೆ ಯಂತೆ ವರ್ಗಾವಣೆ ಪ್ರಕ್ರಿಯೆ ಪುನರ್‌ ಆರಂಭಿಸಲಾಗಿತ್ತು. ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದವರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ ಮತ್ತೆ ಕೆಲವು ಶಿಕ್ಷಕರು 2016-17ನೇ ಸಾಲಿನಲ್ಲಿ ತಾಲೂಕು ಬಿಟ್ಟವರಿಗೆ ಪುನಃ ತವರು ತಾಲೂಕಿಗೆ ಹೋಗಲು ಅವಕಾಶ ನೀಡಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಹೀಗಾಗಿ ಸದ್ಯ ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ವಾಗಿ ಸ್ಥಗಿತಗೊಂಡಿದೆ.

ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವರ್ಗಾವಣೆ ಪ್ರಕ್ರಿಯೆ ವಿಚಾರವಾಗಿ ಶಾಲಾ ಶಿಕ್ಷಕರ ಸಂಘಟನೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಂದು ಭಾಗವಾದರೆ, ವರ್ಗಾವಣೆ ಪ್ರಕ್ರಿಯೆಗೆ ಪದೇಪದೆ ಕಾನೂನು ತೊಡಕು ಎದುರಾಗದಂತೆ ನೋಡಿಕೊಳ್ಳುವುದು ಅಷ್ಟೇ ಮುಖ್ಯ. ಪ್ರತಿ ಬಾರಿಯೂ ಕಾನೂನಿನ ತೊಡಕಿನಿಂದಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗುತ್ತಾ ಹೋದರೆ, ಕಳೆದ ಹತ್ತು, ಹದಿನೈದು ವರ್ಷಗಳಿಂದ ವರ್ಗಾವಣೆಗಾಗಿ ಕಾದು ಕುಳಿತಿರುವ ಶಿಕ್ಷಕರಿಗೆ ನಿರಂತರ ನಿರಾಸೆಯಾಗುತ್ತಲೇ ಇದೆ. ಅನೇಕ ಬಾರಿ ಅರ್ಜಿ ಸಲ್ಲಿಸಿ, ಇನ್ನೆನು ಕೌನ್ಸೆಲಿಂಗ್‌ ನಡೆಯಬೇಕು ಎನ್ನುವಾಗ ಪ್ರಕ್ರಿಯೆ ಸ್ಥಗಿತ ವಾಗಿ, ನೋವು ತಿಂದವರು ಅನೇಕರಿದ್ದಾರೆ. ತವರು ಜಿಲ್ಲೆ, ತಾಲೂಕಿಗೆ ಹೋಗಬೇಕು ಎಂದು ಹತ್ತಾರು ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿರುವ ಸಾವಿರಾರು ಶಿಕ್ಷಕರಿಗೆ ಅನ್ಯಾಯವಾಗುತ್ತಲೇ ಇದೆ.

ಸದ್ಯ ಎದುರಾಗಿರುವ ಕಾನೂನಿನ ಕಂಟಕವನ್ನು ಶೀಘ್ರ ನಿವಾರಿಸಿ, ಶಿಕ್ಷಕರ ವರ್ಗಾವಣೆಗೆ ಯಾವುದೇ ರೀತಿಯ ವಿಘ್ನ, ಕಾನೂನಿನ ತೊಡಕು ಎದುರಾಗದಂತೆ ಸರಕಾರ ಹಾಗೂ ಶಿಕ್ಷಣ ಇಲಾಖೆ ಎಚ್ಚರವಹಿಸಬೇಕು. ಹಾಗೆಯೇ ಶಿಕ್ಷಕರು ತಾವು ಬಯಸುವ ತಾಲೂಕುಗಳಿಗೆ ಹೋಗಿ, ಶೈಕ್ಷಣಿಕ ಚಟುವಟಿಕೆಯಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ, ಶ್ರದ್ಧೆಯಿಂದ ತೊಡಗಿಸಿಕೊಳ್ಳುವ ವ್ಯವಸ್ಥೆ ನಿರ್ಮಾಣ ಮಾಡಬೇಕು. ಇಲ್ಲವಾದರೆ, ಶಿಕ್ಷಕರು ವರ್ಗಾವಣೆಗಾಗಿ ಅಲೆದಾಡುವುದು ಇನ್ನಷ್ಟು ಹೆಚ್ಚಲಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.