ಪಾರದರ್ಶಕ ವ್ಯವಸ್ಥೆ  ಅಗತ್ಯ


Team Udayavani, Jul 21, 2018, 6:10 PM IST

3.jpg

ಸರ್ಕಾರದ ಪ್ರಸ್ತುತ ಯೋಜನೆ ಪ್ರಕಾರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕಟ್ಟಡ ನಕ್ಷೆ, ಲೇಔಟ್‌ ನಕ್ಷೆ ಮತ್ತು ಭೂ ಪರಿವರ್ತನೆಗೆ ಏಕ ಗವಾಕ್ಷಿ ಯೋಜನೆ ಜಾರಿಗೊಳ್ಳಲಿದೆ. ಆನ್‌ಲೈನ್‌ ಮೂಲಕ ಸಲ್ಲಿಸಿದ ಅರ್ಜಿ ಕಟ್ಟಡ ಬೈಲಾ ಹಾಗೂ ವಲಯ ನಿಯಂತ್ರಣ ನಿಯಮಾವಳಿ ಪ್ರಕಾರ ಇದ್ದರೆ, 30 ದಿನಗಳಲ್ಲಿ ಅರ್ಜಿ ವಿಲೇವಾರಿಗೊಳ್ಳುತ್ತದೆ.

ಭೂವ್ಯವಹಾರ ಕ್ಷೇತ್ರವು ಭ್ರಷ್ಟಾಚಾರದ, ಕಳ್ಳ ವ್ಯವಹಾರದ ಕೂಪವಾಗಿರುವುದು ತಿಳಿಯದಿರುವ ಸಂಗತಿಯೇನಲ್ಲ. ಸ್ವಂತ ಸೂರಿನ ಕನಸು ಹೊತ್ತ ಜನಸಾಮಾನ್ಯರಿಗೆ ಈ ಭ್ರಷ್ಟಾಚಾರದ ಮುಖ ದರ್ಶನವಾದಾಗ ಆಘಾತ, ನಿರಾಸೆ ಉಂಟಾಗುವುದು ಅಷ್ಟೇ ಸಹಜವೂ ಆಗಿದೆ. ಹಾಗೆಂದಾಕ್ಷಣ ಸರ್ಕಾರಗಳು ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲಿ ಪಾರದರ್ಶಕತೆ ತರಲು ಕ್ರಮಗಳನ್ನೇ ಕೈಗೊಂಡಿಲ್ಲವೆಂದಲ್ಲ, ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಲೇ ಇವೆ. ಹಂತಹಂತವಾಗಿ ಈ ಕ್ಷೇತ್ರ ಸುಧಾರಣೆ  ಕಾಣುತ್ತಿದೆ. ಸೈಟ್‌, ಫ್ಲಾಟ್‌ ನೀಡುವುದಾಗಿ ಜನರಿಂದ ಹಣ ಸಂಗ್ರಹಿಸಿ ಬಳಿಕ ಟೋಪಿ ಹಾಕುವ ರಿಯಲ್‌ ಎಸ್ಟೇಟ್‌ ಕಂಪನಿಗಳ ಅದೆಷ್ಟೋ ಪ್ರಕರಣಗಳನ್ನು ಕೇಳಿದ್ದೇವೆ. ಅದು ಖಾಸಗಿ ಕಂಪನಿಗಳ ಕಥೆಯಾದರೆ, ಭೂ ಪರಿವರ್ತನೆ, ನೋಂದಣಿ ವಿಚಾರವಾಗಿ ಸರ್ಕಾರಿ ಕಚೇರಿಗಳಲ್ಲೇ ಜನರು ಅನಗತ್ಯ ವಿಳಂಬ ಎದುರಿಸುವುದು, ಲಂಚದ ಹೊಳೆ ಹರಿಸಬೇಕಾಗಿರುವುದು ಕೂಡಾ ಕಂಡುಬರುವ ವಾಸ್ತವಗಳಾಗಿವೆ. ಮಧ್ಯವರ್ತಿಗಳ ಹಾವಳಿಯಂತೂ ವಿಪರೀತವಾಗಿದೆ. ಹೀಗಾಗಿ ಜನ ಸಾಮಾನ್ಯರಿಗೆ ನೇರವಾಗಿ ಅನ್ವಯಿಸುವ ಭೂ ಪರಿವರ್ತನೆ, ವಿಕ್ರಯ, ನೋಂದಣಿ ಪ್ರಕ್ರಿಯೆ ಇನ್ನಷ್ಟು ಸರಳ ಹಾಗೂ ಪಾರದರ್ಶಕವಾಗಬೇಕಾದ ಅವಶ್ಯಕತೆಯಿದೆ. 

ಖಾಸಗಿ ರಿಯಲ್‌ ಎಸ್ಟೇಟ್‌ ಕಂಪನಿಗಳ ಅಕ್ರಮಗಳಿಗೆ ಕಡಿವಾಣ ಹಾಕಲು ರೆರಾ ಕಾಯ್ದೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಅದರ ಅನುಷ್ಠಾನ ಕರ್ನಾಟಕದಲ್ಲೂ ಆಗುತ್ತಿದೆ. ರೆರಾ ಕಾಯ್ದೆ ಅಡಿಯಲ್ಲಿ ನೋಂ ದಣಿ ಮಾಡಿಕೊಳ್ಳದ 1,626 ಪ್ರೊಜೆಕ್ಟ್ಗಳಿಗೆ ರಾಜ್ಯ ಸರ್ಕಾರ ನೋಟಿಸ್‌ ನೀಡಿತ್ತು. ಈ ಪೈಕಿ 924 ರಿಯಲ್‌ ಎಸ್ಟೇಟ್‌ ಪ್ರೊಜೆಕ್ಟ್ಗಳಿಂದ ಈ ತನಕ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಇವುಗಳನ್ನು ಕಪ್ಪುಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದೊಂದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. 

ರಾಜ್ಯ ಸರ್ಕಾರ ಭೂ ಪರಿವರ್ತನೆಗೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಜಾರಿಗೊಳಿಸಲು ಹೊರಟಿರುವುದು ಸರ್ಕಾರಿ ವ್ಯವಸ್ಥೆಯ ಭ್ರಷ್ಟಾಚಾರ ಮಟ್ಟ ಹಾಕುವ ನಿಟ್ಟಿನಲ್ಲಿ ಹೊಸ ಹೆಜ್ಜೆಯಾಗಲಿದೆ. ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗೆ ಪರಿವರ್ತನೆಗೊಳಿಸುವುದು, ವಸತಿ ಉದ್ದೇಶದ ಭೂಮಿಯನ್ನು ವಾಣಿಜ್ಯ ಬಳಕೆಗೆ ಪರಿವರ್ತನೆಗೊಳಿಸುವುದು ಸಾಮಾನ್ಯವಾಗಿ ನಡೆಯುವ ಪ್ರಕ್ರಿಯೆ. ಪ್ರಸ್ತುತ ನಾಗರಿಕರು ಈ ಭೂ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದರೆ ಹಲವು ಇಲಾಖೆಗಳನ್ನು ದಾಟಿ ಫೈಲ್‌ ಮುನ್ನಡೆಯಲು ತಿಂಗಳುಗಳೇ ಬೇಕಾಗುತ್ತವೆ. ಕೆಲವೊಂದು ಭೂ ಪರಿವರ್ತನೆಗೆ 14 ಇಲಾಖೆಗಳ ಒಪ್ಪಿಗೆ ಬೇಕಾಗುವುದೂ ಉಂಟು. ಇಲ್ಲೆಲ್ಲ ಅಧಿಕಾರಿಗಳು ಅರ್ಜಿಯನ್ನು ಅಂಗೀಕರಿಸಲು ಲಂಚಕ್ಕೆ ಬೇಡಿಕೆ ಸಲ್ಲಿಸುವುದು ಅಥವಾ ಮಧ್ಯವರ್ತಿಗಳ ಮೂಲಕ ಹೋದರಷ್ಟೇ ಕೆಲಸ ಎಂಬಂಥ ಪರಿಸ್ಥಿತಿ ಇದೆ.

ಸರ್ಕಾರದ ಪ್ರಸ್ತುತ ಯೋಜನೆ ಪ್ರಕಾರ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕಟ್ಟಡ ನಕ್ಷೆ, ಲೇಔಟ್‌ ನಕ್ಷೆ ಮತ್ತು ಭೂ ಪರಿವರ್ತನೆಗೆ ಏಕ ಗವಾಕ್ಷಿ ಯೋಜನೆ ಜಾರಿಗೊಳ್ಳಲಿದೆ. ನಾಗರಿಕರು ಆನ್‌ಲೈನ್‌ ಮೂಲಕ ಸಲ್ಲಿಸಿದ ಅರ್ಜಿ ಕಟ್ಟಡ ಬೈಲಾ ಹಾಗೂ ವಲಯ ನಿಯಂತ್ರಣ ನಿಯಮಾವಳಿ ಪ್ರಕಾರ ಇದ್ದರೆ, 30 ದಿನಗಳಲ್ಲಿ ಅರ್ಜಿ ವಿಲೇವಾರಿಗೊಳ್ಳುತ್ತದೆ. ಎಲ್ಲಾ ಇಲಾಖೆಗಳ ನಿರಾಕ್ಷೇಪಣೆ ಪತ್ರವನ್ನು ನಗರಾಭಿವೃದ್ಧಿ ಇಲಾಖೆಯೇ ಪಡೆದುಕೊಳ್ಳಲಿದೆ. ಜನರು ವಿವಿಧ ಇಲಾಖೆಗಳ ಬಾಗಿಲು ಬಡಿಯಬೇಕಿಲ್ಲ. ಮಧ್ಯವರ್ತಿಗಳೂ ಬೇಕಿರುವುದಿಲ್ಲ. ಅರ್ಜಿ ನಿಯಮ ಪ್ರಕಾರ ಇಲ್ಲದೇ ಇದ್ದರೆ, ತಕ್ಷಣವೇ ತಿರಸ್ಕಾರವೂ ಆಗುತ್ತದೆ. ಅರ್ಜಿ ಯಾವ ಹಂತದಲ್ಲಿದೆ ಎಂಬುದು ಮೊಬೈಲ್‌ಗೇ ಅಪ್ಡೆàಟ್‌ ಆಗುತ್ತದೆ. ಇದೊಂದು ಉತ್ತಮ ನಿರ್ಧಾರವಾಗಿದ್ದು, ಸಮರ್ಪಕವಾಗಿ ಜಾರಿಯಾಗಬೇಕಷ್ಟೆ. ಅನುಷ್ಠಾನದ ಸವಾಲು ಇಲ್ಲಿದೆ. ಏಕಗವಾಕ್ಷಿ ಯೋಜನೆಯ ಸಮರ್ಪಕ ಜಾರಿಗೆ ಅಧಿಕಾರಿಗಳು, ಮಧ್ಯವರ್ತಿ ಮಾಫಿಯಾ ಬಿಡುತ್ತಾ ಅನ್ನೋದು ಇಲ್ಲಿ ಪ್ರಶ್ನೆ. ಯಶಸ್ವಿ ಅನುಷ್ಠಾನಕ್ಕೆ ಸರ್ಕಾರದ ಇಚ್ಛಾಶಕ್ತಿ ತುಂಬಾ ಮುಖ್ಯ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.