ಸಾರಿಗೆ ನಿಯಮಾವಳಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಬೇಕು


Team Udayavani, Mar 21, 2022, 6:00 AM IST

ಸಾರಿಗೆ ನಿಯಮಾವಳಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಬೇಕು

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಅದರಲ್ಲೂ ಸಾರ್ವಜನಿಕ ಸಾರಿಗೆ ವಾಹನ ಅಪಘಾತ ಗಳು ಪ್ರತೀದಿನ ಎಂಬಂತೆ ಸಂಭವಿಸುತ್ತಿದ್ದರೂ ಮೃತರ ಕುಟುಂಬಗಳಿಗೆ ಮತ್ತು ಗಾಯಾಳುಗಳಿಗೆ ಪರಿಹಾರ ನೀಡಿ ಕೈತೊಳೆಯುವ ಪ್ರವೃತ್ತಿ ಬೆಳೆಯುತ್ತಿದೆಯೇ ವಿನಾ ಅಪಘಾತಗಳಿಗೆ ಕಡಿವಾಣ ಹಾಕುವ ಯಾವುದೇ ಪ್ರಯತ್ನ ನಡೆಯುತ್ತಿಲ್ಲ. ಅಪಘಾತ ಸಂಭವಿಸಿದಾಗ ಅದಕ್ಕೆ ಕಾರಣವಾದ ಅಂಶಗಳು, ಮತ್ತವುಗಳಿಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಸಾರಿಗೆ ಇಲಾಖೆ ಮುಂದಾಗುತ್ತಿಲ್ಲ.

ಶನಿವಾರ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆಯ ಬಳಿ ಸಂಭವಿಸಿದ ಭೀಕರ ಅಪಘಾತಕ್ಕೆ ಬಸ್‌ನ ಚಾಲಕನೇ ಹೊಣೆಗಾರ ಎಂದು ಹೇಳಿ ಪ್ರಕರಣಕ್ಕೆ ಅಂತ್ಯ ಹಾಡುವುದು ಬಲು ಸುಲಭದ ಮಾರ್ಗ. ಬಸ್‌ನಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದರೂ ಅತೀ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಮುಖ್ಯ ಕಾರಣ ಎಂಬುದು ಮೇಲ್ನೋಟಕ್ಕೆ ಸಾಬೀತಾಗು ತ್ತದೆ. ಆದರೆ ಇಡೀ ಘಟನೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ಸಾರಿಗೆ ಇಲಾಖೆ ಇನ್ನೂ ತನ್ನ ಹಳೆ ಜಮಾನದಿಂದ ಹೊರಬಾರದಿ ರುವುದು ಸ್ಪಷ್ಟವಾಗುತ್ತದೆ. ದಶಕಗಳ ಹಿಂದಿನಿಂದಲೂ ಜಡ್ಡು ಗಟ್ಟಿದ ವ್ಯವಸ್ಥೆಯಿಂದ ಹೊರಬರಲು ಇಲಾಖೆ ಪರದಾಡುತ್ತಿದೆ. ಕಠಿನ ನಿಯ ಮಾವಳಿಗಳೆಲ್ಲವೂ ಬಡಪಾಯಿಗಳ ಜೇಬಿಗೆ ಕತ್ತರಿ ಹಾಕುತ್ತಿವೆಯೇ ಹೊರತು ಬಲಾಡ್ಯರನ್ನು ಮುಟ್ಟಲೂ ಇಲಾಖೆಗೆ ಸಾಧ್ಯವಾಗುತ್ತಿಲ್ಲ.

ನಿಗದಿತ ಪ್ರಮಾಣದ ತೆರಿಗೆ ಸಂಗ್ರಹವಾಗಿಲ್ಲ ಎಂದಾದರೆ ಮಾತ್ರ ಸಾರಿಗೆ ಇಲಾಖೆ ಅಧಿಕಾರಿಗಳು ನಗರ ಪ್ರದೇಶದ ಎಲ್ಲೋ ಒಂದು ಆಯಕಟ್ಟಿನ ಸ್ಥಳದಲ್ಲಿ ನಿಂತು ಸಾರಿಗೆ ನಿಯಮಗಳನ್ನು ಮೀರಿ ಸಂಚರಿ ಸುವ ವಾಹನಗಳ ಚಾಲಕರು ಯಾ ಮಾಲಕ ರಿಂದ ದಂಡ ಸಂಗ್ರಹಕ್ಕೆ ಮುಂದಾಗುತ್ತಾರೆ. ಇದರಲ್ಲೂ ಅದೆಷ್ಟು ಹಣ ಸರಕಾರದ ಬೊಕ್ಕಸ ಸೇರುತ್ತದೆ?, ಎಷ್ಟು ಹಣ ಸಾರಿಗೆ ಅಧಿಕಾರಿಗಳ ಜೇಬಿಗಿಳಿಯುತ್ತದೆ? ಎಂಬುದು ಬೇರೆ ಮಾತು. ಇಂಥ ಲೋಪಗಳಿಂದಾ ಗಿಯೇ ಸಾರಿಗೆ ನಿಯಮಾವಳಿಗಳು ತೀರಾ ನಿರ್ಲಕ್ಷ್ಯಕ್ಕೊಳಗಾಗಿವೆ. ಇದರಿಂದಾಗಿ ಅಪಘಾತಗಳಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಂತೂ ಸರಕಾರ ನೀಡುವ ಪರಿಹಾರದಲ್ಲಿ ಕಣ್ಣೀರು ಒರೆಸಿಕೊಂಡು ಸಮಾಧಾನ ಪಟ್ಟುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಪಳವಳ್ಳಿಕಟ್ಟೆಯಲ್ಲಿ ಅಪಘಾತಕ್ಕೀಡಾದ ಬಸ್‌ಗೂ ಮುನ್ನ 2 ಬಸ್‌ಗಳು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದಿದ್ದುದರಿಂದ ಅವರು ನತದೃಷ್ಟ ಬಸ್‌ನ ಟಾಪ್‌ನಲ್ಲಿ ಕುಳಿತು ಪ್ರಯಾಣಿಸುವ ಅನಿವಾರ್ಯತೆ ಒದಗಿಬಂತು ಮತ್ತು ಬಸ್‌ ಚಾಲಕ ಮೊಬೈಲ್‌ ಸಂಭಾಷಣೆಯಲ್ಲಿ ನಿರತನಾಗಿದ್ದ ಎಂಬುದು ಈ ಘಟನೆಯ ಇನ್ನೊಂದು ಮಗ್ಗುಲು. ಸಾರ್ವಜನಿಕ ಸಾರಿಗೆ ವಾಹನಗಳು ಮತ್ತವುಗಳ ಚಾಲಕರು ಈ ರೀತಿ ವರ್ತಿಸಿದರೆ ಈ ವಾಹನಗಳನ್ನೇ ಅವಲಂಬಿಸಿರುವ ವಿದ್ಯಾರ್ಥಿಗಳು ಮತ್ತು ಜನರನ್ನು ರಕ್ಷಿಸುವವರಾರು? ಎಂಬ ಬಗ್ಗೆಯೂ ಸಾರಿಗೆ ಇಲಾಖೆ ಉತ್ತರ ನೀಡಬೇಕು.

ಸರಕಾರಿ ಇರಲಿ, ಖಾಸಗಿ ಬಸ್‌ ಇರಲಿ ಎಲ್ಲವೂ ಸಾರಿಗೆ ನಿಯಮ ಗಳನ್ನು ಅನುಸರಿಸಿದರೆ ಅಪಘಾತಗಳನ್ನು ತಪ್ಪಿಸಬಹುದು. ಸಾಕಷ್ಟು ಬಸ್‌ಗಳಿಲ್ಲದ ಗ್ರಾಮೀಣ ಪ್ರದೇಶಗಳಿಗೆ ಬೆಳಗ್ಗೆ ಮತ್ತು ಸಂಜೆ ವೇಳೆ ಅಗತ್ಯ ಸಂಖ್ಯೆಯ ಬಸ್‌ ವ್ಯವಸ್ಥೆ ಕಲ್ಪಿಸಬೇಕು. ಯಾವುದಕ್ಕೂ ಷರಾ ಬರೆಯುವ ಮುನ್ನ ಮುನ್ನುಡಿ ಬರೆಯಬೇಕಿದೆ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ತಾನೇ ರೂಪಿಸಿದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.