ಶಿಶು ಮರಣ ಪ್ರಮಾಣ ಹೆಚ್ಚಳದ ಆತಂಕ ; ಸ್ವಾಸ್ಥ್ಯ ಸೇವೆ ಎಲ್ಲರಿಗೂ ಸಿಗಲಿ


Team Udayavani, May 18, 2020, 6:11 AM IST

ಶಿಶು ಮರಣ ಪ್ರಮಾಣ ಹೆಚ್ಚಳದ ಆತಂಕ ; ಸ್ವಾಸ್ಥ್ಯ ಸೇವೆ ಎಲ್ಲರಿಗೂ ಸಿಗಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜಗತ್ತಿನಾದ್ಯಂತ ಮಕ್ಕಳ ಮರಣ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು, ಅದು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚುವ ಸೂಚನೆ ಸಿಗುತ್ತಿರುವುದು ನಿಜಕ್ಕೂ ಕಳವಳದ ಸಂಗತಿ.

ಕೋವಿಡ್ ನಿಂದಾಗಿ ವಿಶ್ವಾದ್ಯಂತ ನಿಯಮಿತ ಸ್ವಾಸ್ಥ್ಯ ಸೇವೆಗಳಿಗೆ ತೊಂದರೆಯಾಗಿರುವುದರಿಂದ, ಐದು ವರ್ಷಕ್ಕೂ ಕಡಿಮೆ ವಯೋಮಾನದ ಮಕ್ಕಳಲ್ಲಿನ ಮರಣ ಪ್ರಮಾಣ ವಿಪರೀತ ಹೆಚ್ಚಾಗಲಿದೆ.

ಪರೋಕ್ಷ ಪರಿಣಾಮಗಳಿಂದಾಗಿ ಮುಂದಿನ ಆರು ತಿಂಗಳಲ್ಲಿ ಪ್ರತಿದಿನ ವಿಶ್ವಾದ್ಯಂತ 6000 ಮಕ್ಕಳು ಸಾಯಬಹುದು ಎಂದು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ತುರ್ತು ನಿಧಿ (ಯುನಿಸೆಫ್) ಎಚ್ಚರಿಸಿದೆ.

ಕೋವಿಡ್ ಹಿಡಿತಕ್ಕೆ ಬರದೇ ಹೋದರೆ, ಕಡಿಮೆ ಹಾಗೂ ಮಧ್ಯಮ ಆದಾಯವಿರುವ ಪ್ರಪಂಚದ 118 ರಾಷ್ಟ್ರಗಳಲ್ಲಿ ಮುಂದಿನ ಆರು ತಿಂಗಳಲ್ಲಿ 12 ಲಕ್ಷಕ್ಕೂ ಅಧಿಕ ಮಕ್ಕಳು ಸಾಯಬಹುದು ಎನ್ನಲಾಗುತ್ತಿದೆ. ಗಮನಿಸಬೇಕಾದ ಸಂಗತಿಯೆಂದರೆ, ಮುಂದಿನ ಆರು ತಿಂಗಳಲ್ಲಿ ಈ 118 ರಾಷ್ಟ್ರಗಳಲ್ಲಿ ವಿವಿಧ ಕಾರಣಕ್ಕಾಗಿ ಮೃತಪಡುವ ಮಕ್ಕಳ ಸಂಖ್ಯೆ 25 ಲಕ್ಷವಿರಬಹುದು ಎಂದು ಅಂದಾಜಿತ್ತು. ಈಗ ಹೆಚ್ಚುವರಿ 12 ಲಕ್ಷ ಮಕ್ಕಳು ಸಾಯಬಹುದು ಎನ್ನಲಾಗುತ್ತಿದೆ!

ಈಗ ವಿಶ್ವದ ಸ್ಥಿತಿ ಹೇಗಿದೆಯೆಂದರೆ, ಎಲ್ಲಾ ರಾಷ್ಟ್ರಗಳ ಆರೋಗ್ಯ ವ್ಯವಸ್ಥೆಗಳು ತಮ್ಮ ಸಂಪೂರ್ಣ ಶಕ್ತಿಯನ್ನು ಕೋವಿಡ್ ಸೋಂಕಿತರನ್ನು ಪತ್ತೆಹಚ್ಚಲು, ಅವರಿಗೆ ಚಿಕಿತ್ಸೆ ನೀಡಲು ವಿನಿಯೋಗಿಸುತ್ತಿವೆ. ಇದರಿಂದಾಗಿ ಸಾಮಾನ್ಯ ಸ್ವಾಸ್ಥ್ಯ ಸೇವೆಗಳಿಗಂತೂ ಭಾರೀ ಪೆಟ್ಟು ಬಿದ್ದಿದೆ.

ಅನೇಕ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಚಿಕಿತ್ಸಾ ವಿಭಾಗಗಳನ್ನೇ ಬಂದ್‌ ಮಾಡಲಾಗಿದೆ. ಸಾಮಾನ್ಯ ರೋಗಿಗಳನ್ನು ನೋಡುವ ಪ್ರಮಾಣ ಬಹಳ ತಗ್ಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಮಕ್ಕಳ ಸ್ವಾಸ್ಥ್ಯ ಮತ್ತು ಪ್ರಸೂತಿಗೆ ಸಂಬಂಧಿಸಿದ ಸೇವೆ ಸಲ್ಲಿಸುವ ಸಿಬಂದಿಯೂ ಕೂಡ ಈಗ ಕೋವಿಡ್ ವಿರುದ್ಧದ ಹೋರಾಟದಲ್ಲಿ ವ್ಯಸ್ತವಾಗಿದ್ದಾರೆ.

ಪ್ರಸೂತಿ ಹಾಗೂ ಮಕ್ಕಳ ಸ್ವಾಸ್ಥ್ಯ ಸೇವೆಯ ವಿಷಯದಲ್ಲಿ ಶ್ರಮಿಸುತ್ತಿದ್ದ ಪ್ರಾಥಮಿಕ ಆರೋಗ್ಯ ವಲಯದ ಸಿಬಂದಿ ಮತ್ತು ಆಶಾ ಕಾರ್ಯಕರ್ತೆಯರೂ ಕೂಡ ಈ ಸಾಂಕ್ರಾಮಿಕದ ವಿರುದ್ಧ ಜಾಗರೂಕತೆ ಮೂಡಿಸುವಲ್ಲಿ ವ್ಯಸ್ತರಾಗಿದ್ದಾರೆ. ಹೀಗಾಗಿ, ಅನೇಕ ಹಳ್ಳಿಗಳಲ್ಲಿ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಮಹಿಳೆಯರು ಅಸುರಕ್ಷಿತ ವಾತಾವರಣದಲ್ಲಿ ಹೆರಿಗೆ ಮಾಡಿಕೊಳ್ಳುತ್ತಿರುವ ಬಗ್ಗೆ ವರದಿಯಾಗುತ್ತಿದೆ.

ಇದಷ್ಟೇ ಅಲ್ಲದೇ, ಮಕ್ಕಳಿಗೆ 5 ವರ್ಷಗಳವರೆಗೆ ನೀಡಲಾಗುವ ಔಷಧ ಹಾಗೂ ಅಗತ್ಯ ಲಸಿಕೆ ಕಾರ್ಯಕ್ಕೂ ಪೆಟ್ಟು ಬಿದ್ದಿದೆ. ಆದಾಗ್ಯೂ, ಈ ಸೌಲಭ್ಯಗಳೆಲ್ಲ ನಿಂತುಹೋಗಿವೆ ಎಂದೇನೂ ಅಲ್ಲ. ಆದರೆ, ಆಸ್ಪತ್ರೆಗಳಿಗೆ, ಆರೋಗ್ಯ ಘಟಕಗಳಿಗೆ ತೆರಳಲು ತಾಯಂದಿರಿ, ಗರ್ಭಿಣಿಯರು ಹಿಂಜರಿಯುತ್ತಿರುವ ಬಗ್ಗೆ ವರದಿಯಾಗುತ್ತಿದೆ.

ಭಾರತದಂಥ ರಾಷ್ಟ್ರಗಳಲ್ಲಿ  ಪೌಷ್ಟಿಕತೆಯಿಲ್ಲದೇ, ಅಗತ್ಯ ಸುರಕ್ಷಾ ಕ್ರಮಗಳಿಲ್ಲದೇ, ನಿಯಮಿತ ತಪಾಸಣೆಯಾಗದೆ, ಗರ್ಭಾವಸ್ಥೆಯ ಸಮಯದಲ್ಲಿ ಸರಿಯಾದ ಪೋಷಣೆ ಸಿಗದೇ, ನಿಯಮಿತ ಲಸಿಕೆ ಲಭ್ಯವಾಗದೇ ಅಗಣಿತ ಮಕ್ಕಳು ಮರಣವನ್ನಪ್ಪುತ್ತವೆ.

ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ತಾಯಿ-ಶಿಶು ಮರಣ ಪ್ರಮಾಣದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆಯಾದರೂ ಸಾಗಬೇಕಾದ ದಾರಿ ತುಂಬಾ ದೊಡ್ಡದಿದೆ. ಇಂಥ ಹೊತ್ತಲ್ಲೇ ಕೋವಿಡ್ ಕಂಟಕ ಎದುರಾಗಿ ಸ್ವಾಸ್ಥ್ಯ ಸೇವೆಗಳಿಗೆ ವಿವಿಧ ಆಯಾಮಗಳಿಂದ ಕಗ್ಗಂಟು ಎದುರಾಗಿರುವುದು ದುರಂತವೇ ಸರಿ.

ಏನೇ ಇದ್ದರೂ ಭಾರತ ಸರಕಾರ, ರಾಜ್ಯ ಸರ್ಕಾರಗಳು, ಆರೋಗ್ಯ ಇಲಾಖೆಗಳು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಹೆಜ್ಜೆಗಳನ್ನು ತ್ವರಿತವಾಗಿ ಇಡುವಂತಾಗಲಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.