United Nations Climate Summit ;ಒಪ್ಪಂದ ಅನುಷ್ಠಾನ: ಬಲಾಡ್ಯ ರಾಷ್ಟ್ರಗಳು ಮಾದರಿಯಾಗಲಿ


Team Udayavani, Dec 15, 2023, 12:50 AM IST

1-sadsadsa

ಜಾಗತಿಕ ಹವಾಮಾನ ಬದಲಾವಣೆಗೆ ಪ್ರಮುಖ ಕಾರಣವಾಗಿರುವ ಪಳೆಯುಳಿಕೆ ಇಂಧನಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಿ, ಪರ್ಯಾಯ ಇಂಧನ ಮೂಲಗಳ ಬಳಕೆಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ದುಬಾೖ ಯಲ್ಲಿ ನಡೆದ ವಿಶ್ವಸಂಸ್ಥೆಯ ಹವಾಮಾನ ಶೃಂಗದಲ್ಲಿ ಮಹತ್ತರ ನಿರ್ಣಯ ಕೈಗೊಳ್ಳಲಾಗಿದೆ. ವಿಶ್ವ ರಾಷ್ಟ್ರಗಳು ಇಂತಹ ನಿರ್ಧಾರ, ಘೋಷಣೆಗಳನ್ನು ಹೊರಡಿಸುವುದು ಹೊಸದೇನಲ್ಲವಾದರೂ ಈ ಬಾರಿಯ ಶೃಂಗದುದ್ದಕ್ಕೂ ನಡೆದಿರುವ ಚರ್ಚೆ, ವಿಚಾರ ವಿಮರ್ಶೆಗಳು ಜಾಗತಿಕವಾಗಿ ಒಂದಿಷ್ಟು ಆಶಾವಾದವನ್ನು ಮೂಡಿಸಿವೆ.

ಎರಡು ವಾರಗಳ ಕಾಲ ನಡೆದ ಶೃಂಗದಲ್ಲಿ ಹವಾಮಾನ ಬದಲಾವಣೆ, ತಾಪಮಾನ ಹೆಚ್ಚಳದ ಕುರಿತಂತೆ ಈ ಹಿಂದೆ ಜಾಗತಿಕವಾಗಿ ಕೈಗೊಳ್ಳಲಾದ ಒಪ್ಪಂದ, ನಿರ್ಧಾರಗಳ ಅನುಷ್ಠಾನಕ್ಕೆ ಮುಂದುವರಿದ ದೇಶಗಳು ಅಷ್ಟೊಂದು ಆಸಕ್ತಿ ತೋರದಿರುವ ಬಗೆಗೆ ಅಭಿವೃದ್ಧಿಶೀಲ ಮತ್ತು ಬಡರಾಷ್ಟ್ರಗಳಿಂದ ಅಸಮಾ ಧಾನ ವ್ಯಕ್ತವಾದವು. ಪಳೆಯುಳಿಕೆ ಇಂಧನಗಳ ಬಳಕೆಯನ್ನು ಕಡಿಮೆ ಗೊಳಿಸಲು ಪರ್ಯಾಯ ಇಂಧನ ಮೂಲಗಳನ್ನು ಕಂಡುಕೊಳ್ಳುವುದು ಬಡ ರಾಷ್ಟ್ರಗಳಿಗೆ ಬಲುದೊಡ್ಡ ಸವಾ ಲಾಗಿದೆ. ಇದಕ್ಕಾಗಿ ಸಾಕಷ್ಟು ಹಣವನ್ನು ವ್ಯಯಿಸಬೇಕಿದ್ದು, ಇಷ್ಟೊಂದು ಸಾಮ ರ್ಥ್ಯವನ್ನು ಅವು ಹೊಂದಿಲ್ಲ. ಈ ಹಿನ್ನೆಲೆ ಯಲ್ಲಿ ಈ ಹಿಂದೆ ಮಾಡಿ ಕೊಳ್ಳಲಾದ ಒಪ್ಪಂದದಂತೆ ಬಲಾಡ್ಯ ರಾಷ್ಟ್ರ ಗಳು, ಬಡ ರಾಷ್ಟ್ರಗಳಿಗೆ ಹಣಕಾಸು ನೆರವು ನೀಡಬೇಕು ಎಂದು ಈ ರಾಷ್ಟ್ರಗಳು ಪ್ರಬಲವಾಗಿ ಪ್ರತಿಪಾದಿಸಿದವು. ಹವಾಮಾನ ಬದಲಾವಣೆಯು ಮಳೆ, ತಾಪಮಾನ, ನೀರಿನ ಲಭ್ಯತೆಯ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತಿದೆ. ಇದು ಕೃಷಿ ಉತ್ಪಾದನೆಯ ಮೇಲೆ ನೇರ ಪರಿಣಾಮ ಬೀರುವುದರ ಜತೆಯಲ್ಲಿ ಆರ್ಥಿಕತೆಗೂ ಬಲುದೊಡ್ಡ ಹೊಡೆತ ನೀಡುತ್ತಿದೆ. ಅಭಿವೃದ್ಧಿ ಹೊಂದಿದ ದೇಶಗಳೇ ಗರಿಷ್ಠ ಪ್ರಮಾಣದಲ್ಲಿ ಹಸುರುಮನೆ ಅನಿಲ ಹೊರಸೂಸುವಿಕೆಗೆ ಕಾರಣವಾಗಿವೆ. ಆದರೆ ಇದರ ಪರಿಣಾಮವನ್ನು ವಿಶ್ವದ ಅಭಿವೃದ್ಧಿಶೀಲ ಮತ್ತು ಬಡ ರಾಷ್ಟ್ರಗಳು ಅನುಭವಿಸುತ್ತಿವೆ. ಈ ಕಾರಣದಿಂದಾಗಿ ಈ ಬಾರಿಯ ಶೃಂಗದಲ್ಲಿ ಈ ಬಗ್ಗೆ ಈ 2 ವರ್ಗಗಳಿಗೆ ಸೇರಿದ ರಾಷ್ಟ್ರಗಳು ಒಂದಿಷ್ಟು ಗಟ್ಟಿ ದನಿಯಲ್ಲಿಯೇ ವಿಷಯ ವನ್ನು ಪ್ರಸ್ತಾವಿಸಿ, ಅಭಿವೃದ್ಧಿ ಹೊಂದಿದ ದೇಶಗಳು ಹವಾಮಾನ ಬದಲಾ ವಣೆಗೆ ಕಾರಣ ವಾಗುತ್ತಿರುವ ಪಳೆಯುಳಿಕೆ ಇಂಧನಗಳ ಬಳಕೆಯನ್ನು ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಹಣವನ್ನು ವ್ಯಯಿಸಬೇಕೆಂದು ಆಗ್ರಹಿಸಿದವು.

ಒಟ್ಟಿನಲ್ಲಿ ಈ ಬಾರಿಯ ವಿಶ್ವಸಂಸ್ಥೆಯ ಜಾಗತಿಕ ಹವಾಮಾನ ಶೃಂಗದಲ್ಲಿ ಬಡ ರಾಷ್ಟ್ರಗಳು ಎದುರಿಸುತ್ತಿರುವ ಸಮಸ್ಯೆ, ಸವಾಲುಗಳ ಬಗೆಗೆ ಜಾಗತಿಕ ಸಮು ದಾಯದ ಗಮನ ಸೆಳೆಯುವಲ್ಲಿ ಯಶಸ್ವಿಯಾದವು. ಪಳೆಯುಳಿಕೆ ಇಂಧನಗಳ ಬಳಕೆ  ಯನ್ನು ಕಡಿಮೆ ಮಾಡಲು ಶೃಂಗದಲ್ಲಿ ಒಮ್ಮತದ ನಿರ್ಣಯವನ್ನು ಕೈಗೊ ಳ್ಳಲಾಗಿದೆ. ಈ ನಿರ್ಣಯದ ಅನುಷ್ಠಾನದಲ್ಲಿ ಬಲಾಡ್ಯ ರಾಷ್ಟ್ರಗಳು ಮುಂಚೂ ಣಿ ಯಲ್ಲಿ ನಿಂತು ವಿಶ್ವದ ಇತರ ದೇಶಗಳಿಗೆ ಮಾದರಿಯಾಗಬೇಕಿದೆ. ಈ ಹಿಂದಿನಂತೆ ಯುಎಇ ಒಪ್ಪಂದವೂ ಕೇವಲ ದಾಖಲೆ, ಘೋಷಣೆಗೆ ಸೀಮಿತ ವಾಗದೆ ಪಳೆಯುಳಿಕೆ ಇಂಧನಗಳ ಬಳಕೆಗೆ ಕಡಿವಾಣ ಹಾಕುವ ದಿಸೆ ಯಲ್ಲಿ ಎಲ್ಲ ರಾಷ್ಟ್ರಗಳೂ ಪ್ರಜ್ಞಾಪೂರ್ವಕವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಹವಾಮಾನ ಬದಲಾವಣೆ, ತಾಪಮಾನ ಹೆಚ್ಚಳದ ಸಮಸ್ಯೆಯನ್ನು ನಿಯಂತ್ರಣ ದಲ್ಲಿರಿಸಿಕೊಳ್ಳುವ ದಿಸೆಯಲ್ಲಿ ಪ್ರತಿಯೊಂದೂ ರಾಷ್ಟ್ರವೂ ತನ್ನ ಪ್ರಯತ್ನವನ್ನು ನಡೆಸಬೇಕು. ಅಷ್ಟು ಮಾತ್ರವಲ್ಲದೆ ಸಾಂಪ್ರದಾಯಿಕ ಇಂಧನ ಮೂಲಗಳು ಬರಿದಾಗುತ್ತಿರುವ ಈ ಸಂದರ್ಭದಲ್ಲಿ ಪರ್ಯಾಯ ಇಂಧನ ಮೂಲಗಳತ್ತ ವಿಶ್ವ ರಾಷ್ಟ್ರಗಳು ತಮ್ಮ ಲಕ್ಷ್ಯ ವನ್ನು ಕೇಂದ್ರೀ ಕರಿಸುವ ಅನಿವಾರ್ಯತೆ ಎದುರಾಗಿದೆ ಎಂಬುದನ್ನು ಮರೆಯಬಾರದು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.