ಭಾರತದ ವಸುದೈವ ಕುಟುಂಬಕಂ ಜಗತ್ತಿಗೇ ಮಾದರಿಯಾಗಲಿ


Team Udayavani, May 17, 2022, 6:00 AM IST

ಭಾರತದ ವಸುದೈವ ಕುಟುಂಬಕಂ ಜಗತ್ತಿಗೇ ಮಾದರಿಯಾಗಲಿ

ಕೊರೊನಾ ಕಾಲದಿಂದ ಹಿಡಿದು, ಇಲ್ಲಿಯವರೆಗೂ ನೆರೆಕರೆಯ ದೇಶಗಳ ಕಷ್ಟಕಾಲದಲ್ಲಿ ಸಹಾಯಕ್ಕೆ ಹೋದ ರಾಷ್ಟ್ರವೆಂದರೆ ಅದು ಭಾರತ ಮಾತ್ರ. ದಕ್ಷಿಣ ಏಷ್ಯಾದಲ್ಲಿನ ರಾಷ್ಟ್ರಗಳ ನಡುವಿನ ಒಗ್ಗಟ್ಟನ್ನು ಮುರಿಯುವ ಸಲುವಾಗಿ ಚೀನವು ಪಾಕಿಸ್ಥಾನವನ್ನು ದಾಳವಾಗಿ ಬಳಸಿಕೊಂಡಿತ್ತು. ಇದರ ಜತೆಗೆ ಶ್ರೀಲಂಕಾ, ನೇಪಾಲ, ಮಾಲ್ಡೀವ್ಸ್‌ನಲ್ಲಿ ಸರಕಾರಗಳು ಬದಲಾದಾಗ ಚೀನ ಅಲ್ಲಿಗೆ ಹೆಚ್ಚಿನ ಸಾಲ ನೀಡಿ ಅವುಗಳನ್ನು ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಕೊಂಚ ಯಶಸ್ಸಾಗಿತ್ತು. ಆದರೆ ಕೊರೊನಾ ಬಂದ ಮೇಲೆ ಈ ಎಲ್ಲ ದೇಶಗಳಿಗೆ ನಿಜವಾದ ಸ್ನೇಹಿತಯಾರು ಎಂಬುದು ಅರ್ಥವಾದಂತಿದೆ.

ನೆರೆಕರೆಯ ದೇಶಗಳ ಜತೆಗೆ ಉತ್ತಮ ಸಂಬಂಧವಿರಿಸಿಕೊಳ್ಳಬೇಕು ಎಂಬ ಭಾರತದ ನಿಲುವು ಇಂದು ನಿನ್ನೆಯದಲ್ಲ. ಅನಾದಿ ಕಾಲದಿಂದಲೂ ಅಕ್ಕಪಕ್ಕದ ದೇಶಗಳಿಗೆ ತನ್ನ ಕೈಲಾದ ಸಹಾಯವನ್ನು ಮಾಡುತ್ತಲೇ ಬಂದಿದೆ ಭಾರತ. ಅದರಲ್ಲೂ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪದಗ್ರಹಣದ ವೇಳೆ, ಅಕ್ಕಪಕ್ಕದ ಎಲ್ಲ ದೇಶಗಳ ನಾಯಕರನ್ನು ಆಹ್ವಾನಿಸಿ, ವಸುದೈವ ಕುಟುಂಬದ ಮೊದಲ ಅಧ್ಯಾಯವನ್ನು ತೆರೆದಿದ್ದರು. ಆದರೆ ಒಂದಷ್ಟು ದಿನಗಳಾದ ಮೇಲೆ ಪಾಕಿಸ್ಥಾನ ಬೆನ್ನಿಗೆ ಚೂರಿ ಇರಿದು, ಈ ವಸುದೈವ ಕುಟುಂಬಕಂ ನೀತಿಗೆ ಪೆಟ್ಟು ನೀಡಿತ್ತು.

ಈಗ ಭಾರತ, ಪಾಕಿಸ್ಥಾನವನ್ನು ಬದಿಗಿಟ್ಟು, ನೆರೆ ದೇಶಗಳಲ್ಲಿ ಚೀನದ ಪ್ರಾಬಲ್ಯ ಹೆಚ್ಚಾಗದಂತೆ ನೋಡಿಕೊಳ್ಳುವ ಕೆಲಸ ಮಾಡುತ್ತಿದೆ. ಒಂದು ಹಂತದಲ್ಲಿ ಭಾರತದ ವಿರುದ್ಧ ಮುನಿಸಿಕೊಂಡು ಹೋಗಿದ್ದ ದೇಶಗಳು ಮತ್ತೆ ಹತ್ತಿರವಾಗುತ್ತಿವೆ. ಇದಕ್ಕೆ ಉದಾಹರಣೆಯೇ ಶ್ರೀಲಂಕಾ, ಮಾಲ್ಡೀವ್ಸ್‌ ಮತ್ತು ನೇಪಾಲ. ಚೀನ ಜತೆಗೆ ಹೋದರೆ ಎಂದಿಗೂ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದು ಈಗ ಈ ದೇಶಗಳಿಗೆ ಅರ್ಥವಾಗಿದೆ. ಇದು ಅರ್ಥವಾಗುವುದಕ್ಕೆ ವೇದಿಕೆ ಸೃಷ್ಟಿ ಮಾಡಿಕೊಟ್ಟಿದ್ದೇ ಕೊರೊನಾ. 2020ರ ಆರಂಭದಲ್ಲಿ ಕೊರೊನಾ ಆತಂಕ ಶುರುವಾಗಿದ್ದು, ಈಗಲೂ ಮುಂದುವರಿದಿದೆ. ಆದರೆ ಭಾರತ ಕೊರೊನಾ ಆರಂಭವಾದಾಗಿನಿಂದಲೂ ತನ್ನ ಸುತ್ತಮುತ್ತಲಿನ ಎಲ್ಲ ದೇಶಗಳಿಗೂ ತನ್ನದೆ ಆದ ರೀತಿಯಲ್ಲಿ ಕೈಲಾದ ಸಹಾಯ ಮಾಡುತ್ತಿದೆ. ಅಂದರೆ ಔಷಧಗಳು, ಲಸಿಕೆ, ವೈದ್ಯಕೀಯ ಉಪಕರಣಗಳನ್ನು ಒದಗಿಸುತ್ತಿದೆ. ಲಸಿಕೆ ವಿಚಾರದಲ್ಲಂತೂ ನೆರೆಯ ನೇಪಾಲ, ಶ್ರೀಲಂಕಾ, ಮಾಲ್ಡೀವ್ಸ್‌, ಭೂತಾನ್‌, ಮ್ಯಾನ್ಮಾರ್‌, ಅಫ್ಘಾನಿಸ್ಥಾನ ದೇಶಗಳಿಗೆ ಹೆಚ್ಚಿನ ಸಹಾಯ ಮಾಡಿದೆ. ಅಲ್ಲದೆ, ಹೆಚ್ಚು ಕಡಿಮೆ ಈ ಎಲ್ಲ ದೇಶಗಳಿಗೆ ಪ್ರಸಕ್ತ ವರ್ಷದಲ್ಲೇ ಕೋಟಿ ಕೋಟಿ ರೂ. ಸಹಾಯಧನವನ್ನೂ ಮೀಸಲಿಟ್ಟಿದೆ. ಅಲ್ಲದೆ ಸದ್ಯ ಅಪಾಯದ ಸ್ಥಿತಿಯಲ್ಲಿರುವ ಶ್ರೀಲಂಕಾಗೆ ಹೆಚ್ಚಿನ ಸಾಲ ಮತ್ತು ತೈಲದ ನೆರವನ್ನು ನೀಡಿದೆ. ಅಫ್ಘಾನಿಸ್ಥಾನದಲ್ಲಿ ಹಸಿವಿನಿಂದ ಜನ ನರಳಬಾರದು ಎಂಬ ಕಾರಣಕ್ಕಾಗಿ ಗೋಧಿಯನ್ನು ಕಳುಹಿಸಿಕೊಟ್ಟಿದೆ.

ಈ ಎಲ್ಲ ನೆರವಿನ ಮುಂದುವರಿದ ಅಧ್ಯಾಯವೇ ಈಗಿನ ನೇಪಾಲ ಭೇಟಿ. ಅಲ್ಲಿನ ಪ್ರಧಾನಿ ಬಹದ್ದೂರ್‌ ದೌಬಾ ಜತೆಗೆ ಆರು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಬೌದ್ಧ ಪೂರ್ಣಿಮೆಯ ದಿನವೇ ಲುಂಬಿನಿಗೆ ಭೇಟಿ ನೀಡಿ, ಭಾರತ ಎಂದಿಗೂ ನೇಪಾಲದ ಜತೆಗೆ ನಿಲ್ಲುತ್ತದೆ ಎಂಬ ಭರವಸೆಯನ್ನೂ ನೀಡಿದ್ದಾರೆ. ಸಾಂಸ್ಕೃತಿಕ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಹಭಾಗಿತ್ವದಲ್ಲಿ ಕೆಲಸ ಮಾಡಲು ಒಪ್ಪಿಗೆ ನೀಡಿದ್ದಾರೆ. ಏನೇ ಆಗಲಿ ಭಾರತದ ಈ ವಸುದೈವ ಕುಟುಂಬಕಂ ಎಲ್ಲರಿಗೂ ಮಾದರಿಯಾಗಲಿ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.