ಜಿಲ್ಲಾಧಿಕಾರಿಗಳ ಹಳ್ಳಿ ವಾಸ್ತವ್ಯ ಫ‌ಲಪ್ರದವಾಗಲಿ


Team Udayavani, Jan 23, 2021, 7:00 AM IST

ಜಿಲ್ಲಾಧಿಕಾರಿಗಳ ಹಳ್ಳಿ ವಾಸ್ತವ್ಯ ಫ‌ಲಪ್ರದವಾಗಲಿ

ಸಾಂದರ್ಭಿಕ ಚಿತ್ರ

ಭಾರತದ ಭವಿಷ್ಯವಿರುವುದೇ ಅದರ ಹಳ್ಳಿಗಳಲ್ಲಿ ಎಂಬ ಮಹಾತ್ಮಾ ಗಾಂಧೀಜಿಯವರ ಮಾತು ಎಷ್ಟು ಸತ್ಯವೋ, ಆ ಸತ್ಯದ ಶಕ್ತಿಯನ್ನು ದೇಶವು ಅವಗಣಿಸುತ್ತಲೇ ಬಂದಿದೆ ಎನ್ನುವುದೂ ಅಷ್ಟೇ ಸತ್ಯ. ಅಭಿವೃದ್ಧಿಯೆನ್ನುವುದು ಕೇವಲ ನಗರಪ್ರದೇಶಗಳಿಗೆ ಸೀಮಿತವಾಗುತ್ತಿರುವುದನ್ನು ನೋಡುತ್ತಲೇ ಇದ್ದೇವೆ. ಆದಾಗ್ಯೂ ಡಿಜಿಟಲೀಕರಣದಿಂದಾಗಿ ಈಗ ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಬದಲಾವಣೆಗಳು ಕಾಣಿಸಿಕೊಳ್ಳುತ್ತಿವೆಯಾದರೂ ದಶಕಗಳಿಂದ ಇದ್ದ ಬೃಹತ್‌ ಸಮಸ್ಯೆಗಳು ಈಗಲೂ ಹಾಗೆಯೇ ಇವೆ.

ಶುದ್ಧ ಕುಡಿಯುವ ನೀರಿನ ಅಭಾವ, ಕಳಪೆ ರಸ್ತೆಗಳು, ಅನೈರ್ಮಲ್ಯ, ಬಡತನ ತಾಂಡವವಾಡುತ್ತಲೇ ಇದೆ. ಈ ಕಾರಣಕ್ಕಾಗಿಯೇ, ಈಗ ರಾಜ್ಯ ಸರಕಾರ ಸರಕಾರಿ ಸೇವೆಗಳನ್ನು ಗ್ರಾಮೀಣ ಜನರ ಮನೆ ಬಾಗಿಲಲ್ಲೇ ಕಲ್ಪಿಸುವ ನಿಟ್ಟಿನಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ’ ಎಂಬ ವಿನೂತನ ಕಾರ್ಯಕ್ರಮವನ್ನು ಘೋಷಿಸಿರುವುದು ಸ್ವಾಗತಾರ್ಹ.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಇತರ ಹಿರಿಯ ಅಧಿಕಾರಿಗಳೊಂದಿಗೆ ಪ್ರತೀ ತಿಂಗಳ ಮೂರನೇ ಶನಿವಾರ ಒಂದು ಗ್ರಾಮ ಪಂಚಾಯತ್‌ಗೆ ತೆರಳಿ ಅಲ್ಲಿನ ಜನರ ಸಮಸ್ಯೆಗಳಿಗೆ ಕಿವಿಯಾಗಬೇಕು, ಅಗತ್ಯ ಸೌಲಭ್ಯಕ್ಕೆ ಸ್ಥಳದಲ್ಲೇ ಕ್ರಮ ವಹಿಸಲು ಮುಂದಾಗಬೇಕು ಎನ್ನುವ ಉದ್ದೇಶ ಈ ಕಾರ್ಯಕ್ರಮದ ಹಿಂದಿದೆ.  ಗಮನಾರ್ಹ ಸಂಗತಿಯೆಂದರೆ, ಜಿಲ್ಲಾಧಿಕಾರಿಗಳು ಯಾರ ಮನೆಯಲ್ಲೂ ಆಹಾರ ಸೇವಿಸದೇ ಅಂಗನವಾಡಿ, ಸರಕಾರಿ ಶಾಲೆಯಲ್ಲಿ ಊಟ ಮಾಡಿ ಗುಣಮಟ್ಟ ಪರಿಶೀಲಿಸುವುದು,  ಪ.ಜಾತಿ ಪಂಗಡದ ವಿದ್ಯಾರ್ಥಿನಿಲಯಗಳು ಅಲ್ಲಿದ್ದರೆ ಅಲ್ಲಿಯೂ ಆಹಾರ ಸೇವಿಸುವುದು, ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವಂಥ ವಿಶಿಷ್ಟ ಕಾರ್ಯಕ್ರಮ ಇದಾಗಿದೆ. ಫೆಬ್ರವರಿಯಿಂದಲೇ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಆರಂಭವಾಗಲಿದೆ.

ಈ ಪರಿಕಲ್ಪನೆ ನಿಜಕ್ಕೂ ಶ್ಲಾಘನೀಯವಾದದ್ದು. ಆದರೆ ಇದು ಕೇವಲ ನೆಪ ಮಾತ್ರ ಕಾರ್ಯಕ್ರಮವಾಗಿ ಉಳಿದುಹೋಗಬಾರದು. ಏಕೆಂದರೆ ರಾಜ್ಯಕ್ಕೆ ಗ್ರಾಮವಾಸ್ತವ್ಯ ಕಲ್ಪನೆ ಎನ್ನುವುದು ಹೊಸತೇನೂ ಅಲ್ಲ, ಮುಖ್ಯಮಂತ್ರಿಗಳಿಂದ ಹಿಡಿದು ಅನೇಕ ಜನಪ್ರತಿನಿಧಿಗಳು ಗ್ರಾಮಗಳಿಗೆ ತೆರಳಿದ್ದನ್ನು ನಾವು ನೋಡಿದ್ದೇವೆ. ಆದರೆ ಜನಪ್ರತಿನಿಧಿಗಳು ಬಂದುಹೋದ ಅನಂತರವೂ ಯಾವ ಗ್ರಾಮವೂ ಸರ್ವಾಂಗೀಣ ಅಭಿವೃದ್ಧಿ ಕಂಡ ಉದಾಹರಣೆಗಳಿಲ್ಲ. ಇನ್ನು ಜನಪ್ರತಿನಿಧಿಗಳು ಬರುತ್ತಾರೆಂದಾಕ್ಷಣ ಅವಸರವಾಗಿ ಗ್ರಾಮಗಳನ್ನು ಸ್ವತ್ಛಗೊಳಿಸುವುದು, ರಸ್ತೆಗಳಿಗೆ ತಾತ್ಕಾಲಿಕ ತೇಪೆ ಹಚ್ಚುವಂಥ ಕಾರ್ಯಗಳು ನಡೆಯುತ್ತಿರುತ್ತವೆ. ಈಗ ಜಿಲ್ಲಾಧಿಕಾರಿಗಳ ವಾಸ್ತವ್ಯದ ವಿಚಾರವೂ ಇದೇ ಮಾದರಿಯಲ್ಲಿ ಸಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಇದು ಜಿಲ್ಲಾಧಿಕಾರಿಗಳಿಗೆ ದೊರೆತ ಅಪೂರ್ವ ಅವಕಾಶವೂ ಹೌದು. ಹಳ್ಳಿಗಳಲ್ಲಿ ವಾಸ್ತವ್ಯ ಹೂಡುವುದರಿಂದ ಅಂಗನವಾಡಿ, ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಆಹಾರ ಸೇವಿಸುವುದರಿಂದ ಅಲ್ಲಿನ ಕುಂದುಕೊರತೆಗಳ ವಾಸ್ತವ ದರ್ಶನವೂ ಆಗುತ್ತದೆ. ಗ್ರಾಮೀಣರ ಸಮಸ್ಯೆಗಳ ಆಳ-ಅಗಲಗಳನ್ನು ಅರ್ಥಮಾಡಿಕೊಳ್ಳಲೂ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿಯೇ, ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ’ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಕ್ಕೆ ಬರುವಂತೆನೋಡಿಕೊಳ್ಳಬೇಕಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.