ಮತಯಂತ್ರ ದೂಷಣೆ: ಪ್ರಜಾತಂತ್ರ ವ್ಯವಸ್ಥೆಗೆ ಅಪಾಯಕಾರಿ 


Team Udayavani, Jan 24, 2019, 12:30 AM IST

q-8.jpg

ಮತಯಂತ್ರ ಕುರಿತಾದ ವಿವಾದ ಮತ್ತೆ ಜೀವ ಪಡೆದುಕೊಂಡಿದೆ. ಸೈಯ್ಯದ್‌ ಶುಜಾ ಎಂಬ ವ್ಯಕ್ತಿ ವಿದೇಶದಲ್ಲಿದ್ದುಕೊಂಡು ಸ್ಕೈಪ್‌ ಮೂಲಕ ನಡೆಸಿದ ಸುದ್ದಿಗೋಷ್ಠಿಯಲ್ಲಿ 2014ರ ಲೋಕಸಭಾ ಚುನಾವಣೆಯಲ್ಲಿ ಮತಯಂತ್ರಗಳನ್ನು ಹ್ಯಾಕ್‌ ಮಾಡಲಾಗಿತ್ತು. ಈ ತಂಡದಲ್ಲಿ ನಾನೂ ಇದ್ದೆ. ನನ್ನ ತಂಡದಲ್ಲಿದ್ದ ಇತರ ಸದಸ್ಯರನ್ನು ಸಾಯಿಸಲಾಗಿದೆ. ನಾನು ಪಾರಾಗಿ ಬಂದು ವಿದೇಶದಲ್ಲಿ ಆಶ್ರಯ ಪಡೆದುಕೊಂಡಿದ್ದೇನೆ ಎಂದಿದ್ದಾನೆ. ಈ ಪತ್ರಿಕಾ ಗೋಷ್ಠಿಯಲ್ಲಿ ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌ ಕೂಡಾ ಉಪಸ್ಥಿತರಿದ್ದರು. ಈ ಕಾರಣಕ್ಕೆ ಶುಜಾ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮತಯಂತ್ರದ ಮೇಲಿನ ಆರೋಪ ಇಂದು ನಿನ್ನೆಯದ್ದಲ್ಲ. ಪ್ರತಿ ಚುನಾವಣೆಯಲ್ಲಿ ಸೋತ ಪಕ್ಷಗಳು ತಮ್ಮ ಸೋಲಿಗೆ ಮತಯಂತ್ರಗಳನ್ನು ತಿರುಚಿದ್ದೇ ಕಾರಣ ಎಂದು ದೂಷಿಸುವುದು ಮಾಮೂಲಿಯಾಗಿದೆ. ಆದರೆ ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಾಗ ಮಾತ್ರ ಯಾರಿಗೂ ಮತಯಂತ್ರಗಳಲ್ಲಿ ದೋಷ ಕಾಣಿಸಿರಲಿಲ್ಲ. 

ಸೈಯ್ಯದ್‌ ಶುಜಾ ಎಂಬ ವ್ಯಕ್ತಿ ಇನ್ನೊಂದು ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜಾಗುತ್ತಿರುವಾಗ ದಿಢೀರ್‌ ಎಂದು ಕಾಣಿಸಿಕೊಂಡು ಮತಯಂತ್ರಗಳ ಮೇಲೆ ದೋಷಾರೋಪ ಹೊರಿಸಿದ್ದು ಏಕೆ? ಹಾಗೊಂದು ವೇಳೆ 2014ರಲ್ಲಿ ಮತಯಂತ್ರಗಳನ್ನು ತಿರುಚಲಾಗಿದ್ದರೆ ಆಗಲೇ ಅದನ್ನು ಬಹಿರಂಗ ಪಡಿಸಬಹುದಿತ್ತಲ್ಲವೆ? ಈ ಗೋಷ್ಠಿಯಲ್ಲಿ ಕಾಂಗ್ರೆಸ್‌ ನಾಯಕ ಏಕೆ ಉಪಸ್ಥಿತರಿದ್ದರು? ಇದಕ್ಕೆಲ್ಲ ಉತ್ತರ ಕಂಡುಕೊಳ್ಳುವ ಅಗತ್ಯವಿದೆ. ಮೇಲ್ನೋಟಕ್ಕೆ ಇದು ಒಂದು ರಾಜಕೀಯ ಷಡ್ಯಂತ್ರದಂತೆ ಕಾಣಿಸುತ್ತಿದೆಯಷ್ಟೆ. 

2014 ಲೋಕಸಭಾ ಚುನಾವಣೆಯ ಐತಿಹಾಸಿಕ ಫ‌ಲಿತಾಂಶಕ್ಕೆ ಕಾರಣ ಏನು ಎನ್ನುವುದರ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳಾಗಿವೆ. ಬಲವಾಗಿ ಬೀಸಿದ ಆಡಳಿತ ವಿರೋಧಿ ಅಲೆ ಮತ್ತು ಮೋದಿಯವರ ಚರಿಷ್ಮಾ ಕಾಂಗ್ರೆಸ್‌ ನೇತೃತ್ವದ ಯುಪಿಎಯನ್ನು ಧೂಳೀಪಟ ಮಾಡಿತ್ತು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇದೀಗ ಇನ್ನೊಂದು ಚುನಾವಣೆ ಹತ್ತಿರವಾಗುತ್ತಿರು ವಾಗಲಾದರೂ ವಿಪಕ್ಷಗಳು ಹಿಂದಿನ ಸೋಲಿಗೆ ಕಾರಣ ಏನು ಎನ್ನುವುದರ ಕುರಿತು ಆತ್ಮಾವಲೋಕನ ಮಾಡುವುದು ಬಿಟ್ಟು, ಈ ರೀತಿ ಕಾಗಕ್ಕ -ಗುಬ್ಬಕ್ಕ ಕತೆ ಕಟ್ಟಿ ಅದನ್ನು ಪ್ರಚಾರ ಮಾಡಲು ನಾನಾ ಗಿಮಿಕ್‌ಗಳನ್ನು ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್‌ನಂಥ ಪಕ್ಷ ಈ ರೀತಿಯ ಸ್ಟಂಟ್‌ಗಳ ಮೊರೆ ಹೋಗುವುದನ್ನು ಬಿಟ್ಟು ಆಡಳಿತ ಪಕ್ಷದ ವಿರುದ್ಧ ತಳಮಟ್ಟದ ತಯಾರಿ ಮಾಡಿಕೊಳ್ಳುವುದರತ್ತ ಗಮನ ಹರಿಸುವುದರಲ್ಲಿ ಅದರ ಭವಿಷ್ಯವಿದೆ. 

ಭಾರತದ ಚುನಾವಣಾ ಆಯೋಗ ಬಳಸುತ್ತಿರುವ ಮತಯಂತ್ರ ಸಂಪೂರ್ಣ ಸುರಕ್ಷಿತ ಎನ್ನುವುದು ಒಂದಕ್ಕಿಂತ ಹೆಚ್ಚು ಸಲ ಸಾಬೀತಾಗಿದೆ. ನ್ಯಾಯಾಲಯಗಳು ಕೂಡಾ ಮತಯಂತ್ರಗಳ ಸುರಕ್ಷತೆಯ ಬಗ್ಗೆ ಯಾವ ಅನುಮಾನವನ್ನೂ ಹೊಂದಿಲ್ಲ. ಮತಯಂತ್ರಗಳ ಮೇಲೆ ಓತಪ್ರೋತವಾಗಿ ಆರೋಪಗಳನ್ನು ಮಾಡಿದ ವಿಪಕ್ಷಗಳೂ ನ್ಯಾಯಾಲಯದಲ್ಲಿ ತಿರುಚಿ ತೋರಿಸುವ ಪ್ರಾತ್ಯಕ್ಷಿಕೆಯನ್ನು ನಡೆಸುವ ಸವಾಲು ಸ್ವೀಕರಿಸುವ ದಿಟ್ಟತನವನ್ನು ತೋರಿಸಿಲ್ಲ. ಹೀಗಿರುವಾಗ ಚುನಾವಣೆ ಸನ್ನಿಹಿತವಾಗುತ್ತಿರುವಾಗ ಮತ್ತೆ ಹಳೇ ಆರೋಪವನ್ನು ಪುನರಾವರ್ತಿಸುವುದರ ಮರ್ಮ ಏನೆಂದು ಅರಿಯದಷ್ಟು ಮುಗ್ಧರಲ್ಲ ಮತದಾರರು. 

ಸುಮಾರು 20 ದೇಶಗಳಲ್ಲಿ ಮತಯಂತ್ರಗಳನ್ನು ಬಳಸಲಾಗುತ್ತದೆ. ಈ ಎಲ್ಲ ಮತಯಂತ್ರಗಳಿಗಿಂತ ಭಾರತದ ಮತಯಂತ್ರ ಹೆಚ್ಚು ಸುರಕ್ಷಿತ ಎಂದು ಸಾಬೀತಾಗಿದೆ. ಕೆಲವು ದೇಶಗಳು ನಮ್ಮ ಮತಯಂತ್ರಗಳ ತಂತ್ರಜ್ಞಾನವನ್ನೂ ಕೇಳಿವೆ. ಹಾಗೆಂದು ನಮ್ಮ ಮತಯಂತ್ರಗಳು ಪರಿಪೂರ್ಣ ಎನ್ನುವುದು ಸರಿಯಲ್ಲ. ಮತಯಂತ್ರಗಳನ್ನು ತಿರುಚಿ ಚುನಾವಣೆ ಫ‌ಲಿತಾಂಶವನ್ನು ಬದಲಾಯಿಸುವುದು ಸಾಧ್ಯವಿಲ್ಲ ಎನ್ನುವುದು ನಿಜವಾಗಿದ್ದರೂ ಮತದಾನದ ಸಂದರ್ಭದಲ್ಲಿ ಮತಯಂತ್ರ ಮತ್ತು ವಿವಿಪ್ಯಾಟ್‌ಗಳಲ್ಲಿ ಕಾಣಿಸಿಕೊಳ್ಳುವ ತಾಂತ್ರಿಕ ದೋಷಗಳನ್ನು ಸರಿಪಡಿಸಲೇಬೇಕಾದ ಅನಿವಾರ್ಯತೆ ಇದೆ. ಇವೆಲ್ಲ ಸರಳವಾಗಿ ಸರಿಪಡಿಸಬಹುದಾದ ತಾಂತ್ರಿಕ ದೋಷಗಳು. ಅದೇ ರೀತಿ ಮತಯಂತ್ರಗಳ ನಿರ್ವಹಣೆಯನ್ನೂ ಗಂಭೀರವಾಗಿ ಪರಿಗಣಿಸಬೇಕು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮತಯಂತ್ರವೊಂದು ರಸ್ತೆ ಬದಿಯಲ್ಲಿ ಸಿಕ್ಕಿದ್ದು, ಮತಯಂತ್ರ ಇಟ್ಟಿದ್ದ ಕೊಠಡಿ ಸಮೀಪ ಸಂಶಯಾಸ್ಪದ ವ್ಯಕ್ತಿಗಳು ಸುಳಿದಾಡಿದ್ದು ಈ ಮಾದರಿಯ ಪ್ರಕರಣಗಳು ಪಾರದರ್ಶಕ ಮತ್ತು ಮುಕ್ತ ಚುನಾವಣೆ ನಡೆಸುವ ಪ್ರಕ್ರಿಯೆಯ ಮೇಲೆ ಸಂಶಯದ ನೆರಳು ಬೀಳುವಂತೆ ಮಾಡುತ್ತವೆೆ. ಇಂಥ ತಾಂತ್ರಿಕ ದೋಷಗಳನ್ನೇ ಮತಯಂತ್ರವನ್ನು ತಿರುಚುವ ಪ್ರಯತ್ನ ಎನ್ನುವವರು ರಾಷ್ಟ್ರೀಯ ಹಿತಾಸಕ್ತಿ, ಪ್ರಜಾತಂತ್ರ ವ್ಯವಸ್ಥೆ ಎರಡಕ್ಕೂ ಅಪಾಯ ತಂದೊಡ್ಡುತ್ತಿದ್ದಾರೆ. ಇಂದು ಮತಯಂತ್ರ ಸರಿಯಿಲ್ಲ ಎನ್ನುವವರು ನಾಳೆ ಮತಪತ್ರಗಳ ಮೇಲೂ ದೋಷಾರೋಪ ಹೊರಿಸಬಹುದು. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.