ಮತದಾರರ ಗೌಪ್ಯತೆ: ಪಾರದರ್ಶಕವಾಗಿ ತನಿಖೆ ನಡೆಯಲಿ


Team Udayavani, Nov 18, 2022, 6:20 AM IST

ಮತದಾರರ ಗೌಪ್ಯತೆ: ಪಾರದರ್ಶಕವಾಗಿ ತನಿಖೆ ನಡೆಯಲಿ

ಬೆಂಗಳೂರಿನ 28 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ದೊಡ್ಡ ಗದ್ದಲವೇ ಏರ್ಪಟ್ಟಿದ್ದು, ರಾಜ್ಯ ಸರಕಾರ ಭಾರೀ ಚುನಾವಣ ಅಕ್ರಮ ಮಾಡಿದೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ. ಗುರುವಾರ ಬೆಳಗ್ಗೆಯಿಂದಲೂ ರಾಜ್ಯದಲ್ಲಿ ಇದೇ ಸುದ್ದಿ ದೊಡ್ಡ ಸದ್ದು ಮಾಡಿದ್ದು, ಚುನಾವಣ ಅಕ್ರಮ ಮಾಡುವ ಸಲುವಾಗಿಯೇ ಮತದಾರರ ಗೌಪ್ಯತೆ ಹರಣ ಮಾಡಲಾಗಿದೆ ಎಂದು ಕಾಂಗ್ರೆಸ್‌ ನೇರವಾಗಿಯೇ ಆರೋಪಿಸುತ್ತಿದೆ.

ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ಹೊತ್ತಿರುವ ಮುಖ್ಯಮಂತ್ರಿ­ಗಳ ಮೇಲೆಯೇ ಕಾಂಗ್ರೆಸ್‌ ನಾಯಕರು ಆರೋಪ ಮಾಡುತ್ತಿದ್ದು, ಪ್ರಕರಣ ಗಂಭೀರತೆ ಪಡೆದುಕೊಂಡಿದೆ. ಅಲ್ಲದೆ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸಿಎಂ ವಿರುದ್ಧವೇ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂಬುದು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಹಿತ ಇತರ ನಾಯಕರ ಆಗ್ರಹವೂ ಆಗಿದೆ. ಅಲ್ಲದೆ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದೂ ಆಗ್ರಹಿಸಲಾಗಿದೆ. ಹಾಗೆಯೇ ಬೆಂಗಳೂರಿನ ಸಚಿವರೊಬ್ಬರ ಆಪ್ತರೂ ಇದರಲ್ಲಿ ಭಾಗಿಯಾಗಿ­ದ್ದಾರೆ ಎಂಬುದು ಕಾಂಗ್ರೆಸ್‌ನ ಆರೋಪವಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇದು ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಹಿಂದಿನ ಸರಕಾರಗಳೂ ಖಾಸಗಿಯವರಿಂದ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಸಿವೆ. ಈ ಬಾರಿ ಏನಾದರೂ ಖಾಸಗಿ ಸಂಸ್ಥೆಯ ಕಡೆಯಿಂದ ತಪ್ಪಾಗಿದ್ದರೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಹಾಗೆಯೇ ಕಾಂಗ್ರೆಸ್‌ನವರ ಆರೋಪದ ಬೆನ್ನಲ್ಲೇ ಬಿಬಿಎಂಪಿಯು ಖಾಸಗಿ ಸಂಸ್ಥೆ ಚಿಲುಮೆಗೆ ನೀಡಲಾಗಿದ್ದ ಪರವಾನಿಗೆಯನ್ನು ರದ್ದು ಮಾಡಿದೆ. ಷರತ್ತುಗಳನ್ನು ಉಲ್ಲಂ ಸಿರುವುದರಿಂದ ಈ ಕ್ರಮ ತೆಗೆದು­ಕೊಳ್ಳಲಾಗಿದೆ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಆದರೂ ದಿಢೀರ್‌ ಆಗಿ ರದ್ದು ಮಾಡಿದ್ದು ಏಕೆ ಎಂಬ ಪ್ರಶ್ನೆ ವಿಪಕ್ಷದ ಕಡೆಯಿಂದಲೂ ಕೇಳಿಬಂದಿದೆ.  ಈ ಎಲ್ಲ ಸಂಗತಿಗಳನ್ನು ಗಮನಿಸಿದರೆ ಪ್ರಕರಣ ಹೆಚ್ಚು ಗಂಭೀರವಾಗಿದೆ ಎಂದೆನಿಸುತ್ತಿದೆ. ಅಲ್ಲದೇ ಯಾವುದೇ ಸರಕಾರವಿರಲಿ, ಮತದಾರರ ಗೌಪ್ಯತೆಗೆ ಭಂಗ ಬರಬಾರದು. ನಮ್ಮ ದೇಶದಲ್ಲಿ ಮತದಾನ ಎಂಬುದು ಅತ್ಯಂತ ಪವಿತ್ರವಾದ ಕರ್ತವ್ಯವಾಗಿದ್ದು, ಇಲ್ಲಿ ಗೌಪ್ಯತೆಗೆ ಹೆಚ್ಚಿನ ಮನ್ನಣೆ ನೀಡಲಾಗಿದೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಗೌಪ್ಯತೆಗೆ ಭಂಗ ಬಂದಿದೆ ಎಂಬ ಆರೋಪ ಬಂದಿದೆ ಎಂದಾದರೆ ಈ ಬಗ್ಗೆ ತನಿಖೆ ನಡೆಸಲೇಬೇಕಾಗುತ್ತದೆ.

ಸತ್ಯ ಹೊರಬರಬೇಕು ಎಂಬ ದೃಷ್ಟಿಯಿಂದ ಕೇಂದ್ರ ಚುನಾವಣ ಆಯೋಗವೂ ಈ ಬಗ್ಗೆ ತನಿಖೆ ನಡೆಸುವುದು ಸೂಕ್ತವಾಗುತ್ತದೆ. ರಾಜ್ಯ ಸರಕಾರದ ವಿರುದ್ಧವೇ ಆರೋಪ ಮಾಡಿರುವುದರಿಂದ ಇಲ್ಲಿನ ಪೊಲೀ­ಸರು ತನಿಖೆ ನಡೆಸಿ, ಯಾವುದೇ ಫ‌ಲಿತಾಂಶ ಬಂದರೂ ಆಗ ರಾಜಕೀಯ ಗದ್ದಲಕ್ಕೆ ಕಾರಣವಾಗುವುದು ಸಹಜ. ಹೀಗಾಗಿ ಸ್ವತಂತ್ರವಾಗಿಯೇ ತನಿಖೆ ಮಾಡಿಸಿ ಸತ್ಯವನ್ನು ಹೊರತರಬೇಕಾಗಿದೆ. ಈ ವಿಚಾರದಲ್ಲಿ ಯಾರೂ ಮೂಗು ತೂರಿಸದೆ ಚುನಾವಣ ಆಯೋಗಕ್ಕೆ ತನಿಖೆಯ ಹೊಣೆ ಹೊರಿಸಬೇಕು. ಅವರು ಯಾರಿಂದ ಬೇಕಾದರೂ ತನಿಖೆ ಮಾಡಿಸಿ ನಿಜ ಸಂಗತಿ ಬಯಲಿಗೆಳೆಯಲಿ. ಈ ಮೂಲಕ ಚುನಾವಣ ವ್ಯವಸ್ಥೆ ಮೇಲಿನ ಜನರ ನಂಬಿಕೆ ಮತ್ತಷ್ಟು ಗಟ್ಟಿಯಾಗುವಂತೆ ಮಾಡಬೇಕು.

ಟಾಪ್ ನ್ಯೂಸ್

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರತ್ಯೇಕತಾವಾದಕ್ಕೆ ಆಸ್ಪದ ಬೇಡ ಖಲಿಸ್ಥಾನಿ ಬೆಂಬಲಿಗರನ್ನು ಮಟ್ಟ ಹಾಕಿ

ಪ್ರತ್ಯೇಕತಾವಾದಕ್ಕೆ ಆಸ್ಪದ ಬೇಡ ಖಲಿಸ್ಥಾನಿ ಬೆಂಬಲಿಗರನ್ನು ಮಟ್ಟ ಹಾಕಿ

bjp cong

ಸಂಪಾದಕೀಯ : ರಾಜಕೀಯ ಪಕ್ಷಗಳ ಇಬ್ಬಂದಿತನ – ಪ್ರಬುದ್ಧತೆ ಅಲ್ಲ

ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ

ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಖಲಿಸ್ಥಾನಿಯರ ದಾಂಧಲೆ ಕಠಿನ ಕ್ರಮ ತೆಗೆದುಕೊಳ್ಳಿ

ಖಲಿಸ್ಥಾನಿಯರ ದಾಂಧಲೆ ಕಠಿನ ಕ್ರಮ ತೆಗೆದುಕೊಳ್ಳಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.