ಮತದಾನ ಪವಿತ್ರ ಕರ್ತವ್ಯ


Team Udayavani, Apr 18, 2019, 6:00 AM IST

c-14

ಪ್ರಜಾತಂತ್ರದ ಉತ್ಸವ ಎಂದೇ ಅರಿಯಲ್ಪಡುವ ಚುನಾವಣೆಯ ಎರಡನೇ ಹಂತದ ಮತದಾನ ಗುರುವಾರ ನಡೆಯಲಿದೆ. ಒಟ್ಟು ಏಳು ಹಂತದ ಮತದಾನ ಪ್ರಕ್ರಿಯೆಯ ಮೊದಲ ಹಂತದ ಮತದಾನ ಎ.11ರಂದು ನಡೆದಿದೆ. ಗುರುವಾರ 12 ರಾಜ್ಯಗಳ 97 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತದೆ. ಏಳು ಹಂತಗಳಲ್ಲಿ ಕರ್ನಾಟಕದ ಪಾಲಿಗೆ ಇದು ಮೊದಲ ಹಂತದ ಚುನಾವಣೆ. ರಾಜ್ಯದ 14 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಬೇಕು. ಭಾರತಕ್ಕೆ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಎಂಬ ಹಿರಿಮೆ ಇದೆ. ಹೀಗಾಗಿ ಇಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆ ಜಗತ್ತಿನ ಗಮನ ಸೆಳೆಯುತ್ತದೆ. 29 ರಾಜ್ಯಗಳು, 9 ಕೇಂದ್ರಾಡಳಿತ ಪ್ರದೇಶಗಳನ್ನೊಳಗೊಂಡಿರುವ ಬೃಹತ್‌ ದೇಶದ ಚುನಾವಣೆ ನಡೆಸುವುದು ಭಾರೀ ಸವಾಲಿನ ಕೆಲಸವಾದರೂ ಚುನಾವಣಾ ಆಯೋಗ ಈ ಕೆಲಸವನ್ನು ಸಾಧ್ಯವಾದಷ್ಟು ಸಮರ್ಥವಾಗಿ ನಿಭಾಯಿಸುತ್ತಿದೆ ಎನ್ನುವುದು ನಮ್ಮ ಹೆಗ್ಗಳಿಕೆ. ಇಷ್ಟರ ತನಕ ನಡೆದಿರುವ ಚುನಾವಣೆಗಳು ಸಂಸದೀಯ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ನಮ್ಮ ಸಂವಿಧಾನ ಕರ್ತರು ಇಟ್ಟ ನಂಬಿಕೆಯನ್ನು ಎತ್ತಿ ಹಿಡಿದಿವೆ. ಚುನಾವಣೆಯಿಂದ ಚುನಾವಣೆಗೆ ನಾವು ಪ್ರಬುದ್ಧರಾಗುತ್ತಿದ್ದೇವೆ.

18 ವರ್ಷ ಮೇಲ್ಪಟ್ಟಿರುವ ನಾಗರಿಕರಿಗೆ ಸಂವಿಧಾನದತ್ತವಾಗಿ ಮತದಾನದ ಹಕ್ಕು ಪ್ರಾಪ್ತವಾಗಿದೆ. ಅದು ಹಕ್ಕು ಮಾತ್ರವಲ್ಲದೆ ಜವಾಬ್ದಾರಿ ಮತ್ತು ಕರ್ತವ್ಯ. ನಮ್ಮದು ಚಲನಶೀಲ ಪ್ರಜಾಪ್ರಭುತ್ವವಾಗಿದ್ದರೂ ಎಲ್ಲರೂ ಮತಹಾಕುವಂತೆ ಮಾಡುವಲ್ಲಿ ಮಾತ್ರ ವಿಫ‌ಲರಾಗಿದ್ದೇವೆ. ಇದರ ಹೊರತಾಗಿಯೂ, ಚುನಾವಣಾ ಆಯೋಗ, ಸರ್ಕಾರ, ವಿವಿಧ ಸರ್ಕಾರೇತರ ಸಂಘಟನೆಗಳು ಮಾಡಿದ ಸತತ ಪ್ರಯತ್ನದ ಫ‌ಲವಾಗಿ ಈಗ ಜನರಲ್ಲಿ ಮತದಾನದ ಜಾಗೃತಿ ಉಂಟಾಗಿರುವುದು ಸಕಾರಾತ್ಮಕ ಬೆಳವಣಿಗೆ. ಚುನಾವಣೆ ಆಯೋಗದ ಸ್ವೀಪ್‌ನಂಥ ಕಾರ್ಯಕ್ರಮಗಳು ಹಾಗೂ ಮತದಾನಕ್ಕೆ ಪೂರಕವಾದ ವಾತಾವರಣ ನಿರ್ಮಿಸಲು ಕೈಗೊಂಡಿರುವ ವಿವಿಧ ಕ್ರಮಗಳಿಂದಾಗಿ ಕಳೆದ ಕೆಲವು ಚುನಾವಣೆಗಳಲ್ಲಿ ಮತದಾನ ಪ್ರಮಾಣ ಹೆಚ್ಚುತ್ತಿರುವುದು ಕಂಡು ಬಂದಿದೆ. ನಿರ್ದಿಷ್ಟವಾಗಿ ವಿದ್ಯಾವಂತ ಮತದಾರರಲ್ಲಿ ಮತದಾನದ ಮಹತ್ವದ ಅರಿವು ಮೂಡಿಸಲು ಮಾಡಿರುವ ಪ್ರಯತ್ನಗಳು ಶ್ಲಾಘನೀಯ.

ನಗರವಾಸಿಗಳು ಮತದಾರರು ಮತ ಹಾಕುವುದಿಲ್ಲ ಎನ್ನುವುದು ಸಾಮಾನ್ಯವಾದ ದೂರು. ಮತದಾನದ ದಿನದ ರಜೆಯನ್ನು ವಿಶ್ರಾಂತಿಯ ದಿನವೆಂದು, ಶಾಪಿಂಗ್‌ ಅಥವಾ ಪಿಕ್‌ನಿಕ್‌ ದಿನವೆಂದು ಪರಿಗಣಿಸುವ ಜಾಯಮಾನ ನಗರ ಪ್ರದೇಶಗಳಲ್ಲಿ ವಾಸವಾಗಿರುವವರಲ್ಲಿ ಇದೆ. ಅದೇ ರೀತಿ ನನ್ನ ಒಂದು ಮತದಿಂದ ಏನಾಗುತ್ತದೆ ಎಂದು ಭಾವಿಸಿ ಮತದಾನವನ್ನು ತಪ್ಪಿಸುವವರೂ ಇದ್ದಾರೆ. ಭಾರತದಂಥ 90 ಕೋಟಿ ಮತದಾರರಿರುವ ದೇಶದಲ್ಲಿ ಕನಿಷ್ಠ ಕೆಲವು ಕೋಟಿ ಮತದಾರರು ಈ ಮನೋಧರ್ಮ ಹೊಂದಿದರೆ ಅದು ಬೀರುವ ಪರಿಣಾಮ ಬಹಳ ದೊಡ್ಡದು. ಪ್ರಜಾತಂತ್ರದಲ್ಲಿ ಪ್ರತಿಯೊಬ್ಬರ ಮತಕ್ಕೂ ಬಹಳ ಮೌಲ್ಯವಿದೆ. ನಮ್ಮ ಭವಿಷ್ಯವನ್ನು ನಿರ್ಧರಿಸುವುದು ಈ ಮತ.

ಈಗಿನ ರಾಜಕೀಯ ಹೊಲಸಾಗಿದೆ ಎನ್ನುವುದು ನಿಜ. ಸ್ಪರ್ಧಿಸುವ ಅಭ್ಯರ್ಥಿಗಳೆಲ್ಲ ಶೇ. 100 ಯೋಗ್ಯರೂ ಸಮರ್ಥರೂ ಅಲ್ಲ ಎನ್ನುವುದೂ ನಿಜವೇ. ಆದರೆ ಇವರಲ್ಲೇ ಉತ್ತಮರನ್ನು ಆರಿಸುವ ಅನಿವಾರ್ಯತೆ ನಮ್ಮ ಮುಂದಿದೆ. ಅಭ್ಯರ್ಥಿಗಳು ಸರಿ ಇಲ್ಲ ಎಂದು ನಾವು ಮತದಾನ ಮಾಡದೇ ಹೋದರೆ ಅಯೋಗ್ಯರೇ ಆರಿಸಿ ಬರುವ ಅಪಾಯ ಇದೆ. ವಿಧಾನಸಭೆ ಅಥವಾ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗೂ ಲೋಕಸಭಾ ಚುನಾವಣೆಗೂ ಮೂಲಭೂತವಾಗಿ ಕೆಲವು ವ್ಯತ್ಯಾಸಗಳಿವೆ. ಲೋಕಸಭಾ ಚುನಾವಣೆ ಒಟ್ಟಾರೆ ದೇಶದ ಭವಿಷ್ಯ ಮತ್ತು ಹಿತದೃಷ್ಟಿಯನ್ನು ಹೊಂದಿರುತ್ತದೆ. ಈ ಸಂದರ್ಭದಲ್ಲಿ ಸ್ಥಳೀಯ ಕೆಲವು ವಿಚಾರಗಳೂ ಗೌಣವಾಗುವುದೂ ಇದೆ. ಮುಂದಿನ ಐದು ವರ್ಷದಲ್ಲಿ ದೇಶ ಯಾವ ದಿಶೆಯಲ್ಲಿ ಸಾಗಬೇಕು ಎಂದು ನಿರ್ಧರಿಸುವ ಪ್ರಮುಖ ಅಸ್ತ್ರ ನಮ್ಮ ಮತ. ನಾವು ಮತ ಹಾಕದಿದ್ದರೆ ಮತ ಹಾಕಿದ ಬೇರೆಯವರು ನಮ್ಮ ಭವಿಷ್ಯವನ್ನು ನಿರ್ಧರಿಸಿದಂತಾಗುತ್ತದೆ.

ದೇಶದಲ್ಲಿ ಏನಾದರೂ ಧನಾತ್ಮಕವಾದ ಬದಲಾವಣೆಯನ್ನು ಕಾಣಬೇಕಾದರೆ ಸದೃಢ, ಸುಸ್ಥಿರ ಸರಕಾರ ಇರುವುದು ಅಗತ್ಯ.ಚುನಾವಣೆ ನಮಗೆ ಈ ಸರಕಾರವನ್ನು ಆರಿಸುವ ಅವಕಾಶವನ್ನು ಕೊಡುತ್ತದೆ. ದೇಶದಲ್ಲಿ ಅದು ಸರಿ ಇಲ್ಲ ಇದು ಸರಿ ಇಲ್ಲ ಎಂದು ಲೋಪದೋಷಗಳ ಕುರಿತು ಸದಾ ಗೊಣಗುತ್ತಿರುತ್ತೇವೆ. ಆದರೆ ಈ ಲೋಪಗಳಿಗೆಲ್ಲ ಪರೋಕ್ಷವಾಗಿ ನಾವೇ ಕಾರಣ ಎನ್ನುವುದನ್ನು ತಿಳಿದುಕೊಂಡಿರಬೇಕು. ನಾವು ಚುನಾವಣೆ ಸಂದರ್ಭದಲ್ಲಿ ಯೋಗ್ಯ ಅಭ್ಯರ್ಥಿಯನ್ನು ಆರಿಸಿ ಕಳುಹಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ನನ್ನ ಒಂದು ಮತದಿಂದ ಏನಾಗುತ್ತದೆ ಎಂದು ಭಾವಿಸಿ ಮತದಾನ ಮಾಡದಿದ್ದವರಿಗೆ ಅನಂತರ ವ್ಯವಸ್ಥೆಯ ಲೋಪದೋಷಗಳನ್ನು ಪ್ರಶ್ನಿಸುವ ನೈತಿಕತೆ ಇರುವುದಿಲ್ಲ. ಹೀಗಾಗಿ ಯಾವುದೇ ನೆಪಗಳನ್ನು ಹೇಳದೆ ಮತದಾನ ಮಾಡುವ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.