ಖಾಸಗಿ ಶಾಲೆಗಳ ಎಚ್ಚರಿಕೆ; ಸೌಹಾರ್ದಯುತ ಪರಿಹಾರ ಮುಖ್ಯ


Team Udayavani, Nov 27, 2020, 5:55 AM IST

ಖಾಸಗಿ ಶಾಲೆಗಳ ಎಚ್ಚರಿಕೆ; ಸೌಹಾರ್ದಯುತ ಪರಿಹಾರ ಮುಖ್ಯ

ಸಾಂದರ್ಭಿಕ ಚಿತ್ರ

ಶುಲ್ಕ ಪಾವತಿಸದೆ ಇದ್ದರೆ ನವೆಂಬರ್‌ 30ಕ್ಕೆ ಆನ್‌ಲೈನ್‌ ತರಗತಿ ಬಂದ್‌ ಮಾಡುವುದಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಎಚ್ಚರಿಕೆ ನೀಡಿದೆ. ಇದು ಮೇಲ್ನೋಟಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಹಾಕಿದ ಬೆದರಿಕೆ ಯಂತೆ ಕಾಣಿಸಿದರೂ, ಇದು ಸರಕಾರಕ್ಕೆ ಹಾಕಿದ ಸವಾಲು ಎನ್ನಲಡ್ಡಿಯಿಲ್ಲ.

ಕೊರೊನಾ ಅವಧಿಯಲ್ಲಿ ಪಾಲಕರು ಹೇಗೆ ಸಮಸ್ಯೆಯಲ್ಲಿದ್ದಾರೋ, ಹಾಗೆಯೇ ಖಾಸಗಿ ಶಾಲೆಗಳೂ ಹಿಂದೆಂದೂ ಕಾಣದ ಸಂಕಷ್ಟವನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸರಕಾರದ ಪಾತ್ರ ಮಹತ್ವದ್ದು. ಆನ್‌ಲೈನ್‌ ತರಗತಿಗಳ ಶುಲ್ಕದ ವಿಚಾರಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ನಿರ್ವಹಣೆ, ಮಕ್ಕಳ ಶೈಕ್ಷಣಿಕ ಭವಿಷ್ಯ ಹಾಗೂ ಪೋಷಕರ ಅರ್ಥಿಕ ಸಂಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಸರಕಾರ ಸಮತ್ವದ ಹೆಜ್ಜೆ ಇಡಬೇಕಾಗಿದೆ.

ಕೊರೊನಾ ಕಾರಣಕ್ಕೆ ಲಾಕ್‌ಡೌನ್‌ ಘೋಷಣೆಯಾದ ಬಳಿಕ ಶಾಲೆಗಳು ಸ್ಥಗಿತಗೊಂಡಾಗಿನಿಂದ ಆನ್‌ಲೈನ್‌ ತರಗತಿಗಳನ್ನು ನಡೆಸುವ ವಿಚಾರದಲ್ಲಿ ಖಾಸಗಿ ಶಾಲೆಗಳು, ಸರಕಾರ ಮತ್ತು ಪೋಷಕರ ನಡುವೆ ತ್ರಿಕೋನ ಗೊಂದಲ ನಿರ್ಮಾಣವಾಗಿ ವಿಷಯ ನ್ಯಾಯಾಲಯದ ಅಂಗಳಕ್ಕೂ ತಲುಪಿತು. ಈಗ ಮತ್ತೆ ಎದ್ದಿರುವ ಶುಲ್ಕ ಗೊಂದಲ ಮತ್ತೂಂದು ಸುತ್ತಿನ ಕಾನೂನು ಸಂಘರ್ಷಕ್ಕೆ ಎಡೆ ಮಾಡಿಕೊಡದಂತೆ ನೋಡಿಕೊಳ್ಳುವ ಜವಾಬ್ದಾರಿ ತನ್ನ ಮೇಲಿದೆ ಎನ್ನುವುದನ್ನು ಸರಕಾರ ಮನಗಾಣಬೇಕು.

ಶುಲ್ಕದ ವಿಚಾರದಲ್ಲಿ ಸರಕಾರ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕಿದೆ. ಖಾಸಗಿ ಶಾಲೆಗಳು ಒತ್ತಡ ತಂತ್ರಗಳನ್ನು ಬಿಟ್ಟು ಉದಾರತೆ ತೋರಬೇಕಾಗಿದೆ ಮತ್ತು ಪೋಷಕರು ತಮ್ಮ ಅರ್ಥಿಕ ಸ್ಥಿತಿಗತಿಗಳಿಗೆ ತಕ್ಕಂತೆ ನ್ಯಾಯೋಚಿತವಾಗಿ ನಡೆದುಕೊಳ್ಳಬೇಕಾಗಿದೆ. ಈ ವಿಚಾರದಲ್ಲಿ ಸರಕಾರ, ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವೆ ತ್ರಿಪಕ್ಷೀಯ ಪರಿಹಾರ ಸೂತ್ರ ಕಂಡುಕೊಳ್ಳ ಬೇಕಾಗಿದೆ. ಸರಕಾರ ದೃಢ ನಿಲುವು ತಾಳಬೇಕು, ಖಾಸಗಿ ಶಾಲೆಗಳು ಹಠ ಬಿಡಬೇಕು ಮತ್ತು ಪೋಷಕರು ಮಕ್ಕಳ ಶೈಕ್ಷಣಿಕ ಭವಿಷ್ಯದ ಕುರಿತು ದೂರದೃಷ್ಟಿ ಮತ್ತು ಸಮಚಿತ್ತ ಹೊಂದಿರಬೇಕು. ಹೀಗಾದರೆ ಗೊಂದಲಕ್ಕೆ ತೆರೆ ಎಳೆಯಬಹುದು.

ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಮಾಹಿತಿಯಂತೆ ರಾಜ್ಯ ಪಠ್ಯಕ್ರಮದ 19 ಸಾವಿರ ಹಾಗೂ ಸಿಬಿಎಸ್‌ಸಿ, ಐಸಿಎಸ್ಸಿ ಪಠ್ಯಕ್ರಮದ ಸಾವಿರ ಶಾಲೆಗಳು ಸೇರಿ ರಾಜ್ಯದಲ್ಲಿ ನರ್ಸರಿಯಿಂದ ಹತ್ತನೆ ತರಗತಿ ವರೆಗೆ ಸುಮಾರು 20 ಸಾವಿರ ಖಾಸಗಿ ಶಾಲೆಗಳಿವೆ. ಇವುಗಳಲ್ಲಿ 48ರಿಂದ 50 ಲಕ್ಷ ಮಕ್ಕಳು ಕಲಿಯುತ್ತಿದ್ದು, ಬೋಧಕ-ಬೋಧಕೇತರ ಸೇರಿ 1.20 ಲಕ್ಷ ಸಿಬಂದಿ ಇದ್ದಾರೆ. ರಾಜ್ಯ ಪಠ್ಯಕ್ರಮದ 19 ಸಾವಿರ ಶಾಲೆಗಳ ಪೈಕಿ 17 ಸಾವಿರ ಶಾಲೆಗಳು ವಾರ್ಷಿಕ 10 ಸಾವಿರದಿಂದ 30 ಸಾವಿರದವರೆಗೆ ಶುಲ್ಕ ಪಡೆಯವ ಶಾಲೆಗಳಿವೆ. ಈ ಪೈಕಿ ಬಹುತೇಕ ಶಾಲೆಗಳು ಮಾಸಿಕ ಕಂತುಗಳನ್ನು ಕಟ್ಟಿಸಿಕೊಂಡು ಶಿಕ್ಷಣ ನೀಡುತ್ತವೆ. ಒಂದು ಅಂದಾಜಿನಂತೆ ರಾಜ್ಯದಲ್ಲಿ 35ರಿಂದ 40 ಲಕ್ಷ ಕುಟುಂಬಗಳು ಖಾಸಗಿ ಶಾಲೆಗಳ ಒಡನಾಟ ಹೊಂದಿವೆ. ಇದರಲ್ಲಿ ಶೇ.90ರಷ್ಟು ಕುಟುಂಬಗಳು ಬಡ ಮಧ್ಯಮ ಕುಟುಂಬಗಳಾಗಿವೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ನಿರ್ಣಾಯಕ ಪಾತ್ರವಹಿಸಬೇಕಿದೆ.

ವಿಪಕ್ಷಗಳೂ ಸಹ ಈ ವಿಚಾರವನ್ನು ಕೇವಲ ರಾಜಕೀಯವಾಗಿ ನೋಡದೆ ಇದೊಂದು ಸಾಮಾಜಿಕ ಮತ್ತು ಶೈಕ್ಷಣಿಕ ವಿಚಾರ ಎಂದು ಮನಗಂಡು ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಸರಕಾರಕ್ಕೆ ಅಗತ್ಯ ಸಲಹೆ ಮತ್ತು ಸಹಕಾರ ನೀಡಬೇಕು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.