ಸರಾಗವಾಗಿ ನಡೆಯಲಿ ಬೆಳಗಾವಿ ಚಳಿಗಾಲದ ಅಧಿವೇಶನ


Team Udayavani, Dec 13, 2021, 6:00 AM IST

ಸರಾಗವಾಗಿ ನಡೆಯಲಿ ಬೆಳಗಾವಿ ಚಳಿಗಾಲದ ಅಧಿವೇಶನ

ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಎರಡು ವರ್ಷಗಳ ಬಳಿಕ ರಾಜ್ಯ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭ ವಾಗಲಿದ್ದು ಆಡಳಿತ ಹಾಗೂ ವಿಪಕ್ಷ ಪ್ರತಿಷ್ಠೆಗೆ ಬೀಳದೆ ಕಲಾಪ ಅರ್ಥಪೂರ್ಣ ವಾಗಿಸಬೇಕಾಗಿದೆ. ಉತ್ತರ ಕರ್ನಾಟಕ ಭಾಗದ ಜನ ರೊಂದಿಗೆ ಸರಕಾರ ಇದೆ ಎಂಬ ವಿಶ್ವಾಸ ಮೂಡಿಸುವುದು. ಬೆಳಗಾವಿ ಗಡಿ ವಿಚಾರದಲ್ಲಿ ಆಗಾಗ್ಗೆ ಚಕಾರ, ಖ್ಯಾತೆ ತೆಗೆಯುವ ಎಂಇಎಸ್‌ಗೆ ಬೆಳಗಾವಿ ಅಖಂಡ ಕರ್ನಾಟಕದ್ದು ಎಂಬ ಸಂದೇಶ ರವಾನಿಸುವ ಸಲುವಾಗಿ ಉತ್ತರ ಕರ್ನಾಟಕ ಭಾಗದ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿ ಅಧಿವೇಶನ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿತ್ತು.

ಕಳೆದ ಹದಿನೈದು ವರ್ಷಗಳಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸು ವುದರಿಂದ ಆ ಭಾಗದ ಜನರಿಗೆ ಸ್ವಲ್ಪ ಮಟ್ಟಿನ ಆಶಾಭಾವನೆ ಇದೆ ಯಾದರೂ ಒಂಬತ್ತು ಅಧಿವೇಶನ ನಡೆದರೂ ಬೇಡಿಕೆಗಳು ಹಾಗೆಯೇ ಉಳಿದಿವೆ ಎಂಬ ಅಸಮಾಧಾನವೂ ಇದೆ.

ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷ ಣೆ ಯಾಗಬೇಕು ಅದಕ್ಕಾಗಿ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಕಳಸಾ ಬಂಡೂರಿ ನಾಲಾ ಕಾಮಗಾರಿ ಆರಂಭವಾಗಬೇಕು. ಡಾ| ಡಿ.ಎಂ.ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಬೇಕು. ಒಟ್ಟಾರೆ ಸಮಗ್ರ ಉತ್ತರ ಕರ್ನಾಟಕ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಬೇಕು ಎಂಬುದು ಜನರ ಬೇಡಿಕೆ. ಈ ನಿಟ್ಟಿನಲ್ಲಿ ಹದಿನೈದು ವರ್ಷಗಳಲ್ಲಿ ಆಡಳಿತ ನಡೆಸಿದ ಪಕ್ಷಗಳು ಕಾರ್ಯೋನ್ಮುಖವಾಗಬೇಕಿತ್ತು. ಸುವರ್ಣಸೌಧದ ಅಧಿವೇಶನದಲ್ಲಿ ಆ ಬಗ್ಗೆ ಅರ್ಥಪೂರ್ಣ ಚರ್ಚೆ, ಸಮಸ್ಯೆಗಳಿಗೆ ತಾರ್ಕಿಕ ಅಂತ್ಯಕಾಣಿಸುವ ಕೆಲಸ ಆಗಬೇಕಿತ್ತು. ಆದರೆ ಅದು ಆಗಲಿಲ್ಲ. ಇದರಲ್ಲಿ ಆಡಳಿತ ಹಾಗೂ ವಿಪಕ್ಷಗಳ ಹೊಣೆಗಾರಿಕೆಯೂ ಇತ್ತು.

ಹೈದರಾಬಾದ್‌ ಕರ್ನಾಟಕ ಕಲ್ಯಾಣ ಕರ್ನಾಟಕವಾಯಿತು, ಮುಂಬಯಿ ಕರ್ನಾಟಕ ಕಿತ್ತೂರು ಕರ್ನಾಟಕ ವಾಯಿತು. ಆದರೆ ಅನುದಾನ ಮಾತ್ರ ಬರಲಿಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಹೊಸ ಅಧ್ಯಕ್ಷರು ಹಾಗೂ ಸಮಿತಿ ನೇಮಕಗೊಂಡಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಮೀಸಲಿ ಟ್ಟಿರುವ 1,500 ಕೋಟಿ ರೂ. ಹಣದಲ್ಲಿ ಇದುವರೆಗೂ 100 ಕೋಟಿ ರೂ. ಮಾತ್ರ ವೆಚ್ಚವಾಗಿದೆ. ಅದೂ ಮುಂದು ವರಿದ ಕಾಮಗಾರಿಗಳಿಗಾಗಿ ಮಾತ್ರ, ಉಳಿದ ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕ್ರಿಯಾ ಯೋಜನೆಯೂ ತಯಾರಾಗಿಲ್ಲ. ಹೀಗಾದರೆ ಅಭಿವೃದ್ಧಿ ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಇದೆ.

ಇದನ್ನೂ ಓದಿ:ಇಂಗ್ಲಿಷ್‌ನ ಪ್ರಸಿದ್ಧ ಪುಸ್ತಕವಾಗಿರುವ ಹ್ಯಾರಿ ಪಾಟರ್‌ ಪುಸ್ತಕಕ್ಕೆ 3.5 ಕೋಟಿ ರೂ!

ಹೀಗಾಗಿ ರಾಜ್ಯ ಸರಕಾರ ಕೇವಲ ಅಧಿವೇಶನ ನಡೆಸುವುದಷ್ಟೇ ಅಲ್ಲ. ಆ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಬೇಕು. ಕೈಗೊಂಡ ನಿರ್ಧಾರಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಬದ್ಧತೆ ಮತ್ತು ಇಚ್ಚಾಶಕ್ತಿ ತೋರಬೇಕಾಗಿದೆ.

ಹತ್ತು ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಾದರೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸಗಳು ಆಗಲಿ. ಆಡಳಿತ ಹಾಗೂ ವಿಪಕ್ಷಗಳು ಪ್ರತಿಷ್ಠೆಗೆ ಬೀಳದೆ ಉತ್ತರ ಕರ್ನಾಟಕ ಭಾಗದಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಿದ ಉದ್ದೇಶ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿ. ಪ್ರತಿಭಟನೆ, ಧರಣಿಗೆ ಕಲಾಪ ಮೊಟಕಾಗುವ ಪರಿಸ್ಥಿತಿ ನಿರ್ಮಾಣವಾಗದಂತೆ ನೋಡಿಕೊಳ್ಳಲಿ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.