ಬರ ಪರಿಹಾರ ಯಾವಾಗ?


Team Udayavani, May 10, 2019, 6:00 AM IST

37

ಕರ್ನಾಟಕ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಬರಕ್ಕೆ ತುತ್ತಾಗುತ್ತಿದೆ. ಪ್ರತಿ ವರ್ಷ ಸರಕಾರ ಬರದ ಬೇಗೆ ತಟ್ಟದಿರಲು ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಭರವಸೆ ನೀಡುತ್ತದೆಯಾದರೂ ಯಾವುದೂ ಇನ್ನೂ ಕಾರ್ಯಗತಗೊಂಡಿಲ್ಲ. ಜನರಿಗೆ ಕುಡಿಯುವ ನೀರು ಒದಗಿಸುವುದು ಸರಕಾರದ ಮೊದಲ ಆದ್ಯತೆಯಾಗಬೇಕು.

ರಾಜ್ಯದ ಬಹುಭಾಗ ಬರದಿಂದ ತತ್ತರಿಸುತ್ತಿದೆ. 170ಕ್ಕೂ ತಾಲೂಕುಗಳು ಬರಪೀಡಿತವಾಗಿವೆ ಎಂದು ಸರಕಾರವೇ ಹೇಳಿಕೊಂಡಿದೆ. ಕುಡಿಯುವ ನೀರಿಗಾಗಿ ಎಲ್ಲೆಡೆ ಹಾಹಾಕಾರ ಉಂಟಾಗಿದ್ದರೂ ನಮ್ಮನ್ನಾಳುವವರ ಕಿವಿಗೆ ಅದು ಬಿದ್ದಿಲ್ಲ. ಒಂದು ಕಾಲದಲ್ಲಿ ಸಮೃದ್ಧ ನೀರು ಲಭ್ಯವಿದ್ದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಕೂಡಾ ಈ ವರ್ಷ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಅದರಲ್ಲೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ನಗರ ಪ್ರದೇಶಗಳಲ್ಲಿ ನಾಲ್ಕು ದಿನಕ್ಕೊಮ್ಮೆ -ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ರೇಶನಿಂಗ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಗ್ರಾಮೀಣ ಭಾಗಗಳಲ್ಲೂ ಬಾವಿ, ಕೆರೆಗಳು ಬತ್ತಿ ಹೋಗಿದ್ದು,ಲಭ್ಯವಿರುವ ಅಲ್ಪಸ್ವಲ್ಪ ಜಲಮೂಲಗಳನ್ನು ಜನರು ಆಶ್ರಯಿಸಿಕೊಂಡಿದ್ದಾರೆ.

ಬೇಸಿಗೆ ಆರಂಭವಾಗುವುದಕ್ಕೂ ಮುಂಚೆಯೇ ಈ ಸಲ ರಾಜ್ಯಕ್ಕೆ ಬರದ ಹೊಡೆತ ಇದೆ ಎನ್ನುವುದು ಖಚಿತವಾಗಿತ್ತು. ಮಳೆಗಾಲದಲ್ಲಿ ಎರಡು ತಿಂಗಳು ಧಾರಾಕಾರ ಮಳೆಯಾಗಿದ್ದು ಬಿಟ್ಟರೆ ಉಳಿದಂತೆ ಒಣಹವೆ ಮುಂದವರಿದಿತ್ತು. ಹಲವು ಜಿಲ್ಲೆಗಳಲ್ಲಿ ಮಳೆಗಾಲದಲ್ಲೂ ನೀರಿನ ಸಮಸ್ಯೆ ಎದುರಾಗಿತ್ತು. ಈ ಪರಿಸ್ಥಿತಿಯನ್ನು ನೋಡಿಯೇ ಸರಕಾರ ಬರವನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಆರಂಭದಲ್ಲಿ ಜಾನುವಾರುಗಳಿಗೆ ಮೇವು ಕೇಂದ್ರ ಸ್ಥಾಪನೆ, ಜನರು ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಒದಗಿಸುವಂಥ ಕೆಲವು ಉಪಕ್ರಮಗಳನ್ನು ಕೈಗೊಂಡರೂ ಮಾರ್ಚ್‌ನಲ್ಲಿ ಚುನಾವಣೆ ಘೋಷಣೆಯಾದ ಬಳಿಕ ಎಲ್ಲವೂ ನನೆಗುದಿಗೆ ಬಿದ್ದಿದೆ.

ಚುನಾವಣೆ ಮುಗಿಯುವ ತನಕ ನೀತಿ ಸಂಹಿತೆಯ ನೆಪದಲ್ಲಿ ಬರ ಪರಿಹಾರ ಕುಂಠಿತಗೊಂಡಿತು. ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿಯಾದಿಯಾಗಿ ಸರಕಾರ ನಡೆಸುವವರೆಲ್ಲರೂ ಸಮ್ಮಿಶ್ರ ಸರಕಾರವನ್ನು ಉಳಿಸಿಕೊಳ್ಳುವುದರಲ್ಲಿ ವ್ಯಸ್ತರಾಗಿದ್ದಾರೆಯೇ ಹೊರತು ಯಾರಿಗೂ ಬರದಿಂದ ಕಂಗೆಟ್ಟಿರುವ ಜನರಿಗೆ ಸಹಾಯ ಮಾಡಬೇಕೆಂಬ ಇರಾದೆಯಿಲ್ಲ. ಚುನಾವಣೆಯ ಪ್ರಚಾರದಲ್ಲಿ ದಣಿದ ನಾಯಕರೆಲ್ಲ ವಿಶ್ರಾಂತಿಗಾಗಿ ರೆಸಾರ್ಟ್‌ಗೆ ಹೋದರು. ಒಂದಷ್ಟು ಮಂದಿ ದೇವಸ್ಥಾನ, ಮಠ ಮಂದಿರಗಳಿಗೆ ಹೋಗಿ ಪೂಜೆ ಹೋಮ ಹವನಗಳಲ್ಲಿ ನಿರತರಾದರು.ಆದರೆ ಯಾರಿಗೂ ಜನರ ಬಳಿಗೆ ಹೋಗಿ ಅವರ ಬವಣೆ ಆಲಿಸಬೇಕೆಂದು ಅನ್ನಿಸಿಲ್ಲ ಎನ್ನುವುದೊಂದು ದುರಂತ.

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕನಿಷ್ಠ ಕುಡಿಯುವ ನೀರು ಪೂರೈಸುವಂಥ ಪರಿಹಾರ ಕಾರ್ಯಗಳಿಗೆ ವಿನಾಯಿತಿ ಕೇಳಿ ಪಡೆಯಬಹುದಿತ್ತು. ಬೆಂಗಳೂರು ಆಸುಪಾಸಿನಲ್ಲಿ ಕೆಲ ದಿನಗಳಿಂದೀಚೆಗೆ ಉತ್ತಮ ಮಳೆಯಾಗಿ ಬಿಸಿಲಿನ ಬೇಗೆಯಿಂದ ಮುಕ್ತಿ ಸಿಕ್ಕಿದೆ ಹಾಗೂ ನೀರಿನ ಸಮಸ್ಯೆಯೂ ಹೆಚ್ಚಾಗಿ ತಟ್ಟಿಲ್ಲ. ಹೀಗಾಗಿ ನಾಯಕರೆಲ್ಲ ಬೆಂಗಳೂರಿನ ಪರಿಸ್ಥಿತಿಯೇ ಇಡೀ ರಾಜ್ಯದಲ್ಲಿ ಇದೆ ಎಂದು ಭಾವಿಸಿ ಬರವನ್ನು ಕಡೆಗಣಿಸಿರುವಂತೆ ಕಾಣಿಸುತ್ತಿದೆ.

ಕರ್ನಾಟಕದ ಜತೆಗೆ ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕೇರಳದಲ್ಲೂ ಬರದ ಸಮಸ್ಯೆಯಿದೆ. ಮಳೆಗಾಲದಲ್ಲಿ ಶತಮಾನದ ಭೀಕರ ಪ್ರವಾಹಕ್ಕೆ ಸಾಕ್ಷಿಯಾಗಿದ್ದ ಕೇರಳದಲ್ಲಿ ಬೇಸಿಗೆ ಬಂದ ಬೆನ್ನಿಗೆ ನೀರಿನ ಸಮಸ್ಯೆ ತಲೆದೋರಿದೆ. ಮಳೆಯ ಅಸಮರ್ಪಕ ಹಂಚಿಕೆಯಿಂದಾಗಿ ಪ್ರತಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೋರುತ್ತಿದ್ದರೂ ಸರಕಾರ ಈ ನಿಟ್ಟಿನಲ್ಲಿ ಗಂಭೀರವಾದ ಚಿಂತನೆಯನ್ನು ನಡೆಸುತ್ತಿಲ್ಲ.

ಕರ್ನಾಟಕ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಬರಕ್ಕೆ ತುತ್ತಾಗುತ್ತಿದೆ. ಪ್ರತಿ ವರ್ಷ ಸರಕಾರ ಬರದ ಬೇಗೆ ತಟ್ಟದಿರಲು ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಭರವಸೆ ನೀಡುತ್ತದೆಯಾದರೂ ಯಾವುದೂ ಇನ್ನೂ ಕಾರ್ಯಗತಗೊಂಡಿಲ್ಲ. ಹನಿ ನೀರಾವರಿ, ಇಸ್ರೇಲ್‌ ಮಾದರಿಯ ಕೃಷಿ ಪದ್ಧತಿ ಇತ್ಯಾದಿ ನೀರುಳಿಸುವ ವಿಧಾನಗಳ ಬಗ್ಗೆ ಭಾರೀ ಚರ್ಚೆಗಳಾಗಿತ್ತು. ಆದರೆ ಯಾವುದೂ ಕಾರ್ಯಗತವಾಗದೆ ಕಡತಗಳಲ್ಲೇ ಉಳಿದಿವೆ.

ಜನರಿಗೆ ಕುಡಿಯುವ ನೀರು ಒದಗಿಸುವುದು ಸರಕಾರದ ಮೊದಲ ಆದ್ಯತೆಯಾಗಬೇಕು. ಇದಕ್ಕಾಗಿ ಲಭ್ಯವಿರುವ ಎಲ್ಲ ನೀರಿನ ಮೂಲಗಳನ್ನು ಬಳಸಿಕೊಳ್ಳಬೇಕು. ಅನೇಕ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಆಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಇನ್ನಿತರ ಅಧಿಕಾರಿಗಳು ಒಂದಷ್ಟು ಪ್ರಯತ್ನ ಪಡುತ್ತಿದ್ದಾರೆ ಎನ್ನುವುದು ಸಮಾಧಾನಕೊಡುವ ಅಂಶ. ಂದು ರಾಜ್ಯ ಸತತವಾಗಿ ಬರಕ್ಕೆ ತುತ್ತಾದಾಗ ಅದರಿಂದ ಸಾಕಷ್ಟು ಪಾಠಗಳನ್ನು ಕಲಿತುಕೊಂಡು ಭವಿಷ್ಯದಲ್ಲಿ ಇಂಥ ಪರಿಸ್ಥಿತಿಯನ್ನು ಎದುರಿಸಲು ಯೋಜನೆಗಳನ್ನು ಹಾಕಿಕೊಳ್ಳಬೇಕಿತ್ತು. ಆದರೆ ನಾವಿನ್ನೂ ಬರಕ್ಕೆ ತಾತ್ಕಾಲಿಕ ಶಮನ ಕಾರ್ಯಗಳನ್ನು ಕೈಗೊಳ್ಳುವುದರಲ್ಲಿ ನಿರತರಾಗಿದ್ದೇವೆಯೇ ಹೊರತು ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿಲ್ಲ.ತಾಪಮಾನ ಏರಿಕೆಯ ಪರಿಣಾಮ ಋತುಗಳ ಮೇಲಾಗುತ್ತಿದ್ದು, ಪ್ರತಿವರ್ಷ ಮಳೆಯ ಪ್ರಮಾಣದಲ್ಲಿ ವ್ಯತ್ಯಯವಾಗುತ್ತಿ ರುವುದು ನಮ್ಮ ಅನುಭವಕ್ಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಸಿಗುವ ನೀರನ್ನು ಸಾಧ್ಯವಾದಷ್ಟು ಸದುಪಯೋಗಪಡಿಸಿಕೊಳ್ಳುವ ಯೋಜನೆಗಳನ್ನು ತುರ್ತಾಗಿ ಅನುಷ್ಠಾನಿಸಿಕೊಳ್ಳುವ ಅಗತ್ಯವಿದೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.