ಬರ ಪರಿಹಾರ ಯಾವಾಗ?


Team Udayavani, May 10, 2019, 6:00 AM IST

37

ಕರ್ನಾಟಕ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಬರಕ್ಕೆ ತುತ್ತಾಗುತ್ತಿದೆ. ಪ್ರತಿ ವರ್ಷ ಸರಕಾರ ಬರದ ಬೇಗೆ ತಟ್ಟದಿರಲು ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಭರವಸೆ ನೀಡುತ್ತದೆಯಾದರೂ ಯಾವುದೂ ಇನ್ನೂ ಕಾರ್ಯಗತಗೊಂಡಿಲ್ಲ. ಜನರಿಗೆ ಕುಡಿಯುವ ನೀರು ಒದಗಿಸುವುದು ಸರಕಾರದ ಮೊದಲ ಆದ್ಯತೆಯಾಗಬೇಕು.

ರಾಜ್ಯದ ಬಹುಭಾಗ ಬರದಿಂದ ತತ್ತರಿಸುತ್ತಿದೆ. 170ಕ್ಕೂ ತಾಲೂಕುಗಳು ಬರಪೀಡಿತವಾಗಿವೆ ಎಂದು ಸರಕಾರವೇ ಹೇಳಿಕೊಂಡಿದೆ. ಕುಡಿಯುವ ನೀರಿಗಾಗಿ ಎಲ್ಲೆಡೆ ಹಾಹಾಕಾರ ಉಂಟಾಗಿದ್ದರೂ ನಮ್ಮನ್ನಾಳುವವರ ಕಿವಿಗೆ ಅದು ಬಿದ್ದಿಲ್ಲ. ಒಂದು ಕಾಲದಲ್ಲಿ ಸಮೃದ್ಧ ನೀರು ಲಭ್ಯವಿದ್ದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಕೂಡಾ ಈ ವರ್ಷ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಅದರಲ್ಲೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ನಗರ ಪ್ರದೇಶಗಳಲ್ಲಿ ನಾಲ್ಕು ದಿನಕ್ಕೊಮ್ಮೆ -ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ರೇಶನಿಂಗ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಗ್ರಾಮೀಣ ಭಾಗಗಳಲ್ಲೂ ಬಾವಿ, ಕೆರೆಗಳು ಬತ್ತಿ ಹೋಗಿದ್ದು,ಲಭ್ಯವಿರುವ ಅಲ್ಪಸ್ವಲ್ಪ ಜಲಮೂಲಗಳನ್ನು ಜನರು ಆಶ್ರಯಿಸಿಕೊಂಡಿದ್ದಾರೆ.

ಬೇಸಿಗೆ ಆರಂಭವಾಗುವುದಕ್ಕೂ ಮುಂಚೆಯೇ ಈ ಸಲ ರಾಜ್ಯಕ್ಕೆ ಬರದ ಹೊಡೆತ ಇದೆ ಎನ್ನುವುದು ಖಚಿತವಾಗಿತ್ತು. ಮಳೆಗಾಲದಲ್ಲಿ ಎರಡು ತಿಂಗಳು ಧಾರಾಕಾರ ಮಳೆಯಾಗಿದ್ದು ಬಿಟ್ಟರೆ ಉಳಿದಂತೆ ಒಣಹವೆ ಮುಂದವರಿದಿತ್ತು. ಹಲವು ಜಿಲ್ಲೆಗಳಲ್ಲಿ ಮಳೆಗಾಲದಲ್ಲೂ ನೀರಿನ ಸಮಸ್ಯೆ ಎದುರಾಗಿತ್ತು. ಈ ಪರಿಸ್ಥಿತಿಯನ್ನು ನೋಡಿಯೇ ಸರಕಾರ ಬರವನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಆರಂಭದಲ್ಲಿ ಜಾನುವಾರುಗಳಿಗೆ ಮೇವು ಕೇಂದ್ರ ಸ್ಥಾಪನೆ, ಜನರು ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಒದಗಿಸುವಂಥ ಕೆಲವು ಉಪಕ್ರಮಗಳನ್ನು ಕೈಗೊಂಡರೂ ಮಾರ್ಚ್‌ನಲ್ಲಿ ಚುನಾವಣೆ ಘೋಷಣೆಯಾದ ಬಳಿಕ ಎಲ್ಲವೂ ನನೆಗುದಿಗೆ ಬಿದ್ದಿದೆ.

ಚುನಾವಣೆ ಮುಗಿಯುವ ತನಕ ನೀತಿ ಸಂಹಿತೆಯ ನೆಪದಲ್ಲಿ ಬರ ಪರಿಹಾರ ಕುಂಠಿತಗೊಂಡಿತು. ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿಯಾದಿಯಾಗಿ ಸರಕಾರ ನಡೆಸುವವರೆಲ್ಲರೂ ಸಮ್ಮಿಶ್ರ ಸರಕಾರವನ್ನು ಉಳಿಸಿಕೊಳ್ಳುವುದರಲ್ಲಿ ವ್ಯಸ್ತರಾಗಿದ್ದಾರೆಯೇ ಹೊರತು ಯಾರಿಗೂ ಬರದಿಂದ ಕಂಗೆಟ್ಟಿರುವ ಜನರಿಗೆ ಸಹಾಯ ಮಾಡಬೇಕೆಂಬ ಇರಾದೆಯಿಲ್ಲ. ಚುನಾವಣೆಯ ಪ್ರಚಾರದಲ್ಲಿ ದಣಿದ ನಾಯಕರೆಲ್ಲ ವಿಶ್ರಾಂತಿಗಾಗಿ ರೆಸಾರ್ಟ್‌ಗೆ ಹೋದರು. ಒಂದಷ್ಟು ಮಂದಿ ದೇವಸ್ಥಾನ, ಮಠ ಮಂದಿರಗಳಿಗೆ ಹೋಗಿ ಪೂಜೆ ಹೋಮ ಹವನಗಳಲ್ಲಿ ನಿರತರಾದರು.ಆದರೆ ಯಾರಿಗೂ ಜನರ ಬಳಿಗೆ ಹೋಗಿ ಅವರ ಬವಣೆ ಆಲಿಸಬೇಕೆಂದು ಅನ್ನಿಸಿಲ್ಲ ಎನ್ನುವುದೊಂದು ದುರಂತ.

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕನಿಷ್ಠ ಕುಡಿಯುವ ನೀರು ಪೂರೈಸುವಂಥ ಪರಿಹಾರ ಕಾರ್ಯಗಳಿಗೆ ವಿನಾಯಿತಿ ಕೇಳಿ ಪಡೆಯಬಹುದಿತ್ತು. ಬೆಂಗಳೂರು ಆಸುಪಾಸಿನಲ್ಲಿ ಕೆಲ ದಿನಗಳಿಂದೀಚೆಗೆ ಉತ್ತಮ ಮಳೆಯಾಗಿ ಬಿಸಿಲಿನ ಬೇಗೆಯಿಂದ ಮುಕ್ತಿ ಸಿಕ್ಕಿದೆ ಹಾಗೂ ನೀರಿನ ಸಮಸ್ಯೆಯೂ ಹೆಚ್ಚಾಗಿ ತಟ್ಟಿಲ್ಲ. ಹೀಗಾಗಿ ನಾಯಕರೆಲ್ಲ ಬೆಂಗಳೂರಿನ ಪರಿಸ್ಥಿತಿಯೇ ಇಡೀ ರಾಜ್ಯದಲ್ಲಿ ಇದೆ ಎಂದು ಭಾವಿಸಿ ಬರವನ್ನು ಕಡೆಗಣಿಸಿರುವಂತೆ ಕಾಣಿಸುತ್ತಿದೆ.

ಕರ್ನಾಟಕದ ಜತೆಗೆ ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕೇರಳದಲ್ಲೂ ಬರದ ಸಮಸ್ಯೆಯಿದೆ. ಮಳೆಗಾಲದಲ್ಲಿ ಶತಮಾನದ ಭೀಕರ ಪ್ರವಾಹಕ್ಕೆ ಸಾಕ್ಷಿಯಾಗಿದ್ದ ಕೇರಳದಲ್ಲಿ ಬೇಸಿಗೆ ಬಂದ ಬೆನ್ನಿಗೆ ನೀರಿನ ಸಮಸ್ಯೆ ತಲೆದೋರಿದೆ. ಮಳೆಯ ಅಸಮರ್ಪಕ ಹಂಚಿಕೆಯಿಂದಾಗಿ ಪ್ರತಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೋರುತ್ತಿದ್ದರೂ ಸರಕಾರ ಈ ನಿಟ್ಟಿನಲ್ಲಿ ಗಂಭೀರವಾದ ಚಿಂತನೆಯನ್ನು ನಡೆಸುತ್ತಿಲ್ಲ.

ಕರ್ನಾಟಕ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಬರಕ್ಕೆ ತುತ್ತಾಗುತ್ತಿದೆ. ಪ್ರತಿ ವರ್ಷ ಸರಕಾರ ಬರದ ಬೇಗೆ ತಟ್ಟದಿರಲು ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಭರವಸೆ ನೀಡುತ್ತದೆಯಾದರೂ ಯಾವುದೂ ಇನ್ನೂ ಕಾರ್ಯಗತಗೊಂಡಿಲ್ಲ. ಹನಿ ನೀರಾವರಿ, ಇಸ್ರೇಲ್‌ ಮಾದರಿಯ ಕೃಷಿ ಪದ್ಧತಿ ಇತ್ಯಾದಿ ನೀರುಳಿಸುವ ವಿಧಾನಗಳ ಬಗ್ಗೆ ಭಾರೀ ಚರ್ಚೆಗಳಾಗಿತ್ತು. ಆದರೆ ಯಾವುದೂ ಕಾರ್ಯಗತವಾಗದೆ ಕಡತಗಳಲ್ಲೇ ಉಳಿದಿವೆ.

ಜನರಿಗೆ ಕುಡಿಯುವ ನೀರು ಒದಗಿಸುವುದು ಸರಕಾರದ ಮೊದಲ ಆದ್ಯತೆಯಾಗಬೇಕು. ಇದಕ್ಕಾಗಿ ಲಭ್ಯವಿರುವ ಎಲ್ಲ ನೀರಿನ ಮೂಲಗಳನ್ನು ಬಳಸಿಕೊಳ್ಳಬೇಕು. ಅನೇಕ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಆಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಇನ್ನಿತರ ಅಧಿಕಾರಿಗಳು ಒಂದಷ್ಟು ಪ್ರಯತ್ನ ಪಡುತ್ತಿದ್ದಾರೆ ಎನ್ನುವುದು ಸಮಾಧಾನಕೊಡುವ ಅಂಶ. ಂದು ರಾಜ್ಯ ಸತತವಾಗಿ ಬರಕ್ಕೆ ತುತ್ತಾದಾಗ ಅದರಿಂದ ಸಾಕಷ್ಟು ಪಾಠಗಳನ್ನು ಕಲಿತುಕೊಂಡು ಭವಿಷ್ಯದಲ್ಲಿ ಇಂಥ ಪರಿಸ್ಥಿತಿಯನ್ನು ಎದುರಿಸಲು ಯೋಜನೆಗಳನ್ನು ಹಾಕಿಕೊಳ್ಳಬೇಕಿತ್ತು. ಆದರೆ ನಾವಿನ್ನೂ ಬರಕ್ಕೆ ತಾತ್ಕಾಲಿಕ ಶಮನ ಕಾರ್ಯಗಳನ್ನು ಕೈಗೊಳ್ಳುವುದರಲ್ಲಿ ನಿರತರಾಗಿದ್ದೇವೆಯೇ ಹೊರತು ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿಲ್ಲ.ತಾಪಮಾನ ಏರಿಕೆಯ ಪರಿಣಾಮ ಋತುಗಳ ಮೇಲಾಗುತ್ತಿದ್ದು, ಪ್ರತಿವರ್ಷ ಮಳೆಯ ಪ್ರಮಾಣದಲ್ಲಿ ವ್ಯತ್ಯಯವಾಗುತ್ತಿ ರುವುದು ನಮ್ಮ ಅನುಭವಕ್ಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಸಿಗುವ ನೀರನ್ನು ಸಾಧ್ಯವಾದಷ್ಟು ಸದುಪಯೋಗಪಡಿಸಿಕೊಳ್ಳುವ ಯೋಜನೆಗಳನ್ನು ತುರ್ತಾಗಿ ಅನುಷ್ಠಾನಿಸಿಕೊಳ್ಳುವ ಅಗತ್ಯವಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಪತಾಕೆ ಉತ್ತುಂಗಕ್ಕೇರಲಿ

Editorial: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಪತಾಕೆ ಉತ್ತುಂಗಕ್ಕೇರಲಿ

fetosd

Karnataka: ರಾಜ್ಯದಲ್ಲಿ ಮತ್ತಷ್ಟು ಭ್ರೂಣಹತ್ಯೆ ಪ್ರಕರಣ ಆತಂಕಕಾರಿ

ದೂರಗಾಮಿ ಸತ್ಪರಿಣಾಮಗಳ ನಿರ್ಮಲಾ “ಸಪ್ತಮ’ ಬಜೆಟ್‌

Union Budget; ದೂರಗಾಮಿ ಸತ್ಪರಿಣಾಮಗಳ ನಿರ್ಮಲಾ “ಸಪ್ತಮ’ ಬಜೆಟ್‌

NIPAH

Kerala ನಿಫಾ ಸೋಂಕು: ರಾಜ್ಯದಲ್ಲೂ ನಿಗಾ ಅಗತ್ಯ

Kerala-Vijayaan

Kerala: ವಿದೇಶಾಂಗ ಕಾರ್ಯದರ್ಶಿ ನೇಮಕ: ಒಕ್ಕೂಟ ವ್ಯವಸ್ಥೆಗೆ ಧಕ್ಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.