ಕೊನೆಗೊಂಡ ಓಲಿ ಆಡಳಿತ ಬದಲಾಗುವುದೇ ನೇಪಾಲ?


Team Udayavani, Dec 22, 2020, 5:43 AM IST

Nepal

ಕಳೆದ ಕೆಲವು ತಿಂಗಳಿಂದ ಭಾರತಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗಳನ್ನು ಎದುರೊಡ್ಡುತ್ತಾ ಬರುತ್ತಿದ್ದ ನೇಪಾಲದ ಕೆ.ಪಿ. ಓಲಿ ಶರ್ಮಾ ಸರಕಾರ ವಿಸರ್ಜನೆಗೊಂಡಿದೆ. ಚೀನದ ಕೈಗೊಂಬೆ ಎಂಬ ಆರೋಪ ಎದುರಿಸಿದ್ದ ಓಲಿ, ಪಕ್ಷದೊಳಗಿನವರ ಜತೆ ರಾಜಿ ಮಾಡಿಕೊಳ್ಳುವ ಬದಲು, ಸರಕಾರವನ್ನೇ ವಿಸರ್ಜಿಸಿಬಿಟ್ಟಿದ್ದಾರೆ.

ಅವಧಿಗೂ ಮುನ್ನ ಸಂಸತ್‌ ವಿಸರ್ಜನೆ ಆಗಿರುವುದು ಹಾಗೂ ಚುನಾವಣ ದಿನಾಂಕ ಘೋಷಿಸಿರುವುದನ್ನು ಪ್ರಚಂಡ ಬಣ ಹಾಗೂ ವಿಪಕ್ಷಗಳು ತೀವ್ರವಾಗಿ ವಿರೋಧಿಸುತ್ತಿವೆ. ನೇಪಾಲ ಆಡಳಿತದ ಈ ಪತನವು ಹಲವು ಪ್ರಶ್ನೆಗಳನ್ನು, ಅಭಿಪ್ರಾಯಗಳನ್ನು ಹುಟ್ಟುಹಾಕಿದೆ. ಇದು ನೇಪಾಲದಲ್ಲಿ ಹೆಚ್ಚುತ್ತಿದ್ದ ಚೀನದ ಹಸ್ತಕ್ಷೇಪವನ್ನು ತಗ್ಗಿಸಬಹುದೇ? ಓಲಿ ಜನರ ಅನುಕಂಪ ಗಿಟ್ಟಿಸಲು ಹೀಗೆ ಮಾಡುತ್ತಿದ್ದಾರಾ? ಚೀನ ಚುನಾವಣೆಯ ಸಮಯದಲ್ಲಿ ಹಸ್ತಕ್ಷೇಪ ಮಾಡುವುದೇ? ಅಥವಾ ಭಾರತ ಪರ ಇರುವ ಆಡಳಿತ ಬರಬಹುದೇ ಎನ್ನುವ ಪ್ರಶ್ನೆಗಳೇಳುತ್ತಿವೆ. ಇದೇನೇ ಇದ್ದರೂ, ಇಂಥ ಸ್ಥಿತಿ ಎದುರಾಗಿರುವುದಕ್ಕೆ ಖುದ್ದು ಓಲಿಯವರೇ ಕಾರಣ ಎನ್ನುವುದು ಸತ್ಯ. ಸಾಂವಿಧಾನಿಕ ಮಂಡಳಿ ಕಾಯ್ದೆ ಸಂಬಂಧ ಅವರು ಇತ್ತೀಚೆಗೆ ತಂದಿದ್ದ ತಿದ್ದುಪಡಿ ಅಧ್ಯಾದೇಶ ಈ ವಿದ್ಯಮಾನಕ್ಕೆ ಕಾರಣ ಎನ್ನಲಾಗುತ್ತದಾದರೂ, ಅದೊಂದೇ ಸರಕಾರದ ವಿಸರ್ಜನೆಗೆ ಕಾರಣವಂತೂ ಅಲ್ಲ. ಕಳೆದೊಂದು ವರ್ಷದಿಂದ ಪ್ರಚಂಡ ನೇತೃತ್ವದ ಕಮ್ಯುನಿಸ್ಟ್‌ ಪಾರ್ಟಿ ಆಫ್ ಚೀನದ ನಾಯಕರನ್ನು ಕಡೆಗಣಿಸುತ್ತಲೇ ಬಂದಿದ್ದ ಓಲಿ, ಈ ಬಣದಿಂದ ಭಾರೀ ಒತ್ತಡ, ಸವಾಲುಗಳನ್ನು ಎದುರಿಸಲಾರಂಭಿಸಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ, ಓಲಿಯವರ ಅತಿಯಾದ ಚೀನ ಪ್ರೇಮ, ಖುದ್ದು ಅವರ ಪಕ್ಷ ಎನ್‌ಸಿಪಿಯಲ್ಲೇ ಅಸಮಾಧಾನಕ್ಕೆ ಕಾರಣವಾಗಿತ್ತು.

ಕಳೆದ ವರ್ಷ ಚೀನ ಅಧ್ಯಕ್ಷ ಜಿನ್‌ಪಿಂಗ್‌ ನೇಪಾಲ ಪ್ರವಾಸ ಕೈಗೊಂಡದ್ದೂ ಹಾಗೂ ತಮ್ಮ ಚೀನ ನಿಷ್ಠೆಯನ್ನು ಮೆರೆಯಲು ಓಲಿ “ಜಿನ್‌ಪಿಂಗ್‌ ರಾಜಕೀಯ ಸಿದ್ಧಾಂತ’ದ ಕುರಿತು ತರಬೇತಿ ಶಿಬಿರವನ್ನು ಆಯೋಜಿಸಿದ್ದೆಲ್ಲ ತೀವ್ರ ಟೀಕೆಗೆ ಕಾರಣವಾಗಿತ್ತು. ನೇಪಾಲ ಸರಕಾರ ಚೀನದತ್ತ ಹೆಚ್ಚು ವಾಲುತ್ತಿದೆ ಎನ್ನುವುದಕ್ಕಿಂತ ಹೆಚ್ಚಾಗಿ, ಈ ವೇಳೆಯಲ್ಲಿ ಅದು ಭಾರತದಿಂದ ಅನಗತ್ಯವಾಗಿ ವಿಮುಖವಾಗುತ್ತಿದೆ ಎನ್ನುವುದು ನೇಪಾಲಿಯರ ಹಾಗೂ ಅಲ್ಲಿನ ರಾಜಕಾರಣಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಒಂದೆಡೆ ಭಾರತ-ಚೀನದ ನಡುವೆ ಗಡಿ ಭಾಗದಲ್ಲಿ ಬಿಕ್ಕಟ್ಟು ಆರಂಭವಾಗುತ್ತಿದ್ದಂತೆಯೇ, ಇನ್ನೊಂದೆಡೆ ಓಲಿ ಸರಕಾರ ಕಾಲಾಪಾನಿ, ಲಿಂಪಿಯಾಧುರಾ ಹಾಗೂ ಲಿಪುಲೇಖ್‌ ಪ್ರದೇಶಗಳು ನೇಪಾಲದ ಭಾಗವೆಂದು ವಾದಿಸಲಾರಂಭಿಸಿತು. ಅಲ್ಲದೇ, ಈ ಕುರಿತು ನಕ್ಷೆಯನ್ನೂ ಬಿಡುಗಡೆ ಮಾಡಿ ಭಾರತಕ್ಕೆ ಅಸಮಾಧಾನ ಮೂಡಿಸಿತ್ತು. ಇನ್ನು ರಾಮಜನ್ಮಭೂಮಿಯ ವಿಚಾರದಲ್ಲೂ ಅನಗತ್ಯ ವಿವಾದ ಹುಟ್ಟುಹಾಕುವ ಕೆಲಸ ಮಾಡಿ, ನೇಪಾಲಿಯರಿಂದಲೇ ತೀವ್ರ ವಿರೋಧ ಎದುರಿಸಿದರು ಓಲಿ. ಎಲ್ಲಕ್ಕಿಂತ ಹೆಚ್ಚಾಗಿ, ತಮ್ಮ ದೇಶದಲ್ಲಿ ಕೋವಿಡ್‌ ಹೆಚ್ಚಾಗಲು ಭಾರತದಿಂದ ಬಂದವರೇ ಕಾರಣ ಎಂಬಂಥ ಕ್ಷುಲ್ಲಕ ಹೇಳಿಕೆ ನೀಡಿ ರೋಗ ತಡೆಯುವಲ್ಲಿನ ತಮ್ಮ ಅಸಾಮರ್ಥ್ಯವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸಿದರು. ಈ ಎಲ್ಲ ಸಂಗತಿಗಳೂ ಅವರ ವಿರುದ್ಧದ ಅಸಮಾಧಾನ ಭುಗಿಲೇಳಲು ಕಾರಣವಾಗಿತ್ತು.

ನೇಪಾಲಕ್ಕೆ ಒಂದು ರೀತಿಯಲ್ಲಿ ಹಿರಿಯಣ್ಣನಂತೆಯೇ ಇರುವ ಭಾರತ ಎರಡೂ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಡದಂತೆ ತಡೆಯಲು ಬಹಳ ಪ್ರಬುದ್ಧ ನಡೆಗಳನ್ನು ಇಡುತ್ತಾ ಬಂದಿದೆ. ಇತ್ತೀಚೆಗಷ್ಟೇ ಭಾರತದ ವಿದೇಶಾಂಗ ಇಲಾಖೆಯ ಕಾರ್ಯದರ್ಶಿಗಳು ನೇಪಾಲ ಪ್ರವಾಸ ಕೈಗೊಂಡು ಸಂಬಂಧ ಸುಧಾರಣೆಯ ನಿಟ್ಟಿನಲ್ಲಿ ಮಹತ್ತರ ಒಪ್ಪಂದಗಳನ್ನೂ ಮಾಡಿಕೊಂಡಿದ್ದರು. ಇದೇನೇ ಇದ್ದರೂ ಮುಂದೆ ಯಾರು ಅಧಿಕಾರಕ್ಕೆ ಬರಲಿದ್ದಾರೆ ಎನ್ನುವ ಕುತೂಹಲವಂತೂ ಚೀನ ಮತ್ತು ಭಾರತಕ್ಕೆ ಇದೆ. ಮತ್ತೆ ಚೀನ ಪರ ಆಡಳಿತ ಬರುವುದೋ, ಭಾರತ ಪರ ಆಡಳಿತವೋ ಎನ್ನುವುದಕ್ಕೆ ಸಮಯವೇ ಉತ್ತರಿಸಲಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.