ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಲಿ


Team Udayavani, Sep 13, 2021, 6:00 AM IST

ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಲಿ

ರಾಜ್ಯ ವಿಧಾನಮಂಡಲದ ಅಧಿವೇಶನ ಸೋಮವಾರದಿಂದ ಹತ್ತು ದಿನಗಳ ಕಾಲ ನಡೆಯಲಿದ್ದು,  ರಾಜ್ಯದ ಜನರ ಸಮಸ್ಯೆಗಳು ಹಾಗೂ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಬೇಕಾಗಿದೆ.

ವಿಧಾನಮಂಡಲ ಅಧಿವೇಶನ ಗದ್ದಲ, ಕೋಲಾಹಲ, ಧರಣಿ, ಪ್ರತಿಭಟನೆಗಳಿಗೆ ಸೀಮಿತವಾಗದೆ ಕಲಾಪ ಮುಂದೂಡಿಕೆಯಂತಹ ಸಂದರ್ಭ ಸೃಷ್ಟಿಯಾಗದಂತೆ ಮೌಲ್ಯಯುತ ಹಾಗೂ ಮಹತ್ವದ ವಿಚಾರಗಳ ಬಗ್ಗೆ ಗಂಭೀರ ಚರ್ಚೆಗೆ ವೇದಿಕೆಯಾಗಬೇಕು ಎಂಬುದು ಜನರ ಆಶಾಭಾವನೆ. ಅಧಿವೇಶನ ಸುಸೂತ್ರ ಹಾಗೂ ಸುಗಮವಾಗಿ ನಡೆಯಲು ಆಡಳಿತ ಹಾಗೂ ವಿಪಕ್ಷಗಳ ಸಮಾನ ಹೊಣೆಗಾರಿಕೆಯೂ ಇದೆ. ಪ್ರತಿಷ್ಠೆ, ಪ್ರಚಾರ, ರಾಜಕೀಯ ಬದಿಗಿಟ್ಟು ಜನಪರ ಸಮಸ್ಯೆಗಳಿಗೆ ಅಧಿವೇಶನ ಧ್ವನಿಯಾಗಬೇಕಾಗಿದೆ.

ಕೊರೊನಾ ಎರಡನೇ ಅಲೆ ಸಂಕಷ್ಟ ಮರೆಯಾಗುತ್ತಿರುವ ಬೆನ್ನಲ್ಲೇ ಮೂರನೇ ಅಲೆ ಆತಂಕವೂ ಇರುವುದರಿಂದ ಅದನ್ನು ಎದುರಿಸಲು ಸರಕಾರ ಸಜ್ಜಾಗಬೇಕಾಗಿದೆ. ಮಸೂದೆಗಳು ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಉಭಯ ಸದನಗಳಲ್ಲಿ ಉಪಯುಕ್ತ ಚರ್ಚೆ ನಡೆಯಬೇಕಾಗಿದೆ. ಈ ಅಧಿವೇಶನದಲ್ಲಿ ಕೊನೆಗಳಿಗೆಯಲ್ಲಿ ಮಸೂದೆ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದಿಟ್ಟ ನಿಲುವು ಕೈಗೊಂಡಿದ್ದು ಸ್ವಾಗತಾರ್ಹ. ಜತೆಗೆ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಸದನದಲ್ಲಿ ಕಡ್ಡಾಯವಾಗಿ ಹಾಜ ರಾಗಲು ಸೂಚನೆ ನೀಡಿರುವುದು, ಅಧಿವೇಶನದ ಸಮಯದಲ್ಲಿ ಸಚಿವರು ಯಾವುದೇ ಕಾರ್ಯಕ್ರಮ ಹಾಕಿಕೊಳ್ಳದಂತೆ ನಿರ್ದೇಶನ ನೀಡಿರುವುದು, ಅನಿವಾರ್ಯ ಕಾರಣ ಇದ್ದರೆ ಮಾತ್ರ ಅವಕಾಶ, ಆದರೆ ನೆಪ ಹೇಳಿ ಗೈರು ಹಾಜರಾಗಲು ಅವಕಾಶ ಇಲ್ಲ. ಶಾಸಕರಿಗೂ ಇದು ಅನ್ವಯಿ ಸುತ್ತದೆ ಎಂದು ನಿಷ್ಠುರವಾಗಿಯೇ ಹೇಳಿರುವುದು, ಅಧಿಕಾರಿಗಳೂ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ತರಗಳನ್ನು ಕಾಲ ಕಾಲಕ್ಕೆ ನೀಡಬೇಕಿದೆ ಎಂಬೆಲ್ಲ ಸೂಚನೆ ನೀಡಿರುವುದು ಉತ್ತಮ ಬೆಳವಣಿಗೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇದು ಚೊಚ್ಚಲ ಅಧಿವೇಶನ ಸಹ. ರಾಜಕೀಯ ಹಾಗೂ ಆಡಳಿತದಲ್ಲಿ ಸಾಕಷ್ಟು ಅನುಭವ ಹೊಂದಿರುವ ಇವರಿಗೆ ಅಧಿವೇಶನ ಸವಾಲು ಆಗಿದೆ. ಪ್ರಸಕ್ತ ಸಂದರ್ಭದಲ್ಲಿ ಒಂದೆಡೆ ಕೊರೊನಾ ಸಂಕಷ್ಟದಿಂದ ಆರ್ಥಿಕತೆ  ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆ, ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ಹೊಂದಾಣಿಕೆ ಸೇರಿ ಹಲವು ಸಮಸ್ಯೆಗಳೂ ಇವೆ. ಇದರ ನಡುವೆಯೂ ಮುಖ್ಯಮಂತ್ರಿಯವರು ಆಡಳಿತ ಯಂತ್ರ ಚುರುಕುಗೊಳಿಸಲು ಹಲವು ಬಿಗಿ ಕ್ರಮಗಳನ್ನು ಕೈಗೊಂಡು ಜನರಲ್ಲಿ ವಿಶ್ವಾಸ ಮೂಡಿಸಿದ್ದಾರೆ.

ಈ ಅಧಿವೇಶಆನದಲ್ಲಿ ಉತ್ತಮವಾಗಿ ಚರ್ಚೆಯಲ್ಲಿ ಪಾಲ್ಗೊಂಡ ಶಾಸಕರೊಬ್ಬರಿಗೆ ಬೆಸ್ಟ್‌ ಶಾಸಕ ಎಂಬ ಪ್ರಶಸ್ತಿ ನೀಡಲು ಸ್ಪೀಕರ್‌ ಮುಂದಾಗಿದ್ದಾರೆ. ಹೀಗಾಗಿ ಯಾವ ಶಾಸಕರು ಸದನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಈ ಪ್ರಶಸ್ತಿ ಪಡೆಯುತ್ತಾರೋ ಎಂಬುದನ್ನು ಕಾದು ನೋಡಬೇಕಾಗಿದೆ. ವಿಧಾನ ಮಂಡಲ ಅಧಿವೇಶನದ ಬಗ್ಗೆ ಜನತೆಯೂ ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ರೈತರು, ವಿದ್ಯಾರ್ಥಿ ಸಮುದಾಯ, ಕಾರ್ಮಿಕ ವರ್ಗ ಸೇರಿದಂತೆ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾವಗೊಂಡು ಪರಿಹಾರ ದೊರಕುವ ಆಶಾಭಾವನೆ ಹೊಂದಿದ್ದಾರೆ. ಹೀಗಾಗಿ ಅಧಿವೇಶನದಲ್ಲಿ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಬೇಕು.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.