Zilla Panchayat and Taluk Panchayat ಚುನಾವಣೆ: ಇನ್ನೂ ವಿಳಂಬ ಆಗದಿರಲಿ


Team Udayavani, Dec 21, 2023, 5:57 AM IST

voter

ಕಳೆದ ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿರುವ, ಅವಧಿ ಮುಗಿದಿರುವ ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಕೊನೆಗೂ ಕಾಲ ಕೂಡಿಬಂದಂತೆ ಕಂಡುಬರುತ್ತಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಕ್ಷೇತ್ರಗಳ ಪುನರ್‌ ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವುದಾಗಿ ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ. ರಾಜ್ಯ ಸರಕಾರ ಹೈಕೋರ್ಟ್‌ಗೆ ನೀಡಿರುವ ಈ ಭರವಸೆಯಿಂದ ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಶೀಘ್ರದಲ್ಲಿಯೇ ಚುನಾವಣೆ ನಡೆಯುವ ಆಶಾವಾದ ಮೂಡಿದೆ. ಸರಕಾರ ನೀಡಿರುವ ಭರವಸೆಯಂತೆಯೇ ಎಲ್ಲ ಪ್ರಕ್ರಿಯೆಗಳು ನಡೆದದ್ದೇ ಆದಲ್ಲಿ ಮುಂದಿನ ಎರಡು ತಿಂಗಳುಗಳ ಒಳಗಾಗಿ ಈ ಸಂಸ್ಥೆಗಳಿಗೆ ಚುನಾವಣೆ ನಡೆದು ಜನರಿಂದ ಚುನಾಯಿತರಾದ ಜನಪ್ರತಿನಿಧಿಗಳು ಅಧಿಕಾರ ಸೂತ್ರವನ್ನು ಹಿಡಿಯಲಿದ್ದಾರೆ.

ಆದರೆ ಮುಂದಿನ ವರ್ಷದ ಎಪ್ರಿಲ್‌-ಮೇಯಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಇದನ್ನು ಮುಂದಿಟ್ಟು ರಾಜ್ಯ ಸರಕಾರ ಮತ್ತು ರಾಜಕೀಯ ಪಕ್ಷಗಳು ಮತ್ತೆ ತಮ್ಮ ಹಳೆ ವರಾತವನ್ನು ಮುಂದುವರಿಸಿದ್ದೇ ಆದಲ್ಲಿ ಹಾಗೂ ಚುನಾವಣ ಆಯೋಗ ಕೂಡ ಲೋಕಸಭೆ ಚುನಾವಣೆ ಸಿದ್ಧತೆಯ ನೆಪವನ್ನು ಮುಂದೆ ಮಾಡಿದ್ದೇ ಆದಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆ ಮತ್ತಷ್ಟು ಕಾಲ ಮುಂದೂಡಲ್ಪಡುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು.

ಏತನ್ಮಧ್ಯೆ ರಾಜ್ಯದ ಹಲವಾರು ನಗರಾಡಳಿತ ಮತ್ತು ಸ್ಥಳೀಯಾಡಳಿತ ಸಂಸ್ಥೆ ಗಳಿಗೆ ಚುನಾವಣೆ ನಡೆದು ವರ್ಷಗಳೇ ಉರುಳಿದ್ದರೂ ಅಧ್ಯಕ್ಷ ಮತ್ತು ಉಪಾ ಧ್ಯಕ್ಷ ಹುದ್ದೆಗಳಿಗೆ ಇನ್ನೂ ಸರಕಾರ ಮೀಸಲಾತಿ ನಿಗದಿಪಡಿಸದೇ ಇರುವುದರಿಂದ ಚುನಾಯಿತ ಪ್ರತಿನಿಧಿಗಳಿನ್ನೂ ಅಧಿಕೃತವಾಗಿ ಕಾರ್ಯನಿರ್ವಹಿಸಲಾಗದ ಇಕ್ಕಟ್ಟಿನ ಸ್ಥಿತಿ ನಿರ್ಮಾಣವಾಗಿದೆ. ಈ ಎಲ್ಲ ಸಂಸ್ಥೆಗಳಲ್ಲಿ ಸದ್ಯಕ್ಕಂತೂ ಅಧಿಕಾರಿ ಗಳದ್ದೇ ದರ್ಬಾರು.
ಪಂಚಾಯತ್‌ ರಾಜ್‌ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಇಂತಹ ಗೊಂದಲ ಹೊಸದೇನಲ್ಲವಾಗಿದ್ದು, ಸರಕಾರ ರಾಜಕೀಯ ಕಾರಣಗಳಿಗಾಗಿ ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ನಿಗದಿಯಂತಹ ವಿಷಯಗಳನ್ನು ಮುಂದಿ ಟ್ಟು ವಿನಾಕಾರಣ ಈ ಸಂಸ್ಥೆಗಳನ್ನು ನಿರ್ಜೀವಗೊಳಿಸುತ್ತಲೇ ಬಂದಿವೆ. ಒಂದು ವೇಳೆ ಚುನಾವಣೆ ನಡೆದರೂ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಮೀಸಲು ನಿಗದಿ ಪ್ರಕ್ರಿಯೆಯನ್ನು ಸರಕಾರಗಳು ರಾಜಕೀಯ ಕಾರಣಗಳಿಗಾಗಿಯೇ ವಿಳಂಬ ಮಾಡುತ್ತಲೇ ಬಂದಿವೆ. ಇದರಿಂದಾಗಿ ಈ ಸಂಸ್ಥೆಗಳು ಸೊರಗು ವಂತಾಗಿವೆ. ಆಡಳಿತ ವಿಕೇಂದ್ರೀಕರಣದ ಉದ್ದೇಶದಿಂದ ಗ್ರಾಮ ಮಟ್ಟದಿಂದ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ರೂಪಿಸಿ ಜಾರಿಗೆ ತರಲಾಗಿದ್ದರೂ ಸರಕಾರದ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆ ಹಾಗೂ ಅತಿಯಾದ ರಾಜಕೀಯ ಹಸ್ತಕ್ಷೇಪದಿಂದ ಈ ಸಂಸ್ಥೆಗಳು “ನಾಮ್‌ ಕೆ ವಾಸ್ತೆ’ ಎಂಬಂತಾಗಿವೆ.

ಇನ್ನಾದರೂ ರಾಜ್ಯ ಸರಕಾರ ತನ್ನ ಹೊಣೆಗಾರಿಕೆಯನ್ನು ಅರಿತುಕೊಂಡು ತನ್ನ ಕರ್ತವ್ಯಗಳನ್ನು ಆದಷ್ಟು ಬೇಗ ನಿರ್ವಹಿಸಿ, ಜಿ.ಪಂ. ಮತ್ತು ತಾ.ಪಂ. ಗಳಿಗೆ ಚುನಾವಣೆ ನಡೆಸಲು ಚುನಾವಣ ಆಯೋಗಕ್ಕೆ ಅವಕಾಶ ಕಲ್ಪಿಸಿಕೊಡಬೇಕು. ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಚುನಾವಣೆಯ ಬಳಿಕ ಮೀಸಲಾತಿ ಘೋಷಿಸು ವುದರ ಬದಲಾಗಿ ಚುನಾವಣ ಪೂರ್ವದಲ್ಲಿಯೇ ಮೀಸಲಾತಿ ಯನ್ನು ನಿಗದಿಪಡಿಸಿ ಈ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳು ಸುಗಮವಾಗಿ ಆಡಳಿತ ನಡೆಸಲು ಸರಕಾರ ಅನುವು ಮಾಡಿಕೊಡಬೇಕು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.