ಎಲ್ಲರೂ ಹುಳಿ ದ್ರಾಕ್ಷಿಗೇ ಕೈ ಚಾಚುವುದೇಕೆ?


Team Udayavani, Feb 26, 2023, 5:31 AM IST

ಎಲ್ಲರೂ ಹುಳಿ ದ್ರಾಕ್ಷಿಗೇ ಕೈ ಚಾಚುವುದೇಕೆ?

ಪ್ರಕಾಶ, ಒಂದು ಖಾಸಗಿ ಕಂಪೆನಿಯಲ್ಲಿ ಮ್ಯಾನೇಜರ್‌. ಆ ಕಂಪೆನಿಯಲ್ಲಿ ಸಂಬಳ ಚೆನ್ನಾಗಿದೆ. ಎಲ್ಲ ಸವಲತ್ತುಗಳೂ ಇವೆ. ಅಲ್ಲಿನ ಸಂಪಾದನೆಯ ಹಣದಿಂದಲೇ ಪ್ರಕಾಶ ಮೈಸೂರಿನಲ್ಲಿ ಒಂದು ಸೈಟ್‌ ಖರೀದಿಸಿದ್ದಾನೆ. ಅವನದು ಹೊರೆಯೇ ಇಲ್ಲದ ಸಂತೃಪ್ತ ಬದುಕು. ಆದರೂ ಪ್ರಕಾಶನಿಗೆ ನೆಮ್ಮದಿಯಿಲ್ಲ. ಅವನ ಜತೆಗೇ ಓದಿಕೊಂಡ ಒಂದಿಬ್ಬರು ತಹಶೀಲ್ದಾರ್‌ ಹುದ್ದೆ ಯಲ್ಲಿದ್ದಾರೆ. ಇನ್ನೊಂದಿಬ್ಬರು ಅಮೆರಿಕದಲ್ಲಿದ್ದಾರೆ. ಇದನ್ನೆಲ್ಲ ಸುಮ್ಮನೇ ನೆನಪಿಸಿಕೊಂಡರೂ ಸಾಕು; ಪ್ರಕಾಶ ಖಿನ್ನನಾಗುತ್ತಾನೆ.

ಗೌರಿಯ ಗಂಡ ಬಿಸಿನೆಸ್‌ಮನ್‌. ಒಂದಿಷ್ಟು ಕೈ ಬಿಗಿಹಿಡಿದು ಖರ್ಚು ಮಾಡುತ್ತಾನೆ. ಈ ಕಾರಣಕ್ಕೇ ಗೌರಿಗೆ ಗಂಡನೆಂದರೆ ಅಸಮಾಧಾನ, ತಾತ್ಸಾರ. “ಪಕ್ಕದ್ಮನೆ ಪಂಕಜಾಳ ಗಂಡನನ್ನ ನೋಡಿ ಕಲಿತುಕೊಳಿ. ಮೊನ್ನೆ ಅವಳು ಹಾಗೇ ಸುಮ್ಮನೆ ಮಾತಾಡುತ್ತಾ, ಸೀರೆ ತಗೋಬೇಕಿತ್ತು’ ಅಂದಳಂತೆ. ಅಷ್ಟಕ್ಕೇ ಅವನು ಮರುಮಾತಾಡದೆ, ಹತ್ತು ಸಾವಿರ ರೂ. ತೆಗೆದು ಟೇಬಲ್‌ ಮೇಲಿಟ್ಟು ಹೋದನಂತೆ. ನೀವೂ ಇದೀರ ದಂಡಕ್ಕೆ! ಆರು ಸಾವಿರ ಕೇಳಿದ್ರೆ ಎರಡು ಸಾವಿರ ಕೊಟ್ಟು ಹೋಗಿಬಿಡ್ತೀರ’ ಎಂದೆಲ್ಲ ಅವಳು ಅವಾಗಾವಾಗ ಜೋರು ಮಾಡುತ್ತಾಳೆ. ಅವಳಿಗೆ ಗಂಡನಲ್ಲಿ ಏನೋ ಕೊರತೆ ಕಾಣಿಸುತ್ತದೆ. ನನ್ನ ಗಂಡನೂ ಪಕ್ಕದ್ಮನೆಯವಳ ಗಂಡನ ಥರಾನೇ ಇರಬಾರದಿತ್ತೆ ಅನಿಸುತ್ತದೆ!
ರಫೀಕ್‌, ಎನ್‌ ಫೀಲ್ಡ್ ಬೈಕ್‌ನ ಒಡೆಯ. ‘ಒಂದೂಕಾಲು ಲಕ್ಷ ಕೊಟ್ಟು ಅದನ್ನು ತಗೊಂಡೆ’ ಅನ್ನುವುದು ಅವನ ಮಾತು. ದಿನವೂ ಬೈಕ್‌ನ ಬಗ್ಗೆ ಕೊಚ್ಚಿಕೊಳ್ಳುತ್ತಿದ್ದವನು ವಾರದಿಂ ದ ಮಂಕಾಗಿದ್ದಾನೆ. ಡಿಪ್ರಶನ್‌ಗೆ ಹೋದವನಂತೆ ವರ್ತಿಸುತ್ತಿದ್ದಾನೆ. ಇದ್ದಕ್ಕಿದ್ದಂತೆ ಇವನಿಗೆ ಏನಾಯಿತು ಎಂದು ವಿಚಾರಿಸಿದರೆ, ಎದುರು ಮನೆಯವನು ಎರಡು ಲಕ್ಷ ಕೊಟ್ಟು ನ್ಪೋರ್ಟ್ಸ್ ಬೈಕ್‌ ಖರೀದಿಸಿರುವ ಸಂಗತಿ ತಿಳಿಯಿತು. ಈ ಕಾರಣಕ್ಕೆ ಆತ ಖನ್ನನಾಗಿದ್ದ.

ಈವರೆಗೂ ಹೇಳಿದ ಉದಾಹರಣೆ ಗಳೆಲ್ಲ ದಿನನಿತ್ಯದ ಬದುಕಿನಲ್ಲಿ ನಾವೆಲ್ಲರೂ ಕಾಣುತ್ತಲೇ ಇರುವಂಥವು. ಇರುವುದನ್ನು ಬಿಟ್ಟು ಇಲ್ಲದ್ದರ ಕುರಿತೇ ಯೋಚಿಸುವ ಜನರ ಬಗ್ಗೆ ದಿನವಿಡೀ ಉದಾಹರಣೆಗಳನ್ನು ನೀಡಬಹುದು. ಇನ್ನು ಕಾಲೇಜಿಗೆ ಹೋಗುವ ಮಕ್ಕಳು ಪಾಕೆಟ್‌ ಮನಿ, ಬೈಕ್‌, ಮೊಬೈಲ್‌ ಫೋನ್‌/ ದುಬಾರಿ ಬೆಲೆಯ ಶೂ, ವಾಚ್‌ ಕೊಡಿಸುವಂತೆ ಹೆತ್ತವರನ್ನು ಕೇಳುವುದು, ಅದಕ್ಕಾಗಿ ಒತ್ತಾಯಿಸುವುದು, ಎಮೋಶನಲ್‌ ಬ್ಲಾಕ್‌ವೆುàಲ್‌ ಮಾಡುವುದು, ಕಡೆಗೆ- ಇದೇ ವಿಷಯಕ್ಕೆ ಜಗಳವನ್ನೂ ಮಾಡಿಬಿಡುವುದು ತಮ್ಮ ಬಳಿ ಆ ವಸ್ತುವಿಲ್ಲ ಅನ್ನುವ ಕಾರಣದಿಂದಲ್ಲ, ಬದಲಾಗಿ ಅದು ತಮ್ಮ ಜತೆಗಾರರ ಬಳಿ ಇದೆ ಎಂಬ ಕಾರಣಕ್ಕೆ! ಇಲ್ಲಿಯೂ ಅಷ್ಟೆ; ಸಂತೃಪ್ತಿ, ಸಮಾಧಾನದ ಬದುಕಿಗೆ ಅಗತ್ಯವಿರುವ ಎಲ್ಲವೂ ನಮಗಿದೆ ಎಂದು ಯೋಚಿಸಬೇಕಾದ ಮನಸ್ಸು, ಇರುವುದನ್ನು ಕಂಡು ಸಂಭ್ರಮಿಸುವ ಬದಲು ಇರದುದರ ಕುರಿತೇ ಯೋಚಿಸಿ ಕನಲುತ್ತದೆ, ಕೊರಗುತ್ತದೆ.
****
ಯಾಕೆ ಹೀಗಾಗುತ್ತದೆ? ಇರುವುದೆಲ್ಲ ವನ್ನೂ ಬಿಟ್ಟು ಇಲ್ಲದ್ದಕ್ಕೆ ಈ ಹಾಳು ಮನಸೇಕೆ ಮನಸ್ಸು ಆಸೆಪಡುತ್ತದೆ ಎಂಬ ಪ್ರಶ್ನೆಗೆ “ಇದಮಿತ್ಥಂ’ ಎಂಬಂಥ ಉತ್ತರವಿಲ್ಲ. ಆದರೆ ಅಂಥದೊಂದು ತಹತಹಕ್ಕೆ ಆಸೆಯೇ (ದುರಾಸೆಯೇ) ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ. ಏಕೆಂದರೆ ಮನುಷ್ಯ ಅನ್ನಿಸಿಕೊಂಡ ಮೇಲೆ ಎಲ್ಲರೂ ಒಂದೇ ರೀತಿ ಇರಲು, ಬದುಕಲು ಸಾಧ್ಯವಿಲ್ಲ. ಈ ಸಂಗತಿ ಎಲ್ಲರಿಗೂ ಗೊತ್ತಿರುತ್ತದೆ. ಹಾಗಿದ್ದರೂ ಕೈಗೆ ಎಟುಕದ ದ್ರಾಕ್ಷಿಗೇ ಎಲ್ಲರೂ ಆಸೆ ಪಡುತ್ತಾರೆ.

ಈ ಭೂಮಿ ಮೇಲೆ ಯಾರೂ ಶಾಶ್ವತವಲ್ಲ ಎಂದು ವೇದಾಂತ ಹೇಳುವವನೂ ಒಮ್ಮೆ ತನ್ನ ಬೋಳು ನೆತ್ತಿಯನ್ನು ಸವರಿಕೊಂಡು ಎದುರಿಗೆ ಕೂತವನ ಹಿಪ್ಪೆ ಕೂದಲಿನ ತಲೆಯನ್ನೇ ಆಸೆಯಿಂದ ನೋಡುತ್ತಾನೆ. ಆ ಕ್ಷಣಕ್ಕೆ ಅವನ ವಿದ್ಯೆ, ಅರಿವು, ಅಗಾಧ ಜ್ಞಾನ ಎಲ್ಲವೂ ಮಾಯವಾಗಿ, ಆತ ಸಾಮಾನ್ಯ ಮನುಷ್ಯನಂತೆ ಯೋಚಿಸಲು ತೊಡಗುತ್ತಾನೆ. ಇಲ್ಲದ್ದರ ಬಗ್ಗೆ ಧ್ಯಾನಿಸುವವರ ವಿವರ ಇಷ್ಟಕ್ಕೇ ನಿಲ್ಲುವುದಿಲ್ಲ. ಮೈತುಂಬ ಒಡವೆ ಹೇರಿಕೊಂಡಿದ್ದರೂ- “ನಿಮ್ಮ ಆಫೀಸಿನಲ್ಲಿ ಯಾರೋ ಅಪರಿಚಿತರಿಗೆ ದಾನ ಮಾಡೋಕೆ ಹಣವಿರುತ್ತೆ. ನಾನು ಒಂದು ಒಡವೆ ಕೇಳಿದ್ರೆ ದುಡ್ಡಿಲ್ಲ ಅಂತೀರಲಿ?’ ಎಂದು ರೇಗುವ ಹೆಂಡತಿ; ಹುಡುಗ ಹಳ್ಳಿಯಲ್ಲಿದ್ದಾನೆ ಎಂಬ ಕಾರಣದಿಂದಲೇ ಮದುವೆಗೆ ಒಪ್ಪದೆ, ಬೆಂಗಳೂರಿನ ಗಂಡೇ ಬೇಕು ಎಂದು ಹಟ ಹಿಡಿಯುವ ಹುಡುಗಿ; ಯಾವುದೋ ಗಾಳಿಮಾತು ಕೇಳಿ, ಅದನ್ನೇ ನಿಜವೆಂದು ಭಾವಿಸಿ- “ಛೆ, ನಾನು ಅಂಥ ಕಡೆ ಕೆಲಸ ಮಾಡಬೇಕಿತ್ತು’ ಎಂದು ಹೇಳಿಕೊಂಡು ನರಳುವ ನಾವು-ನೀವು, ಸದಾ ಇರದುದರ ಕಡೆಗೇ ಯೋಚಿಸುವವರೇ.ಯಾಕೆ ಹೀಗಾಗುತ್ತದೆ ಎಂದರೆ ಒಬ್ಬೊಬ್ಬರು ಒಂದೊಂದು ಕಾರಣ ಹೇಳಬಹುದು. ಆದರೆ ಎಟುಕದ ದ್ರಾಕ್ಷಿಗೆ ಆಸೆಪಟ್ಟವರೆಲ್ಲ ನಿರಾಸೆಯ ಜತೆಗೇ ಬದುಕುವಂತಾಗುತ್ತದೆ ಎಂಬುದಷ್ಟೇ ಸತ್ಯ.

-ಎ.ಆರ್‌.ಮಣಿಕಾಂತ್‌

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಚೆ ಅಣ್ಣನಿಗೆ ಒಂದು ಅಕ್ಕರೆಯ ಪತ್ರ

Postman ಅಂಚೆ ಅಣ್ಣನಿಗೆ ಒಂದು ಅಕ್ಕರೆಯ ಪತ್ರ

ಅಪ್ಪಾ ಹೆದರಬೇಡ, ನಿನ್ನ ಕಾಲಾಗಿ ನಾನಿರ್ತೇನೆ

ಅಪ್ಪಾ ಹೆದರಬೇಡ, ನಿನ್ನ ಕಾಲಾಗಿ ನಾನಿರ್ತೇನೆ

MUNNA

ಕೆಮರಾ ಕಣ್ಣು ಮಿಟುಕಿಸುತ್ತಾ “ಕಮಾಲ್‌”ಮಾಡಿದ!

ಕಷ್ಟ ಕೊಡುವ ದೇವರು ಖುಷಿಯನ್ನೂ ಕೊಡುತ್ತಾನೆ

ಕಷ್ಟ ಕೊಡುವ ದೇವರು ಖುಷಿಯನ್ನೂ ಕೊಡುತ್ತಾನೆ

ನಮ್ಮ ತಪ್ಪುಗಳಿಗೆ ಬದುಕಿದ್ದಾಗಲೇ ಶಿಕ್ಷೆ ಆಗಿಬಿಡುತ್ತದೆ

ನಮ್ಮ ತಪ್ಪುಗಳಿಗೆ ಬದುಕಿದ್ದಾಗಲೇ ಶಿಕ್ಷೆ ಆಗಿಬಿಡುತ್ತದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.