ರಾಜ್ಯದಲ್ಲಿ ವಿಜಯೇಂದ್ರ ‘ಸಿಎಂ ಕಾರುಬಾರು’ : ಸಿದ್ದರಾಮಯ್ಯ


Team Udayavani, Nov 23, 2020, 6:16 AM IST

ರಾಜ್ಯದಲ್ಲಿ ವಿಜಯೇಂದ್ರ ಸಿಎಂ ಕಾರುಬಾರು: ಸಿದ್ದರಾಮಯ್ಯ

ಪ್ರಸಕ್ತ ರಾಜಕಾರಣ ಪರಿಸ್ಥಿತಿ, ಕಾಂಗ್ರೆಸ್‌ನಲ್ಲಿ ನಾಯಕತ್ವದ ಗೊಂದಲ, ಬಣ ರಾಜಕೀಯ, ಯಡಿಯೂರಪ್ಪ ಅಧಿಕಾರದ ಭವಿಷ್ಯ ಕುರಿತು ಉದಯವಾಣಿ ಖಡಕ್‌ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ನೇರಾ ನೇರ ಉತ್ತರಿಸಿದ್ದಾರೆ.

 ನೀವು ಬಿಜೆಪಿ ಸರಕಾರಕ್ಕೆ ಪರೋಕ್ಷವಾಗಿ ಬೆಂಬಲಕ್ಕೆ ನಿಂತಿದ್ದೀರಂತೆ ಹೌದಾ ?
ನರೇಂದ್ರ ಮೋದಿ ವಿರುದ್ಧ ನೇರವಾಗಿ ಅಟ್ಯಾಕ್‌ ಮಾಡೋರು ಯಾರು? ಯಡಿಯೂರಪ್ಪನ ವಿರುದ್ಧ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡಿರೋದು ಯಾರು? ಆರ್‌ಎಸ್‌ಎಸ್‌ನವರು ಆ ರೀತಿ ಆರೋಪ ಮಾಡುತ್ತಾರೆ. ಅವರ ವಿರುದ್ಧ ಕಟು
ಶಬ್ದ ಬಳಸಿ ಮಾತನಾಡುವವನು ನಾನೊಬ್ಬನೇ.

 ಅಮಿತ್‌ ಶಾ ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡುತ್ತೇವೆ ಎಂದು ಹೇಳುತ್ತಿದ್ದಾರಲ್ಲ ?
ಅವರಿಗೆ ಮೊದಲು ಯಡಿಯೂರಪ್ಪ ಕುಟುಂಬ ರಾಜಕಾರಣ ಅಂತ್ಯ ಹಾಡೋಕೆ ಹೇಳಿ. ಯಡಿಯೂರಪ್ಪ ಡಿ -ಜೂರೆ (ಕಾನೂನು ಪ್ರಕಾರ) ಮುಖ್ಯಮಂತ್ರಿ, ವಿಜಯೇಂದ್ರ ಡಿಫ್ಯಾಕ್ಟೋ ಸಿಎಂ, ರಾಘವೇಂದ್ರ ಸಂಸದ. ಮೊದಲು ಅವರ ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲಿ.

 ಪ್ರಧಾನಿ ಮುಂದೆ ರಾಹುಲ್‌ ಗಾಂಧಿ ಎಳಸು ಅಂತಾರಲ್ಲ?
ಆರ್‌ಎಸ್‌ಎಸ್‌ನವರು ಆ ರೀತಿ ಆರೋಪ ಮಾಡುತ್ತಾರೆ. ರಾಹುಲ್‌ ಗಾಂಧಿ ಕೂಡ ಪ್ರೌಢ ರಾಜಕಾರಣಿಯೇ. ಪ್ರಧಾನ ಕಾರ್ಯದರ್ಶಿಯಾಗಿ, ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ವಿಜಯೇಂದ್ರ ಏನು, ಪ್ರೌಢ ರಾಜಕಾರಣಿಯೇ?

 ಕಾಂಗ್ರೆಸ್‌ನಲ್ಲಿ ಏನಾಗ್ತಿದೆ, ಸೋಲಿನ ಮೇಲೆ ಸೋಲಾಗುತ್ತಿದೆಯಲ್ಲ ಯಾಕೆ?
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜ, ಬಿಜೆಪಿ ಹಿಂದೆ ಜನಸಂಘ ಇದ್ದಾಗ ಎಷ್ಟು ಸೀಟು ಗೆದ್ದಿತ್ತು? ಈಗ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯ ಸುಳ್ಳು ಆಶ್ವಾಸನೆಗೆ ಮಾರುಹೋಗಿ ಜನರು ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಬಿಜೆಪಿಯವರ ನಿಜವಾದ ಬಣ್ಣ ಬಯಲಾದ ಮೇಲೆ ಮತ್ತೆ ಬದಲಾವಣೆ ಮಾಡುತ್ತಾರೆ. ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರುತ್ತದೆ.

 ಶಿರಾ ಚುನಾವಣೆ ಸೋಲಿನ ಹೊಣೆ ನೀವು ಹೊರುತ್ತೀರಾ?
ಉಪ ಚುನಾವಣೆ ಸೋಲಿಗೆ ಎಲ್ಲರೂ ಹೊಣೆ. ನಾನು, ಕೆಪಿಸಿಸಿ ಅಧ್ಯಕ್ಷರು, ಬೇರೆ ನಾಯಕರು ಎಲ್ಲರೂ ಹೊಣೆಗಾರರು. ಒಬ್ಬರನ್ನೇ ಹೊಣೆಗಾರರನ್ನಾಗಿ ಮಾಡಲು ಆಗುವುದಿಲ್ಲ. ನಾವು ಶಿರಾದಲ್ಲಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ಇತ್ತು. ಬಿಜೆಪಿ ಅಧಿಕಾರ ದುರುಪಯೋಗ, ಹಣದ ಹೊಳೆ ಹರಿಸಿದ್ದರಿಂದ ಬಿಜೆಪಿ ಗೆದ್ದಿತು.

 ರಾಜ್ಯ ಕಾಂಗ್ರೆಸ್‌ನಲ್ಲಿ ಎರಡು ಬಣ ಇದೆಯಾ ?
ಅದು ಸುಳ್ಳು. ಯಾವುದೇ ಬಣ ಇಲ್ಲ. ಇಲ್ಲಿ ರಾಹುಲ್‌ , ಸೋನಿಯಾ ಗಾಂಧಿ ಒಂದೇ ಬಣ.

ಖರ್ಗೆಯವರು “ಒಗ್ಗಟ್ಟಿಲ್ಲದಿದ್ದರೆ ಪಕ್ಷ ನಾಶವಾಗಲಿದೆ’ ಅಂತ ಯಾರನ್ನು ಗುರಿ ಮಾಡಿ ಹೇಳುತ್ತಿದ್ದಾರೆ ?
ಅವರು ಕೇಂದ್ರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತು ಹಾಗೆ ಹೇಳಿದ್ದಾರೆ. ರಾಜ್ಯದ ಬಗ್ಗೆ ಹೇಳಿಲ್ಲ. ಕೇಂದ್ರದಲ್ಲಿ ಕೆಲವರು ನಾಯಕತ್ವವನ್ನು ಪ್ರಶ್ನೆ ಮಾಡುತ್ತಿದ್ದಾರೆ. ಬಿಹಾರ ಚುನಾವಣೆ ಸೋಲಿಗೆ ರಾಹುಲ್‌ ಗಾಂಧಿ ಕಾರಣ ಅಂತ ಹೇಳುತ್ತಿದ್ದಾರಲ್ಲ. ಅದಕ್ಕೆ ಬೇಸರಗೊಂಡು ಖರ್ಗೆ ಆ ರೀತಿ ಹೇಳುತ್ತಿದ್ದಾರೆ.

 ರಾಜ್ಯದಲ್ಲಿ ಮಧ್ಯಾಂತರ ಚುನಾವಣೆ ಬರುತ್ತದೆ ಅನಿಸುತ್ತದೆಯೇ ನಿಮಗೆ?
ನನ್ನ ಪ್ರಕಾರ ಮುಖ್ಯಮಂತ್ರಿ ಬದಲಾವಣೆ ಆಗಬಹುದು. ಅವರಿಗೆ ಬಹುಮತ ಇರುವುದರಿಂದ ತತ್‌ಕ್ಷಣ ಚುನಾವಣೆ ಬರುವುದು ಅನುಮಾನ. ನನ್ನ ಪ್ರಕಾರ ಸಿಎಂ ಬದಲಾವಣೆ ಆಗುವುದು ಖಚಿತ.

 ಅವಕಾಶ ಸಿಕ್ಕರೆ ಸಿಎಂ ಆಗುತ್ತೀರಾ ?
ಮೊದಲು ನಾವೆಲ್ಲ ಸೇರಿ ಪಕ್ಷವನ್ನು ಬಹುಮತ ತರಬೇಕು. ಕೂಸು ಹುಟ್ಟುವ ಮುನ್ನ ನಾನೇ ಸಿಎಂ ಆಗುತ್ತೇನೆ ಅಂತ ಹೇಳಿಕೊಳ್ಳಲು ಆಗುತ್ತದೆಯೇ?

 ಮರಾಠಾ ಅಭಿವೃದ್ಧಿ ನಿಗಮ ಮಾಡಿರುವುದಕ್ಕೆ ನಿಮ್ಮ ಅಭಿಪ್ರಾಯ ಏನು ?
ಯಾರು ಕನ್ನಡವನ್ನು ದ್ವೇಷಿಸುತ್ತಾರೋ ಅವರನ್ನು ಖಂಡಿಸುತ್ತೇನೆ. ರಾಜ್ಯದಲ್ಲಿರುವ ಯಾವುದೇ ಜಾತಿಯವರಿದ್ದರೂ ಅವರೆಲ್ಲರೂ ಕನ್ನಡಿಗರೇ. ರಾಜಕೀಯ ಓಲೈಕೆಗಾಗಿ ನಿಗಮ ಮಂಡಳಿ ಮಾಡುವುದು ಸರಿಯಲ್ಲ. ಈಗ ರಾಜಕೀಯ ಓಲೈಕೆಗೆ ಮಾಡಿದ್ದಾರೆ.

 ಶಂಕರ ಪಾಗೋಜಿ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಳಿದ ಕಡೆ ಸಚಿವರ ಕುಟುಂಬಕ್ಕೆ ಟಿಕೆಟ್‌ ಕೊಟ್ಟರು, ಕೋಲಾರದಲ್ಲಿ ಮಾತ್ರ ಏಕೆ ಹೀಗೆ?

Kolar:ಉಳಿದ ಕಡೆ ಸಚಿವರ ಕುಟುಂಬಕ್ಕೆ ಟಿಕೆಟ್‌ ಕೊಟ್ಟರು, ಕೋಲಾರದಲ್ಲಿ ಮಾತ್ರ ಏಕೆ ಹೀಗೆ?

Elections ಹೊಸದಲ್ಲ, ಸ್ಪರ್ಧೆ ಮಾತ್ರ ಹೊಸದು: ಮೃಣಾಲ್‌ ಹೆಬ್ಬಾಳ್ಕರ್

Elections ಹೊಸದಲ್ಲ, ಸ್ಪರ್ಧೆ ಮಾತ್ರ ಹೊಸದು: ಮೃಣಾಲ್‌ ಹೆಬ್ಬಾಳ್ಕರ್

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಪ್ರತೀ ಊರಲ್ಲೂ ಗುಣಮುಖರಾದ 10ರಿಂದ 20 ಹೃದ್ರೋಗಿ ಕುಟುಂಬಗಳಿವೆ, ಅವರೇ ಕಾರ್ಯಕರ್ತರು

ಪ್ರತೀ ಊರಲ್ಲೂ ಗುಣಮುಖರಾದ 10ರಿಂದ 20 ಹೃದ್ರೋಗಿ ಕುಟುಂಬಗಳಿವೆ, ಅವರೇ ಕಾರ್ಯಕರ್ತರು

S. T. Somashekhar; ಇಷ್ಟೆಲ್ಲ ಅವಮಾನ ಆದ ಮೇಲೆ ಅಲ್ಲಿದ್ದು ಏನು ಮಾಡಲಿ?

S. T. Somashekhar; ಇಷ್ಟೆಲ್ಲ ಅವಮಾನ ಆದ ಮೇಲೆ ಅಲ್ಲಿದ್ದು ಏನು ಮಾಡಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.