ಮಹಾರಾಷ್ಟ್ರದಲ್ಲಿ ಬಿಜೆಪಿ ಭದ್ರ ಬುನಾದಿ


Team Udayavani, Feb 27, 2017, 11:12 AM IST

BJP_symbol.jpg

ಮಹಾರಾಷ್ಟ್ರದಲ್ಲಂತೂ ಒಂದು ಕಾಲದಲ್ಲಿ ಅಬ್ಬರಿಸುತ್ತಿದ್ದ ಶಿವಸೇನೆ ಇದೀಗ ಹಲ್ಲು ಕಿತ್ತ ಹಾವಿನಂತಾಗಿದೆ. ಆಡಳಿತವಿರೋಧಿ ಅಲೆಯನ್ನು ಹಿಮ್ಮೆಟ್ಟಿಸಿ ಬಿಎಂಸಿಯಲ್ಲಿ ಮತ್ತೆ ಗೆಲುವು ಸಾಧಿಸುವಲ್ಲಿ ಶಿವಸೇನೆ ಯಶಸ್ವಿಯೇನೋ ಆಗಿದೆ. ಆದರೆ, ಬಿಜೆಪಿಯ ಅದರಲ್ಲೂ ವಿಶೇಷವಾಗಿ ಫ‌ಡ್ನವೀಸ್‌ ಅವರ ಜನಪ್ರಿಯತೆಯನ್ನು ಕುಗ್ಗಿಸುವಲ್ಲಿ ವಿಫ‌ಲವಾಗಿದೆ. ಇದೀಗ ಎರಡೂ ಪಕ್ಷಗಳು ಸ್ಪಷ್ಟ ಬಹುಮತಕ್ಕೆ ಬೇಕಾದ 114 ಸ್ಥಾನಗಳನ್ನು ಪಡೆಯುವಲ್ಲಿ ಸೋತಿರುವ ಕಾರಣ, ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆಯಿದೆ. ಮತ್ತೆ ಶಿವಸೇನೆ ಮತ್ತು ಬಿಜೆಪಿ ಕೈಜೋಡಿಸಲೇಬೇಕಾಗಿದೆ. ಇಲ್ಲದಿದ್ದರೆ, ಶಿವಸೇನೆಗೆ ಉಳಿಗಾಲವಿಲ್ಲ. 

ಏಷ್ಯಾದಲ್ಲೇ ಅತ್ಯಂತ ಶ್ರೀಮಂತ ಹಾಗೂ ದೊಡ್ಡ ಮಹಾನಗರಪಾಲಿಕೆಯಾದ ಮುಂಬೈ ಸೇರಿದಂತೆ ಮಹಾರಾಷ್ಟ್ರದ 10 ನಗರ ಪಾಲಿಕೆಗಳು ಮತ್ತು 25 ಜಿಲ್ಲಾ ಪರಿಷತ್‌ಗಳ ಚುನಾವಣೆಯ ಫ‌ಲಿತಾಂಶ 4 ದಿನಗಳ ಹಿಂದಷ್ಟೇ ಹೊರಬಿದ್ದಿದೆ. ವಿಧಾನಸಭೆ, ಲೋಕಸಭೆ ಚುನಾವಣೆಯಂತೆ ಸ್ಥಳೀಯ ಚುನಾವಣೆಗಳಿಗೂ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತಿರುವುದು ಇತ್ತೀಚೆಗಿನ ಹೊಸ ಟ್ರೆಂಡ್‌. ಸ್ಥಳೀಯ ಸಂಸ್ಥೆ ಚುನಾವಣೆಗಳ ಫ‌ಲಿತಾಂಶವು ರಾಜ್ಯಮಟ್ಟದ ರಾಜಕೀಯ ಲೆಕ್ಕಾಚಾರದಲ್ಲಿ ತನ್ನದೇ ಆದ ಪ್ರಭಾವವನ್ನು ಬೀರುತ್ತಿರುವುದು ಇದಕ್ಕೆ ಕಾರಣವಿರಬಹುದು.

ಈಗ ಮಹಾರಾಷ್ಟ್ರದ ಫ‌ಲಿತಾಂಶವನ್ನೇ ನೋಡೋಣ. 25 ವರ್ಷಗಳಿಂದಲೂ ಮಿತ್ರರಾಗಿದ್ದ ಬಿಜೆಪಿ ಮತ್ತು ಶಿವಸೇನೆ ಈ ಬಾರಿ ಪರಸ್ಪರ ದೂರವಾಗಿ, ಪ್ರತ್ಯೇಕವಾಗಿ ಸ್ಪರ್ಧೆಗಿಳಿದ ಕಾರಣ, ಈ ಚುನಾವಣೆಯು ದೇಶಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಆದರೆ, ಅಚ್ಚರಿಯೆಂಬಂತೆ, ಮಹಾರಾಷ್ಟ್ರದಾದ್ಯಂತ ಬಿಜೆಪಿ ಗಣನೀಯ ಮುನ್ನಡೆ ಸಾಧಿಸಿದೆ. ಅಷ್ಟೇ ಏಕೆ, 37 ಸಾವಿರ ಕೋಟಿ ರೂ.ಗೂ ಹೆಚ್ಚಿನ ಬಜೆಟ… ಹೊಂದಿರುವ ಶ್ರೀಮಂತ ಪಾಲಿಕೆಯಾದ ಬೃಹನ್ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ತನ್ನ ಸ್ಥಾನವನ್ನು 31ರಿಂದ 82ಕ್ಕೆ ಹೆಚ್ಚಿಸಿಕೊಂಡಿದೆ. ಅಂದರೆ, ಶಿವಸೇನೆಗಿಂತ ಕೇವಲ 2 ಸೀಟುಗಳು ಕಡಿಮೆ. ಮುಂಬೈ ಹೊರತಾಗಿ ಇತರ ಪಾಲಿಕೆಗಳಲ್ಲಿ ಬಿಜೆಪಿಯ ಗೆಲುವಿನ ಓಟ ನೋಡಿದರೆ, ಶಿವಸೇನೆಯು ಮುಂಬೈಯನ್ನಷ್ಟೇ ಅಲ್ಲ, ಇಡೀ ರಾಜ್ಯದ ಹಿಡಿತ ಕಳೆದುಕೊಳ್ಳುತ್ತಿರುವುದನ್ನು ಊಹಿಸಿಕೊಳ್ಳಬಹುದು. ಬಿಜೆಪಿಯೊಂದಿಗಿನ 2 ದಶಕಗಳ ಮೈತ್ರಿಗೆ ಶಿವಸೇನೆ ಗುಡ್‌ಬೈ ಹೇಳಿದೊಡನೆ, ಇದರಿಂದ ಬಿಜೆಪಿಗೆ ಭಾರೀ ಹೊಡೆತ ಬೀಳಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ಈ ಊಹಾಪೋಹವನ್ನು ಸುಳ್ಳಾಗಿಸಿದ್ದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫ‌ಡ್ನವೀಸ್‌ ಅವರ ಜನಪ್ರಿಯತೆ, ಕ್ಲೀನ್‌ ಇಮೇಜ…, ಇದ್ದೂ ಇಲ್ಲದಂತಿರುವ ಪ್ರತಿಪಕ್ಷಗಳು (ಕಾಂಗ್ರೆಸ್‌, ಎನ್‌ಸಿಪಿ) ಹಾಗೂ ಶಿವಸೇನೆಯ ಅಹಂ.
 
ಹೌದು. 2019ರ ವಿಧಾನಸಭೆ ಚುನಾವಣೆಯ ಸೆಮಿಫೈನಲ… ಎಂದೇ ಪರಿಗಣಿಸಲಾಗಿದ್ದ ಈ ಚುನಾವಣೆಯಲ್ಲಿ “ಮ್ಯಾನ್‌ ಆಫ್ ದಿ ಮ್ಯಾಚ್‌’ ಆಗಿ ಮಿಂಚಿದವರು ಫ‌ಡ್ನವೀಸ್‌. ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ತನ್ನ ಒಂದೂವರೆ ವರ್ಷದ ಆಡಳಿತದ ಜನಾಭಿಪ್ರಾಯ ಎಂದು ಭಾವಿಸಿಕೊಂಡು, ಪ್ರತಿಷ್ಠೆಯನ್ನೇ ಪಣಕ್ಕಿಟ್ಟು  ಪ್ರಚಾರದ ನೇತೃತ್ವ ವಹಿಸಿಕೊಂಡರು. ಶಿವಸೇನೆಯು ಜಿದ್ದಿಗೆ ಬಿದ್ದು ಸ್ಪರ್ಧಿಸುತ್ತಿದೆ ಎಂದಾಗ ಸ್ವಲ್ಪವೂ ಧೈರ್ಯಗೆಡದೇ ಏಕಾಂಗಿಯಾಗಿ ಸ್ಪರ್ಧಿಸುವ ಸವಾಲನ್ನು ಸ್ವೀಕರಿಸಿದರು. ಅಭ್ಯರ್ಥಿಗಳ ಆಯ್ಕೆ ವೇಳೆಯೂ ಸ್ಥಳೀಯ ನಾಯಕರಿಗೆ ಆದ್ಯತೆ ನೀಡಿದರು. ಮತದಾರರ ನಾಡಿಮಿಡಿತವನ್ನು ಅರಿತುಕೊಂಡು ಪ್ರತಿ ಹೆಜ್ಜೆಯನ್ನಿಟ್ಟರು. ಇಲ್ಲಿ ಬಿಜೆಪಿಯ ಅತ್ಯದ್ಭುತ ಕಾರ್ಯತಂತ್ರವು ಫ‌ಲಿಸಿತು. ಫ‌ಸ್ಟ್‌ ರ್‍ಯಾಂಕ್‌ ಬರಬೇಕೆಂದು ವಿದ್ಯಾರ್ಥಿ ಹೇಗೆ ನಿಷ್ಠೆಯಿಂದ ಹಗಲಿರುಳು ಶ್ರಮಿಸುತ್ತಾನೋ, ಅಂಥದ್ದೇ ಮನಸ್ಥಿತಿ ಫ‌ಡ್ನವೀಸ್‌ರದ್ದಾಗಿತ್ತು. ಪ್ರತಿಯೊಂದು ವಾರ್ಡ್‌, ಪ್ರತಿ ನಗರದ ಬಗ್ಗೆಯೂ ವಿಸ್ತೃತವಾಗಿ ರಿಸರ್ಚ್‌ ಮಾಡುತ್ತಾ, ಅಲ್ಲಿಗೇನು ಬೇಕು ಎಂಬುದನ್ನು ಅರಿಯುತ್ತಾ ಮಾಸ್ಟರ್‌ ಪ್ಲ್ಯಾನ್‌ ರೂಪಿಸಿದರು. ಬ್ಯುಸಿನೆಸ್‌ ಮ್ಯಾನೇಜ…ಮೆಂಟ್‌ನಲ್ಲಿನ ಸ್ನಾತಕೋತ್ತರ ಪದವಿಯೂ ಅವರಿಗೆ ರಾಜಕೀಯ ಕಾರ್ಯತಂತ್ರ ರೂಪಿಸುವಲ್ಲಿ ನೆರವಾಗಿರಬಹುದು. ಅಷ್ಟೇ ಅಲ್ಲ, ಒಂದು ಸಮುದಾಯವನ್ನು ಕೇಂದ್ರವಾಗಿಟ್ಟುಕೊಂಡು ಪ್ರಚಾರ ನಡೆಸುವ ತನ್ನ ಹಳೆಯ ಚಾಳಿ ಕೈಬಿಟ್ಟು, ಎಲ್ಲರನ್ನೊಳಗೊಂಡ ನೀತಿಗೆ ತಲೆಬಾಗಿದ್ದೂ ಬಿಜೆಪಿಗೆ ವರವಾಗಿ ಪರಿಣಮಿಸಿತು.

ಇನ್ನೊಂದು ಕಡೆ, ಹಿಂದಿನಿಂದಲೂ ಹೊರರಾಜ್ಯದವರ ವಿರುದ್ಧ ಕೆಂಡಕಾರುತ್ತಲೇ ಬಂದಿದ್ದ ಶಿವಸೇನೆಯು ಪ್ರಚಾರಕ್ಕೆ ಗುಜರಾತ್‌ನ ಹಾರ್ದಿಕ್‌ ಪಟೇಲ್‌ರನ್ನು ಬಳಸಿಕೊಂಡಿತು. ಈ ಹಿಂದೆ ಇದೇ ಪಕ್ಷದ ಮುಖ್ಯಸ್ಥ “ಸಾಮ್ನಾ’ ಸಂಪಾದಕೀಯದಲ್ಲಿ ಗುಜರಾತಿಗರ ವಿರುದ್ಧ ಮನಬಂದಂತೆ ಬರೆದಿದ್ದರು. “ಗುಜರಾತಿಗರು ಮುಂಬೈಗೆ ಬಂದು ಅಗಾಧ ಸಂಪತ್ತು ಸೃಷ್ಟಿಸಿದ್ದಾರೆ. ಒಂದು ಕಾಲದಲ್ಲಿ ಒಂದು ಪೈಸೆಯೂ ಇಲ್ಲದೇ ಬಂದವರು, ಇಲ್ಲಿಗೆ ಬಂದು ಕಾಸು ಸಂಪಾದಿಸಿ ಈಗ ರಾಷ್ಟ್ರೀಯ ರಾಜಕಾರಣದಲ್ಲಿ ಅಬ್ಬರಿಸುತ್ತಿದ್ದಾರೆ. ಇಂಥವರಿಂದಾಗಿ ಮರಾಠಿಗರು ಇಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ’ ಎಂದು ಹೇಳುತ್ತಾ, ಗುಜರಾತಿಗಳ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟುತ್ತಾ, ಮರಾಠಿ ಅಸ್ಮಿತೆಯನ್ನು ಪೋಷಿಸುತ್ತಾ ಬಂದಿದ್ದ ಶಿವಸೇನೆ ಕೊನೆಗೆ ಪ್ರಚಾರಕ್ಕೆ ಬಳಸಿಕೊಂಡಿದ್ದು ಅದೇ ಗುಜರಾತ್‌ನ ಹಾರ್ದಿಕ್‌ರನ್ನು. ಗುಜರಾತಿಗರ ಬಾಹುಳ್ಯವಿರುವ ಪ್ರದೇಶಗಳಲ್ಲಿ ಶಿವಸೇನೆಯ ಬ್ಯಾನರ್‌ಗಳು ಗುಜರಾತಿ ಭಾಷೆಯಲ್ಲೇ ರಾರಾಜಿಸಿದವು. ಬುದ್ಧಿವಂತ ಮತದಾರರು ಎಲ್ಲವನ್ನೂ ಗಮನಿಸುತ್ತಾರೆ ಎಂಬುದಕ್ಕೆ ಇದೇ ಸಾಕ್ಷಿ. ಶಿವಸೇನೆ ಮತ್ತು ಬಿಜೆಪಿಯ ಸಿದ್ಧಾಂತದಲ್ಲಿ ಹೇಳಿಕೊಳ್ಳುವಂತ ದೊಡ್ಡ ಅಂತರವೇನೂ ಇಲ್ಲದ ಕಾರಣ, ಮರಾಠಿ ಮತದಾರರು ಸುಲಭವಾಗಿ ಬಿಜೆಪಿಯತ್ತ ವಾಲಿದರು. ಶಿವಸೇನೆಯು ಬಿಜೆಪಿ ಆಡಳಿತವಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಕಾರಾತ್ಮಕ ಪ್ರಚಾರಕ್ಕೆ ಹೆಚ್ಚು ಒತ್ತು ನೀಡಿತೇ ಹೊರತು, ಜನರಿಗೆ ತಮ್ಮ ಕೊಡುಗೆಯೇನು ಎಂಬ ವಿಚಾರಕ್ಕೆ ಮಹತ್ವ ನೀಡಲಿಲ್ಲ.

“ಬಿಎಂಸಿ ಆಡಳಿತದಲ್ಲಿ ಪಾರದರ್ಶಕತೆ ಇಲ್ಲ, ನಾವದನ್ನು ತರುತ್ತೇವೆ’ ಎಂದು ಬಿಜೆಪಿ ಜನರಿಗೆ ಆಶ್ವಾಸನೆ ನೀಡುತ್ತಾ ಬಂತು. ಶಿವಸೇನೆ ಇದನ್ನು ವ್ಯಂಗ್ಯವಾಡಿತು. ಆದರೆ, ಭ್ರಷ್ಟಾಚಾರ ಮತ್ತು ನಿರ್ವಹಣೆಯ ಕೊರತೆಯಿಂದ ಬಳಲುತ್ತಿರುವ ಬಿಎಂಸಿ ಆಡಳಿತದಲ್ಲಿ ಇಷ್ಟು ವರ್ಷ ತಾನೂ ಪಾಲುದಾರನಾಗಿದ್ದೆ ಎಂಬುದನ್ನು ಮರೆತಂತೆ ಬಿಜೆಪಿ ನಟಿಸಿತು. ಇದನ್ನು ಬೆಟ್ಟು ಮಾಡಿ ತೋರಿಸುವಲ್ಲಿ ಪ್ರತಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಸಂಪೂರ್ಣ ವಿಫ‌ಲವಾದವು. ಸ್ವತ್ಛ ಆಡಳಿತದ ಬಗ್ಗೆ ಹೇಳುತ್ತಿರುವ ಬಿಜೆಪಿಯೂ ಬಿಎಂಸಿಯ ಪಾಲುದಾರನೇ ಎಂಬುದು ಮತದಾರರಿಗೆ ಅರ್ಥವಾಗಲಿಲ್ಲ.

ಎನ್‌ಸಿಪಿಯ ಮತದಾರರೂ ಈ ಬಾರಿ ಬಿಜೆಪಿಯತ್ತ ಮುಖಮಾಡಿದರು. ಪುಣೆ, ಪಿಂಪ್ರಿ-ಚುಂಚವಾಡದಂಥ ಭದ್ರಕೋಟೆಯನ್ನು ಉಳಿಸಿಕೊಳ್ಳಲೂ ಎನ್‌ಸಿಪಿಗೆ ಸಾಧ್ಯವಾಗಲಿಲ್ಲ. ಇನ್ನು 2014ರ ಲೋಕಸಭೆ ಚುನಾವಣೆಯ ನಂತರ ಕುಸಿಯುತ್ತಲೇ ಬಂದಿರುವ ಕಾಂಗ್ರೆಸ್‌ ತನಗೆ ಹೊಸ ಕಾರ್ಯತಂತ್ರ ರೂಪಿಸುವ, ಕಾರ್ಯಕರ್ತರನ್ನು ಸಂಘಟಿಸುವ, ಜನರೊಂದಿಗೆ ಸಂಪರ್ಕ ಸಾಧಿಸುವ ಉತ್ಸಾಹವೇ ಇಲ್ಲ ಎನ್ನುವುದನ್ನು ಪದೇ ಪದೆ ಸಾಬೀತು ಮಾಡುತ್ತಲೇ ಇದೆ. ರಾಜ್‌ ಠಾಕ್ರೆ ನೇತೃತ್ವದ ಎಂಎನ್‌ಎಸ್‌ ಪ್ರಭಾವವೂ ತಗ್ಗಿ, 7 ಸೀಟುಗಳಿಗೆ ತೃಪ್ತಿಪಡುವಂತಾಗಿದೆ. ಹಾಗೆ ನೋಡಿದರೆ, ಕಳೆದ ಬಾರಿ 2 ಸೀಟುಗಳಲ್ಲಿ ಜಯ ಸಾಧಿಸಿದ್ದ ಅಸಾದುದ್ದೀನ್‌ ಒವೈಸಿ ಅವರ ಎಐಎಂಐಎಂ ಪಕ್ಷವು ಈ ಬಾರಿ ಮೂರು ಸೀಟುಗಳನ್ನು ತನ್ನದಾಗಿಸಿಕೊಂಡಿರುವುದು ವಿಶೇಷ. ಮಹಾರಾಷ್ಟ್ರ ಮಾತ್ರವಲ್ಲ, ದೇಶಾದ್ಯಂತ ಬಿಜೆಪಿಯು ಪ್ರತಿಪಕ್ಷಗಳ ದೌರ್ಬಲ್ಯಗಳನ್ನು ಬಳಸಿಕೊಳ್ಳುತ್ತಾ, ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳುತ್ತಾ ಸಾಗುತ್ತಿದೆ. ಇದಕ್ಕೆ ಮತ್ತೂಂದು ನಿದರ್ಶನವೆಂದರೆ, ಒಡಿಶಾದಲ್ಲಿ ನಡೆದ ಪಂಚಾಯತ್‌ ಚುನಾವಣೆ. ಇಲ್ಲೂ ಬಿಜೆಪಿಯು ಬಿಜೆಡಿಯ ಭದ್ರಕೋಟೆಯೊಳಗೆ ನುಸುಳುವಲ್ಲಿ ಯಶಸ್ವಿಯಾಗಿದೆ. ಈಗ ಅಲ್ಲಿ ನವೀನ್‌ ಪಟ್ನಾಯಕ್‌ ಅವರ ಬಿಜೆಡಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿ ಬಿಜೆಪಿ ಹೊರಹೊಮ್ಮುತ್ತಿದೆ. 

ಅದೇನೇ ಇರಲಿ, ಮಹಾರಾಷ್ಟ್ರದಲ್ಲಂತೂ ಒಂದು ಕಾಲದಲ್ಲಿ ಅಬ್ಬರಿಸುತ್ತಿದ್ದ ಶಿವಸೇನೆ ಇದೀಗ ಹಲ್ಲು ಕಿತ್ತ ಹಾವಿನಂತಾಗಿದೆ. ಆಡಳಿತವಿರೋಧಿ ಅಲೆಯನ್ನು ಹಿಮ್ಮೆಟ್ಟಿಸಿ ಬಿಎಂಸಿಯಲ್ಲಿ ಮತ್ತೆ ಗೆಲುವು ಸಾಧಿಸುವಲ್ಲಿ ಶಿವಸೇನೆ ಯಶಸ್ವಿಯೇನೋ ಆಗಿದೆ. ಆದರೆ, ಬಿಜೆಪಿಯ ಅದರಲ್ಲೂ ವಿಶೇಷವಾಗಿ ಫ‌ಡ್ನವೀಸ್‌ ಅವರ ಜನಪ್ರಿಯತೆಯನ್ನು ಕುಗ್ಗಿಸುವಲ್ಲಿ ವಿಫ‌ಲವಾಗಿದೆ. ಇದೀಗ ಎರಡೂ ಪಕ್ಷಗಳು ಸ್ಪಷ್ಟ ಬಹುಮತಕ್ಕೆ ಬೇಕಾದ 114 ಸ್ಥಾನಗಳನ್ನು ಪಡೆಯುವಲ್ಲಿ ಸೋತಿರುವ ಕಾರಣ, ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆಯಿದೆ. ಮತ್ತೆ ಶಿವಸೇನೆ ಮತ್ತು ಬಿಜೆಪಿ ಕೈಜೋಡಿಸಲೇಬೇಕಾಗಿದೆ. ಇಲ್ಲದಿದ್ದರೆ, ಶಿವಸೇನೆಗೆ ಉಳಿಗಾಲವಿಲ್ಲ. ಪ್ರತಿಷ್ಠೆಗಾಗಿ ಈಗ ಬೇರೆ ಪಕ್ಷಗಳೊಂದಿಗೆ ಸೇರಿ ಆಡಳಿತ ಹಿಡಿದರೂ, ಅದು ಹೆಚ್ಚು ಕಾಲ ಉಳಿಯುವ ಭರವಸೆಯಿಲ್ಲ. 20 ವರ್ಷಗಳ ಕಾಲ ಬಿಎಂಸಿಯ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಶಿವಸೇನೆಯು ಮತ್ತೆ ಹಳೇ ಸ್ನೇಹಿತನ ಜತೆ ಕೈಜೋಡಿಸಿದರೂ, ಮೈತ್ರಿಯಲ್ಲಿ ನಿರ್ಣಾಯಕ ಪಾತ್ರ ಬಿಜೆಪಿಯದ್ದೇ ಆಗಿರಲಿದೆ. 2014ರಲ್ಲಿ ರಾಜ್ಯ ಸರ್ಕಾರದ ರಚನೆ ವೇಳೆ ಹೇಗೆ ಬಿಜೆಪಿ ಕಿಂಗ್‌ಮೇಕರ್‌ ಆಗಿತ್ತೋ, ಈಗಲೂ ಅದು ಮರುಕಳಿಸಲಿದೆ. 

ಒಟ್ಟಿನಲ್ಲಿ, ಮಹಾರಾಷ್ಟ್ರದ ಫ‌ಲಿತಾಂಶವು ಬಿಜೆಪಿಯ ಗೆಲವು ಎನ್ನುವುದಕ್ಕಿಂತಲೂ ಫ‌ಡ್ನವೀಸ್‌ರದ್ದು ಎಂದರೆ ತಪ್ಪಾಗಲಿಕ್ಕಿಲ್ಲ. 
ಅವರು ತಮ್ಮ ಜನಪ್ರಿಯ ಯೋಜನೆಗಳು, ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದ ಮೂಲಕ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟಿದ್ದಾರೆ. ಮರಾಠಿಗರ ಹೃದಯ ಸಾಮ್ರಾಟನಾಗಿ ಉಳಿದು, 2019ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕೇಸರಿ ಪಕ್ಷವನ್ನು ಅಧಿಕಾರಕ್ಕೆ ತರುವ ಫ‌ಡ್ನವೀಸ್‌ ಉದ್ದೇಶಕ್ಕೆ ಈ ಗೆಲುವು ಮತ್ತಷ್ಟು ಆತ್ಮವಿಶ್ವಾಸ ತುಂಬಿರಬಹುದು.

– ಹಲೀಮತ್‌ ಸಅದಿಯಾ

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Mod

2024 Election; ಲೋಕಸಭೆ ಚುನಾವಣೆಗೆ ಮುನ್ನುಡಿಯೇ ಈ ಫ‌ಲಿತಾಂಶ?

Jaishankar

Foreign policy; ಬದಲಾದ ವಿದೇಶಾಂಗ ನೀತಿಯ ಪರಿಭಾಷೆ

ED

Chhattisgarh ‘ಮಹಾದೇವ’ ಅಸ್ತ್ರಕ್ಕೆ ಬಲಿಯಾಗುವವರು ಯಾರು?

1-qwewew

Congress ಅಸಮಾಧಾನದ ಜ್ವಾಲೆ: ಸಮ್ಮಿಶ್ರ ವೈಖರಿಯಲ್ಲಿ ಸರಕಾರ‌?

1-VR-AG

ರಾಜಸ್ಥಾನದ ರಾಜಪಟ್ಟದ ಮೇಲೆ ಎಲ್ಲರ ಕಣ್ಣು; ‘ಕೈ’ ಹಿಡಿಯುತ್ತಾ ಗ್ಯಾರಂಟಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.