ಶಬರಿಮಲೆಯಲ್ಲಿ ಬಿಜೆಪಿ ಸತ್ಯಶೋಧನೆ
Team Udayavani, Dec 3, 2018, 6:00 AM IST
ತಿರುವನಂತಪುರ/ಪಂಪಾ: ಶಬರಿಮಲೆಯಲ್ಲಿನ ಪರಿಸ್ಥಿತಿ, ಪೊಲೀಸ್ ದೌರ್ಜನ್ಯ ಕುರಿತು ಮಾಹಿತಿ ಸಂಗ್ರಹಿಸಿ ವರದಿ ಪಡೆದುಕೊಳ್ಳುವ ಉದ್ದೇಶದಿಂದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕಳುಹಿಸಿರುವ ನಾಲ್ವರು ನಾಯಕರ ತಂಡ ಭಾನುವಾರ ಶಬರಿಮಲೆ ಪ್ರವೇಶಿಸಿದೆ.
ಬಿಜೆಪಿ ನಾಯಕರಾದ ನಳಿನ್ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ, ವಿನೋದ್ ಸೋನ್ಕರ್, ಸರೋಜ್ ಪಾಂಡೆ ಅವರನ್ನೊಳಗೊಂಡ ತಂಡ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾರಂಭಿಸಿದೆ. ಭಕ್ತರು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ, ವಾಸ್ತವಿಕ ಅಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಿ 15 ದಿನಗಳೊಳಗೆ ಅಮಿತ್ ಶಾಗೆ ವರದಿ ನೀಡಲಿದೆ.
ಖ್ಯಾತನಾಮರ ಆಹ್ವಾನಿಸಲು ಚಿಂತನೆ: ಮತ್ತೂಂದೆಡೆ, ಶಬರಿಮಲೆಗೆ ಭೇಟಿ ನೀಡುವಂತೆ ಭಕ್ತಾದಿಗಳ ಮನವೊಲಿಸುವ ನಿಟ್ಟಿನಲ್ಲಿ ಸಿನಿಮಾ ಕ್ಷೇತ್ರದ ಪ್ರಮುಖರು ಸೇರಿದಂತೆ ಸೆಲೆಬ್ರಿಟಿಗಳಿಂದ ಜಾಹೀರಾತು ನೀಡಿಸಲು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಚಿಂತನೆ ನಡೆಸಿದೆ.
ಸುಪ್ರೀಂಕೋರ್ಟ್ ತೀರ್ಪು ಜಾರಿ ಪರ-ವಿರೋಧದ ಬಗ್ಗೆ ನಡೆದ ಹಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸಕ್ತ ಸಾಲಿನಲ್ಲಿ ಭಕ್ತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಈ ಯೋಚನೆ ಮಾಡಲಾಗಿದೆ. ಸೆಲೆಬ್ರಿಟಿಗಳಿಂದ ಜಾಹೀರಾತು ನೀಡಿಸುವ ಮೂಲಕ ಭಕ್ತರಲ್ಲಿನ ಆತಂಕವನ್ನು ನಿವಾರಣೆ ಮಾಡುವುದು ಇದರ ಉದ್ದೇಶ. ಈ ಬಗ್ಗೆ ಡಿ.3ರಂದು ಅಂತಿಮ ನಿರ್ಧಾರ ಹೊರ ಬೀಳಲಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸ್ಥಳೀಯರಿಗಿಂತ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಿಂದ ಭೇಟಿ ನೀಡುವವರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಕೋರ್ಟ್ ಟೀಂನಿಂದ ಮಂಗಳವಾರ ಭೇಟಿ
ಶಬರಿಮಲೆ ದೇಗುಲದ ಸುತ್ತಮುತ್ತ ಯಾವುದೇ ಮೂಲಸೌಕರ್ಯ ನೀಡಲಾಗುತ್ತಿಲ್ಲ ಎಂಬ ಆರೋಪದ ಮೇರೆಗೆ ಕೇರಳ ಹೈಕೋರ್ಟ್ ನೇಮಕ ಮಾಡಿದ್ದ ತ್ರಿಸದಸ್ಯ ಸಮಿತಿ ಸೋಮವಾರ ಮತ್ತು ಮಂಗಳವಾರ ದೇಗುಲಕ್ಕೆ ಭೇಟಿ ನೀಡಲಿದೆ. ಸೋಮವಾರ ಪಂಪಾ ಮತ್ತು ನಲ್ಲಿಕಳ್ಗೆ ತೆರಳಿ ಪರಿಶೀಲನೆ ನಡೆಸಲಿದ್ದರೆ, ಮಂಗಳವಾರ ದೇಗುಲದ ಆವರಣದತ್ತ ಹೋಗಲಿದೆ. ಇಲ್ಲಿ ಭಕ್ತರಿಗೆ ಯಾವ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂಬುದನ್ನು ನೋಡುವುದಲ್ಲದೇ, ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೂ ಸೂಚನೆ ನೀಡಲಿದೆ.
75 ಸಾವಿರ- ಶನಿವಾರ ಸಂಜೆಯವರೆಗೆ ಭೇಟಿ ನೀಡಿದವರು
61 ಸಾವಿರ- ಶುಕ್ರವಾರ ಭೇಟಿ ನೀಡಿದ ಯಾತ್ರಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ