1.5 ಡಿಗ್ರಿ ಸೆಲ್ಸಿಯಸ್‌ಗೆ ಜಗತ್ತಿನ ಒಪ್ಪಿಗೆ


Team Udayavani, Nov 2, 2021, 6:10 AM IST

1.5 ಡಿಗ್ರಿ ಸೆಲ್ಸಿಯಸ್‌ಗೆ ಜಗತ್ತಿನ ಒಪ್ಪಿಗೆ

ಯುನೈಟೆಡ್‌ ಕಿಂಗ್‌ಡಮ್‌ನ ಗ್ಲ್ಯಾಸ್ಗೋದಲ್ಲಿ ಜಾಗತಿಕ ಹವಾಮಾನ ಸಂಬಂಧ ಸಿಒಪಿ26 ಸಮ್ಮೇಳನ ಆರಂಭವಾಗಿದೆ. ಇದರ ನಡುವೆಯೇ ಇಟಲಿಯ ರೋಮ್‌ನಲ್ಲಿ ಸಭೆ ಸೇರಿದ್ದ ಜಿ20 ನಾಯಕರು ಜಗತ್ತಿನ ತಾಪಮಾನವನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿಸಲು ನಿರ್ಧರಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲೂ ಇದೇ ತಾಪಮಾನವನ್ನು ಉಳಿಸಿಕೊಂಡು ಹೋಗುವ ಬಗ್ಗೆಯೂ ತೀರ್ಮಾನಿಸಿದ್ದಾರೆ. ಜಿ20ಯಲ್ಲಿ ಬಹುತೇಕ ಮುಂದುವರಿದ ದೇಶಗಳೇ ಇದ್ದು, ಗ್ಲ್ಯಾಸ್ಗೋದಲ್ಲೂ ಈ ಬಗ್ಗೆ ಚರ್ಚೆಯಾಗಿ ಒಂದು ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.

2015ರ ಪ್ಯಾರಿಸ್‌ನಲ್ಲೇ ಆಗಿತ್ತು ತೀರ್ಮಾನ
ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಬಹು ಹಿಂದೆಯೇ ಕಂಡು ಬಂದಿದೆ. ಇದರಿಂದಾಗಿಯೇ ಜಗತ್ತಿನಲ್ಲಿ ಸೈಕ್ಲೋನ್‌ಗಳ ಹೆಚ್ಚಳ, ಅತಿವೃಷ್ಟಿ ಮತ್ತು ಅನಾವೃಷ್ಟಿಗಳು ಸಂಭವಿಸುತ್ತಲೇ ಇವೆ. ಹೀಗಾಗಿ 2015ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಹವಾಮಾನ ಶೃಂಗದಲ್ಲಿ ಜಾಗತಿಕ ತಾಪಮಾನವನ್ನು ಕಡಿಮೆಗೊಳಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಅಮೆರಿಕದ ಹಿಂದಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೊಂಡಾಟದಿಂದಾಗಿ ಈ ಪ್ಯಾರಿಸ್‌ ಶೃಂಗದ ನಿರ್ಧಾರ ಜಾರಿಯಾಗುವಲ್ಲಿ ತಡವಾಗಿತ್ತು. ಈಗಲೂ ಈ ಬಗ್ಗೆ ನಿರ್ಧಾರವಾಗಿಲ್ಲ.

ಹೆಚ್ಚು ಮಾಲಿನ್ಯಕ್ಕೆ ಅಭಿವೃದ್ಧಿ ಹೊಂದಿದ ದೇಶಗಳೇ ಕಾರಣ
ಜಿ20ರ  ಗುಂಪಿನಲ್ಲಿ ಬಹುತೇಕ ಮುಂದುವರಿದ ದೇಶಗಳೇ ಇವೆ. ಅಂದರೆ, ಈ ಗುಂಪಿನಲ್ಲಿ ಅರ್ಜೆಂಟೀನಾ, ಆಸ್ಟ್ರೇಲಿಯ, ಬ್ರೆಜಿಲ್‌, ಕೆನಡಾ, ಚೀನಾ, ಫ್ರಾನ್ಸ್‌, ಜರ್ಮನಿ, ಜಪಾನ್‌, ಭಾರತ, ಇಂಡೋನೇಶಿಯಾ, ಇಟಲಿ, ಮೆಕ್ಸಿಕೋ, ರಷ್ಯಾ, ದಕ್ಷಿಣ ಆಫ್ರಿಕಾ, ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ, ಟರ್ಕಿ, ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ, ಐರೋಪ್ಯ ಒಕ್ಕೂಟ, ಸ್ಪೈನ್‌. ಜಾಗತಿಕ ಮಾಲಿನ್ಯದಲ್ಲಿ ಈ ದೇಶಗಳ ಪಾಲು ಶೇ.80ರಷ್ಟು. ಈ ರಾಷ್ಟ್ರಗಳು ನಿಯಂತ್ರಣಕ್ಕೆ ತಂದು, ಇಂಗಾಲದ ಡೈ ಆಕ್ಸೆ„ಡ್‌ ಹೊರಸೂಸುವಿಕೆ ಪ್ರಮಾಣವನ್ನು ಕಡಿಮೆ ಮಾಡಿದರೆ, ತಂತಾನೇ ಜಾಗತಿಕ ತಾಪಮಾನವೂ ಇಳಿಯಲಿದೆ. ಹೀಗಾಗಿ, ಈಗ ಗ್ಲ್ಯಾಸ್ಗೋದಲ್ಲಿ ಆರಂಭವಾಗಿರುವ ಶೃಂಗದಲ್ಲಿ ಜಿ20 ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಚರ್ಚಿಸಲಾಗುತ್ತದೆ.

ಇದನ್ನೂ ಓದಿ:ರಷ್ಯಾ ಲಸಿಕೆ ಅಭಿಯಾನ ಫ್ಲಾಪ್‌? ಸ್ಫುಟ್ನಿಕ್ ವಿ ಕೋವಿಡ್‌ ಲಸಿಕೆ ಬಗ್ಗೆ ಜನರ ನಿರ್ಲಕ್ಷ್ಯ

ಏನಿದು 1.5 ಡಿಗ್ರಿ ಸೆಲ್ಸಿಯಸ್‌?
ಮೂರು ವರ್ಷಗಳ ಹಿಂದೆ ವಿಜ್ಞಾನಿಗಳು 2 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದ್ದರೆ ಅದು ಸೇಫ್ ಎಂದು ಹೇಳಿದ್ದರು. ಆದರೆ ಈ ಮೂರು ವರ್ಷಗಳಿಂದ ಸಂಶೋಧನೆ ಮಾಡುತ್ತಿರುವ ವಿಜ್ಞಾನಿಗಳು, 1.5 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದ್ದರೆ ಅದು ಸುರಕ್ಷಿತ ಎಂದು ಹೇಳಿದ್ದಾರೆ. ಆದರೆ, ಇದಕ್ಕಿಂತ ಕಡಿಮೆ ಮಾಡುವುದು ಸಾಧ್ಯವೇ ಇಲ್ಲ ಎಂಬುದು ಎಲ್ಲರಿಗೂ ಗೊತ್ತು. ಏಕೆಂದರೆ, ಆರ್ಥಿಕ ಸ್ಥಿತಿ ಸುಧಾರಣೆಯಲ್ಲಿ ಕೈಗಾರಿಕೆಗಳು ಇರಲೇಬೇಕು.

2 ಡಿಗ್ರಿ ಸೆ.ನಿಂದ ಇಳಿಸಿದ್ದು ಏಕೆ?
ವಿಶೇಷವೆಂದರೆ, 1995ರಲ್ಲಿ ಆರ್ಥಿಕ ತಜ್ಞ ವಿಲಿಯಂ ನಾರ್ಡೂಸ್‌ 2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿ, ಪರವಾಗಿಲ್ಲ ಎಂದು ಗುರಿಯನ್ನು ನಿಗದಿ ಮಾಡಿದ್ದರು. ಇದಕ್ಕಿಂತ ಹೆಚ್ಚು ಬಿಸಿಯಾಗಬಾರದು ಎಂದಿದ್ದರು. ಈ ಬಳಿಗ 1990ರಲ್ಲಿ ಐರೋಪ್ಯ ಒಕ್ಕೂಟವೂ 2 ಡಿಗ್ರಿ ಸೆಲ್ಸಿಯಸ್‌ ಟಾರ್ಗೆಟ್‌ಗೆ ಒಪ್ಪಿಕೊಂಡಿತ್ತು. ಆದರೆ, ಈ 2 ಡಿಗ್ರಿ ಸೆಲ್ಸಿಯಸ್‌ ಟಾರ್ಗೆಟ್‌ಗೆ ಸಣ್ಣಪುಟ್ಟ ದ್ವೀಪ ರಾಷ್ಟ್ರಗಳು ಆಕ್ಷೇಪವೆತ್ತಿದ್ದವು. ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸಮುದ್ರದ ಮಟ್ಟ ಏರಿಕೆಯಾಗಿ ನಾವು ಮುಳುಗುವ ಸ್ಥಿತಿ ಬರುತ್ತದೆ ಎಂದೇ ವಾದಿಸಿದ್ದವು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.