ಆಂತರಿಕ ಗೊಂದಲ ಬದಿಗೊತ್ತಿದರೆ ಮಾತ್ರ ಸಾಧ್ಯ

ಕಾಂಗ್ರೆಸ್‌-ಬಿಜೆಪಿ ನಾಯಕರಿಗೆ 150 ಟಾರ್ಗೆಟ್‌ ಚಿಂತೆ

Team Udayavani, Apr 5, 2022, 4:50 PM IST

bjpಆಂತರಿಕ ಗೊಂದಲ ಬದಿಗೊತ್ತಿದರೆ ಮಾತ್ರ ಸಾಧ್ಯಆಂತರಿಕ ಗೊಂದಲ ಬದಿಗೊತ್ತಿದರೆ ಮಾತ್ರ ಸಾಧ್ಯ

ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯೂ 150 ಟಾರ್ಗೆಟ್‌ ಇಟ್ಟುಕೊಂಡಿದೆ. ಜೆಡಿಎಸ್‌ 130 ಟಾರ್ಗೆಟ್‌ ಹಾಕಿಕೊಂಡಿದೆ. ಇದೀಗ ರಾಹುಲ್‌ ಗಾಂಧಿ 150 ಟಾರ್ಗೆಟ್‌ ಕೊಟ್ಟಿದ್ದಾರೆ. ವಾಸ್ತವವಾಗಿ ಹೇಳಬೇಕಾದರೆ ಇವತ್ತಿನ ಸ್ಥಿತಿಯಲ್ಲಿ ಮ್ಯಾಜಿಕ್‌ ನಂಬರ್‌ ತಲುಪುವುದೇ ಮೂಲ ಗುರಿ. ವರಿಷ್ಠರು ನೀಡಿರುವ ಗುರಿ ಮುಟ್ಟಲು ಕಾಂಗ್ರೆಸ್‌ ಮತ್ತು ಬಿಜೆಪಿ ಬೆನ್ನಟ್ಟಿದ್ದರೆ ಜೆಡಿಎಸ್‌ಗೆ “ಕಿಂಗ್‌ಮೇಕರ್‌’ ಕನಸು ಚಿಗುರೊಡೆದಂತಿದೆ. ಮೂರೂ ಪಕ್ಷಗಳು ಚುನಾವಣೆಗೆ ವರ್ಷಕ್ಕೆ ಮುಂಚೆಯೇ ತಮ್ಮ ವರಸೆ ತೋರಲಾರಂಭಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡಿದ ನಂತರ ರಾಜ್ಯ ಬಿಜೆಪಿಯಲ್ಲಿ ಉತ್ಸಾಹದ ಜೊತೆಗೆ ಜವಾಬ್ದಾರಿ ನಿರ್ವಹಣೆಯ ಆತಂಕವೂ ಆರಂಭವಾಗಿದೆ. ಈ ಬಾರಿ 150 ಸ್ಥಾನ ಗೆಲ್ಲುವುದನ್ನು ಕೇವಲ ಬಾಯಿ ಮಾತಲ್ಲಿ ಹೇಳಿದರೆ ಸಾಲದು ಅದಕ್ಕೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಮತ್ತು ಅದಕ್ಕೆ ಪೂರಕವಾದ ನೀಲನಕ್ಷೆಯಲ್ಲಿ ಏ.16ರೊಳಗೆ ನೀಡಬೇಕೆಂಬ ಕೇಂದ್ರ ಸಚಿವ ಅಮಿತ್‌ ಶಾ ಅವರ ಖಡಕ್‌ ಸೂಚನೆ ಎಲ್ಲ ನಾಯಕರಲ್ಲಿ ಒಂದು ರೀತಿಯ ಆತಂಕದ ಉತ್ಸಾಹ ಮೂಡುವಂತೆ ಮಾಡಿದೆ.

ರಾಜ್ಯ ಬಿಜೆಪಿ ನಾಯಕರ ನಡುವೆ ಬಾಹ್ಯವಾಗಿ ಒಗ್ಗಟ್ಟು ಕಂಡು ಬರುತ್ತಿದ್ದರೂ, ಆಂತರಿ ಕವಾಗಿ ರಾಜ್ಯ ನಾಯಕತ್ವರಲ್ಲಿ ಇನ್ನೂ ಗೊಂದಲ ಗಳಿದ್ದು, ಅದನ್ನು ಬದಿಗೊತ್ತಿ ಒಗ್ಗಟ್ಟು ಪ್ರದರ್ಶಿಸುವ ಅನಿವಾರ್ಯತೆ ಎದುರಾಗಿದೆ. ರಾಜ್ಯದಲ್ಲಿ ಹಿಜಾಬ್‌, ಹಲಾಲ್‌ ಕಟ್‌ ಪ್ರಕರಣಗಳ ನಂತರ ರಾಜ್ಯ ಬಿಜೆಪಿಯಲ್ಲಿ ಉತ್ಸಾಹ ಹೆಚ್ಚಿಸಿದ್ದು, ಆದರೆ, ಕೇಂದ್ರ ಅಮಿತ್‌ ಶಾ ಅವರಿಗೆ ಪ್ರಸ್ತುತ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಬಗ್ಗೆ ವಿಶ್ವಾಸ ಮೂಡಿದಂತೆ ಕಾಣಿಸುತ್ತಿಲ್ಲ.

ಉತ್ತರ ಪ್ರದೇಶ ಸೇರಿದಂತೆ ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳನ್ನು ಹಿಂದುತ್ವದ ಅಸ್ತ್ರ ಪ್ರಯೋಗಿಸಿ ಗೆಲುವಿನ ನಗೆ ಬೀರಿರುವ ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಅದೇ ಅಸ್ತ್ರ ಯಶಸ್ವಿಯಾಗುತ್ತದೆಯೋ ಇಲ್ಲವೋ ಎನ್ನುವ ಅನುಮಾನ ಮೂಡಿದಂತೆ ಕಾಣಿಸುತ್ತಿದೆ. ಅದೇ ಕಾರಣಕ್ಕೆ ಅಮಿತ್‌ ಶಾ, ಕೇವಲ 150 ಸೀಟ್‌ ಗೆಲ್ಲುವ ಮಂತ್ರ ಜಪಿಸಿದರೆ ಸಾಧ್ಯವಿಲ್ಲ. ಅದನ್ನು ಸಾಧಿಸಲು ಬೇಕಾದ ಮಾರ್ಗ
ತೋರಿಸಿ ಎಂದು ಸೂಚಿಸಿರುವುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಂಪುಟ ಸಂಘರ್ಷ
ಚುನಾವಣೆ ಕೇವಲ ಒಂದು ವರ್ಷ ಉಳಿದಿದ್ದರೂ, ಸಚಿವಾಕಾಂಕ್ಷಿಗಳಲ್ಲಿ ಮಾತ್ರ ಸಂಪುಟ ಸೇರುವ ಆಸೆ ಇನ್ನೂ ಜೀವಂತವಾಗಿದೆ. ಪ್ರಮುಖವಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕೆಂಬ ಒತ್ತಡ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಇದೆ ಎನ್ನಲಾಗುತ್ತಿದ್ದು, ಸಂಪುಟ ಪುನಾರಚನೆಯ ಗೊಂದಲ ನಿವಾರಣೆಯಾಗದ ಹೊರತು ರಾಜ್ಯ ಬಿಜೆಪಿಯಲ್ಲಿ ಚುನಾವಣೆಯ ನೀಲ ನಕ್ಷೆ ಸಿದ್ದಪಡಿಸುವುದು ಕಷ್ಟಸಾಧ್ಯ.

ರಾಜ್ಯದಲ್ಲಿ ಬಿಜೆಪಿ ಬೆನ್ನಿಗೆ ಪ್ರಬಲವಾಗಿ ಲಿಂಗಾ ಯತ ಸಮುದಾಯ ನಿಂತಿದೆ ಎಂಬ ಭಾವನೆ ಇದ್ದು, ಅದೇ ರೀತಿ ಒಕ್ಕಲಿಗ ಮತ್ತು ಕುರುಬ ಸಮುದಾಯ ವನ್ನು ಬಿಜೆಪಿ ಕಡೆಗೆ ಮುಖ ಮಾಡುವಂತೆ ಮಾಡಲು ಅಗತ್ಯ ಕಾರ್ಯತಂತ್ರ ರೂಪಿಸಲು ಅಮಿತ್‌ ಶಾ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವನ್ನು ಸೆಳೆಯಲು ಜವಾಬ್ದಾರಿ ಹೊತ್ತುಕೊಳ್ಳುವ ನಾಯಕನ ಹುಡುಕುವಂತೆ ಸೂಚನೆ ನೀಡಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಒಕ್ಕಲಿಗ ಮತ್ತು ಕುರುಬ ಸಮುದಾಯದ ಮತಗಳನ್ನು ಸೆಳೆಯುವ ನಾಯಕರ ಕೊರತೆ ಇದೆ ಎನ್ನುವುದನ್ನು ಅಮಿತ್‌ ಶಾ ಪರೋಕ್ಷವಾಗಿ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಇದು ರಾಜ್ಯ ಬಿಜೆಪಿ ನಾಯಕರ ಚಿಂತೆಗೆ ಕಾರಣವಾಗಿದೆ.

ಈ ಮಧ್ಯೆ, ಬಸವರಾಜ ಬೊಮ್ಮಾಯಿ ಅವರ ನೇತೃತ್ವ ದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ಯನ್ನು ಎದುರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟವಾಗಿ ಘೋಷಣೆ ಮಾಡಿ ದ್ದರೂ, ಅವರ ಏಕ ನಾಯಕತ್ವವನ್ನು ಒಪ್ಪಿಕೊಳ್ಳಲು ರಾಜ್ಯ ಬಿಜೆಪಿ ನಾಯಕರು ಹಿಂದೇಟು ಹಾಕುತ್ತಿರು ವಂತೆ ಕಾಣಿಸುತ್ತಿದೆ. ಸ್ವತಃ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಕೂಡ ತಮ್ಮ ನಾಯಕತ್ವವನ್ನು ಈಗಲೂ ಪ್ರತಿಪಾದಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಎಲ್ಲ ಆಂತರಿಕ ಒಳ ಮುನಿಸಿನ ಜೊತೆಗೆ ರಾಜ್ಯ ದಲ್ಲಿ ನಡೆಯುತ್ತಿರುವ ಹಿಂದೂಪರ ಹೋರಾಟಗಳು, ಪಂಚರಾಜ್ಯಗಳ ಚುನಾವಣಾ ಫ‌ಲಿತಾಂಶ, ಹೈಕ ಮಾಂಡ್‌ ನಾಯಕರ ಬೆಂಬಲ ರಾಜ್ಯ ಬಿಜೆಪಿ ನಾಯ ಕರಲ್ಲಿ ಆಂತರಿಕ ಗೊಂದಲ ಮರೆತು ಮುನ್ನಡೆಯುವ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದೂ ಹೇಳಲಾಗುತ್ತಿದೆ.

ಕ್ಲಾರಿಟಿ ಸಿಗುತ್ತಿಲ್ಲ
ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಎಲ್ಲವೂ ಸರಿ ಇಲ್ಲ. ಆದರೂ ಎಲ್ಲವೂ ಸರಿ ಇದೆ ಎಂದು ಬಿಂಬಿಸಿಕೊಳ್ಳಲಾಗುತ್ತಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ 75 ರಿಂದ 100 ಸೀಟುಗಳ ಬಗ್ಗೆಯಷ್ಟೇ ಕ್ಲಾರಿಟಿ ಸಿಗುತ್ತಿದೆ. ಹೀಗಾಗಿ, ಕ್ರಮಿಸಬೇಕಾದ ಹಾದಿ ದೂರವೇ ಇದೆ. ಜೆಡಿಎಸ್‌ ಮೈ ಕೊಡವಿ ಎದ್ದು ನಿಂತಿದ್ದು ಯಾರಿಗೆ ಇದು ಯಾರಿಗೆ “ಟಕ್ಕರ್‌’ ಕೊಡಲಿದೆ ಎಂಬುದು ಈಗಲೇ ಹೇಳ ಲಾಗದು. ಮುಂದಿನ ದಿನಗಳಲ್ಲಿ ಯಾವ್ಯಾವ ವಿಚಾರಗಳು ಮುನ್ನಲೆಗೆ ಬರುತ್ತವೋ ಅದು ಯಾರಿಗೆ ಯಾವ ರೀತಿಯ ಲಾಭ-ನಷ್ಟ ತಂದು ಕೊಡುವುದೋ ಕಾದು ನೋಡಬೇಕಾಗಿದೆ.

-ಶಂಕರ ಪಾಗೋಜಿ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.