ಸೂಫಿ ಬೀದಿಯ ಕನ್ನಡ ತೇರು

ಭಾವೈಕ್ಯತೆಯ ಬಹುರೂಪಗಳ ಕಲಬುರ್ಗಿ

Team Udayavani, Feb 6, 2020, 6:39 AM IST

sam-15

ಕಲಬುರ್ಗಿಯಲ್ಲಿ ಇವತ್ತಿಗೂ ದಖನಿ ಛಾಯೆಯ ಉರ್ದು, ಮರಾಠಿ ಮೋಡಿಯ ಹಿಂದಿ ಭಾಷಾ ಸಂಸ್ಕೃತಿಗಳು, ಕನ್ನಡದ ಬದುಕಿನ ತುಂಬೆಲ್ಲ ಹಾಸು ಹೊಕ್ಕಾಗಿವೆ. ಘಮ ಘಮಿಸುವ ಸೂಜಿಮಲ್ಲಿಗೆಯ ಹೂವರಳಿದಂಥ ಘಮ್ಮನೆಯ ಉರ್ದು ಮಾತಾಡುವ ಮುಸ್ಲಿಮೇತರ ಅನೇಕರು ಇಲ್ಲಿ ಕಾಣಸಿಗುತ್ತಾರೆ…

ಮೂವತ್ತೆರಡು ವರ್ಷಗಳ ನಂತರ ಕಲಬುರ್ಗಿಯಲ್ಲಿ ಕನ್ನಡದ ಜಾತ್ರೆ ಕಳೆಗಟ್ಟುತ್ತಿದೆ. ಮೊನ್ನೆ, ಮೊನ್ನೆಯವರೆಗೆ ಹೈದ್ರಾಬಾದ್‌ ಕರ್ನಾಟಕ, ಇದೀಗ ತಾನೆ “ಕಲ್ಯಾಣ ಕರ್ನಾಟಕ’ ಎಂಬ ಹೊಸ ಹೆಸರು ಹೊತ್ತು, ನುಡಿಜಾತ್ರೆಗೆ ಸಾಕ್ಷಿಯಾಗುತ್ತಿದೆ. ಅಂದು ಕಳಚೂರಿ ಬಿಜ್ಜಳನ ಕಲ್ಯಾಣ ರಾಜ್ಯದ ಮಂತ್ರಿಯಾಗಿದ್ದ ಬಸವಣ್ಣ, ಪ್ರಭುತ್ವದ ಎಲ್ಲೆ ಮೀರಿ ವಚನ ಚಳವಳಿ ರೂಪಿಸಿದ್ದು ಜನ ಕಲ್ಯಾಣದ ಕಳಕಳಿಯ ದ್ಯೋತಕ. ಜನರಿಗೆ ಮತ್ತೆ ಅಂದಿನ ಕಲ್ಯಾಣದ ಕನಸುಗಳನ್ನು ಇಂದು ಕಾಣುವ ತವಕ.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ ಕರುನಾಡ ನೆಲದ ಕಲಬುರ್ಗಿ, ಬೀದರ್‌, ರಾಯಚೂರು- 3 ಜಿಲ್ಲೆಗಳು; ಮರಾಠಿಯ 5, ತೆಲಂಗಾಣದ 8 ಜಿಲ್ಲೆಗಳು ಅಂದಿನ ಮುಸ್ಲಿಂ ದೊರೆ ಮೀರ್‌ ಉಸ್ಮಾನ್‌ ಅಲಿಖಾನ್‌ ಬಹದ್ದೂರ್‌ (ಇದು ನಿಜಾಮನ ಪೂರ್ಣ ಹೆಸರು) ಆಡಳಿತದಲ್ಲೇ ಇದ್ದವು. ಹತ್ತು ಹಲವು ಹೋರಾಟಗಳ ಫ‌ಲವಾಗಿ 17.09.1948ರಂದು ಭಾರತದ ಒಕ್ಕೂಟಕ್ಕೆ ಇವು ಸೇರಿದವು. ಹೀಗೆ, 600 ವರ್ಷಗಳ ಸುದೀರ್ಘ‌ ಕಾಲದ ದೇಶಿಯ ಪರಕೀಯತೆಯಲ್ಲಿದ್ದುದು ಹೈದ್ರಾಬಾದ್‌ ಕರ್ನಾಟಕ.

ಮೊಘಲಾಯಿ ಜವಾರಿ ಶೈಲಿ
ಸಹಜವಾಗಿ ಉರ್ದು, ದಖನಿ, ಮೋಡಿ, ಮರಾಠಿ, ತೆಲುಗು, ಕನ್ನಡಗಳ ಬಹುಭಾಷಾ ಸೌಹಾರ್ದ ಸಂಸ್ಕೃತಿಯ ಚಾರಿತ್ರಿಕ ನೆಲ ಇದು. ಇವತ್ತಿಗೂ ದಖನಿ ಛಾಯೆಯ ಉರ್ದು, ಮರಾಠಿ ಮೋಡಿಯ ಹಿಂದಿ ಭಾಷಾ ಸಂಸ್ಕೃತಿಗಳು ಇಲ್ಲಿನ ಕನ್ನಡದ ಬದುಕಿನ ತುಂಬೆಲ್ಲ ಹಾಸು ಹೊಕ್ಕಾಗಿವೆ. ಘಮ ಘಮಿಸುವ ಸೂಜಿಮಲ್ಲಿಗೆಯ ಹೂವರಳಿದಂಥ ಘಮ್ಮನೆಯ ಉರ್ದು ಮಾತಾಡುವ ಮುಸ್ಲಿಮೇತರ ಅನೇಕರು ಇಲ್ಲಿರುವುದು ಸರ್ವೇಸಾಮಾನ್ಯ. ಇಲ್ಲಿನ ಆಡುಭಾಷೆ, ಮೊಘಲಾಯಿ ಜವಾರಿ ಶೈಲಿ.

ನಿಜಾಮರ ನೆರಳಿನಲ್ಲಿ…
ನಿಜಾಮನ ಕಾಲದಲ್ಲಿ ಭಾಳ ಸಂಖ್ಯೆಯ ಸೂಫಿ- ಸಂತರು, ತತ್ವಪದಗಳ ಅನುಭಾವಿಗಳು ಮೈ ಮನಸು ಬಿಚ್ಚಿ ಕನ್ನಡದಲ್ಲಿ ಮಹಾಕಾವ್ಯಗಳನ್ನೇ ರಚಿಸಿದ್ದಾರೆ. ಹಾಗೆಂದು, ಆಳರಸ ನಿಜಾಮ ಇವರಿಗೆ ಪ್ರೇರಕ, ಪ್ರೋತ್ಸಾಹಕನೇನೂ ಆಗಿರಲಿಲ್ಲ. ಆದರೆ, ಸೂಫಿ, ಅವಧೂತ, ಆರೂಢ ಕವಿಗಳಿಗೆ ಯಾವುದೇ ಘೋಷಿತ ಇಲ್ಲವೇ ಅಘೋಷಿತ ನಿರ್ಬಂಧಗಳನ್ನು ಆತ ವಿಧಿಸಿರಲಿಲ್ಲ ಎಂಬುದು ಮುಖ್ಯ.

“ಜಂಗಮನಾಗ ಬೇಕಾದರೆ/ ಮನಲಿಂಗ ಮಾಡಿಕೊಂಡಿರಬೇಕು//’ ಅಂತ ಚನ್ನೂರ ಜಲಾಲ ಸಾಹೇಬ ಹಾಡಿದರೆ, “ಫ‌ಕೀರನಾಗಬೇಕಾದರೆ/ ಮನಃ ಧಿಕ್ಕಾರ ಮಾಡಿಕೊಂಡಿರಬೇಕು//’ - ಇದು ಕಡಕೋಳ ಮಡಿವಾಳಪ್ಪನವರು ಜಲಾಲ ಸಾಹೇಬರಿಗೆ ಕೊಡುವ ಉತ್ತರ. ಇದು, ಇಬ್ಬರು ಬೇರೆ ಬೇರೆ ಮತ ಧರ್ಮಗಳ, ಒಂದೇ ಗುರುಮಾರ್ಗ ಪಂಥದ ಸೌಹಾರ್ದಯುತ ಸಾಂಸ್ಕೃತಿಕ ಸಂವಾದದ ಸಣ್ಣದೊಂದು ಝಲಕ್‌. ಇಂಥ ನೂರಾರು ನಿದರ್ಶನಗಳು ಇಲ್ಲಿವೆ.

“ಸಬ್‌ ಕಹತೆ ಹೈ ಈಶ್ವರ ಅಲ್ಲಾ ಅಲ್ಲಾ/ ಇದರ ಒಳಮರ್ಮ ಯಾರಿಗೂ ತಿಳಿದಿಲ್ಲಾ//’ - ಹೀಗೆ ಉರ್ದು ಕನ್ನಡ ಮಿಶ್ರಿತ ಸಂಕರ ಪ್ರಜ್ಞೆಯಿಂದ ರೂಪುಗೊಂಡ ಅನೇಕ ತತ್ವಪದಗಳ ಭಾವ ಮತ್ತು ಭಾಷೆಯಲ್ಲಿ ಸಹೃದಯ ಸಮನ್ವಯತೆ ಸಾಧಿಸಿರುವುದನ್ನು ಗುರುತಿಸಬಹುದು. “ಕಸವರಮೆಂಬುದು ಸೈರಿಸಲಾರ್ಪೊಡೆ ಪರ ಧರ್ಮಮುಮಂ/ ಪರ ವಿಚಾರಮುಮಂ//’- ಒಂದೂವರೆ ಸಾವಿರ ವರ್ಷಗಳ ಹಿಂದೆಯೇ ಕವಿರಾಜಮಾರ್ಗಕಾರನು ಹೇಳಿದ ಪರರ ಧರ್ಮ ಮತ್ತು ಪರರ ವಿಚಾರಗಳನ್ನು ಗೌರವಿಸುವುದೇ, ಮನುಷ್ಯ ಪ್ರೀತಿಯ ನಿಜದ ನೆಲೆಯ ಸಂಪತ್ತು. ನೃಪತುಂಗ ನೆಲದ ಬೀಜದ ಮಾತುಗಳು ಇಡೀ ದೇಶಕ್ಕೇ ಇವತ್ತು ಹೆಚ್ಚು ಹೆಚ್ಚು ಅನ್ವಯಿಸಿ ಅನುಷ್ಠಾನಕ್ಕೆ ಬರಬೇಕಾದ ದುರಿತ ಸಂದರ್ಭಗಳಲ್ಲಿದ್ದೇವೆ. ಬುದ್ಧಧರ್ಮದ “ಸಾರ’ ಸಾರುವ ಅಶೋಕ ಚಕ್ರವರ್ತಿಯ “ದೇವನಾಂಪ್ರಿಯ’ ಕುರುಹು ದೊರಕಿದ ಸನ್ನತಿ, ಘಟಿಕಾಲಯಗಳ ನಾಗಾವಿ, ಬಸವ- ಅಲ್ಲಮರ ವಚನ ಚಳವಳಿಯ ಶಕ್ತಿಕೇಂದ್ರ, ಸಂತ ಕಥನದ ಗೇಸುದರಾಜ್‌ ಬಂದೇನವಾಜ್‌, ಗಾಣಗಾಪುರದ ದತ್ತಾವಧೂತ, ಮಹಾದಾಸೋಹಿ ಶರಣಬಸವೇಶ್ವರ, ತತ್ವಪದಗಳ ಹರಿಕಾರ ಕಡಕೋಳ ಮಡಿವಾಳಪ್ಪ ಮತ್ತು ಅವರ ಅನೇಕ ಮಂದಿ ತತ್ವಪದಕಾರ ಶಿಸುಮಕ್ಕಳು, ಊರೂರಿಗೂ ದೊರಕುವ ನೂರಾರು ಮಂದಿ ಮುಸ್ಲಿಂ ಸೂಫಿ ಸಂತರು ಬಾಳಿ ಬದುಕಿದ ಕಲ್ಯಾಣ ಕರ್ನಾಟಕದಲ್ಲಿ ಜರುಗುವ ಕನ್ನಡದ ನುಡಿಹಬ್ಬವು, ಸೌಹಾರ್ದತೆಯ ಸಾಕ್ಷಿಪ್ರಜ್ಞೆಯೇ ಆಗಿದೆ. ಇವತ್ತಿಗೂ ಸಾವಳಗಿಯ ಶಿವಲಿಂಗೇಶ್ವರ ಜಾತ್ರೆಯಲ್ಲಿ ಗದ್ದುಗೆಗೆ ಮುಸ್ಲಿಂ ಧರ್ಮದ ಹಸಿರು ಗಲ್ಲೀಫ‌ದ ಗೌರವ. ಸ್ವಾಮೀಜಿಯವರು ಸುತ್ತುವ ರುಮಾಲು ಹಸಿರು. ಇಂದಿಗೂ ಕಲಬುರ್ಗಿಯ ಬಂದೇನವಾಜ ಉರುಸ್‌ನಲ್ಲಿ, ನಿತ್ಯದ ದರ್ಗಾದ ದರುಶನದಲ್ಲಿ ಸಹಸ್ರ ಸಹಸ್ರ ಸಂಖ್ಯೆಯ ಹಿಂದೂಗಳ ಸಕ್ಕರೆ ಲೋಬಾನದ ಅಕ್ಕರೆ. ಇದು ನಿಸರ್ಗ ಸುಭಗ ಕೋಮು ಸೌಹಾರ್ದತೆಯ ಕುರುಹು.

ಇದು ಇಲ್ಲಿನ ಕತೆ…
ಕೃಷ್ಣೆ ಮೈತುಂಬಿ ಹರಿದರೂ ಕಷ್ಟಗಳು ಬಗೆ ಹರಿಯಲಿಲ್ಲ. 371 “ಜೆ’ ಕಾನೂನು ಹಾಗೆಯೇ ಇದೆ. ಹಕ್ಕಿನೊಡೆಯರಾಗಿ ಮೂಲ ಸೌಲಭ್ಯಗಳನ್ನು ಪಡೆಯದೇ ನಾವು ಬಡವರಾದೆವು. ಕನ್ನಡನಾಡಿಗೆ ಇಬ್ಬರು ಮುಖ್ಯಮಂತ್ರಿಗಳನ್ನು ಕೊಟ್ಟ ನಾವು ಹಿಂದುಳಿದವರಲ್ಲ, ಹಿಂದುಳಿಸಲ್ಪಟ್ಟವರು. ಎಲ್ಲಕ್ಕೂ “ಜಾಂದೇ ಚೋಡೋ’ ಎಂದು ಉದಾಸೀನ ತೋರುವ ಅಸಡ್ಡೆ ಜಾಯಮಾನ ನಮ್ಮದು. ಜವಾರಿ ಮುಗ್ಧªತೆ ಉಳಿಸಿಕೊಂಡುದೇ ನಮ್ಮ ಹೆಗ್ಗಳಿಕೆ. ಕಲಬುರ್ಗಿ ಹೆಸರಿನೊಂದಿಗೆ ಅಂಟಿಕೊಂಡಿರುವುದು ಕೆಂಡದ ಬಿಸಿಲು ಮತ್ತು ತೊಗರಿ. ಕಲಬುರ್ಗಿಯಲ್ಲಿ ಸರ್ಕಾರದ ಖರೀದಿಗಿಂತಲೂ ಭರ್ಜರಿಯಾಗಿ ಖಾಸಗಿ ಖರೀದಿದಾರರ ಕಿಗ್ಗಳದ ರೇಟುಗಳಿಗೆ ರೈತರು ತೊಗರಿ ಮತ್ತು ಹತ್ತಿ ಮಾರುವಂತಾಗಿದೆ. ಸಮ್ಮೇಳನದ ಗೋಷ್ಠಿಗಳಲ್ಲಿ ಇವೆಲ್ಲ ಚರ್ಚೆಯಾದರೆ, ನಿಜಕ್ಕೂ ಅದು ಅರ್ಥಪೂರ್ಣ.

ಭಾವೈಕ್ಯದ ಕಂಪು
ಶತಮಾನಗಳಿಂದ ಕೃಷ್ಣೆಯ ಒಂದು ದಡ ಹರಿದಾಸ ಸಾಹಿತ್ಯ, ಮತ್ತೂಂದು ದಡ ತತ್ವಪದ ಮತ್ತು ವಚನಗಳ ಬಹುತ್ವದ ಜೀವತುಂಬಿ ಹರಿದಿದೆ. “ಓಂ ಏಕ್‌ ಲಾಖ್‌ ಅಸ್ಸೀ ಹಜಾರ ಪಾಚೋರ್ಪಿ ಮೌನ್ದಿನ್‌’ - ತಿಂಥಣಿ ಮಾನಪ್ಪಯ್ಯನ ಇಂಥ ನುಡಿಗಟ್ಟುಗಳು ಹಿಂದೂ- ಮುಸ್ಲಿಂ ಭಾವೈಕ್ಯತೆಗೆ ಹಿಡಿದ ನಿಲುಗನ್ನಡಿ. ಅಫ‌ಜಲಪುರ, ಆಳಂದ, ಜೇವರ್ಗಿ, ಶಹಾಪುರ- ಹೀಗೆ ಕಲ್ಯಾಣ ಕರ್ನಾಟಕದ ಅನೇಕ ಭಾಗಗಳಲ್ಲಿ ಹಿಂದೂಗಳ ಮನೆದೇವರು ಸೂಫಿ ಸಂತರು. ಕರ್ಜಗಿಯ ಸೈಫ‌ುಲ್ಲಾ ಮುಲ್ಕ ದರ್ಗಾ, ನೀಲೂರು ಮಹಬೂಬ ಸುಬಾನಿ ದರ್ಗಾ, ಹೈದ್ರಾ ದರ್ಗಾಗಳ ಸೂಫಿ ದೈವಗಳು ಬಹುಪಾಲು ಹಿಂದೂ ವೀರಶೈವ, ಲಿಂಗಾಯತರ ಪಾಲಿನ ಉಪಾಸನಾ ದೇವರುಗಳು.

– ಮಲ್ಲಿಕಾರ್ಜುನ ಕಡಕೋಳ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.