ಜಾತ್ರೆಯಲ್ಲಿನ ಒಂದು “ಚಾಕೋಬಾರ್ ಕಥೆ”


Team Udayavani, Nov 13, 2019, 5:17 PM IST

Ice-cream

ಆವಾಗೆಲ್ಲಾ ಊರಲ್ಲಿ ಜಾತ್ರೆ ಅಂದ್ರೆ ಅದೇನೋ ಸಂಭ್ರಮ. ನನ್ನ ಅಮ್ಮನ ಊರಲ್ಲಿ ಜಾತ್ರೆ ಮಾರ್ಚ್ ತಿಂಗಳಲ್ಲಿ. ಹಾಗಾಗಿ ರಜಾ ತಗೊಂಡು ಅಲ್ಲಿಗೆ ಹೋಗಿದ್ದೆ. ಜಾತ್ರೆ ಅಂದ ಮೇಲೆ ಸಂತೆಗಳು ,ಐಸ್ ಕ್ರೀಮ್ ಗಾಡಿಗಳನ್ನು ನೋಡೋದೇ ಒಂದು ಮಜಾ. ನಾನು ಜಾತ್ರೆಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದು ಇದನ್ನೇ. ದೇವಸ್ಥಾನಕ್ಕೆ ಹೋಗುವಾಗ ಮೊದಲು ಸ್ವಾಗತಿಸುವುದೇ ತರಹೇವಾರಿ ಅಂಗಡಿಗಳು. ನನ್ನ ಕಣ್ಣುಗಳು ಮನಸ್ಸು ಎರಡು ಸಹ ಅದರ ಮೇಲೆ.

ಆದ್ರೆ ದೇವರ ದರ್ಶನ ಆಗದೆ ಏನೊಂದು ಸಿಗಲಾರದು ಅಂತ ಅಮ್ಮನ ಅಪ್ಪಣೆ. ಅಬ್ಬಾ , ಮತ್ತೆ ಆದರೂ ಸಿಗುತ್ತಲ್ಲ ಅನ್ನೋ ಬಲವಾದ ನಂಬಿಕೆ. ಒಳಗೆ ಹೋದರು ಮನಸ್ಸೆಲ್ಲಾ ಹೊರಗೆ. ಯಾವಾಗ ಆ ಸುಂದರ ಬಳೆಗಳನ್ನು ತೊಡುತ್ತೇನೆ, ಯಾವಾಗ ತಂಪು ಐಸ್ ಕ್ರೀಂ ಹೊಟ್ಟೆ ಸೇರುತ್ತೆ ಅಂತ ಚಿಂತೆ. ದೇವರಲ್ಲಿ ಸಹ ಇದೇ ಪ್ರಾರ್ಥನೆ.

ಸರಿ, ದೇವರ ದರ್ಶನ ಆಯ್ತು. ಹೊರ ಬಂದಿದ್ದೆ ತಡ ಶುರುವಾಯಿತು ನನ್ನ ಬೇಡಿಕೆಗಳು. ಸರ, ಕ್ಲಿಪ್, ಬಳೆ, ಕಿವಿಯೋಲೆ, ಚಪ್ಪಲಿ ಮತ್ತೆ ಕೊನೆಗೆ ಐಸ್ ಕ್ರೀಂ. ಕೇಳಿದ್ದರಲ್ಲಿ ಕೆಲವನ್ನು ಅಮ್ಮ ಕೊಡಿಸಿದರು. ಇನ್ನು ಕೆಲವು ತಾತ ಕೊಡಿಸಿದರು. ಸರಿ, ಮನೆಗ್ ಹೋಗೋ ಸಮಯವಾಯ್ತು. ಇದಕ್ಕೆ ಕಾಯುತ್ತಿದ್ದೆ ನಾನು. ಯಾಕಂದ್ರೆ ಮಾವ ಚಾಕೋಬಾರ್ ಕೊಡಿಸ್ತೀನಿ ಅಂದಿದ್ರು.

ಐಸ್ ಕ್ರೀಂ ಗಾಡಿ ಹತ್ತಿರ ತಲುಪಿದ್ದೆ ತಡ ಬಾಯಲ್ಲಿ ನೀರು ಸುರಿಯೋಕೆ ಶುರು ಆಯ್ತು. ಅಂತೂ ನನ್ ಕೈಗೆ ಚಾಕೋಬಾರ್ ಸಿಕ್ತು.  ತಿನ್ನೋಕೆ ಅಂತ ಹೊರಟೆ. ಆದ್ರೆ ಅಜ್ಜಿ ಬಿಡಲಿಲ್ಲ. ನಡು ರಸ್ತೆಯಲ್ಲಿ ಬೇಡಮ್ಮ ಮನೆಗೆ ಹೋಗಿ ತಿನ್ನುವಂತೆ ಅಂದ್ರು. ಸರಿ ನಡಿಯೋಕೆ ರಾತ್ರಿ ಬೇರೆ. ಅದಕ್ಕೆ ಮಾವ ರಿಕ್ಷಾ ಮಾಡಿದ್ರು. ನನ್ ಚಾಕೋಬಾರ್ ಅಜ್ಜಿ ಚೀಲ ಸೇರಿತ್ತು. ಯಾವಾಗ ಮನೆ ತಲುಪುತ್ತೇನೆ ಅನ್ನೋ ಆತುರ.

ನನ್ನ ಕಷ್ಟಕಾಲ.. ರಿಕ್ಷಾ ಸಿಗೋವಾಗ್ಲೆ, ತಡ ಆಗಿತ್ತು ಮನೆ ತಲುಪಿದಾಗ ಅರ್ಧಗಂಟೆ ಆಗಿತ್ತು. ಇನ್ನೇಕೆ ತಡ ಚಾಕೋಬಾರ್  ತಿಂತಿನಿ ಅಂತ ಅಜ್ಜಿ ಹತ್ತಿರ ಹೇಳಿದೆ ಅವರು ಚೀಲಕ್ಕೆ ಕೈ ಹಾಕಿ ಪ್ಯಾಕೆಟ್ ಹೊರತೆಗೆದರು.

ದಪ್ಪಕ್ಕಿದ್ದ ಪ್ಯಾಕೆಟ್ ತೆಳು ಆಗಿತ್ತು. ಆಗ್ಲೇ ನಂಗೆ ಏನೋ ಸಂಶಯ ಶುರುವಾಗಿತ್ತು. ನೋಡಿದ್ರೆ ಚಾಕೋಬಾರ್ ಪೂರ್ತಿ ಕರಗಿ ಕಡ್ಡಿ ಮಾತ್ರ ಉಳಿದಿತ್ತು. ನನ್ನ ಕಣ್ಣಲ್ಲಿ ನೀರು ಅಜ್ಜಿ ಮುಖದಲ್ಲಿ

ತಪ್ಪಿತಸ್ಥ ಭಾವ . ಪರಿಪರಿಯಾಗಿ ನನ್ನಲ್ಲಿ ಕ್ಷಮೆ ಕೇಳಿದರು. ತುಂಬಾನೇ ನೊಂದುಕೊಂಡರು .ಎಲ್ಲವೂ ತನ್ನಿಂದಾಗಿ ಆಯ್ತು ಎಂದು , ನೂರು ಬಾರಿ ಹೇಳಿದ್ರು. ನನ್ನಮ್ಮ ನನ್ನ ಸಮಾಧಾನ ಪಡಿಸದೆ, ಅವರ ಅಮ್ಮನನ್ನು ಸಮಾಧಾನ ಮಾಡ್ತಾ ಇದ್ದರು. ನನಗಂತೂ ರಾತ್ರಿ  ಆಗಿದ್ದರಿಂದ ಮತ್ತು ಸಂತೆ ತಿರುಗಿ ದಣಿ ವಾಗಿದ್ದರಿಂದ, ಬಹುಬೇಗನೆ ನಿದ್ರಾದೇವಿ ಆವರಿಸಿದ್ದಳು. ಆದ್ದರಿಂದ ಅತ್ತು ರಂಪ ಮಾಡೋಕೆ ಆಗಲಿಲ್ಲ.

ಇವೆಲ್ಲ ಚಿಕ್ಕವಯಸ್ಸಿನ ಸಂಗತಿಗಳು..ಇವಾಗಲು ಸಹ ಐಸ್ಕ್ರೀಮ್ ಗಾಡಿ ಎಲ್ಲೇ ನೋಡಿದ್ರೂ ಅಜ್ಜಿ ಮತ್ತು ಕರಗಿಹೋದ ಚಾಕೋಬಾರ್ ನೆನಪಾಗುತ್ತೆ. ತುಟಿಯಲ್ಲಿ ಕಿರುನಗೆಯೊಂದು ಮೂಡುತ್ತೆ

ತೇಜಸ್ವಿನಿ ಆರ್. ಕೆ

ಎಸ್ ಡಿ ಎಂ ಕಾಲೇಜು, ಉಜಿರೆ

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.