ಇಂದು ಅಕ್ಷಯ ತೃತೀಯಾ: ಹಬ್ಬದ ಮೆರುಗು ಹೆಚ್ಚಿಸಲಿ ಚಿನ್ನಾಭರಣ


Team Udayavani, May 3, 2022, 11:15 AM IST

ಇಂದು ಅಕ್ಷಯ ತೃತೀಯಾ: ಹಬ್ಬದ ಮೆರುಗು ಹೆಚ್ಚಿಸಲಿ ಚಿನ್ನಾಭರಣ

ಭಾರತ ವೈವಿಧ್ಯತೆಯ ನಾಡು. ವರ್ಷವಿಡೀ ನಾನಾ ಹಬ್ಬಗಳನ್ನು ಆಚರಿಸಿ ಸಂಭ್ರಮಿಸುವುದರಲ್ಲಿ ಭಾರತೀಯರು ಮೊದಲಿಗರು. ವಿವಿಧ ಧರ್ಮಗಳ ನೆಲೆಯಾಗಿರುವ ನಮ್ಮ ದೇಶದಲ್ಲಿ ಪ್ರತೀ ತಿಂಗಳು ಒಂದಿಲ್ಲೊಂದು ಹಬ್ಬದ ಆಚರಣೆ ನಡೆಯುತ್ತಲೇ ಇರುತ್ತದೆ. ಇಂತಹ ಹಬ್ಬಗಳ ಸಾಲಲ್ಲಿ ಅಕ್ಷಯ ತೃತೀಯಾವೂ ಸೇರಿಕೊಳ್ಳುತ್ತದೆ.

ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನವನ್ನು ಅಕ್ಷಯ ತದಿಗೆ ಎಂದು ಆಚರಿಸಲಾಗುತ್ತದೆ. ಈ ಪದವು ಸಂಸ್ಕೃತ ಭಾಷೆಯಿಂದ ಬಂದಿದ್ದು, ಅಕ್ಷಯ ಎಂದರೆ ಎಂದಿಗೂ ಕಡಿಮೆಯಾಗದ ಯಶಸ್ಸು ಅಥವಾ ಸಂತೋಷ ಎಂದರ್ಥ. ತೃತೀಯಾ ಎಂದರೆ ಮಾಸದ ಮೂರನೇ ದಿನ ಎಂಬುದನ್ನು ಸೂಚಿಸುತ್ತದೆ. ಹಾಗಾಗಿ ಆ ದಿನವನ್ನು ಅಕ್ಷಯ ತೃತೀಯಾ ಎಂದು ಕರೆಯಲಾಗುತ್ತದೆ.

ಹಬ್ಬದ ಮಹತ್ವ: ಹಿಂದೂ ಪುರಾಣಗಳ ಪ್ರಕಾರ ತ್ರೇತಾಯುಗವು ಅಕ್ಷಯ ತೃತೀಯ ದಿನದಂದು ಆರಂಭವಾಯಿತು. ಹಾಗಾಗಿ ಈ ದಿನದಂದು ಚಿನ್ನ ಖರೀದಿಸು ವುದರಿಂದ ಭವಿಷ್ಯದಲ್ಲಿ ಇದು ಅಕ್ಷಯವಾಗುತ್ತದೆ. ಈ ಕಾರಣದಿಂದಾಗಿ ಈ ದಿನದಂದು ಜನರು ಚಿನ್ನಾಭರಣ ಖರೀದಿಸಲು ಬಯಸು ತ್ತಾರೆ. ಅದಲ್ಲದೆ ಈ ದಿನ ದಾನ ಧರ್ಮ, ಯಜ್ಞ- ಯಾಗಾದಿಗಳನ್ನು ಮಾಡುವುದ ರಿಂದ ಜೀವನದಲ್ಲಿ ಕೀರ್ತೀ ಯಶಸ್ಸನ್ನು ಗಳಿಸಬಹುದು ಎಂಬುದು ನಂಬಿಕೆಯಾಗಿದೆ.

ಈ ದಿನದಂದು ವಿಷ್ಣು ಮತ್ತು ಲಕ್ಷ್ಮೀಯನ್ನು ಪೂಜಿಸುತ್ತಾರೆ. ಲಕ್ಷ್ಮೀ ಎಂದರೆ ಸಂಪತ್ತು, ಸುವರ್ಣ ಎಲ್ಲವೂ ಹೌದು. ಆಕೆ ಮನೆ ಬೆಳಗು ವವಳು ಹಾಗಾಗಿ ಆಕೆಯನ್ನು ಆರಾಧಿ ಸುವುದಿಂದ ಅಷ್ಟೆ„ಶ್ವರ್ಯ ಸಿಗುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಅದಲ್ಲದೆ ಸ್ವರ್ಗದ ದಾರಿಯಲ್ಲಿ ಹರಿಯುವ ಗಂಗೆಯನ್ನು ಭಗೀರಥನು ಭೂಮಿಗೆ ಬರ ಮಾಡಿಕೊಂಡಿದ್ದು ಕೂಡ ಈ ದಿನದಂದೇ ಎಂಬ ನಂಬಿಕೆ ಇದೆ. ಹೀಗಾಗಿ ಅನೇಕ ವಿಶೇಷತೆಗಳ ದಿನ ಇದಾಗಿದೆ. ಕೊರೊನಾ ಕಾರಣದಿಂದಾಗಿ ಎರಡು ವರ್ಷ ಈ ಹಬ್ಬವನ್ನು ಮೊದಲಿನಷ್ಟು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗದ ಕಾರಣ ಈ ಬಾರಿ ಜನರು ಹೆಚ್ಚಿನ ಉತ್ಸುಕತೆಯಲ್ಲಿ ಆಭರಣ ಖರೀದಿಗೆ ಮುಂದಾಗುವುದು ಕಂಡು ಬರುತ್ತಿದೆ.

ಭೌತಿಕ ಚಿನ್ನಕ್ಕೆ ಹೆಚ್ಚಿನ ಬೇಡಿಕೆ: ಇತ್ತೀಚಿನ ದಿನಗಳಲ್ಲಿ ಜನರು ಆಭರಣಗಳಿಂದ ಹಿಡಿದು ಡಿಜಿಟಲ್‌ ಮತ್ತು ಬಾಂಡ್‌ ರೂಪದ ಚಿನ್ನದವರೆಗೆ ಎಲ್ಲ ರೀತಿಯ ಚಿನ್ನ ಖರೀದಿಸುತ್ತಾರೆ. ಇಟಿಎಫ್ ಮತ್ತು ಬಾಂಡ್‌ ಚಿನ್ನವು ಭೌತಿಕ ರೂಪದಲ್ಲಿ ಇರುವುದಿಲ್ಲ. ಡಿಜಿಟಲ್‌ ಚಿನ್ನ ಕೆಲವು ವರ್ಷಗಳಿಂದ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಡಿಜಿಟಲ್‌ ಚಿನ್ನಕ್ಕೆ ಭಾರತದಲ್ಲಿ ಅಷ್ಟೊಂದು ಬೇಡಿಕೆ ಇಲ್ಲ. ಪೂಜೆ, ಪುನಸ್ಕಾರಗಳಿಗೆ ಭೌತಿಕ ಚಿನ್ನವೇ ಅಗತ್ಯ ವಾಗಿರುವುದರಿಂದ ಹೆಚ್ಚಿನವರು ಭೌತಿಕ ಚಿನ್ನವನ್ನೇ ಬಯಸುತ್ತಾರೆ. ಒಂದೋ ಚಿನ್ನದ ಆಭರಣ ಅಥವಾ ಹೂಡಿಕೆಯ ದೃಷ್ಟಿಯಿಂದ ಚಿನ್ನದ ನಾಣ್ಯಗಳನ್ನು ಖರೀದಿಸುತ್ತಾರೆ. ಅಕ್ಷಯ ತೃತೀಯಾ ದಿನ ಕೂಡ ಜನರು ಚಿನ್ನದ ಆಭರಣ ಮತ್ತು ನಾಣ್ಯಗಳಿಗೆ ಹೆಚ್ಚಿನ ಬೇಡಿಕೆ ಸಲ್ಲಿಸುವುದು ಸರ್ವೇ ಸಾಮಾನ್ಯವಾಗಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.