ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸುವ ಮುಂಡಗೋಡು ಟಿಬೇಟಿಯನ್ ಕ್ಯಾಂಪ್ ಎಂಬ ಅದ್ಭುತ ತಾಣ !


Team Udayavani, Sep 27, 2020, 3:32 PM IST

camp-4

ಮೂಡುಬಿದಿರೆ: ಎತ್ತ ನೋಡಿದರೂ ಅಚ್ಚಹಸಿರು ಕೃಷಿ ಭೂಮಿ. ಖಡಕ್ ಕನ್ನಡ ಮಾತನಾಡುವ ಜನ. ಉದ್ದಕ್ಕೂ ಸಣ್ಣ ಪುಟ್ಟ ಅಂಗಡಿಗಳು. ಪಟ್ಟಣದ ನಡುವೆ ಜನಸಾಮಾನ್ಯರ ಮಧ್ಯೆ ಕೆಂಪು/ಹಳದಿ ಉಡುಗೆ ತೊಟ್ಟ ಬೌದ್ಧ ಭಿಕ್ಕುಗಳು. ಒಂದು ಕ್ಷಣಕ್ಕೆ ಇವರ ಗುಂಪು ನೋಡಿ ಇದು‌ ನೇಪಾಳನೋ, ಟಿಬೇಟ್ ರಾಜ್ಯವೋ ಎಂಬಂತೆ ಭಾಸವಾಗುತ್ತದೆ. ಆದರೆ ಇದು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ತಟ್ಟಿಹಳ್ಳಿಯ‌ ಟಿಬೇಟಿಯನ್ ಕ್ಯಾಂಪ್/ಕಾಲೋನಿ. ಶಿರಸಿ‌ ಹಾಗೂ ಹುಬ್ಬಳ್ಳಿಯ ಮಧ್ಯೆ ಸಿಗುವ ಸುಂದರ ತಾಣ.

ಸುಮಾರು 54 ವರ್ಷಗಳ ಹಿಂದಿನ ಇತಿಹಾಸ ಹೊಂದಿದೆ, ಆಗಿನ ಮೈಸೂರು ಸರ್ಕಾರವು ವಲಸೆ ಬಂದ ಟಿಬೇಟಿಯನ್ ಜನರಿಗೆ ಜಾಗ‌‌ ನೀಡಿ ಉಳಿದುಕೊಳ್ಳಲು ಅವಕಾಶ ಮಾಡಿಕೊಟ್ಟಿತ್ತು. ಅದರಂತೆ‌ ಅವರು ಇಲ್ಲಿನ ಕ್ಯಾಂಪ್ ಗಳನ್ನು ಟಿಬೇಟಿಯನ್ ವಾಸ್ತು ಶೈಲಿಯಂತೆ ರಚಿಸಿದ್ದಾರೆ. ಈ ಕ್ಯಾಂಪ್ ನ ಒಳಗೆ ಬುದ್ಧನ ಪ್ರತಿಮೆಗಳಿದ್ದು, ಅದನ್ನು ಪ್ರತಿನಿತ್ಯ ಪ್ರಾರ್ಥಿಸಲಾಗುತ್ತದೆ‌. ಇವರು ಶಿಸ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಕ್ಯಾಂಪ್ ನ ಒಳಗಡೆ ಸಾಲಿನಲ್ಲಿ ಕುಳಿತು ತಮಗೆ ನೀಡಿದ ಆಹಾರದ ಪಾತ್ರೆಯನ್ನು ಮುಂದಿಟ್ಟುಕೊಂಡು ಭಕ್ತಿಯಿಂದ ಮಂತ್ರ ಪಠಣೆ ಮಾಡುತ್ತಾರೆ. ಮಂತ್ರ ಪಠಿಸುವ ಈ ಕ್ರಮವನ್ನು ನೋಡು ನೋಡುತ್ತಿದ್ದಂತೆ ನಾವೂ ಮಂತ್ರಮುಗ್ಧರಾಗಿಬಿಡುತ್ತೇವೆ.

ಕ್ಯಾಂಪ್ ನ ಹೊರಭಾಗದಲ್ಲಿ ಅಲ್ಲಿಗೆ ಭೇಟಿ ನೀಡುವವರಿಗೆ ರುಚಿ ರುಚಿಯಾದ ಮೊಮೋಸ್, ತುಕ್ಪ, ನೂಡಲ್ಸ್ ನಂತಹ ತಿನಿಸುಗಳು ತಯಾರಿರುತ್ತವೆ. ಇನ್ನು ಅವರದ್ದೇ ಶೈಲಿಯ ಉಡುಗೆಗಳು, ಮನೆಯ ಅಲಂಕಾರಿಕ ವಸ್ತುಗಳ ಮಾರಾಟದ ಅಂಗಡಿಗಳಿಗೆ ಒಮ್ಮೆ ಭೇಟಿ ನೀಡಲೇಬೇಕು. ಇಲ್ಲಿ ಕೇವಲ ಕ್ಯಾಂಪ್ ಮಾತ್ರವಲ್ಲದೆ ಶಾಲೆಗಳು, ಆಸ್ಪತ್ರೆ, ಪೋಸ್ಟ್ ಆಫೀಸ್, ಬ್ಯಾಂಕ್ ಗಳು ಈ ಕಾಲೋನಿಯಲ್ಲಿ ಸ್ಥಾಪಿತವಾಗಿವೆ.

ಹಲವಾರು ವರ್ಷಗಳಿಂದ ಅವರು ಇಲ್ಲಿಯೇ ವಾಸವಿರುವುದರಿಂದ ಈಗ ಅಲ್ಲಿನ ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಇನ್ನು ಇಲ್ಲಿ ಕೇವಲ ಬೌದ್ಧ ಬಿಕ್ಕುಗಳು ಮಾತ್ರವಲ್ಲದೆ ಟಿಬೇಟಿಯನ್ ಸಾಮಾನ್ಯ ಜನರು ಕೂಡ ತಮ್ಮದೇ ಮನೆಗಳನ್ನು ನಿರ್ಮಿಸಿ ಇಲ್ಲಿಯೇ ಉದ್ಯೋಗ ಪಡೆದು ಜೀವನ ಸಾಗಿಸುತ್ತಿದ್ದಾರೆ. ಅಲ್ಲದೆ ಇಲ್ಲಿನ ಕೃಷಿ ಕಾರ್ಯದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕ್ಯಾಂಪ್ ಗೆ ಭೇಟಿ ನೀಡಿದಾಗ ಅಲ್ಲಿ ಇರುವಂತಹ ಬಿಕ್ಕುಗಳಲ್ಲಿ ಮಾತನಾಡಿಸಿದರೆ ಅತೀ ವಿನಯದಿಂದ ಸಂವಹಿಸುತ್ತಾರೆ. ನಮಗೆ ಬೇಕಾದ ಅಲ್ಲಿನ ಮಾಹಿತಿಯನ್ನು ನೀಡುತ್ತಾರೆ. ಇಲ್ಲಿ ಕಳೆಯೋ ಆ ಸಮಯ ಅದೆಷ್ಟೇ ಅಲ್ಪವಾದರೂ ಪರದೇಶದ ಬೃಹತ್ ನೋಟವನ್ನೇ ನಮ್ಮ ಮುಂದಿಡುತ್ತದೆ. ವಿದೇಶ ಸುತ್ತಿದಂತೆ ಅನಿಸುವುದರಲ್ಲಿ ಅನುಮಾನವಿಲ್ಲ. ಅಂತಹ ಅದ್ಭುತ ತಾಣಕ್ಕೆ ಹೋಗಿ ಮರೆಯಲಾಗದ ಕ್ಷಣಗಳನ್ನು‌ ಹೊತ್ತು ತಂದಿರುವುದು ಖುಷಿಯ‌ ಸಂಗತಿ. ಅದರಲ್ಲೂ ಭಾರತದಲ್ಲೇ ಪರದೇಶದ ಸಂಸ್ಕೃತಿಯ ಸ್ವಾಗತವಾಗಿರುವುದು ಭಾವನೆಗಳಿಗೆ ಬಣ್ಣಿಸಲಾಗದು. ಇಂತಹ‌ ಅನುಭವ ನಿಜವಾಗಿಯೂ ದೊರೆಯಬೇಕೆಂದರೆ ಆ ಶಾಂತಿ ನಿಕೇತನಕ್ಕೆ ಒಮ್ಮೆಯಾದರೂ ಭೇಟಿ ನೀಡಲೇಬೇಕು

-ಅನ್ವಯ ಮೂಡುಬಿದಿರೆ

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.