ಅಧಿವೇಶನದಲ್ಲಿ ನಿಯಮ ಕಿತ್ತಾಟ ; ಏನಿದು 176 ಮತ್ತು 267?


Team Udayavani, Jul 24, 2023, 8:30 AM IST

ಅಧಿವೇಶನದಲ್ಲಿ ನಿಯಮ ಕಿತ್ತಾಟ ; ಏನಿದು 176 ಮತ್ತು 267?

ಕಳೆದ ಎರಡು ತಿಂಗಳುಗಳಿಂದ ಮಣಿಪುರ ಹೊತ್ತಿ ಉರಿಯುತಿದ್ದು, ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವೀಡಿಯೋ ಬಹಿರಂಗವಾದ ಮೇಲೆ ವಿವಾದ ಮತ್ತಷ್ಟು ಕಾವು ಪಡೆದುಕೊಂಡಿದೆ. ಮಣಿಪುರದ ಗದ್ದಲ ಸಂಸತ್‌ನ ಉಭಯ ಸದನಗಳಲ್ಲೂ ಸದ್ದು ಮಾಡಿದ್ದು, ನಿಯಮ 267ರ ಅಡಿಯಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದರೆ, ಸರಕಾರ ನಿಯಮ 176ರ ಅಡಿಯಲ್ಲಿ ಚರ್ಚೆಗೆ ಸಿದ್ಧ ಎಂದು ಹೇಳಿದೆ. ಹಾಗಾದರೆ ಏನಿದು ನಿಯಮಗಳು? ಇಲ್ಲಿದೆ ಮಾಹಿತಿ…

ನಿಯಮ 267 ಅಂದರೇನು?
ಸಂಸತ್‌ನ ನಿಯಮ 267ರ ಅನ್ವಯ ಯಾವುದೇ ವಿಷಯದ ಬಗ್ಗೆ ಸುದೀರ್ಘ‌ವಾದ ಚರ್ಚೆಗೆ ಅವಕಾಶ ಕೊಡುವುದು. ಸದಸ್ಯರೊಬ್ಬರು ಸಭಾಧ್ಯಕ್ಷ ಅಥವಾ ಸಭಾಪತಿಗಳ ಅನುಮತಿ ಮೇರೆಗೆ ಈ ನಿಯಮದ‌ಡಿ ಚರ್ಚೆಗೆ ಆಗ್ರಹಿಸಬಹುದು. ಒಂದು ವೇಳೆ ಸಭಾಧ್ಯಕ್ಷ ಅಥವಾ ಸಭಾಪತಿ ಒಪ್ಪಿಗೆ ನೀಡಿದರೆ, ವಿಚಾರವೊಂದರ ಬಗ್ಗೆ ಎಷ್ಟು ಗಂಟೆ ಅಥವಾ ಎಷ್ಟು ದಿನಗಳ ವರೆಗೆ ಬೇಕಾದರೂ ಚರ್ಚಿಸಬಹುದು. ಬೇರೆ ನಿಯಮಗಳನ್ನು ತೆಗೆದು ಪಕ್ಕಕ್ಕಿಡಬಹುದು.

ವಿಪಕ್ಷಗಳ ವಾದವೇನು?
ಒಂದೊಮ್ಮೆ ನಿಯಮ 267ರ ಅನ್ವಯ ಅವಕಾಶ ನೀಡದೇ, 176ರ ಅನ್ವಯ ಅವಕಾಶ ನೀಡಿದರೆ, ಚರ್ಚೆಗೆ ಸಮಯ ಸಾಕಾಗುವುದಿಲ್ಲ ಎಂದು ವಿಪಕ್ಷಗಳು ಹೇಳುತ್ತಿವೆ. ಕಳೆದ ಎರಡು ತಿಂಗಳಿಂದ ಮಣಿಪುರ ಗದ್ದಲ ಮುಂದುವರಿದಿದ್ದು ಈ ಬಗ್ಗೆ ಸುದೀರ್ಘ‌ ಚರ್ಚೆಯಾಗಬೇಕು. ಪ್ರಧಾನಿಗಳೇ ಉತ್ತರ ನೀಡಬೇಕು ಎಂಬುದು ಅವುಗಳ ಆಗ್ರಹ.

ಸರಕಾರದ ವಾದವೇನು?
ಮಣಿಪುರ ಗದ್ದಲ ಬಗ್ಗೆ ಚರ್ಚೆ ನಡೆಸಲು ನಿಯಮ 176 ಸಾಕು. ಅಲ್ಲದೆ ಪ್ರಧಾನಿಯವರೇ ಉತ್ತರ ಕೊಡಬೇಕು ಎಂದೇನಿಲ್ಲ. ಗೃಹ ಸಚಿವ ಅಮಿತ್‌ ಶಾ ಅವರು ಉತ್ತರ ಕೊಡುತ್ತಾರೆ ಎಂದಿದೆ. ಆದರೆ ಇದಕ್ಕೆ ವಿಪಕ್ಷಗಳು ಒಪ್ಪಿಗೆ ನೀಡಿಲ್ಲ. ಹೀಗಾಗಿ ಮೊದಲ ಎರಡು ದಿನಗಳ ಅಧಿವೇಶನ ಗದ್ದಲದಿಂದಾಗಿಯೇ ಕೊಚ್ಚಿ ಹೋಗಿದೆ.

ನಿಯಮ 176 ಅಂದರೇನು?
ಸಂಸತ್‌ನ ನಿಯಮ 176 ಅನ್ವಯ ಯಾವುದೇ ವಿಷಯವನ್ನು ಎರಡೂವರೆ ಗಂಟೆಗಳ ವರೆಗೆ ಚರ್ಚೆ ನಡೆಸಬಹುದು. ಇದನ್ನು ದಾಟಿ ಮುಂದಕ್ಕೆ ಹೋಗುವಂತಿಲ್ಲ. ಈ ಎರಡೂವರೆ ಗಂಟೆಗಳ ಅವಧಿಯಲ್ಲಿ ನಿಗದಿತ ವಿಷಯದ ಬಗ್ಗೆ ಚರ್ಚೆ ಮುಗಿಸಬೇಕು. ಆಗ ಕಡಿಮೆ ಸದಸ್ಯರಿಗೆ ಮತ್ತು ಕಡಿಮೆ ಅವಧಿಯ ಸಮಯ ಸಿಗುತ್ತದೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.