ಕಾಳ್ಗಿಚ್ಚಿನ ಆರ್ಭಟಕ್ಕೆ ಬೆಂದ ಆಸ್ಟ್ರೇಲಿಯಾ

ಹೊತ್ತಿ ಉರಿಯಲು ಕಾರಣವೇನು?

Team Udayavani, Jan 8, 2020, 6:37 AM IST

33

ಕಳೆದ ಕೆಲವು ತಿಂಗಳಿಂದ ಆಸ್ಟ್ರೇಲಿಯಾದ ದಕ್ಷಿಣ ಕರಾವಳಿಯ ನ್ಯೂ ಸೌಥವೇಲ್ಸ್ ಹಾಗೂ ಕ್ವೀನ್ಸ್ ಲ್ಯಾಂಡ್ ಸಮೀಪದ ಕಾಡು ಹೊತ್ತಿ ಉರಿಯುತ್ತಿದೆ. ಈ ಬೆಂಕಿಯನ್ನು ನಂದಿಸಲು ಶ್ರಮಿಸಲಾಗುತ್ತಿದ್ದರೂ ಪೂರ್ಣ ಹತೋ ಟಿಗೆ ಬಂದಿಲ್ಲ. ಪರಿಣಾಮ ಭೂಮಿಯ ತಾಪಮಾನ ಏರಿಕೆಯಾಗುತ್ತಿದೆ. ನಿರಂತರವಾಗಿ ವ್ಯಾಪಿಸಿದ ಕಾಳ್ಗಿಚ್ಚು ಸಾವಿರಾರು ಜನರ ಮನೆಯನ್ನು ಕಿತ್ತುಕೊಂಡಿದೆ. ಈ ಅವಘಡಕ್ಕೆ ಕಾರಣ, ನಷ್ಟ ಮೊದಲಾದ ಮಾಹಿತಿ ಇಲ್ಲಿದೆ.

ಏನು ಕಾರಣ
ಪೈರೋಕುಮುಲೋನಿಂಬಸ್‌ ಚಂಡಮಾರುತ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಸುಮಾರು 10 ಮೈಲುಗಳಷ್ಟು ದೂರಕ್ಕೆ ಬೆಂಕಿಯ ಕಣಗಳ ಕಿಡಿಯನ್ನು ವ್ಯಾಪಿಸುವ ಸಾಮರ್ಥ್ಯ ಹೊಂದಿದೆ.

ತೇವಾಂಶ ಕಡಿಮೆ
ಆಸ್ಟ್ರೇಲಿಯಾದಲ್ಲಿ ತಾಪಮಾನ ಇತರೆ ದೇಶಗಳಿಗಿಂತ 2 ಪಟ್ಟಿದೆ. ಆದರೆ ತೇವಾಂಶ ಪ್ರಮಾಣ ಕಡಿಮೆ ಇದೆ. ಸದ್ಯ ಅವಘಡ ಸಂಭವಿಸಿರುವ ಸ್ಥಳದಲ್ಲಿ ಒಣಮರಗಳು ಹೆಚ್ಚು ಇದ್ದವು.

ಬೌಗೋಳಿಕತೆ
ಆಗ್ನೇಯ ಆಸ್ಟ್ರೇಲಿಯಾದ ಶೇ.10ರಷ್ಟು ಬಂಜರು ಪ್ರದೇಶವಾಗಿದ್ದು, ನೈರುತ್ಯದಲ್ಲಿ ಶೇ.15ರಷ್ಟು ತೇವಾಂಶದ ಕಡಿಮೆ ಇದೆ. ಅಲ್ಲಿನ ಸರಾಸರಿ ವಾರ್ಷಿಕ ತಾಪಮಾ ನವು 1.5 ಡಿಗ್ರಿ ಸೆ. ಇದ್ದು, 90 ದಶಕದ ಸರಾಸರಿ ತಾಪಮಾನಕ್ಕಿಂತ ಹೆಚ್ಚಾಗಿದೆ.

ಎಲ್ಲೆಲ್ಲಿ ಇನ್ನೂ ಇವೆ
ವಿಕ್ಟೋರಿಯಾ, ನ್ಯೂಸೌತ್‌ ವೇಲ್ಸ್‌ ನ 150 ಪ್ರದೇಶಗಳು, ಕರಾವಳಿಯ ಅರಣ್ಯಗಳು, ಸಿಡ್ನಿ, ಮಲಕುಟಾ, ವೊಲೆ ಮಿ ನ್ಯಾಷನಲ್‌ ಪಾರ್ಕ್‌, ಪೋರ್ಟ್‌ ಮ್ಯಾಕ್ವಾರಿ, ನ್ಯೂಕ್ಯಾಸಲ್‌ ಮತ್ತು ಬ್ಲೂಮೌಂಟ್ಸ್‌ಗಳಲ್ಲಿ ಬೆಂಕಿ ಇನ್ನೂ ಇವೆ.

ನಷ್ಟವೆಷ್ಟು ?
48 ಕೋಟಿ ಪ್ರಾಣಿಗಳ ಮರಣ
2000 ಕ್ಕೂ ಹೆಚ್ಚು ಮನೆಗಳು ಬೆಂಕಿಗಾಹುತಿ
19.8 ಮಿಲಿಯನ್‌ ಹೆಕ್ಟೇರ್‌ ಭೂಮಿ ನಾಶ
ಸುಮಾರು 28 ಮಂದಿ ಬಲಿ

25 ಕೋಟಿ ಟನ್‌ ಇಂಗಾಲ
ಕಾಡಿನ ಬೆಂಕಿಯಿಂದಾಗಿ ವಿಪರೀತ ಪ್ರಮಾಣದ ಇಂಗಾಲದ ಆಕ್ಸೈಡ್‌ ವಾತಾವರಣವನ್ನು ಸೇರುತ್ತಿದೆ. ಒಂದು ಅಂದಾಜಿನ ಪ್ರಕಾರ ಈಗಾಗಲೇ 25 ಕೋಟಿ ಟನ್‌ ಇಂಗಾಲದ ಆಕ್ಸೈಡ್‌ ವಾತಾವರಣಕ್ಕೆ ಸೇರ್ಪಡೆಯಾಗಿದೆ. ಇದು 2018ರಲ್ಲಿ ಆಸ್ಟ್ರೇಲಿಯಾದಲ್ಲಿ ಉತ್ಪಾದನೆಯಾದ ಒಟ್ಟಾರೆ ಇಂಗಾಲದ ಅಕ್ಸೈಡ್‌ನ‌ ಅರ್ಧದಷ್ಟು.

ಮಾನವನೂ ಕಾರಣ
ಜಾಗತಿಕ ತಾಪಮಾನ ವೈಪರೀತ್ಯದಿಂದ ವಿಶ್ವದ ನಾನಾ ದೇಶಗಳು ಬೆಂಕಿಯ ಕೆನ್ನಾಲಗೆ ಬಲಿಯಾಗಿದೆ. ಇದರಲ್ಲಿ ಮಾನವನ ಪಾಲು ಇದೆ. ಸ್ವಾರ್ಥಕ್ಕಾಗಿ ಕಾಡುಗಳ ವಿನಾಶ ಮಾಡುವ ಮೂಲಕ ಜಾಗತಿಕ ತಾಪಮಾನ ಏರಿಕೆ ಆಗುವುದಕ್ಕೆ ಮಾನವ ಪರೋಕ್ಷವಾಗಿ ಕಾರಣವಾಗುತ್ತಿದ್ದಾನೆ ಎಂದು ಸ್ಟ್ಯಾನ್‌ಫೋರ್ಡ್‌ ವಿ.ವಿ.ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Budget 2024; paperless tax system soon

Budget 2024; ಶೀಘ್ರ ಕಾಗದ ರಹಿತ ತೆರಿಗೆ ವ್ಯವಸ್ಥೆ

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.