ಕತಾರ್ನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ
Team Udayavani, Apr 7, 2021, 6:08 PM IST
ಕತಾರ್ : ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ 75 ವಾರಗಳ ಸುದೀರ್ಘ ಅವಧಿಯ ವಿವಿಧ ಕಾರ್ಯಕ್ರಮಗಳನ್ನು ಕತಾರ್ನಲ್ಲಿ ಆಯೋಜಿಸಲಾಗಿದೆ. ಈ ಆಚರಣೆಗೆ ಭಾರತ ಸರಕಾರ ಅಧಿಕೃತವಾಗಿ ಆಜಾದಿ ಕಾ ಅಮೃತ ಮಹೋತ್ಸವ ಎಂದು ಹೆಸರಿಸಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ ಕತಾರ್ನ ಭಾರತದ ರಾಯಭಾರ ಕಚೇರಿಯಲ್ಲಿ ಮಾ. 26ರಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.
ಕೋವಿಡ್ ನಿಯಮಾವಳಿಯನ್ನು ಪಾಲಿಸುವ ಹಿನ್ನೆಲೆಯಲ್ಲಿ ಈ ಸಮಾರಂಭವು ರಾಯಭಾರ ಕಚೇರಿಯ ಉನ್ನತ ಶ್ರೇಣಿಯ ಅಧಿಕಾರಿಗಳು ಮತ್ತು ಐಸಿಸಿ ನಿರ್ವಹಣಾ ಸಮಿತಿಯ ಸದಸ್ಯರಿಗೆ ಮಾತ್ರ ಸೀಮಿತವಾಗಿತ್ತು.
ಮುಖ್ಯ ಅತಿಥಿ, ಭಾರತದ ರಾಯಭಾರಿ ಡಾ| ದೀಪಕ್ ಮಿತ್ತಲ್ ಅವರು ದೀಪ ಬೆಳಗಿ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಭ್ರಮಾಚರಣೆಯ ಅಂಗವಾಗಿ 75 ಜನರಿಗೆ ಉಚಿತ ಐಸಿಬಿಎಫ್ ಜೀವ ವಿಮೆ ಮತ್ತು ಐಸಿಸಿಎಫ್ ಅಧಿಕಾರಿಗಳಿಗೆ ಐಸಿಸಿಯಿಂದ ನೀಡಿದ ನಿಧಿಯನ್ನು ಹಸ್ತಾಂತರಿಸಲಾಯಿತು.
ಸಮಾರಂಭದ ಅನಂತರ ವರ್ಚುವಲ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಎಚ್.ಇ. ಖಾಲಿದ್ ಬಿನ್ ಇಬ್ರಾಹಿಂ ಅಲ್- ಹಮರ್, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಿರ್ದೇಶಕ, ಕತಾರ್ ಮತ್ತು ಭಾರತದ ರಾಯಭಾರಿಗಳು ಸಭೆಯಲ್ಲಿ ಮಾತನಾಡಿದರು.
ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ಐಸಿಸಿ ಅಂಗಸಂಸ್ಥೆಗಳೊಂದಿಗೆ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಉತ್ಸವಗಳನ್ನು ಚಿತ್ರಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಯಿತು.
ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (75)ದ ಉದ್ಘಾಟನೆ ಕಾರ್ಯಕ್ರಮದಲ್ಲಿ ತುಳುಕೂಟ ಕತಾರ್ನ ಪ್ರತಿಭಾನ್ವಿತ ಸದಸ್ಯರಿಂದ ತುಳು ನೃತ್ಯ ರೂಪಕವನ್ನು ಪ್ರಸ್ತುತ
ಪಡಿಸಿದರು. ಈ ರೂಪಕದಲ್ಲಿ ಚೇತನಾ ಅಡಪ, ಅಪರ್ಣಾ ಶರತ್, ಲಾವಣ್ಯಾ ಆಚಾರ್, ದಿವ್ಯಶ್ರೀ, ಸೌಮ್ಯಾ ಕೆ.ಟಿ., ಸೀಮಾ ಉಮೇಶ್ ಪೂಜಾರಿ, ಅನುಷ್ಕಾ ಉಮೇಶ್ ಪೂಜಾರಿ, ಸುಬೋಧ್ ಶೆಟ್ಟಿ, ಸುಹಾಸ್ ಶೆಟ್ಟಿ, ಗಿರೀಶ್ ಪುರಾಣಿಕ್, ಸುರೇಶ್ ಭಟ್, ಪುನೀತ್ ಸಾಗರ್, ಅಮಿತ್ ಪೂಜಾರಿ, ಮಂಜು ಕಗೇìರ್, ಅನುಷ್ಕಾ ಉಮೇಶ್ ಪೂಜಾರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?
Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…
Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ
Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ
Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ