ಬಾಂಗ್ಲಾ: ಹಿಂದೂಗಳ ಮೇಲೆ ದಾಳಿ; ಇತಿಹಾಸದ ಕಹಿನೆನಪು


Team Udayavani, Oct 20, 2021, 6:21 AM IST

ಬಾಂಗ್ಲಾ: ಹಿಂದೂಗಳ ಮೇಲೆ ದಾಳಿ; ಇತಿಹಾಸದ ಕಹಿನೆನಪು

ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದಾಳಿಗೆ ಕರಾಳ ಇತಿಹಾಸವೇ ಇದೆ. ಅಂದರೆ, ಸ್ವಾತಂತ್ರ್ಯೋತ್ಸವದ ಹಿಂದಿನಿಂದಲೂ ಬಾಂಗ್ಲಾದೇಶದ ಕೆಲವು ಕಡೆಗಳಲ್ಲಿ ಹಿಂದೂಗಳ ಮೇಲೆ ದಾಳಿ ನಡೆಯುತ್ತಲೇ ಇದೆ. ವಿಚಿತ್ರವೆಂದರೆ, ಜಲಿಯನ್‌ವಾಲಾ ಬಾಗ್‌ನಲ್ಲಿ ಬ್ರಿಟಿಷರು ನಡೆಸಿದ ನರಮೇಧಕ್ಕಿಂತಲೂ ದೊಡ್ಡ ನರಮೇಧಗಳು ಬಾಂಗ್ಲಾದಲ್ಲಿ ನಡೆಯುತ್ತಲೇ ಇವೆ.

ಇತಿಹಾಸಕ್ಕೆ ಹೋಗುವುದಾದರೆ, ಭಾರತಕ್ಕೆ ಸ್ವಾತಂತ್ರ್ಯ ಬರುವ ಮುನ್ನ ಈ ಭಾಗದಲ್ಲಿ ಹಿಂದೂಗಳ ಸಂಖ್ಯೆ ಒಟ್ಟಾರೆ ಜನಸಂಖ್ಯೆಯ ಶೇ.30ರಷ್ಟಿತ್ತು. ಆದರೆ ಈಗ ಹಿಂದೂ, ಕ್ರೈಸ್ತರು ಮತ್ತು ಬೌದ್ಧರನ್ನು ಸೇರಿಸಿ ಶೇ.8ರಷ್ಟಿದೆ. ಈ 75 ವರ್ಷಗಳಲ್ಲಿ ಇವರೆಲ್ಲ ಎಲ್ಲಿ ಹೋದರು ಎಂಬ ಪ್ರಶ್ನೆಗೆ ಸಿಗುವ ಉತ್ತರ, ಆಗಾಗ್ಗೆ ನಡೆಯುತ್ತಿರುವ ನರಮೇಧಗಳು ಮತ್ತು ಹೆಚ್ಚಿನವರು ಭಾರತಕ್ಕೆ ಪಲಾಯನ ಮಾಡಿರುವುದು.

1941ರ ಜನಗಣತಿ ಪ್ರಕಾರ, ಈಗಿನ ಬಾಂಗ್ಲಾದೇಶವಿರುವ ಭಾಗದಲ್ಲಿ ಇದ್ದ ಹಿಂದೂಗಳು ಸ್ಥಿತಿವಂತರು ಮತ್ತು ಶೈಕ್ಷಣಿಕವಾಗಿ ಬುದ್ಧಿವಂತರೂ ಆಗಿದ್ದರು. ನಗರಗಳಲ್ಲಿ ಪುಟ್ಟ ಸಂಖ್ಯೆಯಲ್ಲಿದ್ದ ಇವರು, ವೈದ್ಯ ವೃತ್ತಿ, ವಕೀಲಿಕೆ ಮಾಡುತ್ತಿದ್ದರೆ, ಹಳ್ಳಿಗಳಲ್ಲಿದ್ದ ಹಿಂದೂಗಳು ಕಲಾವಿದರು, ಮೀನುಗಾರಿಕೆ ಮಾಡುತ್ತಿದ್ದರು.

1946ರ ಅಕ್ಟೋಬರ್‌ನಲ್ಲಿ ನೋಖಾಲಿ ಎಂಬ ಜಿಲ್ಲೆಯಲ್ಲಿ ಹಿಂದೂಗಳ ಮೇಲೆ ಅವ್ಯಾಹತವಾಗಿ ದಾಳಿ ನಡೆದಿತ್ತು. ಮುಸ್ಲಿಂ ಲೀಗ್‌ನ ಪುಂಡರು ಹಿಂದೂಗಳ ಮೇಲೆ ದಾಳಿ ಮಾಡಿ ಕೊಲೆ, ಅತ್ಯಾಚಾರ, ಹಸುಗಳ ವಧೆ ಮಾಡಿದ್ದರು. ಇದಾದ ಮೇಲೆ ಇಲ್ಲಿ ಶೇ.20ರಷ್ಟಿದ್ದ ಹಿಂದೂಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಲೇ ಬಂದಿತು. ಈಗ ಇದೇ ಜಿಲ್ಲೆಯಲ್ಲಿ ಇರುವ ಹಿಂದೂಗಳ ಸಂಖ್ಯೆ ಶೇ.2-3 ಮಾತ್ರ.  1946ರ ಗಲಭೆ ಬಳಿಕ ಸ್ವತಃ ಮಹಾತ್ಮಾ ಗಾಂಧಿ ಅವರೇ ಕೋಲ್ಕತಾಗೆ ತೆರಳಿ ಹಿಂದೂ-ಮುಸ್ಲಿಮರ ಮಧ್ಯೆ ಶಾಂತಿ ಏರ್ಪಡಿಸುವ ಪ್ರಯತ್ನ ಮಾಡಿದ್ದರು. ಹೀಗಾಗಿಯೇ ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ಅವರು ದಿಲ್ಲಿಯಲ್ಲಿ ಇರಲೇ ಇಲ್ಲ. ಕೋಲ್ಕತಾದಲ್ಲಿದ್ದು, ಶಾಂತಿ ಮಾತುಕತೆ ನಡೆಸಿದ್ದರು. ಆದರೆ ಇದು ಆಗ ಮಾತ್ರ ನಿಯಂತ್ರಣಕ್ಕೆ ಬಂದಿತ್ತೇ ಹೊರತು ಬಳಿಕ ಸರಿಯಾಗಲೇ ಇಲ್ಲ.

1950ರ ಜನವರಿಯಲ್ಲಿ ಭಾರತ ಸಂವಿಧಾನವನ್ನು ಅಳವಡಿಸಿಕೊಂಡ ಮೇಲೆ, ಪೂರ್ವ ಪಾಕಿಸ್ಥಾನದಲ್ಲಿ ಇನ್ನಷ್ಟು ಹಿಂಸೆ ಜಾಸ್ತಿಯಾಯಿತು. ಇದಕ್ಕೆ ಉದಾಹರಣೆ ಎಂದರೆ, ಬಾಂಗ್ಲಾದಲ್ಲಿದ್ದ ರೈಲ್ವೇ ಸೇತುವೆ ಮೇಲಿನ ನರಮೇಧ. ಅಂದರೆ 1950ರ ಫೆ.12ರಂದು ಇಲ್ಲಿನ ಆಶುಗೋಂಜ್‌ ಮತ್ತು ಭೈರಾಬ್‌ ಬಜಾರ್‌ ನಡುವಿನ ನದಿಯೊಂದರ ರೈಲ್ವೇ ಸೇತುವೆ ಮೇಲೆ ರೈಲೊಂದನ್ನು ನಿಲ್ಲಿಸಿ ಅದರಲ್ಲಿದ್ದ ಹಿಂದೂಗಳನ್ನು ಗುರುತಿಸಿ ನದಿಗೆ ಎಸೆಯಲಾಯಿತು.

ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಈ ಘಟನೆಗಳ ಸಂಬಂಧವಾಗಿಯೇ ನೆಹರೂ ಸಂಪುಟದಲ್ಲಿ ಕ್ಯಾಬಿನೆಟ್‌ ದರ್ಜೆಯ ಸಚಿವರಾಗಿದ್ದ ಡಾ| ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರು, ನೆಹರೂ ಅವರ ಮುಂದೆ ಪೂರ್ವ ಪಾಕಿಸ್ಥಾನ ಮತ್ತು ಭಾರತದ ನಡುವೆ ಜನರ ಪರಸ್ಪರ ಸ್ಥಳಾಂತರ ಮತ್ತು ಇಲ್ಲಿಗೆ ಬಂದ ಹಿಂದೂಗಳಿಗಾಗಿ ಭೂಮಿಯನ್ನು ಕೇಳುವಂತೆ ಸಲಹೆ ನೀಡಿದ್ದರು. ಆದರೆ ನೆಹರೂ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಆದರೆ ಪಶ್ಚಿಮ ಬಂಗಾಲದಲ್ಲಿ ಮುಸ್ಲಿಮರ ಮೇಲೆ ದಾಳಿಯಾದ ಮೇಲೆ ನೆಹರೂ ಮತ್ತು ಪಾಕ್‌ ಪ್ರಧಾನಿ ಲಿಯಾಖತ್‌ ಅಲಿ ಖಾನ್‌ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು. ಈ ಒಪ್ಪಂದವನ್ನು ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರು ಜನಸಂಘವನ್ನು ಕಟ್ಟಿದರು.

ಮುಖರ್ಜಿ ಅವರ ರಾಜೀನಾಮೆ ಅನಂತರ ಪಶ್ಚಿಮ ಬಂಗಾಲದವರೇ ಆದ ಕೆ.ಸಿ. ನಿಯೋಗಿ ಅವರೂ ಒಪ್ಪಂದ ವಿರೋಧಿಸಿ ರಾಜೀನಾಮೆ ಸಲ್ಲಿಸಿದರು. ಈ ಒಪ್ಪಂದದಂತೆ ಪೂರ್ವ ಪಾಕಿಸ್ಥಾನದಲ್ಲಿ ಹಿಂದೂಗಳಿಗೆ ರಕ್ಷಣೆ ಸಿಗಲೇ ಇಲ್ಲ. ಅಲ್ಲಿಂದ ಭಾರತಕ್ಕೆ ಬರುವ ಹಿಂದೂಗಳ ಸಂಖ್ಯೆಯೂ ಹೆಚ್ಚಾಯಿತು. ಜತೆಗೆ ಅಲ್ಲಿ ಹಿಂದೂಗಳ ನರಮೇಧವೂ ಮುಂದುವರಿಯಿತು. ಆದರೆ ನೆಹರೂ ಅವರು ತಮ್ಮ ಒಪ್ಪಂದವನ್ನೇ ನಂಬಿಕೊಂಡು ಕುಳಿತರು.

ಆದರೆ ಇದು ಎಂದಿಗೂ ಜಾರಿಯಾಗಲೇ ಇಲ್ಲ. ಪರಸ್ಪರ ದೇಶಗಳಲ್ಲಿನ ಅಲ್ಪಸಂಖ್ಯಾಕರ ರಕ್ಷಣೆಗಾಗಿ ಈ ಒಪ್ಪಂದಕ್ಕೆ ಸಹಿ ಹಾಕಿದರೂ ಪಾಕಿಸ್ಥಾನ ಸರಕಾರವೇ ಈ ಒಪ್ಪಂದವನ್ನು ಉಲ್ಲಂಘನೆ ಮಾಡಿತು. ಇದಕ್ಕೆ ಬಹುದೊಡ್ಡ ಉದಾಹರಣೆ ಎಂದರೆ 1971ರಲ್ಲಿ ಪಾಕಿಸ್ಥಾನ ಸೇನೆಯೇ ಬಾಂಗ್ಲಾದಲ್ಲಿ ನಡೆಸಿದ ಹಿಂದೂಗಳ ನರಮೇಧ. ಈ ವೇಳೆ ಸುಮಾರು 10 ಸಾವಿರ ಹಿಂದೂಗಳನ್ನು ಹತ್ಯೆ ಮಾಡಲಾಯಿತು ಎಂಬ ವರದಿಗಳಿವೆ.

ಇದಾದ ಬಳಿಕವೂ ಕೆಲವೊಮ್ಮೆ ಹಿಂದೂಗಳ ಸ್ಥಿತಿ ಉತ್ತಮವಾಗಿರುತ್ತದೆ, ಕೆಲವೊಮ್ಮೆ ಈಗ ಉದ್ಭವಿಸಿರುವಂಥ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

-ತಥಾಗತ ರಾಯ್‌
ತ್ರಿಪುರಾದ ಮಾಜಿ ರಾಜ್ಯಪಾಲರು

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.