ಬೆಳಗಾವಿಯಲ್ಲಿ ಈಗ “ಸಕ್ಕರೆ ಸಾಲ’ದ ಶೂಲ


Team Udayavani, May 12, 2022, 6:20 AM IST

ಬೆಳಗಾವಿಯಲ್ಲಿ ಈಗ “ಸಕ್ಕರೆ ಸಾಲ’ದ ಶೂಲ

ಮಾಜಿ ಸಚಿವ ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಸಾಲದ ಹೊರೆ ಹಾಗೂ ಆರ್ಥಿಕ ದಿವಾಳಿ ಸುದ್ದಿ ಈಗ ಗಡಿ ಜಿಲ್ಲೆ ಬೆಳಗಾವಿಯಷ್ಟೇ ಅಲ್ಲ, ಇಡೀ ರಾಜ್ಯದ ತುಂಬಾ ಸದ್ದು ಮಾಡುತ್ತಿದೆ. ವಿಶೇಷ ಸಂಗತಿ ಎಂದರೆ ಈ ಸಾಲದ ವಿಷಯಕ್ಕೆ ಈಗ ರಾಜಕೀಯ ಸೇರಿಕೊಂಡಿರುವುದು ಕುತೂಹಲದ ಚರ್ಚೆಗೆ ಗ್ರಾಸವಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್‌ ವಕ್ತಾರರು ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಸಾಲದ ಹೊರೆ ನೂರಾರು ಕೋಟಿ ಇದ್ದರೂ ಅದನ್ನು ಪಾವತಿ ಮಾಡದ ಕಾರ್ಖಾನೆಯ ರಕ್ಷಣೆಗೆ ಸರಕಾರದ ನಿಂತಿದೆ ಎಂಬ ಆರೋ ಪ ಮಾಡಿದ್ದು ರಾಜ್ಯದ ತುಂಬೆಲ್ಲ ಚರ್ಚೆಗೆ ವೇದಿಕೆ ಮಾಡಿಕೊಟ್ಟಿತು. ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಈ ಕಾರ್ಖಾನೆಯ ವಿರುದ್ಧ ಅದರಲ್ಲೂ ಇದರ ಮಾಲಕರಾಗಿರುವ ರಮೇಶ ಜಾರಕಿಹೊಳಿ ವಿರುದ್ಧ ತಿರುಗಿ ಬಿದ್ದಿದ್ದರು. ಈ ಮೂಲಕ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಸಾಲದ ವಿಷಯ ರಾಜಕೀಯ ಬಣ್ಣ ಪಡೆದುಕೊಂಡಿತು.
ಕಾರ್ಖಾನೆಯು ವಿವಿಧ ಡಿಸಿಸಿ ಬ್ಯಾಂಕ್‌ಗಳಿಂದ 600 ಕೋಟಿ ಸಾಲ ಮಾಡಿದ ಮೇಲೆ ಅದನ್ನು ಇದು  ವರೆಗೆ ಪಾವತಿ ಮಾಡಿಲ್ಲ. ಕಾರಣ ಇದರ ಆಸ್ತಿ ಮುಟ್ಟು ಗೋಲು ಹಾಕಿಕೊಳ್ಳಬೇಕು ಎಂದು ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರು ಪತ್ರ ಬರೆದು ಒತ್ತಾಯ ಮಾಡಿದ್ದರೂ ಜಿಲ್ಲಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಕಾಂಗ್ರೆಸ್‌ ಮುಖಂಡರ ದೂರು.

ಜಿಲ್ಲಾಧಿಕಾರಿಗಳು ಸರಕಾರದ ಒತ್ತಡದಿಂದ ಯಾವು ದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಮೇಲಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಹಕಾರ ಸಚಿವ ಸೋಮಶೇಖರ ಅವರು ರಮೇಶ ಜಾರಕಿಹೊಳಿ ರಕ್ಷ ಣೆಗೆ ನಿಂತಿದ್ದಾರೆ. ಈ ಮೂಲಕ ರೈತರಿಗೆ ವಂಚನೆ ಮಾಡಿ ದ್ದಾರೆ ಎಂಬುದು ಕಾಂಗ್ರೆಸ್‌ ಮುಖಂಡರ ನೇರ ಅರೋಪ.

ಇಲ್ಲಿ ಸಾಲದ ವಿಷಯಕ್ಕಿಂತ ರಮೇಶ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಅರ್ಥಿಕವಾಗಿ ದಿವಾಳಿಯಾಗಿದೆ. ಇದರ ಹೆಸರಿನಲ್ಲಿರುವ ನೂರಾರು ಕೋಟಿ ಸಾಲವನ್ನು ತುಂಬದೇ ಅದರಿಂದ ಪಾರಾಗುವ ಯತ್ನ ನಡೆದಿದೆ ಎಂಬ ಆರೋಪ ಚರ್ಚಿತ ವಿಷಯ.

ಇದಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಸಹಕಾರ ಸಚಿವ ಸೋಮಶೇಖರ, ಅಪೆಕ್ಸ್‌ ಬ್ಯಾಂಕಿ ನಿಂದ ಕೇವಲ ರಮೇಶ ಜಾರಕಿಹೊಳಿ ಮಾತ್ರ ಸಾಲ ಪಡೆದಿಲ್ಲ. ಶಾಸಕಿ ಲಕ್ಷ್ಮೀ ಹೆಬ್ಟಾಳಕರ, ಬಂಡೆಪ್ಪ ಕಾಶೆಂ  ಪುರ ಸೇರಿದಂತೆ ಎಲ್ಲ ಪಕ್ಷಗಳ ನಾಯಕರು ಸಾಲ ಪಡೆದಿ ದ್ದಾರೆ. ಈ ಸಾಲದ ಪ್ರಮಾಣ 6,000 ಕೋಟಿ ಇದೆ. ಸಾಲ ಪಡೆದವರಿಗೆ ನೋಟಿಸ್‌ ನೀಡಲಾಗಿದೆ ಎಂದು ಹೇಳುವ ಮೂಲಕ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಸಾಲದ ಹೊರೆ, ಅದರ ವಸೂಲಾತಿಗೆ ಬಿಗಿ ಕ್ರಮ ಕೈಗೊಳ್ಳುವ ವಿಷಯ ದೊಡ್ಡದಾಗಿ ಬೆಳೆಯದಂತೆ ಜಾಣತನ ಮೆರೆದಿದ್ದಾರೆ.

ಆದರೆ ರೈತ ಮುಖಂಡರ ಪ್ರಕಾರ ಯಾವುದೇ ಸಕ್ಕರೆ ಕಾರ್ಖಾನೆ ನಷ್ಟದಲ್ಲಿರಲು ಅಥವಾ ಆರ್ಥಿಕವಾಗಿ ದಿವಾಳಿಯಾಗಲು ಸಾಧ್ಯವೇ ಇಲ್ಲ. ತಮ್ಮ ವೈಯಕ್ತಿಕ ಸಾಲದ ಹೊರೆಯನ್ನು ಸಕ್ಕರೆ ಕಾರ್ಖಾನೆ ಮೇಲೆ ಹಾಕಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ರೈತರ ಬಾಕಿ ಹಣ ಪಾವತಿ ತಪ್ಪಿಸಿಕೊಳ್ಳಲು ಈ ತಂತ್ರ ಹೂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಎಲ್ಲ ಪಕ್ಷದವರು ಡಿಸಿಸಿ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದಾರೆ ಎಂದು ಹೇಳಿ ಇದನ್ನು ಮರೆಸಲು ಪ್ರಯತ್ನಿಸಿರುವ ಸಹಕಾರ ಸಚಿ ವರು, ಈ ಸಾಲವನ್ನು ವಸೂಲಿ ಮಾಡಲು ವಹಿಸುವ ಕಠಿನ ಕ್ರಮದ ಬಗ್ಗೆ ಅಷ್ಟು ಗಂಭೀರವಾಗಿ ಮಾತನಾಡದೇ ಇರುವುದು ರೈತರಲ್ಲಿ ಆತಂಕ ಉಂಟು ಮಾಡಿದೆ.

ರೈತರಿಗೆ ಬಾಕಿ ಹಣ ಕೊಡುವವರೆಗೆ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ವಿರುದ್ಧ ಹೋರಾಟ ನಡೆಸು ತ್ತೇವೆ ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕರು ಈಗ ಸಹಕಾರ ಸಚಿವರ ಉತ್ತರಕ್ಕೆ ಯಾವ ರೀತಿ ಪ್ರತಿಕ್ರಿಯೆ ಕೊಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಆರೋಪ-ಪ್ರತ್ಯಾ    ರೋಪ ದ ನಡುವೆ ಕಾರ್ಖಾನೆಯ ನೂರಾರು ಕೋಟಿ ಸಾಲದ ಕೂಪ ಸದ್ದಿಲ್ಲದೆ ಮರೆಯಾಗುವುದೇ ಎಂಬ ಚರ್ಚೆ ಸಹ ನಡೆದಿದೆ.

– ಕೇಶವ ಆದಿ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.