ಸಮಾಜದ ಚಾರಿತ್ರಿಕ ಹಿನ್ನೆಲೆಯನ್ನು ಬಿಂಬಿಸುವ ‘ಕಾನನ ಜನಾರ್ದನ’


Team Udayavani, May 11, 2022, 11:25 PM IST

ಸಮಾಜದ ಚಾರಿತ್ರಿಕ ಹಿನ್ನೆಲೆಯನ್ನು ಬಿಂಬಿಸುವ ‘ಕಾನನ ಜನಾರ್ದನ’

ಇತಿಹಾಸವನ್ನು ಆಧಾರವಾಗಿ ರೋಚಕ ಕಾದಂಬರಿಗಳನ್ನು ವಿಶಿಷ್ಟ ಶೈಲಿಯಲ್ಲಿ ಬರೆಯವ ಕನ್ನಡದ ಕಾದಂಬರಿಕಾರ ಗಣೇಶಯ್ಯನವರು. ಇವರ ಇತ್ತೀಚಿನ ಕಾದಂಬರಿ ‘ಕಾನನ ಜನಾರ್ದನ’.

ಶಿಲಾಯುಗದ ಇತಿಹಾಸವನ್ನಾಧರಿಸಿ, ಅದರಲ್ಲಿಯೂ ಪ್ರಮುಖವಾಗಿ ದಕ್ಷಿಣ ಭಾರತದ ಶಿಲಾಯುಗವನ್ನು ಆಧರಿಸಿ ಈ ಕಾದಂಬರಿಯನ್ನು ಕಟ್ಟಿದ್ದಾರೆ. ಇದು ಒಂದು ರೋಚಕ ಕಾದಂಬರಿಯಷ್ಟೇ ಆಗದೆ ಸಮಾಜದ ಹಲವಾರು ಮೂಢನಂಬಿಕೆಗಳಿಗೆ ಕೊಡಲಿಯನ್ನಿಟ್ಟಿದೆ. ಶಿಲಾಯುಗದ ಮಾನವನ ಬದುಕು ಬಿಂಬಿಸುತ್ತಾ, ಅವರ ಪದ್ದತಿಗಳು ಕ್ರಮಬದ್ಧವಾಗಿ ಹೇಗೆ ಈಗಿನ ಸಮಾಜ ವ್ಯವಸ್ಥೆಗೆ ಅಡಿಪಾಯವಾಗಿವೆ ಎಂಬುದನ್ನು ತಿಳಿಸುತ್ತದೆ ಈ ಪುಸ್ತಕ.

ಭಾರತೀಯ ಆಹಾರ ಪದ್ದತಿ, ದೈವ ಕಲ್ಪನೆ, ವಿವಾಹ ಪದ್ದತಿ ಹಾಗೂ ಆಹಾರ ಪದ್ದತಿಗಳ ಕಥಾತ್ಮಕ ವಿಶ್ಲೇಷಣೆ ಈ ಪುಸ್ತಕ. ಶಿಲಾಯುಗದಿಂದ ಆರಂಭವಾದ ಈ ಪದ್ದತಿಗಳು ಕಾಲಾನುಕ್ರಮದಲ್ಲಿ ಆದ ಬದಲಾವಣೆಯೇ ಈಗಿನ ನಮ್ಮ ಸಮಾಜ. ಭಾರತದ ದಕ್ಷಿಣಕ್ಕೆ ಹೇಗೆ ಉತ್ತರದ ಧಾರ್ಮಿಕ ಪದ್ದತಿಗಳು ಪ್ರಚಾರವಾಗಿ ಇಲ್ಲಿ ನೆಲೆ ನಿಂತವು ಎಂಬುದನ್ನು ವಿವರವಾಗಿ ಬರೆಯಲ್ಪಟ್ಟಿದೆ.

ವರ್ಣ ಪದ್ದತಿ ಎಂದರೆ ಅತ್ಯಾಚಾರ, ಅನಾಚಾರ, ಸಮಾಜದ ಕಳಂಕವೆಂದು ಭಾವಿಸುತ್ತೇವೆ. ಕೃಷಿಯು ಜಾತಿ ಪದ್ದತಿಯ ಉಗಮಕ್ಕೆ ಕಾರಣ. ಕ್ರಿಯಾತ್ಮಕ ಉದ್ದೇಶಕ್ಕಾಗಿ ಜನ್ಮತಾಳಿದ ಜಾತಿ ಪದ್ದತಿ ಕಾಲಾಂತರದಲ್ಲಿ ಭಾರತೀಯ ಸಮಾಜದ ಪಿಡುಗು. ಇದು ಹುಟ್ಟಿ ಬೆಳದ ರೀತಿಯನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಈ ಕಾದಂಬರಿ ಓದಬೇಕು.

ಕಾದಂಬರಿಯ ಪಾತ್ರ ನಾಗಯ್ಯ. ಒಂದು ಸಂದರ್ಶನದಲ್ಲಿ, ನಾವು ಮಾಂಸವನ್ನು ಏಕೆ ಸೇವಿಸುತ್ತವೆ? ನೈಸರ್ಗಿಕವಾಗಿ ನಾವು ಮಾಂಸಾಹಾರಿ ಅಥವಾ ಸಸ್ಯಹಾರಿಗಳು? ಎಂಬ ಪ್ರಶ್ನೆಗಳಿಗೆ ನೀಡಿದ ತಾರ್ಕಿಕ ಉತ್ತರಗಳನ್ನು ಜನರು ಓದುವುದು ದೇಶದಲ್ಲಿ ನಡೆಯುತ್ತಿರುವ ಈಗಿನ ಬೆಳವಣಿಗಳಿಗೆ ಅವಶ್ಯಕ.

‘ಅತಿಯಾದ ನಂಬಿಕೆ ಮತ್ತು ಭಕ್ತಿ ಹಾಗೂ ತೀವ್ರವಾದ ಮೋಹ ಮತ್ತು ಮಮಕಾರ, ಇವೆಲ್ಲವೂ ಮನುಷ್ಯನನ್ನು ಒಂದೇ ತೆರನಾಗಿ ಕುರುಡನನ್ನಾಗಿಸುತ್ತವೆ. ಅವುಗಳ ಪ್ರಭಾವದಲ್ಲಿ ತರ್ಕ ಸೋಲುತ್ತದೆ, ಕಟ್ಟಿಕೊಂಡ ಚಿತ್ರಣವೇ ಸತ್ಯ ಎಂಬ ಭ್ರಮೆ ಸೃಷ್ಟಿಯಾಗುತ್ತದೆ. ಸಾವಿರಾರು ವರ್ಷಗಳಿಂದ ಮಾನವ ಇಂತಹ ಅದೆಷ್ಟೋ ಭ್ರಮೆಗಳಲ್ಲಿ ಬದುಕುತ್ತಿದ್ದಾನೆ. ಆ ಭ್ರಮೆಗಳ ಪ್ರಪಂಚದಲ್ಲಿ ಮಿಂದ ಮಾನವ ತನ್ನ ಅಂತಃ ಪ್ರಜ್ಞೆಯನ್ನು ಕಳೆದುಕೊಳ್ಳುತ್ತಿದ್ದಾನೆ ಎನ್ನಬಹುದು.’ ಎಂದು ಕಾದಂಬರಿಯ ಒಂದು ಪಾತ್ರ ಹೇಳುತ್ತದೆ. ಸದ್ಯ ದೇಶದಲ್ಲಿ ನಡೆಯುತ್ತಿರುವ ಧಾರ್ಮಿಕ ಕಲಹಗಳನ್ನು ಗಮನಿಸಿದರೆ, ನಮ್ಮ ಸಮಾಜ ಈ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಸಮಯವಿದು.

ಓದುವಾಗ ಈ ಕಾದಂಬರಿಯ ಮೊದಲ ಅರವತ್ತು ಪುಟಗಳು ಸ್ವಲ್ಪ ಬೇಸರವೆನಿಸುತ್ತವೆ. ಅನಂತರ ಹಂತ ಹಂತವಾಗಿ ಬೆಳೆಯುವ ಕಥೆ ಹಲವಾರು ಪ್ರಮುಖ ಮಾಹಿತಿಗಳನ್ನು ಬಿಚ್ಚಿಡುತ್ತಾ ಸಾಗುತ್ತದೆ. ಲೇಖಕರು ಕಾದಂಬರಿಯನ್ನು ಊಹೆ ಮತ್ತು ಕಲ್ಪನೆಗಳಿಂದ ಮಾತ್ರ ಬರೆಯದೆ ಹಲವಾರು ಆಕರ ಗ್ರಂಥಗಳ ಸಹಾಯದಿಂದ ಬರೆದಿದ್ದಾರೆ. ಭಾರತೀಯ ಸಮಾಜದ ಚಾರಿತ್ರಿಕ ಹಿನ್ನೆಲೆಯನ್ನು ಅರ್ಥ ಮಾಡಿಕೊಳ್ಳಲು ಈ ಕಾದಂಬರಿ ಒಳ್ಳೆಯದು.

ಪುಸ್ತಕ : ಕಾನನ ಜನಾರ್ದನ
ಲೇಖಕರು: ಡಾ. ಕೆ. ಎನ್. ಗಣೇಶಯ್ಯ
ಪ್ರಕಾಶಕರು : ಅಂಕಿತ ಪುಸ್ತಕ
ಬೆಲೆ : ರೂ. 395/-
ಪುಟಗಳು : 399

– ಓಂಕಾರ ಕುಡಚೆ, ಎಸ್.ಡಿ.ಎಮ್‌ ಕಾಲೇಜು ಉಜಿರೆ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.