‘ಒಂದು ಬಾಗಿಲು ಮತ್ತು ಮೂರು ಚಿಲ್ಲರೆ ವರ್ಷಗಳು’ ಹೆಣ್ಣೆದೆಯ ಅಂತರಂಗ


ಶ್ರೀರಾಜ್ ವಕ್ವಾಡಿ, May 9, 2021, 7:51 PM IST

ಹೆಣ್ಣೆದೆಯ ಅಂತರಂಗದ ಗೋಳನ್ನು ಚಿತ್ರಿಸುವ ಕಥಾ ಸಂಕಲನ ಈ ದಿನಮಾನಗಳ ಮೇಲ್ಪಂಕ್ತಿಯ ಕಥೆಗಾರ್ತಿ ಶಾಂತಿ ಕೆ. ಅಪ್ಪಣ್ಣ ಅವರ ‘ಒಂದು ಬಾಗಿಲು ಮತ್ತು ಮೂರು ಚಿಲ್ಲರೆ ವರ್ಷಗಳು’.

ಸುಟ್ಟು ಪರಿಶುದ್ಧವಾಗುವ ಮನಸ್ಸುಗಳು ಅಪ್ಪಟ ಚಿನ್ನದಂತೆ ಕಾಣುವ, ತೀರ ನಮ್ಮವರದ್ದೇ ಕಥೆ ಎನ್ನುವ ಹಾಗಿನ ಕಥಾ ವಸ್ತುಗಳ ಆಯ್ಕೆಗೆ ಮೆಚ್ಚದೇ ಹೇಗಿರಲಿ…?

ಶಾಂತಿಯವರೇ ಹೇಳುವ ಹಾಗೆ ಎಲ್ಲೋ ಯಾವುದೋ ಹೊತ್ತಿನಲ್ಲಿ ಮನದೊಳಗೆ ಮಿಂಚಿನಂತೆ ಏಳುವ ಯಾವುದೋ ಒಂದು ಅನಾಮಿಕ ಎಳೆಯನ್ನು ಹಿಡಿದುಕೊಂಡು ಅದು ಕೊಂಡೊಯ್ಯುವ ಹಾದಿಯಲ್ಲಿ ನಡೆಯುವುದೇ ಒಂದು ಸುಖ. ಎಷ್ಟು ಚೆಂದ ..? ಹೌದು, ಇಲ್ಲಿನ ಕಥೆಗಳು ಇಲ್ಲೇ ಎಲ್ಲೋ ನಮ್ಮ ಸುತ್ತಲಲ್ಲೇ ಹುಟ್ಟಿಕೊಂಡ ಕಥೆಗಳನ್ನಿಸಿ ಬಿಡುತ್ತವೆ. ವಾಸ್ತವಕ್ಕೆ ಒಂದಿಷ್ಟು ಕಲ್ಪನೆಗಳನ್ನು ಪೋಣಿಸಿ ಓದಿಗೆ ಚೆಂದಗಾಣಿಸಿಕೊಟ್ಟಿದ್ದಾರೆನ್ನಿಸುತ್ತದೆ.

ಮನುಷ್ಯ ಸಂಬಂಧಗಳಲ್ಲಿನ  ಪ್ರೀತಿ ವಾತ್ಸಲ್ಯಗಳನ್ನು ಮೆಲುವಾಗಿ ಧ್ವನಿಸಿ ಕೊಟ್ಟ ರೀತಿ ಅದ್ಬುತ.

ಸ್ತ್ರೀವಾದದ ಮೃದು ಧ್ವನಿ ಸಹಜವಾಗಿ ಒಬ್ಬ ಮಹಿಳೆ ಬರೆದ ಕೃತಿಯಾಗಿರುವುದರಿಂದ ಇಲ್ಲಿನ 13 ಕಥೆಗಳಲ್ಲಿಯೂ ಕಾಣಸಿಗುತ್ತದೆ. ಅದು ಗಟ್ಟಿ ಕೂಗಲ್ಲ. ಸೌಮ್ಯ ಧ್ವನಿಯ ಗಟ್ಟಿತನ. ಸೌಮ್ಯಕ್ಕೆ ಗಟ್ಟಿ ಧ್ವನಿ ಇದೆ ಎನ್ನುವುದನ್ನು ಪ್ರತಿಪಾದಿಸುವುದಕ್ಕೆ ಪ್ರಯತ್ನಿಸಿದ್ದು ಎಲ್ಲಾ ಕಥೆಗಳ ಜೀವ.

ಹೆಣ್ಣನ್ನು ಆಟಿಕೆ ವಸ್ತುವಾಗಿ, ದೈಹಿಕ ಸುಖಕ್ಕೆ ಮಾತ್ರ ಬಳಸಿಕೊಳ್ಳುವ ಪುರುಷ ಮನೋಧೋರಣೆಯ ವಿಕೃತ ಮುಖವನ್ನು ತೋರಿಸುವಲ್ಲಿ ಕೊಂಚ ಹೊಸ ರೂಪದಲ್ಲಿ ಕೊಡಬಹುದಿತ್ತು ಅನ್ನಿಸಿದರೂ, ಶೋಷಣೆಯಲ್ಲಿ ಮುಳುಗುವ ಹೆಣ್ಣಿನ ಅಂತರಂಗದ ಆರ್ತ ಆಳಕ್ಕೆ ಇಳಿಸಿದ ರೀತಿ ‘ಹೆಣ್ಣು, ಹೆಣ್ಣಿನ ಸೌಂದರ್ಯ ನಿನ್ನ  ಕಾಮದ ವಸ್ತುವಲ್ಲ’ ಎನ್ನುವ ಅರ್ಥದಲ್ಲಿ ಪುರುಷನ ಮುಖಕ್ಕೆ ರಾಚುವಂತಿದೆ.

ಜಾತಿ, ಧರ್ಮಗಳ ನಡುವೆ ಸಿಲುಕಿ ಬೇಯುವ ಪ್ಲೆಟೋನಿಕ್ ಅಥವಾ ನಿಷ್ಕಾಮ, ಶುದ್ಧ ಪ್ರೀತಿಯೊಂದು ಬೇರ್ಪಟ್ಟು ಇಂಚಿಂಚು  ಅನುಭವಿಸುವ ಅಂತರಾಳದ ದುಃಖಗಳು ನಮ್ಮವೇ, ನಮ್ಮವರದ್ದೇ, ಇಲ್ಲೇ ಎಲ್ಲೋ ಪಕ್ಕದಲ್ಲೇ ಕಂಡು, ಕೇಳಿದ ಕಥೆಗಳು, ವ್ಯಥೆಗಳು ಅನ್ನಿಸುವಾಗ, ಛೇ.. ಸಮಾಜ ಯಾಕಿನ್ನೂ ಪ್ರೀತಿಗೆ ನಿಜವಾದ ಪ್ರೀತಿಯ ಅರ್ಥವನ್ನು ಕೊಟ್ಟಿಲ್ಲ ಎಂದು ಬೇಸರವಾಗುತ್ತದೆ. ಅದೊಂದು ಅಸಹನೀಯ, ಅಸಹ್ಯ ವೇದನೆ ಎದೆಯನ್ನು ತುಂಬಿ ಕಾಡುತ್ತದೆ.

ಹೀಗೆ.. ಹೆಣ್ಣನ್ನು ದಂಧೆಯಾಗಿ ಬಳಸಿಕೊಂಡು ಶೋಷಿಸುವ, ಹೆಣ್ಣನ್ನೇ ದೂಷಿಸುವ ನೋವಿನ ಕಥೆಗಳು ಶಾಂತಿಯವರ ಹಿಂದಿನ ಕಥಾ ಸಂಕಲನ ‘ಮನಸು ಅಭಿಸಾರಿಕೆ’ ಯಲ್ಲಿಯೂ ಇವೆ.

(ಕಥೆಗಾರ್ತಿ ಶಾಂತಿ ಕೆ. ಅಪ್ಪಣ್ಣಮೂಲತಃ ಕೊಡಗು ಜಿಲ್ಲೆಯವರಾದ ಅವರು ವಿಭಿನ್ನ ಕಥೆಗಳ ಮೂಲಕ ಓದುಗರ ಮನಸ್ಸನ್ನು ಸೆಳೆದಿದ್ದಾರೆ. ವೃತ್ತಿ ನಿಮಿತ್ತ ಚೆನ್ನೈನಲ್ಲಿ ವಾಸವಿರುವ ಶಾಂತಿ, ‘ಮನಸು ಅಭಿಸಾರಿಕೆ’, ‘ಒಂದು ಬಾಗಿಲು ಮತ್ತು ಮೂರು ಚಿಲ್ಲರೆ ವರ್ಷಗಳು’ ಎಂಬ ಎರಡು ಕಥಾ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಇವರ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಛಂದ ಪುಸ್ತಕ ಬಹುಮಾನ, ಬೇಂದ್ರೆ ಗ್ರಂಥ ಬಹುಮಾನ, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಶಸ್ತಿ, ಬಸವರಾಜ ಕಟ್ಟೀಮನಿ ಪುರಸ್ಕಾರ ಸೇರಿ ಹತ್ತು ಹಲವು ಪ್ರಶಸ್ತಿಗಳು ಲಭಿಸಿವೆ.)

ಇನ್ನು, ನಾನು ಉಲ್ಲೇಖಿಸಲೇ ಬೇಕಾದ ಕೆಲವು ಕಥೆಗಳಿವೆ.

ಲಿಂಗ ಬೇದಗಳ ನಡುವೆ ಸಹಜವಾಗಿ ಹುಟ್ಟುವ ದೈಹಿಕ ಬಯಕೆಗಳ ತೊಳಲಾಟ, ಮತ್ತದು ಒಂಥರಾ ಹೇಸಿಗೆ, ಪೇಲವ, ಜಾಳು, ಕಪಟವಿದು ಎನ್ನುವ ಭಾವ ‘ಈ ಕಥೆಗೆ ಹೆಸರಿಲ್ಲ’ ಎಂಬ ಕಥೆಯಲ್ಲಿ ಕಾಣಿಸುತ್ತದೆ. ಈಗಿನ ದಿನಗಳಲ್ಲಿ  ಒತ್ತಡಕ್ಕೋ, ಬಯಕೆಗೋ, ಹುಚ್ಚಿಗೋ, ಚಟಕ್ಕೋ ಸಮಾಜದಲ್ಲಿ ಒಂದು ಮಟ್ಟಕ್ಕೆ ಬೆಳೆದವರೊಳಗಿರುವ ಇನ್ನೊಂದು ಮುಖದ ಚಿತ್ರಣ ಈ ಕಥೆ. ಅದು ತಪ್ಪೇ..? ಅಥವಾ ತಪ್ಪಲ್ಲವೇ‌‌..? ಸರಿಯೇ..? ಸರಿಯಲ್ಲವೇ..? ಎಂಬ ಗೊಂದಲದ ಗುಣ‌ವನ್ನು ಈ ಕಥೆ ಹೇಳುತ್ತದೆ. ಇದು ಕಥೆಯೊಳಗೊಂದು ಕಥೆಯನ್ನು ಚಿತ್ರಿಸುತ್ತದೆ. ಕಥೆ, ದೈಹಿಕ ಬಯಕೆಯಾದರೇ, ಕಥೆಯೊಳಗಿನ ಕಥೆ, ಪ್ರೇಮದ ತೀವ್ರತೆ. ಈ ಕಥೆಯನ್ನು ಚೆನ್ನಾಗಿ ತೋರಿಸುವ ಪ್ರಯತ್ನದಲ್ಲಿ ಸ್ವಲ್ಪ ಅವಸರಕ್ಕೆ ಸಿಲುಕಿ ಪೂರ್ತಿ ಹೇಳದೆ ಮುಗಿಸಿದರು ಅಂತನ್ನಿಸುತ್ತದೆ.

ಶೀರ್ಷಿಕೆ ಕಥೆ ‘ಒಂದು ಬಾಗಿಲು ಮತ್ತು ಮೂರು ಚಿಲ್ಲರೆ ವರ್ಷಗಳು’ ಎಂಥಾ ಅದ್ಬುತ, ಸರಳ ಸುಂದರ. ‘ವಾವ್ಹ್’ ಅನ್ನಿಸುವಷ್ಟು. ಪತ್ರಕರ್ತನೊಬ್ಬ ನೃತ್ಯಗಾತಿಯನ್ನು ಸಂದರ್ಶಿಸುವುದಕ್ಕೆ ಹೋದಾಗ ಅವನಲ್ಲಿ ಗೊತ್ತಿಲ್ಲದೆ ಹುಟ್ಟುವ ಪ್ರೀತಿ, ನಂತರದ ದಿನಗಳಲ್ಲಿ ಆ ನೃತ್ಯಗಾತಿಯಲ್ಲಿಯೂ ಇವನ ಮೇಲೆ ಮೊಳಕೆಯೊಡೆಯುವ ಪ್ರೇಮ. ಈ ಪ್ರೇಮದೊಂದಿಗೆ, ಹೆಣ್ಣೊಬ್ಬಳು ಒಂಟಿಯಾಗಿದ್ದಾಳೆ ಎಂಬ ಕಾರಣಕ್ಕೆ ಆಕೆಯನ್ನು ಬಳಸಿಕೊಂಡ ಆಕೆಯ ಮಾವನ ಬಗ್ಗೆ ಆಕೆಗಿದ್ದ ಅಹಸನೀಯ ಕೋಪ ಮಾಸದೆ ಉಳಿದಿರುವ  ಚಿತ್ರಣವೂ ಇದೆ.

‘ಪ್ರೇಮ’ ಎನ್ನುವ ದುಬಾರಿ ಭಾವವನ್ನು ಈ ಕಥೆಯಲ್ಲಿ ಶಾಂತಿಯವರು ಈ ಥರದ್ದು ಅಪರೂಪದೊಳಗೆ ಅಪರೂಪಕ್ಕೆ ಕಾಣಸಿಗುವಂತದ್ದು ಎನ್ನುವ ಹಾಗೆ ಹೆಣೆದಿದ್ದು ತುಂಬಾ ಚೆಂದ. ಪ್ರೀತಿಯ ಉನ್ಮತ್ತ ಘಳಿಗೆ, ಸ್ವರ್ಗ ಸ್ವರೂಪದ ಸನಿಹ, ದುರ್ಲಭ ಎನ್ನುವ ಹಾಗಿನ ನೆನಪು ಕಣ್ಣ ಮುಂದೆ ಬರುವ, ಬಂದು ಹಿತವನ್ನುಣಿಸುವ ಹೇಳಲಾಗದ, ಹೇಳಿ ತೀರಲಾಗದ ಪ್ರೇಮವೆಂಬ ಮಜಬೂತು, ಕೊನೆಗೂ ದಕ್ಕದ, ನೆನಪಿನಲ್ಲಷ್ಟೇ ಉಳಿಯುವ ಎರಡು ಮನುಸ್ಸುಗಳ ಶುದ್ಧ ಸಲಿಲದಂತಿರುವ ಪ್ರೀತಿಯನ್ನು ತುಂಬಾ ಚೆಂದಾಗಿ ಕಟ್ಟಿ ಕೊಟ್ಟಿದ್ದಾರೆ. ಕಥೆ ಇಷ್ಟವಾಗುವುದು ಅದರೊಳಗಿನ ಕಾವ್ಯ ಸಂವೇದನೆಯಿಂದ.  ಕಾವ್ಯಾತ್ಮಕ ಕಥೆ ಇದು. ಎಲ್ಲರಿಗೂ ಇಷ್ಟವಾಗುವುದರಲ್ಲಿ ಅನುಮಾನವೇ ಇಲ್ಲ.

ಕಥೆಗಳು ಓದುಗನೊಬ್ಬನಿಗೆ ದೃಶ್ಯ ಕಣ್ಮುಂದೆ ತರಿಸಬೇಕು. ಅಂತಹ ಇಲ್ಲಿನ ಕೆಲವು ಕಥೆಗಳಲ್ಲಿ ‘ಹೀಗೇ ಜೊತೆ ಜೊತೆಯಲಿ’ ಕೂಡ ಒಂದು. ಈ ಕಥೆ ಒಂಥರಾ ಕಡಲಿನ ಭೋರ್ಗರೆಯುವ ಅಲೆ, ಅದರ ಲವಣಯುಕ್ತ ಬಿಸಿ ತಾಪ, ಮಧ್ಯಾಹ್ನದ ಸುಠಿ ಖಾರದ ಬಿಸಿ ಮತ್ತು ಸಂಜೆಯ ಹಿತ ಗಾಳಿಯ ಹಾಗೆಯೂ ಇದೆ. ಸಂದೇಹ, ಸಂದೇಶ ಎರಡೂ ಕಥೆಯಲ್ಲಿವೆ. ಈ  ಕಥೆಯನ್ನು ವಿವರಿಸಲು ಆಗುತ್ತಿಲ್ಲ ನನಗೆ. ಸೋತೆ. ನೀವು ಓದಿ. ಒಂದು ಸಂಬಂಧ, ಆ ಸಂಬಂಧದ ನಡುವೆ ಏನೋ ಸಂಭಾಷಣೆ ಆಗುತ್ತಿದೆ. ಇಲ್ಲೇ ಎದುರಲ್ಲೇ ಒಂದು ಸನ್ನಿವೇಶ ನಡೆಯುತ್ತಿದೆ ಅಂತನ್ನಿಸುತ್ತದೆ ಈ ಕಥೆ.

ಇನ್ನೊಂದು ‘ಹೃದಯವೆಂಬ ಮಧು ಪಾತ್ರೆ’ ಕಥೆ‌. ತುಂಬಾ ಹಿಡಿಸಿದ್ದು ಯಾಕೆಂದರೇ, ಇದರಲ್ಲಿ ಇರುವ ಒಂದು ಕಾವ್ಯದಿಂದ.

“ಈ ಹೃದಯ ಮಧು ಪಾತ್ರೆಯೇ ಆಗಿದ್ದರೆ

ಅದೀಗ ತುಂಬಿದೆ..

ನಿನ್ನ ತುಟಿಗಳಿಗಾಗಿ ಮಾತ್ರವೇ ತವಕಿಸುತ್ತಿರುವ

ಈ ನಿಷ್ಕಳಂಕ ಮದಿರೆಗೆ

ನಿನ್ನ ದಾಹವನು ಮೀಸಲಿಡು”

ವಾವ್ಹ್ ಬ್ಯೂಟಿಫುಲ್ ಸಾಲುಗಳಲ್ವಾ…? ಹೌದು, ಉತ್ಪ್ರೇಕ್ಷೆಯಲ್ಲವಿದು. ಕಥೆಯೊಂದಕ್ಕೆ ಎಲ್ಲಿ ವೇಗ ಕೊಡಬೇಕು, ಎಲ್ಲಿ ತಿರುವು ಕೊಡಬೇಕು ಎನ್ನುವುದು ಶಾಂತಿಯವರು ಬಹಳ ಚೆನ್ನಾಗಿ ತಿಳಿದಿರುವುದಕ್ಕಾಗಿಯೇ ಕನ್ನಡ ಕಥಾ ಸಾಹಿತ್ಯ ಕ್ಷೇತ್ರದಲ್ಲಿ ಅಗ್ರ ಸ್ಥಾನದಲ್ಲಿ ಗುರುತಿಸಿಕೊಂಡಿರುವುದು ಎನ್ನುವುದಕ್ಕೆ ಸಂಶಯವೇ ಇಲ್ಲ. ಅವರ ಕಥೆಗಳಲ್ಲಿನ ಕಾವ್ಯ ಸಂವೇದನೆಯಿಂದಲೇ ಮತ್ತು ಅದರ ಗಟ್ಟಿತನದಿಂದಲೇ ಓದುಗನಿಗೆ ಇಷ್ಟವಾಗುತ್ತದೆ.

ಈ ಕಥೆಯಲ್ಲಿ ಒಂದು ಸಾಲಿದೆ‌. ‘ಈ ಬದುಕೆಂಬ ಮೋಹಕ್ಕೆ ಎಷ್ಟೊಂದು ಮುಖಗಳು!’ ಹೌದು, ಜಾಗೃತ ಮನಸ್ಸಿಗೂ ಹರಿವಿಗೆ ಇಂತದ್ದೇ ದಾರಿಯಂತಿಲ್ಲ. ಪ್ರೇಮ, ಮೋಹ, ಚಡಪಡಿಕೆ, ಪ್ರೀತಿ ಭಾವದ ಮಿಂಚಿನ  ಸೆಳೆತ, ಅದರೊಂದಿಗಿನ ವಿನೋದ, ವಿಷಾದ, ವಿದಾಯ ಬದುಕಿಗೆ ಎಂತಹ ಪಾಠ ನೀಡುತ್ತದಲ್ವಾ..? ಈ ಎಲ್ಲಾ ಮಜಲುಗಳ ಒಟ್ಟಾರೆಯ ಸೂಕ್ಷ್ಮ ನೋಟ ಈ ಕಥೆಯಲ್ಲಿ ಚೆನ್ನಾಗಿ ಮೂಡಿಬಂದಿದೆ.

ಹೌದು, ಇಲ್ಲಿಯ ಬಹುತೇಕ ಕಥೆಗಳು ನಮ್ಮವೇ ಅನ್ನಿಸುತ್ತದೆ. ಕೆಲವೊಂದೆರಡು ಕಥೆಗಳು ಶುಷ್ಕ ಬರಹ ಅಂತನ್ನಿಸಿದರೂ ಅದರ ವಸ್ತು ಚೆನ್ನಾಗಿದೆ. ಮಧುರಾನುಭವ ಈ ಪುಸ್ತಕದ ಓದು ನನಗೊದಗಿಸಿದೆ.

ಎಲ್ಲವನ್ನೂ ನಾನೇ ಹೇಳುವುದಾದರೇ, ನೀವ್ಯಾತಕ್ಕೆ ಮತ್ತೆ..? ಉಳಿದದ್ದು ನೀವು ಓದಿ ಎಂಬ ಮೃದು ಬೈಗುಳವಿದು. ನಿಮಗೆ ಹಿತ ನೀಡುವ, ಖುಷಿ ಕೊಡುವ ಕೃತಿ ಇದು. ಓದು ನಿಮ್ಮದಾಗಲಿ.

-ಶ್ರೀರಾಜ್ ವಕ್ವಾಡಿ

ಓದಿ :  ಪುಸ್ತಕ ವಿಮರ್ಶೆ :  ‘ಇಜಯಾ’ಎಂಬ ಹೊಸ ಧ್ವನಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.