ಉದ್ಯಮಸ್ನೇಹಿ ದೇಶ: ಅಭಿವೃದ್ಧಿಗೆ ಪೂರಕ ನೆಗೆತ 


Team Udayavani, Nov 3, 2018, 12:30 AM IST

v-4.jpg

ವಿಶ್ವಬ್ಯಾಂಕ್‌ ಬಿಡುಗಡೆಗೊಳಿಸಿದ ಉದ್ಯಮಸ್ನೇಹಿ ದೇಶಗಳ ಪಟ್ಟಿಯಲ್ಲಿ ಭಾರತ ಕಂಡಿರುವ ನೆಗೆತ ಚೇತೋಹಾರಿಯಾಗಿದ್ದು ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದೆ. 190 ದೇಶಗಳ ಪೈಕಿ ಭಾರತ 77ನೇ ಸ್ಥಾನದಲ್ಲಿದೆ ಎನ್ನುವುದು ಕಡಿಮೆ ಸಾಧನೆಯಲ್ಲ. ಬರೀ ನಾಲ್ಕು ವರ್ಷದಲ್ಲಿ ಈ ಸಾಧನೆ ಸಾಧ್ಯವಾಗಿದೆ ಎನ್ನುವುದು ಗಮನಾರ್ಹ ಅಂಶ. 2014ರಲ್ಲಿ ನಮ್ಮ ದೇಶ 142ನೇ ಸ್ಥಾನದಲ್ಲಿತ್ತು. ಈ ಸಂದರ್ಭದಲ್ಲಿ ಪ್ರಧಾನಿಯಾಗಿ ಅಧಿಕಾರಕ್ಕೇರಿದ ಮೋದಿಯವರು ಉದ್ಯಮ ಸ್ನೇಹಿ ವಾತಾವರಣದಲ್ಲಿ ಅಗ್ರ 50 ದೇಶಗಳ ಸಾಲಿಗೆ ಸೇರ್ಪಡೆಯಾಗುವುದು ನಮ್ಮ ಗುರಿ ಎಂದು ಹೇಳಿದಾಗ ಇದು ಸಾಧ್ಯವಾಗುವ ಮಾತಲ್ಲ ಎಂದು ಹೇಳಿದವರೇ ಹೆಚ್ಚು. ಆದರೆ ಇದೀಗ ಬಿಡುಗಡೆಯಾದ ಪಟ್ಟಿಯನ್ನು ನೋಡುವಾಗ 50ರೊಳಗೆ ಸೇರ್ಪಡೆ ಯಾಗುವುದು ಅಸಾಧ್ಯವಲ್ಲ ಎಂಬ ವಿಶ್ವಾಸ ಮೂಡಿರುವುದಂತೂ ಸತ್ಯ. ಹಾಗೆಂದು ಈ ಸಾಧನೆ ರಾತ್ರಿ ಬೆಳಗಾಗುವುದರೊಳಗೆ ಆಗಿದೆ ಎಂದು ಭಾವಿಸಬೇಕಿಲ್ಲ. ಇದರ ಹಿಂದೆ ನಿರಂತರ ಪ್ರಯತ್ನವಿದೆ. ವಿವಿಧ ಇಲಾಖೆಗಳ ನಡುವಿನ ಅವಿರತ ಶ್ರಮವಿದೆ. ಕೇಂದ್ರ -ರಾಜ್ಯ ಸರಕಾರಗಳ ಮಾತ್ರವಲ್ಲದೆ ಸ್ಥಳೀಯಾಡಳಿತಗಳ ಯೋಗದಾನವೂ ಇದೆ. 

ಪ್ರಸ್ತುತ ನಾವು ದಕ್ಷಿಣ ಏಶ್ಯಾದಲ್ಲಿ ಅಗ್ರಸ್ಥಾನದಲ್ಲಿದ್ದೇವೆ. ಮೂರು ವರ್ಷದಲ್ಲಿ 65 ಸ್ಥಾನ ಮೇಲೇರುವುದು ನಮ್ಮಿಂದ ಸಾಧ್ಯವಾಗಿದೆ. ಯಾವುದೇ ದೇಶ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಕೈಗಾರಿಕೋದ್ಯಮಗಳು ಸ್ಥಾಪನೆಯಾಗುವುದು ಅಗತ್ಯ. ಸ್ವಾತಂತ್ರ್ಯ ಸಿಕ್ಕಿದ ಕಾಲಘಟ್ಟದಲ್ಲೇ ಕೈಗಾರಿಕೋದ್ಯಮಗಳ ಅಗತ್ಯವನ್ನು ಮನಗಂಡಿದ್ದರೂ ಅದನ್ನು ಕಾರ್ಯರೂಪಕ್ಕಿಳಿಸುವುದು ನಮ್ಮಿಂದ ಸಾಧ್ಯವಾಗಿರಲಿಲ್ಲ. ಹೀಗಾಗಿ ನಾವು ಆಮದು ದೇಶವಾಗಿಯೇ ಉಳಿಯಬೇಕಾಯಿತು. ಬಹುರಾಷ್ಟ್ರೀಯ ಕಂಪೆನಿಗಳಿಗೆ ಭಾರತ ಎನ್ನುವುದು ತಮ್ಮ ಉತ್ಪನ್ನಗಳನ್ನು ಮಾರಲು ವಿಪುಲ ಅವಕಾಶವುಳ್ಳ ಮಾರುಕಟ್ಟೆಯಾಯಿತು. ಬೇರೆ ದೇಶಗಳು ಉತ್ಪಾದಿಸಿದ ಸರಕುಗಳನ್ನು ಬಳಸುವ ದೇಶವಾದವೆಯೇ ಹೊರತು ನಾವೇ ಉತ್ಪಾದಕ ದೇಶವಾಗುವಲ್ಲಿ ಸೋತೆವು. ಹೀಗಾಗಿ ಇಂದಿಗೂ ನಮ್ಮ ಆರ್ಥಿಕತೆ ಅಭಿವೃದ್ಧಿಶೀಲ ಹಂತದಲ್ಲೇ ಉಳಿದಿದೆ. 

ನಿಧಾನವಾಗಿಯಾದರೂ ಈ ಪರಿಸ್ಥಿತಿ ಬದಲಾಯಿಸುತ್ತಿದೆ ಎನ್ನುವುದು ಸಮಾಧಾನಕೊಡುವ ಸಂಗತಿ. ಉದ್ಯಮಸ್ನೇಹಿ ರ್‍ಯಾಂಕಿಂಗ್‌ನಂತಹ ಅಂತರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯುವುದು ಎಂದರೆ ಹೂಡಿಕೆದಾರರ ವಿಶ್ವಾಸ ಗಳಿಸುವುದು ಎಂದು ಅರ್ಥ. ಭಾರತದಲ್ಲಿ ಹೂಡಿಕೆ ಮಾಡಲು ಉತ್ತಮ ವಾತಾವರಣ ಇದೆ ಎಂಬ ಸಂದೇಶ ಇದರಿಂದ ರವಾನೆಯಾಗುತ್ತದೆ. 

ಆದರೆ ನಮ್ಮ ಉದ್ಯಮ ಸ್ನೇಹಿ ವಾತಾವರಣ ನಗರ ಕೇಂದ್ರಿತವಾಗಿದೆ ಎನ್ನುವುದು ಕೂಡಾ ಗಮನಾರ್ಹ ಅಂಶ. ಮುಖ್ಯವಾಗಿ ಮುಂಬಯಿ, ದಿಲ್ಲಿಯಂಥ ಮಹಾನಗರಗಳನ್ನು ಆದ್ಯತೆಯಾಗಿರಿಸಿಕೊಂಡೇ ಉದ್ಯಮಗಳು ಬೆಳೆಯುತ್ತಿರುವುದು ಆರೋಗ್ಯಕಾರಿಯಲ್ಲ. ಮಹಾ ನಗರಗಳ ಮೇಲೆ ಬೀಳುವ ಒತ್ತಡ ಕಡಿಮೆಯಾಗಬೇಕಾದರೆ ಭುವನೇಶ್ವರ, ಲೂಧಿಯಾನ, ಹೈದರಾಬಾದ್‌ ಮತ್ತಿತರ ದ್ವಿತೀಯ ಸ್ತರದ ನಗರಗಳಲ್ಲೂ ಈ ವಾತಾವರಣ ಬೆಳೆಯಬೇಕಾಗಿದೆ. ಈ ಅಂಶದತ್ತ ಸರಕಾರ ಗಮನ ಹರಿಸಬೇಕು. 

ಹೂಡಿಕೆಗಳನ್ನು ಆಕರ್ಷಿಸುವಲ್ಲಿ ರಾಜ್ಯಗಳ ನಡುವೆ ಸ್ಪರ್ಧೆ ಏರ್ಪಟ್ಟಿರುವುದು ಆರೋಗ್ಯಕಾರಿ ಬೆಳವಣಿಗೆ. ಆದರೆ ಇದರಲ್ಲಿ ಕೆಲವೇ ರಾಜ್ಯಗಳು ಮಾತ್ರ ತೊಡಗಿಕೊಂಡಿದೆ. ಎಲ್ಲ 29 ರಾಜ್ಯಗಳೂ ಈ ಸ್ಪರ್ಧೆಯಲ್ಲಿ ಸಹಭಾಗಿಯಾದರೆ ಮಾತ್ರ ಇದು ಅರ್ಥಪೂರ್ಣ. ಅಂತೆಯೇ ಮುಂದಿನ ದಿನಗಳಲ್ಲಿ ಈ ಸ್ಪರ್ಧೆಯನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸುವ ಯೋಜನೆಯೂ ಸರಕಾರದ ಮುಂದಿದೆ. ಹೂಡಿಕೆಗೆ ಮೂಲಸೌಕರ್ಯ ಕಲ್ಪಿಸಿಕೊಡುವಲ್ಲಿ ಈ ಮಾದರಿಯ ಸ್ಪರ್ಧೆ ಪೂರಕವಾಗಲಿದೆ. ಹೀಗಾದರೆ ಭಾರತ ಉದ್ಯಮ ಪ್ರಾರಂಭಿಸಲು ಅತಿ ಸುಲಭವಾದ ಮತ್ತು ಸರಳ ಪ್ರಕ್ರಿಯೆಯನ್ನೊಳಗೊಂಡಿರುವ ದೇಶವನ್ನಾಗಿ ಮಾಡುವ ಕನಸು ನನಸಾದೀತು. 

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Budget 2024; paperless tax system soon

Budget 2024; ಶೀಘ್ರ ಕಾಗದ ರಹಿತ ತೆರಿಗೆ ವ್ಯವಸ್ಥೆ

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.