ಹಬ್ಬಕ್ಕೆ ಆಭರಣ ಖರೀದಿ ಸಂಭ್ರಮ


Team Udayavani, Aug 30, 2019, 5:32 AM IST

habbakke-abarana

ಹಬ್ಬದ ಸಂಭ್ರಮದಲ್ಲಿ ಹೆಚ್ಚಾಗಿ ಚಿನ್ನ ಖರೀದಿಗೆ ಮುಂದಾಗುತ್ತಾರೆ. ಶುಭ ಘಳಿಗೆಯೂ ಹೌದು, ಧಾರ್ಮಿಕ ನಂಬಿಕೆಯೂ ಹೌದು. ಈ ಕಾರಣಕ್ಕಾಗಿ ಗ್ರಾಹಕರನ್ನು ಸೆಳೆಯಲೆಂದು ಆಭರಣ ಮಳಿಗೆಗೆಳು ಅತ್ಯಾವಕಾಶ ಆಫ‌ರ್‌ಗಳನ್ನು ಕೂಡ ನೀಡುತ್ತಿವೆ. ಪ್ರಸಕ್ತವಾಗಿ ಮಂಗಳೂರಿನಲ್ಲಿರುವ ಚಿನ್ನದ ಬೇಡಿಕೆ, ಆಫ‌ರ್‌ ಮತ್ತು ಜನರ ಅಭಿಪ್ರಾಯ ಏನು ಎಂಬುದು ಈ ಲೇಖನದಲ್ಲಿ ತಿಳಿಯಬಹುದಾಗಿದೆ.

ಈಗೇನಿದ್ದರೂ ಹಬ್ಬಗಳ ಸಮಯ. ವರ ಮಹಾಲಕ್ಷ್ಮೀ ಹಬ್ಬ ಕಳೆದು, ಶ್ರೀಕೃಷ್ಣ ಜನ್ಮಾಷ್ಟಮಿ, ಚೌತಿ…ಹೀಗೆ ಸಾಲು ಸಾಲು ಹಬ್ಬಗಳು ಬಂಗಾರಪ್ರಿಯರ ಮನಸ್ಸಿಗೂ ಕನ್ನ ಹಾಕಿದೆ. ಹಿಂದೂ ಧಾರ್ಮಿಕತೆಯ ಪ್ರಕಾರ ಹಬ್ಬ ಹರಿದಿನಗಳಂದು ಚಿನ್ನ ಕೊಂಡರೆ ಮನೆಗೆ, ವ್ಯಕ್ತಿಗೆ ಶುಭವಾಗುತ್ತದೆ ಎಂಬ ನಂಬಿಕ ತಲೆತಲಾಂತರಗಳಿಂದ ಚಾಲ್ತಿಯಲ್ಲಿದೆ. ಅದಕ್ಕಾಗಿಯೇ ಆಭರಣ ಅಂಗಡಿಗಳಲ್ಲಿ ಜನ ಸಾಲು ಗಟ್ಟಿದ್ದಾರೆ.

ಮಂಗಳೂರಿನ ಆಭರಣ ಅಂಗಡಿಗಳಲ್ಲಿ ಹಬ್ಬಕ್ಕೆಂದೇ ಚಿನ್ನ ಖರೀದಿ ಜೋರಾಗಿದೆ. ವರ ಮಹಾಲಕ್ಷ್ಮೀ ಹಬ್ಬಕ್ಕೆ ಚಿನ್ನ ಖರೀದಿ ಮಾಡಿದ್ದಾಯಿತು. ಇನ್ನು ಅಷ್ಟಮಿ ಮತ್ತು ಚೌತಿಯಂದು ಚಿನ್ನ ಖರೀದಿಸುವ ಆತುರ ಹೆಣ್ಮಕ್ಕಳಿಗೆ. ಈ ಹಬ್ಬದಂದು ಬಂಗಾರವನ್ನು ಬಂಗಾರದಂತೆ ಮನೆಗೊಯ್ಯಬೇಕು ಎಂದು ತಿಂಗಳ ಹಿಂದೆಯೇ ಆಲೋಚಿಸಿ, ಚಿನ್ನ ಖರೀದಿಗೆ ಆಭರಣ ಅಂಗಡಿಗಳ ಮುಂದೆ ನಿಂತಿದ್ದಾರೆ ಹೆಣ್ಮಕ್ಕಳು. ಹೆಣ್ಮಕ್ಕಳ ಮನದಿಚ್ಛೆಗೆ ತಕ್ಕಂತೆ ಬಳೆ, ಕಿವಿಯೋಲೆ, ಬ್ರಾಸ್ಲೆಟ್‌, ಸರ, ಉಂಗುರಗಳಲ್ಲಿ ಹೊಸ ಹೊಸ ವಿನ್ಯಾಸಗಳು ಆಭರಣ ಅಂಗಡಿಗಳಲ್ಲಿ ಕಣ್ಮನ ಸೆಳೆಯುತ್ತಿವೆ.

ಬೆಲೆ ಏರಿಕೆ ಬಿಸಿ
ಚಿನ್ನದ ಮೇಲೆ ಇರುವ ಅತಿಯಾದ ವ್ಯಾಮೋಹ ಅದನ್ನು ಕೊಳ್ಳದೇ ಇರಲಾಗುವುದಿಲ್ಲ ಎಂಬಷ್ಟರ ಮಟ್ಟಿಗೆ ಬೆಳೆದಿದೆ. ಆದರೆ, ಕಳೆದ ಐದಾರು ತಿಂಗಳಿನಿಂದ ನಿರಂತರವಾಗಿ ಏರುತ್ತಿರುವ ಚಿನ್ನದ ಬೆಲೆಯಿಂದಾಗಿ ಹೆಂಗಳೆಯರ ಚಿನ್ನ ಕೊಳ್ಳುವ ವ್ಯಾಮೋಹಕ್ಕೆ ಬಿಸಿ ಮುಟ್ಟಿಸಿದೆ. ಬಡ ಮತ್ತು ಮಧ್ಯಮ ವರ್ಗದ ಮಂದಿಗೆ ಚಿನ್ನಕೊಳ್ಳುವಿಕೆ ದೂರದ ಮಾತಾದರೆ, ಆರ್ಥಿಕವಾಗಿ ಸದೃಢರಾಗಿರುವವರು ಮಾತ್ರ ಬೆಲೆ ಏರಿಕೆಯನ್ನು ಲೆಕ್ಕಿಸದೆ, ಚಿನ್ನ ಖರೀದಿಯಲ್ಲಿ ತೊಡಗಿದ್ದಾರೆ.

ಕಿವಿ ಚುಚ್ಚೋ ಸಡಗರ
ಗಣೇಶನ ಹಬ್ಬದಂದು ಪುಟಾಣಿ ಮಕ್ಕಳಿಗೆ ಕಿವಿ ಚುಚ್ಚುವ ಸಂಪ್ರದಾಯ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ಅಂದು ಮಕ್ಕಳ ಕಿವಿ ಚುಚ್ಚಿದರೆ ಒಳಿತು ಮತ್ತು ಶುಭಕಾರಕ ಎಂಬ ಗಾಢ ನಂಬಿಕೆ. ಅದಕ್ಕಾಗಿಯೇ ಮಕ್ಕಳ ಕಿವಿ ಚುಚ್ಚಲು ಟಿಕ್ಕಿಗಳನ್ನು ಈಗಾಗಲೇ ಖರೀದಿಸಲು ಹೆತ್ತವರು ಆಭರಣ ಅಂಗಡಿಗಳತ್ತ ಲಗ್ಗೆ ಇಡುತ್ತಿದ್ದಾರೆ. ಹೆಣ್ಮಕ್ಕಳ ಮೂಗಿಗೆ ಮೂಗುತಿ ಬೊಟ್ಟುಗಳನ್ನೂ ಚೌತಿಯಂದೇ ಹಾಕುವುದು ಹಲವಾರು ವರ್ಷಗಳಿಂದ ನಡೆದು ಬಂದ ಸಂಪ್ರದಾಯವಾಗಿದೆ.

ಕಡಿಮೆ ವ್ಯಾಪಾರ
ಬಂಗಾರ ಕೊಳ್ಳಲು ಜನರು ಆಭರಣ ಅಂಗಡಿಗಳಿಗೆ ಬರುತ್ತಿದ್ದಾರೆ. ಹಬ್ಬದ ಸಮಯದಲ್ಲಿ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಮಂದಿ ಖರೀದಿಯಿಂದ ಹಿಂದೆ ಬಿದ್ದಿದ್ದು, ಅಷ್ಟೇ ವ್ಯಾಪಾರ ಕಡಿಮೆಯಾಗಿದೆ. ಬೆಲೆ ಏರಿಕೆ ಅಥವಾ ಇತರ ಕಾರಣಗಳಿಂದಲೂ ಜನ ಚಿನ್ನ ಕೊಳ್ಳಲು ಹಿಂದೇಟು ಹಾಕುತ್ತಿರಬಹುದು.
– ಪ್ರಶಾಂತ್‌ ಶೇಟ್‌ ಕಾರ್ಯದರ್ಶಿ ದ.ಕ. ಜಿಲ್ಲಾ ಸ್ವರ್ಣ ವ್ಯಾಪಾರಿಗಳ ಸಂಘ

ತಯಾರಕರಿಗೆ ಬೇಡಿಕೆ
ರೆಡಿಮೇಡ್‌ ಆಭರಣಗಳಿಗಿಂತಲೂ ಹೆಚ್ಚಾಗಿ ಇರುವ ಚಿನ್ನವನ್ನೇ ಬೇರೆ ವಿನ್ಯಾಸದೊಂದಿಗೆ ಹೊಸದಾಗಿ ಮಾಡಿಸುತ್ತಿರುವ ಟ್ರೆಂಡ್‌ ಈ ಹಬ್ಬಗಳ ವೇಳೆ ಹೆಚ್ಚುತ್ತಿದೆ. ಆನ್‌ಲೈನ್‌ ತಾಣಗಳಲ್ಲಿ ಕಾಣುವ ಡಿಸೈನ್‌ಗೆ ಅನುಸಾರವಾಗಿ ಹೊಸ ಮಾದರಿಯ ಡಿಸೈನ್‌ಗಳನ್ನು ಮಾಡಿಕೊಡಬೇಕೆಂದು ಚಿನ್ನ ತಯಾರಕರಲ್ಲಿಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಚಿನ್ನವನ್ನೇ ಇನ್ನೊಂದು ಮಾದರಿಯ ಆಭರಣವನ್ನಾಗಿ ರೂಪಾಂತರಗೊಳಿಸುವುದರಿಂದ ಅಷ್ಟೇನು ಹಣವೂ ಬೇಕಾಗಿಲ್ಲ ಎಂಬ ಆಶಯವೂ ಇದರ ಹಿಂದಿದೆ ಎನ್ನುತ್ತಾರೆ ಆಭರಣ ತಯಾರಕರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.