ಪ್ರವಾಸೋದ್ಯಮಕ್ಕೆ ಪ್ರತಿಭಟನೆ ಬಿಸಿ ಸಿಎಎ


Team Udayavani, Mar 1, 2020, 6:16 AM IST

protest

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ಸಿಎಎ ಜಾರಿಯಾಗಿ ಎರಡು ತಿಂಗಳುಗಳು ಕಳೆದರೂ ಅದರ ಪ್ರತಿಭಟನೆಯ ಬಿಸಿ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಈ ಹಿಂಸಾತ್ಮಕ ಪ್ರತಿಭಟನೆ ದೇಶದ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಿದೆ. ಲಕ್ಷಾಂತರ ಪ್ರವಾಸಿಗರು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿದರೆ ಕೆಲವರು ಮುಂದೂಡಿದ್ದಾರೆ. ಇಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಆದ ಹಿನ್ನಡೆಯನ್ನು ವಿವರಿಸಲಾಗಿದೆ.

ಕೆಲವೆಡೆ ಪ್ರತಿಭಟನೆಗಳು ಹಿಂಸಾತ್ಮಕ ರೂಪ ತಾಳಿದ್ದವು. ಕಾನೂನು ಸುವ್ಯವಸ್ಥೆಗಳು ಹದಗೆಟ್ಟಿದ್ದು ಅಸುರಕ್ಷಿತರೆಂಬ ಭಾವನೆ ಪ್ರವಾಸಿಗರಲ್ಲಿ ಮೂಡುತ್ತಿದೆ. ಇನ್ನು ಸರಕಾರಗಳು ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಿದ್ದವು. ಸಂಪರ್ಕ ಸೌಲಭ್ಯಗಳು ಇಲ್ಲದೆ ಇರುವುದರಿಂದ ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ.

ಪೀಕ್‌ ಪಿರಿಯಡ್‌
ಭಾರತೀಯ ಪ್ರವಾಸೋದ್ಯಮದಲ್ಲಿ ಡಿಸೆಂಬರ್‌ನಿಂದ ಫೆಬ್ರವರಿ ವರೆಗಿನ ತಿಂಗಳನ್ನು “ಪೀಕ್‌ ಪಿರಿಯಡ್‌’ ಎಂದು ಕರೆಯಲಾಗುತ್ತದೆ. ಅತೀ ಹೆಚ್ಚು ಪ್ರವಾಸಿಗರು ಆಗಮಿಸುತ್ತಾರೆ. ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಪ್ರಮುಖ ಪ್ರವಾಸಿಗಳು ಇದರ ಬಿಸಿ ಎದುರಿಸಿದ್ದಾರೆ. ಇನ್ನು ಥಾಮಸ್‌ ಕುಕ್‌ನಂತಹ ಪ್ರವಾಸಿ ಏಜೆನ್ಸಿಗಳು ನೋಂದಣಿಗೊಂಡ ಸ್ಥಳಗಳ ಬದಲು ಬೇರೆ ಸ್ಥಳಗಳತ್ತ ತನ್ನ ಗ್ರಾಹಕರನ್ನು ಕರೆದೊಯ್ಯುತ್ತಿವೆ.

ಟಿಕೆಟ್‌ ಬುಕ್ಕಿಂಗ್‌ ಕ್ಯಾನ್ಸಲ್‌
ಡಿಸೆಂಬರ್‌ ತಿಂಗಳಿನಿಂದ ಮಾರ್ಚ್‌ ತನಕ ವಿಶೇಷವಾಗಿ ಈಶಾನ್ಯ ರಾಜ್ಯಗಳಿಗೆ ಪ್ರವಾಸಿಗರು ಹೆಚ್ಚು ಬರುತ್ತಾರೆ. ಈ ಪ್ರತಿಭಟನೆ ಬಿಸಿ ಆರಂಭವಾದ ಬಳಿಕ ಮುಂಗಡವಾಗಿ ಕಾಯ್ದಿರಿಸಲಾದ ಹೊಟೇಲ್‌, ರೆಸಾರ್ಟ್‌, ರೆಸ್ಟೋರೆಂಟ್‌ಗಳನ್ನು ರದ್ದುಗೊಳಿಸಲಾಗಿದೆ.

2000 ಕಾರುಗಳು
ಅಸ್ಸಾಂನ ಗುವಾಹಾಟಿಯಲ್ಲಿ ಸುಮಾರು 2 ಸಾವಿರ ಕಾರುಗಳನ್ನು ಅಲ್ಲಿನ ಪ್ರವಾಸೋದ್ಯಮದ ಜತೆ ಒಪ್ಪಂದ ವಾಗಿರಿಸಿಕೊಳ್ಳಲಾಗಿವೆ. ಆದರೆ ಇವುಗಳು ಈಗ ಈ ಹಿಂದಿನಂತೆ ಕೆಲಸ ಮಾಡುತ್ತಿಲ್ಲ. ಇದರಿಂದ ಸುಮಾರು 5ರಿಂದ 6 ಸಾವಿರ ಕುಟುಂಬಗಳು ಸಮಸ್ಯೆಗೀಡಾಗಿವೆ.

ತಾಜ್‌ಮಹಲ್‌
ಡಿಸೆಂಬರ್‌ ಮತ್ತು ಜನವರಿ ತಿಂಗಳಿನಲ್ಲಿ ಐತಿಹಾಸಿಕ ತಾಜ್‌ಮಹಲ್‌ ವೀಕ್ಷಿಸಲು ನೋಂದಾಯಿಸಿದ್ದ ಜನರು ತಮ್ಮ ಪ್ರಯಾಣವನ್ನು ಮುಂದೂಡಿದ್ದಾರೆ. ಈ ಸಂಖ್ಯೆ ಸುಮಾರು 2 ಲಕ್ಷ ಎಂದು ಅಂದಾಜಿಸಲಾಗಿದೆ. ಅಂದರೆ ಶೇ. 60ರಷ್ಟು ಕಡಿಮೆ.

ಇಂಟರ್‌ನೆಟ್‌
ಉತ್ತರ ಭಾರತದ ಬಹುತೇಕ ಪ್ರವಾಸಿ ಕೇಂದ್ರಗಳ ಆಸುಪಾಸಿನ ಹೊಟೇಲ್‌ಗ‌ಳು 6 ವರ್ಷಗಳಲ್ಲೇ ಪ್ರಥಮ ಬಾರಿಗೆ ಶೇ. 14ರಷ್ಟು ಕಡಿಮೆ ಟಿಕೇಟ್‌ ಬುಕ್ಕಿಂಗ್‌ಗಳನ್ನು ಪಡೆದುಕೊಂಡಿವೆ. ಇಂಟರ್‌ನೆಟ್‌ ಸೇವೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿಯೂ ರೂಂ ಗಳು ಬುಕ್‌ ಆಗುತ್ತಿಲ್ಲ.

1,500ಕೋ. ರೂ. ಆದಾಯ
2018-19ನೇ ಸಾಲಿನಲ್ಲಿ 4,504 ವಿದೇಶಿ ಮತ್ತು 4.25 ಲಕ್ಷ ದೇಶಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದರಿಂದ ಇಲಾಖೆಗೆ 1,200ರಿಂದ 1,500 ಕೋಟಿ ರೂ. ಆದಾಯ ದೊರಕಿತ್ತು. ಈ ಬಾರಿ 1 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ.

ಅಸ್ಸಾಂಗೆ 1,000 ಕೋಟಿ ರೂ. ನಷ್ಟ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಆರಂಭವಾಗಿದ್ದು ಅಸ್ಸಾಂನಲ್ಲಿ. ಈ ಹಿಂಸಾತ್ಮಕ ಪ್ರತಿಭಟನೆ ರಾಜ್ಯದ ಪ್ರವಾಸೋದ್ಯಮಕ್ಕೆ ಭಾರೀ ಪೆಟ್ಟು ನೀಡಿದೆ. ಇದರಿಂದಾಗಿ ಸುಮಾರು 1,000 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಅಸ್ಸಾಂನಲ್ಲಿ ಪ್ರವಾಸೋದ್ಯಮವನ್ನು ಅವಲಂಬಿಸಿ ಲಕ್ಷಾಂತರ ಕುಟುಂಬಗಳು ಬದುಕುತ್ತಿವೆ.ವಿದೇಶಗಳ ಸೂಚನೆ ಸದ್ಯ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ, ಕೆನಡ, ಸಿಂಗಾಪುರ, ಬ್ರಿಟನ್‌ ದೇಶಗಳು ತಮ್ಮ ಪ್ರಜೆಗಳಿಗೆ ಭಾರತ ಪ್ರವಾಸ ಮುಂದೂ ಡುವಂತೆ ಸೂಚಿಸಿವೆ.

ವಿದೇಶಗಳ ಸೂಚನೆ
ಸದ್ಯ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ, ಕೆನಡ, ಸಿಂಗಾಪುರ, ಬ್ರಿಟನ್‌ ದೇಶಗಳು ತಮ್ಮ ಪ್ರಜೆಗಳಿಗೆ ಭಾರತ ಪ್ರವಾಸ ಮುಂದೂ ಡುವಂತೆ ಸೂಚಿಸಿವೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.